Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​ಬಾಸ್ ಕನ್ನಡ: ಮೊದಲ ವಾರ ಎಲಿಮಿನೇಟ್ ಆಗಿದ್ದು ಇವರೇನಾ?

Bigg Boss Kannada: ಬಿಗ್​ಬಾಸ್ ಕನ್ನಡ ಸೀಸನ್ 11 ಪ್ರಾರಂಭವಾಗಿ ಒಂದು ವಾರವಾಗಿದೆ. ಮೊದಲ ವಾರ ಒಬ್ಬ ಸ್ಪರ್ಧಿ ಎಲಿಮಿನೇಟ್ ಆಗಬೇಕಿದೆ. ಮೊದಲ ವಾರ ಈ ಇಬ್ಬರಲ್ಲಿ ಒಬ್ಬರು ಎಲಿಮಿನೇಟ್ ಆಗುವುದು ಪಕ್ಕಾ ಎನ್ನಲಾಗುತ್ತಿದೆ.

ಬಿಗ್​ಬಾಸ್ ಕನ್ನಡ: ಮೊದಲ ವಾರ ಎಲಿಮಿನೇಟ್ ಆಗಿದ್ದು ಇವರೇನಾ?
ಬಿಗ್ ಬಾಸ್
Follow us
ಮಂಜುನಾಥ ಸಿ.
|

Updated on: Oct 06, 2024 | 11:48 AM

ಬಿಗ್​ಬಾಸ್ ಕನ್ನಡ ಸೀಸನ್ 11 ಪ್ರಾರಂಭವಾಗಿ ಒಂದು ವಾರ ಆಗಿದೆ. ಸಾಮಾನ್ಯವಾಗಿ ಮೊದಲ ವಾರ ಬಿಗ್​ಬಾಸ್​ನಲ್ಲಿ ಖುಷಿಯ ವಾತಾವರಣ ಇರುತ್ತದೆ, ಪರಸ್ಪರರು ಪರಿಚಯಗೊಳ್ಳುತ್ತಾರೆ ಆದರೆ ಈ ಸೀಸನ್​ ಎಲ್ಲಾ ಉಲ್ಟಾ ಆಗಿದೆ. ಬಿಗ್​ಬಾಸ್ ಪ್ರಾರಂಭವಾದ ಎರಡನೇ ದಿನದಿಂದಲೇ ಮನೆಯಲ್ಲಿ ಜಗಳ, ಕಿತ್ತಾಟ, ಆರೋಪ ಪ್ರತ್ಯಾರೋಪಗಳು ಪ್ರಾರಂಭವಾಗಿದೆ. ಹಾಗೋ ಹೀಗೋ ಜಗಳ, ಮುನಿಸು ದ್ವೇಷದಲ್ಲಿಯೇ ಮೊದಲ ವಾರ ಕಳೆದು ವಾರದ ಪಂಚಾಯಿತಿಗೆ ಬಂದಿದೆ. ಪ್ರತಿ ವಾರ ಬಿಗ್​ಬಾಸ್ ಮನೆಯಿಂದ ಒಬ್ಬರು ಎಲಿಮಿನೇಟ್ ಆಗುವುದು ಕಾಮನ್. ಅಂತೆಯೇ ಈ ವಾರ ಯಾರು ಆಗಲಿದ್ದಾರೆ?

ಈ ಸೀಸನ್​ನ ಮೊದಲ ನಾಮಿನೇಷನ್​ನಲ್ಲಿ ನಟಿ ಗೌತಮಿ, ಶಿಶಿರ್, ಯಮುನಾ ಶ್ರೀನಿಧಿ, ಹಂಸಾ, ಭವ್ಯಾ ಗೌಡ, ಲಾಯರ್ ಜಗದೀಶ್, ಮಾನಸಾ, ಮೋಕ್ಷಿತಾ ಪೈ, ಚೈತ್ರಾ ಕುಂದಾಪುರ ಅವರುಗಳು ನಾಮಿನೇಟ್ ಆಗಿದ್ದರು. ಶನಿವಾರ ನಡೆದ ವಾರದ ಪಂಚಾಯಿತಿಯಲ್ಲಿ ಸುದೀಪ್ ಅವರು ಮೂವರು ಸ್ಪರ್ಧಿಗಳನ್ನು ಎಲಿಮಿನೇಷನ್​ನಿಂದ ಪಾರು ಮಾಡಿದರು. ಮಾನಸಾ, ಗೌತಮಿ ಮತ್ತು ಭವ್ಯಾ ಅವರುಗಳನ್ನು ಸೇಫ್ ಮಾಡಲಾಯ್ತು. ಶಿಶಿರ್, ಯಮುನಾ ಶ್ರೀನಿಧಿ, ಹಂಸಾ, ಲಾಯರ್ ಜಗದೀಶ್, ಚೈತ್ರಾ ಕುಂದಾಪುರ, ಮೋಕ್ಷಿತಾ ಪೈ ಅವರುಗಳು ಉಳಿದುಕೊಂಡಿದ್ದಾರೆ. ಇದರಲ್ಲಿ ಯಾರು ಎಲಿಮಿನೇಟ್ ಆಗಲಿದ್ದಾರೆ?

ಇದನ್ನೂ ಓದಿ:‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’

ನಟಿ ಯಮುನಾ ಶ್ರೀನಿಧಿ ಹಾಗೂ ಚೈತ್ರಾ ಕುಂದಾಪುರ ಇಬ್ಬರಲ್ಲಿ ಒಬ್ಬರು ಮನೆಯಿಂದ ಮೊದಲ ವಾರ ಎಲಿಮಿನೇಟ್ ಆಗಲಿದ್ದಾರೆ ಎನ್ನಲಾಗುತ್ತಿದೆ. ಕೆಲವು ಮೂಲಗಳ ಪ್ರಕಾರ ಯಮುನಾ ಶ್ರೀನಿಧಿ ಅವರದ್ದೇ ಮೊದಲ ಎಲಿಮಿನೇಷನ್ ಎಂದು ಹೇಳಲಾಗುತ್ತಿದೆ. ಯಮುನಾ ಶ್ರೀನಿಧಿ ಅವರು ಭಾರಿ ಉತ್ಸಾಹದಿಂದ ಬಿಗ್​ಬಾಸ್ ಮನೆ ಪ್ರವೇಶ ಮಾಡಿದ್ದರು. ಮೊದಲ ವಾರ ಸಾಕಷ್ಟು ಉತ್ಸಾಹದಿಂದಲೇ ಇದ್ದರು. ಆದರೆ ಅವರ ವ್ಯಕ್ತಿತ್ವ ಬಿಗ್​ಬಾಸ್ ಮನೆಯ ಕೆಲವರಿಗೆ ಇಷ್ಟವಾಗಲಿಲ್ಲ. ಕೆಲವರೊಟ್ಟಿಗೆ ಅವರು ಜಗಳ ಸಹ ಮಾಡಿಕೊಂಡರು. ಅವರ ಜೋರು ಧನಿ, ಹಾವ ಭಾವ, ವ್ಯಕ್ತಿತ್ವ ಬಹುಷಃ ಜನರಿಗೆ ಇಷ್ಟವಾಗಲಿಲ್ಲವೆಂದು ತೋರುತ್ತದೆ.

ಇನ್ನು ಚೈತ್ರಾ ಕುಂದಾಪುರ ಹೆಸರು ಸಹ ಕೇಳಿ ಬರುತ್ತಿದೆ. ಚೈತ್ರಾ ಕುಂದಾಪುರ ಮೊದಲಲ್ಲಿ ಗಮನ ಸೆಳೆದರಾದರೂ ವಾರದ ಮಧ್ಯ ಭಾಗದಿಂದ ಈಚೆಗೆ ಯಾಕೋ ತುಸು ಮಂಕಾದರು. ಹಾಗಾಗಿ ಅವರಿಗೆ ಪ್ರೇಕ್ಷಕರು ಮತ ಹಾಕಿಲ್ಲ ಎಂಬ ಮಾತುಗಳು ಕೇಳಿ ಬರುತ್ತಿವೆ. ನಿನ್ನೆ ಸುದೀಪ್​ ನಡೆಸಿದ ವಾರದ ಪಂಚಾಯಿತಿಯಲ್ಲಿ ಸಹ ಚೈತ್ರಾ ಕುಂದಾಪುರ ಬಹುತೇಕ ಮೌನವಾಗಿಯೇ ಇದ್ದರು. ಚೈತ್ರಾ ಕುಂದಾಪುರ ನಿರೀಕ್ಷಿತ ಮಟ್ಟದಲ್ಲಿ ಮನೆಯ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುತ್ತಿಲ್ಲ ಎನ್ನಲಾಗುತ್ತಿದೆ. ಇದೇ ಕಾರಣಕ್ಕೆ ಚೈತ್ರಾ ಎಲಿಮಿನೇಟ್ ಆಗಬಹುದು ಎನ್ನಲಾಗುತ್ತಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪತಿ ಸೂರ್ಯ ಸಾವಿನ ಹಿಂದೆ ಶ್ವೇತಾಳ ಕೈವಾಡವಿದೆ ಎಂದ ಪತ್ನಿ ದೀಪಿಕಾ
ಪತಿ ಸೂರ್ಯ ಸಾವಿನ ಹಿಂದೆ ಶ್ವೇತಾಳ ಕೈವಾಡವಿದೆ ಎಂದ ಪತ್ನಿ ದೀಪಿಕಾ
ಸಿಐಡಿ ತನಿಖೆ ರಾಜ್ಯ ಸರ್ಕಾರ ಹಿಂತೆಗೆದುಕೊಂಡ ಕಾರಣ ಗೊತ್ತಿಲ್ಲ: ಅಣ್ಣಾಮಲೈ
ಸಿಐಡಿ ತನಿಖೆ ರಾಜ್ಯ ಸರ್ಕಾರ ಹಿಂತೆಗೆದುಕೊಂಡ ಕಾರಣ ಗೊತ್ತಿಲ್ಲ: ಅಣ್ಣಾಮಲೈ
ಲಾರಿಗೆ ಡಿಕ್ಕಿ ಹೊಡೆದ ಮುಂಬೈ- ಅಮರಾವತಿ ಎಕ್ಸ್​ಪ್ರೆಸ್​ ರೈಲು
ಲಾರಿಗೆ ಡಿಕ್ಕಿ ಹೊಡೆದ ಮುಂಬೈ- ಅಮರಾವತಿ ಎಕ್ಸ್​ಪ್ರೆಸ್​ ರೈಲು
ಮಹಿಳೆಯೊಂದಿಗೆ ಕಿರಿಕ್​:ಪುಂಡರ ಮರ್ಯಾದೆ ಮೂರು ಕಾಸಿಗೆ ಹರಾಜು ಹಾಕಿದ ಪೊಲೀಸ್
ಮಹಿಳೆಯೊಂದಿಗೆ ಕಿರಿಕ್​:ಪುಂಡರ ಮರ್ಯಾದೆ ಮೂರು ಕಾಸಿಗೆ ಹರಾಜು ಹಾಕಿದ ಪೊಲೀಸ್
ಚಿಕ್ಕಬಳ್ಳಾಪುರ: ಹೊತ್ತಿ ಉರಿದ ದೇವಸ್ಥಾನದ ಮುಂದೆ ನಿಲ್ಲಿಸಿದ್ದ ಕಾರು
ಚಿಕ್ಕಬಳ್ಳಾಪುರ: ಹೊತ್ತಿ ಉರಿದ ದೇವಸ್ಥಾನದ ಮುಂದೆ ನಿಲ್ಲಿಸಿದ್ದ ಕಾರು
ನಿಂತುಹೋಗಿರುವ ಕಾಮಗಾರಿಗಳನ್ನು ಪೂರ್ತಿಗೊಳಿಸಲು ಕೋರಿದೆ: ರೇಣುಕಾಚಾರ್ಯ
ನಿಂತುಹೋಗಿರುವ ಕಾಮಗಾರಿಗಳನ್ನು ಪೂರ್ತಿಗೊಳಿಸಲು ಕೋರಿದೆ: ರೇಣುಕಾಚಾರ್ಯ
ವಿದ್ಯಾರ್ಥಿಗಳ ಕಳಪೆ ಪ್ರದರ್ಶನ, ತಮಗೆ ತಾವೇ ಶಿಕ್ಷೆ ಕೊಟ್ಟುಕೊಂಡ ಶಿಕ್ಷಕರು
ವಿದ್ಯಾರ್ಥಿಗಳ ಕಳಪೆ ಪ್ರದರ್ಶನ, ತಮಗೆ ತಾವೇ ಶಿಕ್ಷೆ ಕೊಟ್ಟುಕೊಂಡ ಶಿಕ್ಷಕರು
ಪ್ರಶ್ನೆಗೆ ಉತ್ತರ ಸಿಗದಿದ್ದರೆ ಆಯಾ ಇಲಾಖೆ ಅಧಿಕಾರಿಗಳು ಜವಾಬ್ದಾರರು:ಖಾದರ್
ಪ್ರಶ್ನೆಗೆ ಉತ್ತರ ಸಿಗದಿದ್ದರೆ ಆಯಾ ಇಲಾಖೆ ಅಧಿಕಾರಿಗಳು ಜವಾಬ್ದಾರರು:ಖಾದರ್
ಸದನದಲ್ಲಿ ವಿಶ್ವನಾಥ್ ಎತ್ತಿದ ಆಕ್ಷೇಪಣೆಗೆ ಉತ್ತರ ನೀಡಿದ ಸುರೇಶ್
ಸದನದಲ್ಲಿ ವಿಶ್ವನಾಥ್ ಎತ್ತಿದ ಆಕ್ಷೇಪಣೆಗೆ ಉತ್ತರ ನೀಡಿದ ಸುರೇಶ್
ಕಾರಿಗೆ ಸಿಲುಕಿ ಮಹಿಳೆ ಮೃತಪಟ್ಟರೂ ಪಶ್ಚಾತಾಪವಿಲ್ಲದೆ ದರ್ಪ ತೋರಿದ ಯುವಕ
ಕಾರಿಗೆ ಸಿಲುಕಿ ಮಹಿಳೆ ಮೃತಪಟ್ಟರೂ ಪಶ್ಚಾತಾಪವಿಲ್ಲದೆ ದರ್ಪ ತೋರಿದ ಯುವಕ