AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದರ್ಶನ್ ಜೊತೆ ನಟಿಸಿದ್ದ ಕರಿ ಬಸಪ್ಪ; ಅಪರೂಪದ ವಿಡಿಯೋ ವೈರಲ್

ಕರಿ ಬಸಪ್ಪ, 'ಬಿಗ್ ಬಾಸ್ ಕನ್ನಡ 12'ರ ಸ್ಪರ್ಧಿ, ದರ್ಶನ್ ಜೊತೆ ನಟಿಸಿದ್ದ ಅಪರೂಪದ ವಿಡಿಯೋ ವೈರಲ್ ಆಗಿದೆ. ಇಂಟರ್ನ್ಯಾಷನಲ್ ಬಾಡಿ ಬಿಲ್ಡರ್ ಆಗಿರುವ ಕರಿ ಬಸಪ್ಪ, ಈ ಹಿಂದಿನ ಸಿನಿಮಾದಲ್ಲಿ ವಿಲನ್ ಪಾತ್ರ ನಿರ್ವಹಿಸಿದ್ದರು. ಬಿಗ್ ಬಾಸ್ ಮನೆಯಲ್ಲಿ ಅವರ ಸಾಧನೆ ಕುರಿತು ಚರ್ಚೆಗಳ ನಡುವೆ ಈ ವಿಡಿಯೋ ಸದ್ದು ಮಾಡುತ್ತಿದೆ.

ದರ್ಶನ್ ಜೊತೆ ನಟಿಸಿದ್ದ ಕರಿ ಬಸಪ್ಪ; ಅಪರೂಪದ ವಿಡಿಯೋ ವೈರಲ್
ದರ್ಶನ್-ಕರಿ ಬಸಪ್ಪ
ರಾಜೇಶ್ ದುಗ್ಗುಮನೆ
|

Updated on:Oct 01, 2025 | 8:54 AM

Share

ಇಂಟರ್​ನ್ಯಾಷನಲ್ ಬಾಡಿ ಬಿಲ್ಡರ್ ಕರಿ ಬಸಪ್ಪ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 12’ರಲ್ಲಿ ಸ್ಪರ್ಧಿ ಆಗಿ ಕಾಣಿಸಿಕೊಂಡಿದ್ದಾರೆ. ಅವರು ಕೇವಲ ಬಾಡಿ ಬಿಲ್ಡರ್ ಮಾತ್ರ ಅಲ್ಲ, ಕಲಾವಿದ ಕೂಡ ಹೌದು. ಹಲವು ಸಿನಿಮಾಗಳಲ್ಲಿ ವಿಲನ್ ಪಾತ್ರಗಳಲ್ಲಿ ಕರಿ ಬಸಪ್ಪ ಕಾಣಿಸಿಕೊಂಡಿದ್ದರು. ಈ ರೀತಿಯ ಅಪರೂಪದ ವಿಡಿಯೋ ಒಂದು ವೈರಲ್ ಆಗಿದೆ. ಈ ವಿಡಿಯೋದಲ್ಲಿ ಅವರು ದರ್ಶನ್ (Darshan) ಜೊತೆ ತೊಡೆ ತಟ್ಟುತ್ತಾರೆ.

‘ಬಿಗ್ ಬಾಸ್’ ಓಪನಿಂಗ್ ದಿನ ಕರಿ ಬಸಪ್ಪ ಅವರು ವೇದಿಕೆ ಏರುತ್ತಿದ್ದಂತೆ ಇತರ ಸ್ಪರ್ಧಿಗಳಿಗೆ ‘ನನ್ ಸಾಧನೆ ಏನು ಅಂತ ಗೊತ್ತಾ’ ಎಂದು ದೊಡ್ಡ ಧ್ವನಿಯಲ್ಲಿ ಕೇಳಿದ್ದರು. ಅವರು ಕೇಳಿದ್ದು ಅವಾಜ್ ಹಾಕುವ ರೀತಿಯಲ್ಲಿ ಇತ್ತು. ಆಗ ಸುದೀಪ್ ಕೂಡ ಈ ರೀತಿ ಅವಾಜ್ ಹಾಕಬಾರದು ಎಂದಿದ್ದರು. ಈಗ ಕರಿ ಬಸಪ್ಪ ಅವರು ದೊಡ್ಮನೆಯಲ್ಲಿ ಗಮನ ಸೆಳೆಯುವ ಪ್ರಯತ್ನ ಮಾಡುತ್ತಿದ್ದಾರೆ. ಹೀಗಿರುವಾಗಲೇ ಅವರ ವಿಡಿಯೋ ವೈರಲ್ ಆಗಿದೆ.

ಇದನ್ನೂ ಓದಿ
Image
ಅಡುಗೆ ಮಾಡುತ್ತಾ ರಿಷಬ್, ಮೇಘನಾ, ಸುದೀಪ್ ಹರಟೆ; ಅಪರೂಪದ ವಿಡಿಯೋ ಇಲ್ಲಿದೆ
Image
ಸ್ತನ ಕ್ಯಾನ್ಸರ್​ನಿಂದ ಕಿರುತೆರೆ ನಟಿ ಕಮಲಶ್ರೀ ನಿಧನ
Image
‘ನಾನೇನು ಸುಮ್ಮನೆ ಬಿಡಲಿಲ್ಲ’; ಮಾಜಿ ಪತಿ ಮಾಡಿದ ಕೆಟ್ಟ ಕೆಲಸ ಹೇಳಿದ ಜಾನ್ವಿ
Image
ರಕ್ಷಿತ್ ಶೆಟ್ಟಿ ಹಾಗೂ ರುಕ್ಮಿಣಿ ವಸಂತ್ ಮಧ್ಯೆ ಎಷ್ಟು ಸಾಮ್ಯತೆ ಇದೆ ನೋಡಿ

ಇದನ್ನೂ ಓದಿ: ಅತ್ಯಾಚಾರಿಗಿಂತಲೂ ಕಡೆಯಾ ದರ್ಶನ್? ನ್ಯಾಯಾಲಯದಲ್ಲಿ ವಕೀಲರ ವಾದ

ದರ್ಶನ್ ನಟನೆಯ ಸಿನಿಮಾ ಒಂದರಲ್ಲಿ ಕರಿ ಬಸಪ್ಪ ನಟಿಸಿದ್ದರು. ಅವರು ಈ ಚಿತ್ರದಲ್ಲಿ ವಿಲನ್ ಪಾತ್ರ ಮಾಡಿದ್ದರು. ದರ್ಶನ್ ಎದುರು ತಮ್ಮ ತೋಳ್ಬಲ ತೋರಿಸುತ್ತಾ ಬರುತ್ತಾರೆ. ಆಗ ದರ್ಶನ್ ಅವರು ಅವಾಜ್ ಹಾಕುತ್ತಿದ್ದಂತೆ ಮರಳಿ ಹೋಗುತ್ತಾರೆ. ಈ ರೀತಿಯಲ್ಲಿ ವಿಡಿಯೋ ಇದೆ.

ಕರಿ ಬಸಪ್ಪ ಅವರು ಬಿಗ್ ಬಾಸ್ ಮನೆಯಲ್ಲಿ ಜಂಟಿ ಆಗಿದ್ದಾರೆ. ಆರ್​ಜೆ ಅಮಿತ್ ಜೊತೆ ಅವರು ಜೋಡಿ ಆಗಿದ್ದಾರೆ. ಕರಿ ಬಸಪ್ಪ ಹೆಚ್ಚು ಹೈಲೈಟ್ ಆಗುತ್ತಿಲ್ಲ ಎಂಬ ಮಾತು ಕೇಳಿ ಬಂದಿದೆ. ಇದಕ್ಕೆ ಅವರ ಕಡೆಯಿಂದ ಸ್ಪಷ್ಟನೆ ಸಿಗೋ ಕೆಲಸ ಆಗಿದೆ. ಅಮಿರ್ ಅವರು ಇದೇ ರೀತಿ ಪರ್ಫಾರ್ಮೆನ್ಸ್ ಕೊಟ್ಟರೆ ಅವರು ಹೊರಕ್ಕೆ ಹೋದರೂ ಅಚ್ಚರಿ ಏನಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 8:38 am, Wed, 1 October 25

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ