AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​​ಬಾಸ್ ಗೆದ್ದ ಟಿವಿ ನಟಿ ಅನುಮೋಲ್, ಸಿಕ್ಕ ಬಹುಮಾನವೆಷ್ಟು?

Bigg Boss Malayalam: ಬಿಗ್​​ಬಾಸ್ ಶೋನಲ್ಲಿ ಮಲಯಾಳಂ ಟಿವಿ ನಟಿ ಅನುಮೋಲ್ ಅವರು ವಿಜೇತರಾಗಿದ್ದಾರೆ. ಸಾಮಾನ್ಯರಾಗಿ ಬಿಗ್​​ಬಾಸ್ ಮನೆಗೆ ಎಂಟ್ರಿ ನೀಡಿದ್ದ ಅನೀಶ್ ತಾರಾಯಿಲ್ ಅವರು ರನ್ನರ್ ಅಪ್ ಎನಿಸಿಕೊಂಡಿದ್ದಾರೆ. ಬಿಗ್​​ಬಾಸ್ ಶೋ ಗೆದ್ದ ಅನುಮೋಲ್​​ಗೆ ಭರ್ಜರಿ ನಗದು ಬಹುಮಾನ ಹಾಗೂ ದುಬಾರಿ ಉಡುಗೊರೆಗಳು ದೊರೆತಿವೆ. ವಿಜೇತರಿಗೆ ಸಿಕ್ಕ ನಗದು ಬಹುಮಾನ ಎಷ್ಟು?

ಬಿಗ್​​ಬಾಸ್ ಗೆದ್ದ ಟಿವಿ ನಟಿ ಅನುಮೋಲ್, ಸಿಕ್ಕ ಬಹುಮಾನವೆಷ್ಟು?
Anumol
ಮಂಜುನಾಥ ಸಿ.
|

Updated on: Nov 11, 2025 | 5:20 PM

Share

ಬಿಗ್​​ಬಾಸ್ ಕನ್ನಡ ಸೀಸನ್ 12 (Bigg Boss Kannada) ಇನ್ನೂ ಚಾಲ್ತಿಯಲ್ಲಿದೆ. ಶೋ ಶುರುವಾಗಿ ಕೆಲವೇ ವಾರಗಳಷ್ಟೆ ಆಗಿದೆ. ಆದರೆ ನೆರೆಯ ಮಲಯಾಳಂನಲ್ಲಿ ಬಿಗ್​​ಬಾಸ್ ಶೋ ನಿನ್ನೆಯಷ್ಟೆ ಮುಕ್ತಾಯವಾಗಿದೆ. ಬಿಗ್​​ಬಾಸ್ ಶೋನಲ್ಲಿ ಮಲಯಾಳಂ ಟಿವಿ ನಟಿ ಅನುಮೋಲ್ ಅವರು ವಿಜೇತರಾಗಿದ್ದಾರೆ. ಸಾಮಾನ್ಯರಾಗಿ ಬಿಗ್​​ಬಾಸ್ ಮನೆಗೆ ಎಂಟ್ರಿ ನೀಡಿದ್ದ ಅನೀಶ್ ತಾರಾಯಿಲ್ ಅವರು ರನ್ನರ್ ಅಪ್ ಎನಿಸಿಕೊಂಡಿದ್ದಾರೆ. ಬಿಗ್​​ಬಾಸ್ ಶೋ ಗೆದ್ದ ಅನುಮೋಲ್​​ಗೆ ಭರ್ಜರಿ ನಗದು ಬಹುಮಾನ ಹಾಗೂ ದುಬಾರಿ ಉಡುಗೊರೆಗಳು ದೊರೆತಿವೆ.

ಬಿಗ್​​ಬಾಸ್ ಮಲಯಾಳಂ ವಿಜೇತರಾದ ಅನುಮೋಲ್ ಅವರಿಗೆ 42.55 ಲಕ್ಷ ರೂಪಾಯಿ ನಗದನ್ನು ಬಹುಮಾನವಾಗಿ ನೀಡಲಾಯ್ತು. ಅಸಲಿಗೆ ಶೋನ ಒಟ್ಟು ಬಹುಮಾನದ ಮೊತ್ತ 50 ಲಕ್ಷ ರೂಪಾಯಿಗಳಾಗಿತ್ತು, ಆದರೆ ಬಿಗ್ ಬ್ಯಾಂಕ್ ಟಾಸ್ಕ್​​ನ ವೇಳೆ 7.50 ಲಕ್ಷ ಮೊತ್ತವನ್ನು ಇತರೆ ಸ್ಪರ್ಧಿಗಳಿಗೆ ಹಂಚಲಾಯ್ತು. ಹಾಗಾಗಿ ವಿಜೇತರಿಗೆ 42.55 ಲಕ್ಷ ರೂಪಾಯಿಗಳು ಮಾತ್ರವೇ ದೊರಕಿದವು. ನಗದು ಬಹುಮಾನ ಮಾತ್ರವೇ ಅಲ್ಲದೆ ಹೊಚ್ಚ ಹೊಸ ಎಸ್​​ಯುವಿ ಕಾರೊಂದನ್ನು ಸಹ ಬಹುಮಾನವಾಗಿ ನಟಿ ಅನುಮೋಲ್ ಅವರಿಗೆ ನೀಡಲಾಯ್ತು.

ಇಡೀ ಸೀಸನ್​​ನಲ್ಲಿ ಅದ್ಭುತವಾಗಿ ಆಡಿದ್ದ, ಪ್ರೇಕ್ಷಕರ ಮೆಚ್ಚುಗೆ ಗಳಿಸಿದ್ದ ಸ್ಪರ್ಧಿ ಅನೀಶ್ ರನ್ನರ್ ಅಪ್ ಆದರು. ಅನೀಶ್, ಸಾಮಾನ್ಯರಾಗಿ ಬಿಗ್​​ಬಾಸ್ ಮನೆ ಪ್ರವೇಶಿಸಿದ್ದರು. ಆದರೆ ಬಿಗ್​ಬಾಸ್ ಮನೆಯಲ್ಲಿ ಅದ್ಭುತವಾಗಿ ಅವರು ಆಟವಾಡಿದರು. ಅವರ ಹಾಗೂ ಅನುಮೋಲ್ ನಡುವೆ ಮೊದಲ ಸ್ಥಾನಕ್ಕೆ ಪೈಪೋಟಿ ಶುರುವಾಗಿತ್ತು. ಅಂತಿಮವಾಗಿ ನಟಿ ಅನುಮೋಲ್ ವಿಜೇತರಾದರು.

ಇದನ್ನೂ ಓದಿ:ಎಲ್ಲಾ ಸ್ಪರ್ಧಿಗಳು ಹೊರಕ್ಕೆ: ಖಾಲಿ ಖಾಲಿಯಾಗಿರುವ ಬಿಗ್‌ಬಾಸ್‌ ಮನೆ ಹೇಗಿದೆ ನೋಡಿ

ಅನುಮೋಲ್, ಮಲಯಾಳಂ ಜನಪ್ರಿಯ ಟಿವಿ ತಾರೆಯರಲ್ಲಿ ಒಬ್ಬರಾಗಿದ್ದಾರೆ. ಕೆಲವಾರು ಸಿನಿಮಾಗಳಲ್ಲಿಯೂ ಅನುಮೋಲ್ ನಟಿಸಿದ್ದಾರೆ. 29 ವರ್ಷ ವಯಸ್ಸಿನ ಅನುಮೋಲ್ ಅವರು ಸೋಷಿಯಲ್ ಮೀಡಿಯಾ ಇನ್​​ಫ್ಲಯೆನ್ಸರ್ ಸಹ ಆಗಿದ್ದು, ಅಲ್ಲಿಯೂ ಸಹ ಅವರಿಗೆ ದೊಡ್ಡ ಸಂಖ್ಯೆಯ ಫಾಲೋವರ್​​ಗಳು ಇದ್ದಾರೆ.

ಪ್ರಶಸ್ತಿ ಗೆದ್ದ ಬಳಿಕ ಮಾತನಾಡಿದ ಅನುಮೋಲ್, ‘ನನಗೆ ಆ ಕ್ಷಣದಲ್ಲಿ ಬ್ಲಾಂಕ್ ಆದಂತೆ ಅನ್ನಿಸಿತು. ನನಗೆ ಇದು ನಿಜವೇನಾ ಅನ್ನಿಸಿತು. ಈ ಗೆಲುವಿಗೆ ನಾನು ದೇವರಿಗೆ, ಅಭಿಮಾನಿಗಳಿಗೆ ಮತ್ತು ನನ್ನ ಕುಟುಂಬದವರಿಗೆ ಧನ್ಯವಾದ ಹೇಳುತ್ತೇನೆ’ ಎಂದಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ