AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​​ಬಾಸ್ ಗೆದ್ದ ಟಿವಿ ನಟಿ ಅನುಮೋಲ್, ಸಿಕ್ಕ ಬಹುಮಾನವೆಷ್ಟು?

Bigg Boss Malayalam: ಬಿಗ್​​ಬಾಸ್ ಶೋನಲ್ಲಿ ಮಲಯಾಳಂ ಟಿವಿ ನಟಿ ಅನುಮೋಲ್ ಅವರು ವಿಜೇತರಾಗಿದ್ದಾರೆ. ಸಾಮಾನ್ಯರಾಗಿ ಬಿಗ್​​ಬಾಸ್ ಮನೆಗೆ ಎಂಟ್ರಿ ನೀಡಿದ್ದ ಅನೀಶ್ ತಾರಾಯಿಲ್ ಅವರು ರನ್ನರ್ ಅಪ್ ಎನಿಸಿಕೊಂಡಿದ್ದಾರೆ. ಬಿಗ್​​ಬಾಸ್ ಶೋ ಗೆದ್ದ ಅನುಮೋಲ್​​ಗೆ ಭರ್ಜರಿ ನಗದು ಬಹುಮಾನ ಹಾಗೂ ದುಬಾರಿ ಉಡುಗೊರೆಗಳು ದೊರೆತಿವೆ. ವಿಜೇತರಿಗೆ ಸಿಕ್ಕ ನಗದು ಬಹುಮಾನ ಎಷ್ಟು?

ಬಿಗ್​​ಬಾಸ್ ಗೆದ್ದ ಟಿವಿ ನಟಿ ಅನುಮೋಲ್, ಸಿಕ್ಕ ಬಹುಮಾನವೆಷ್ಟು?
Anumol
ಮಂಜುನಾಥ ಸಿ.
|

Updated on: Nov 11, 2025 | 5:20 PM

Share

ಬಿಗ್​​ಬಾಸ್ ಕನ್ನಡ ಸೀಸನ್ 12 (Bigg Boss Kannada) ಇನ್ನೂ ಚಾಲ್ತಿಯಲ್ಲಿದೆ. ಶೋ ಶುರುವಾಗಿ ಕೆಲವೇ ವಾರಗಳಷ್ಟೆ ಆಗಿದೆ. ಆದರೆ ನೆರೆಯ ಮಲಯಾಳಂನಲ್ಲಿ ಬಿಗ್​​ಬಾಸ್ ಶೋ ನಿನ್ನೆಯಷ್ಟೆ ಮುಕ್ತಾಯವಾಗಿದೆ. ಬಿಗ್​​ಬಾಸ್ ಶೋನಲ್ಲಿ ಮಲಯಾಳಂ ಟಿವಿ ನಟಿ ಅನುಮೋಲ್ ಅವರು ವಿಜೇತರಾಗಿದ್ದಾರೆ. ಸಾಮಾನ್ಯರಾಗಿ ಬಿಗ್​​ಬಾಸ್ ಮನೆಗೆ ಎಂಟ್ರಿ ನೀಡಿದ್ದ ಅನೀಶ್ ತಾರಾಯಿಲ್ ಅವರು ರನ್ನರ್ ಅಪ್ ಎನಿಸಿಕೊಂಡಿದ್ದಾರೆ. ಬಿಗ್​​ಬಾಸ್ ಶೋ ಗೆದ್ದ ಅನುಮೋಲ್​​ಗೆ ಭರ್ಜರಿ ನಗದು ಬಹುಮಾನ ಹಾಗೂ ದುಬಾರಿ ಉಡುಗೊರೆಗಳು ದೊರೆತಿವೆ.

ಬಿಗ್​​ಬಾಸ್ ಮಲಯಾಳಂ ವಿಜೇತರಾದ ಅನುಮೋಲ್ ಅವರಿಗೆ 42.55 ಲಕ್ಷ ರೂಪಾಯಿ ನಗದನ್ನು ಬಹುಮಾನವಾಗಿ ನೀಡಲಾಯ್ತು. ಅಸಲಿಗೆ ಶೋನ ಒಟ್ಟು ಬಹುಮಾನದ ಮೊತ್ತ 50 ಲಕ್ಷ ರೂಪಾಯಿಗಳಾಗಿತ್ತು, ಆದರೆ ಬಿಗ್ ಬ್ಯಾಂಕ್ ಟಾಸ್ಕ್​​ನ ವೇಳೆ 7.50 ಲಕ್ಷ ಮೊತ್ತವನ್ನು ಇತರೆ ಸ್ಪರ್ಧಿಗಳಿಗೆ ಹಂಚಲಾಯ್ತು. ಹಾಗಾಗಿ ವಿಜೇತರಿಗೆ 42.55 ಲಕ್ಷ ರೂಪಾಯಿಗಳು ಮಾತ್ರವೇ ದೊರಕಿದವು. ನಗದು ಬಹುಮಾನ ಮಾತ್ರವೇ ಅಲ್ಲದೆ ಹೊಚ್ಚ ಹೊಸ ಎಸ್​​ಯುವಿ ಕಾರೊಂದನ್ನು ಸಹ ಬಹುಮಾನವಾಗಿ ನಟಿ ಅನುಮೋಲ್ ಅವರಿಗೆ ನೀಡಲಾಯ್ತು.

ಇಡೀ ಸೀಸನ್​​ನಲ್ಲಿ ಅದ್ಭುತವಾಗಿ ಆಡಿದ್ದ, ಪ್ರೇಕ್ಷಕರ ಮೆಚ್ಚುಗೆ ಗಳಿಸಿದ್ದ ಸ್ಪರ್ಧಿ ಅನೀಶ್ ರನ್ನರ್ ಅಪ್ ಆದರು. ಅನೀಶ್, ಸಾಮಾನ್ಯರಾಗಿ ಬಿಗ್​​ಬಾಸ್ ಮನೆ ಪ್ರವೇಶಿಸಿದ್ದರು. ಆದರೆ ಬಿಗ್​ಬಾಸ್ ಮನೆಯಲ್ಲಿ ಅದ್ಭುತವಾಗಿ ಅವರು ಆಟವಾಡಿದರು. ಅವರ ಹಾಗೂ ಅನುಮೋಲ್ ನಡುವೆ ಮೊದಲ ಸ್ಥಾನಕ್ಕೆ ಪೈಪೋಟಿ ಶುರುವಾಗಿತ್ತು. ಅಂತಿಮವಾಗಿ ನಟಿ ಅನುಮೋಲ್ ವಿಜೇತರಾದರು.

ಇದನ್ನೂ ಓದಿ:ಎಲ್ಲಾ ಸ್ಪರ್ಧಿಗಳು ಹೊರಕ್ಕೆ: ಖಾಲಿ ಖಾಲಿಯಾಗಿರುವ ಬಿಗ್‌ಬಾಸ್‌ ಮನೆ ಹೇಗಿದೆ ನೋಡಿ

ಅನುಮೋಲ್, ಮಲಯಾಳಂ ಜನಪ್ರಿಯ ಟಿವಿ ತಾರೆಯರಲ್ಲಿ ಒಬ್ಬರಾಗಿದ್ದಾರೆ. ಕೆಲವಾರು ಸಿನಿಮಾಗಳಲ್ಲಿಯೂ ಅನುಮೋಲ್ ನಟಿಸಿದ್ದಾರೆ. 29 ವರ್ಷ ವಯಸ್ಸಿನ ಅನುಮೋಲ್ ಅವರು ಸೋಷಿಯಲ್ ಮೀಡಿಯಾ ಇನ್​​ಫ್ಲಯೆನ್ಸರ್ ಸಹ ಆಗಿದ್ದು, ಅಲ್ಲಿಯೂ ಸಹ ಅವರಿಗೆ ದೊಡ್ಡ ಸಂಖ್ಯೆಯ ಫಾಲೋವರ್​​ಗಳು ಇದ್ದಾರೆ.

ಪ್ರಶಸ್ತಿ ಗೆದ್ದ ಬಳಿಕ ಮಾತನಾಡಿದ ಅನುಮೋಲ್, ‘ನನಗೆ ಆ ಕ್ಷಣದಲ್ಲಿ ಬ್ಲಾಂಕ್ ಆದಂತೆ ಅನ್ನಿಸಿತು. ನನಗೆ ಇದು ನಿಜವೇನಾ ಅನ್ನಿಸಿತು. ಈ ಗೆಲುವಿಗೆ ನಾನು ದೇವರಿಗೆ, ಅಭಿಮಾನಿಗಳಿಗೆ ಮತ್ತು ನನ್ನ ಕುಟುಂಬದವರಿಗೆ ಧನ್ಯವಾದ ಹೇಳುತ್ತೇನೆ’ ಎಂದಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಮಲ್ಲಿಕಾರ್ಜುನ ಮುತ್ಯಾ ಪರ ಭಕ್ತರ ಸಭೆ, ಜಿಲ್ಲಾಡಳಿತಕ್ಕೆ 2 ದಿನ ಡೆಡ್​​ಲೈನ್
ಮಲ್ಲಿಕಾರ್ಜುನ ಮುತ್ಯಾ ಪರ ಭಕ್ತರ ಸಭೆ, ಜಿಲ್ಲಾಡಳಿತಕ್ಕೆ 2 ದಿನ ಡೆಡ್​​ಲೈನ್
ಜನಾರ್ದನ ರೆಡ್ಡಿಗೆ ಮತ್ತೆ 'ಗಣಿ' ಉರುಳು? 884 ಕೋಟಿ ನಷ್ಟ ವಸೂಲಿಗೆ ಆಗ್ರಹ
ಜನಾರ್ದನ ರೆಡ್ಡಿಗೆ ಮತ್ತೆ 'ಗಣಿ' ಉರುಳು? 884 ಕೋಟಿ ನಷ್ಟ ವಸೂಲಿಗೆ ಆಗ್ರಹ
ತಾನು ಕೆಲಸ ಮಾಡಿದ ಆಫೀಸಿಗೇ 91 ಲಕ್ಷ ರೂ. ಕನ್ನ! ಆರೋಪಿ ಕ್ಯಾಶಿಯರ್ ಅಂದರ್
ತಾನು ಕೆಲಸ ಮಾಡಿದ ಆಫೀಸಿಗೇ 91 ಲಕ್ಷ ರೂ. ಕನ್ನ! ಆರೋಪಿ ಕ್ಯಾಶಿಯರ್ ಅಂದರ್
ನಡುರಸ್ತೆಯಲ್ಲಿ ಇಬ್ಬರು ಕಾಲೇಜು ಹುಡುಗಿಯರಿಗೆ ಲಿಪ್​​​ ಕಿಸ್ ಮಾಡಿದ ಯುವಕ
ನಡುರಸ್ತೆಯಲ್ಲಿ ಇಬ್ಬರು ಕಾಲೇಜು ಹುಡುಗಿಯರಿಗೆ ಲಿಪ್​​​ ಕಿಸ್ ಮಾಡಿದ ಯುವಕ
ಸತ್ತವರ ಖಾತೆಗೆ ಪಾವತಿಯಾದ ಗೃಹಲಕ್ಷ್ಮೀ ಹಣ ವಾಪಸ್ ಪಡೆಯಲು ಸರ್ಕಾರ ನಿರ್ಧಾರ
ಸತ್ತವರ ಖಾತೆಗೆ ಪಾವತಿಯಾದ ಗೃಹಲಕ್ಷ್ಮೀ ಹಣ ವಾಪಸ್ ಪಡೆಯಲು ಸರ್ಕಾರ ನಿರ್ಧಾರ
ಕೋಲ್ಕತ್ತಾದಲ್ಲಿ 5.3 ತೀವ್ರತೆಯ ಭೂಕಂಪ
ಕೋಲ್ಕತ್ತಾದಲ್ಲಿ 5.3 ತೀವ್ರತೆಯ ಭೂಕಂಪ
ಪಿಸ್ತೂಲ್ ಇಟ್ಟುಕೊಂಡ ಬಂದ ಜೆಡಿಎಸ್ ಕಾರ್ಯಕರ್ತ, ವಿಡಿಯೋ ವೈರಲ್
ಪಿಸ್ತೂಲ್ ಇಟ್ಟುಕೊಂಡ ಬಂದ ಜೆಡಿಎಸ್ ಕಾರ್ಯಕರ್ತ, ವಿಡಿಯೋ ವೈರಲ್
ಅನಂತ್​​ ಕುಮಾರ್​​ ಹೆಗಡೆ ಮರಳಿ ರಾಜಕೀಯಕ್ಕೆ? ಶ್ರೀರಾಮುಲು ಹೇಳಿದ್ದಿಷ್ಟು
ಅನಂತ್​​ ಕುಮಾರ್​​ ಹೆಗಡೆ ಮರಳಿ ರಾಜಕೀಯಕ್ಕೆ? ಶ್ರೀರಾಮುಲು ಹೇಳಿದ್ದಿಷ್ಟು
ದೆಹಲಿ ಅಬಕಾರಿ ನೀತಿ ಹಗರಣ, ಸಿಬಿಐಗೆ ದೆಹಲಿ ನ್ಯಾಯಾಲಯ ತರಾಟೆ
ದೆಹಲಿ ಅಬಕಾರಿ ನೀತಿ ಹಗರಣ, ಸಿಬಿಐಗೆ ದೆಹಲಿ ನ್ಯಾಯಾಲಯ ತರಾಟೆ
ಮಾ.03 ಚಂದ್ರಗ್ರಹಣ; ಧನಸ್ಸು ರಾಶಿಯ ಮೇಲೆ ಪ್ರಭಾವ ಹೇಗಿರಲಿದೆ?
ಮಾ.03 ಚಂದ್ರಗ್ರಹಣ; ಧನಸ್ಸು ರಾಶಿಯ ಮೇಲೆ ಪ್ರಭಾವ ಹೇಗಿರಲಿದೆ?