AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್ ಬಾಸ್ ವಿನ್ನರ್ ಘೋಷಣೆ ಮಾಡಿದ ನಟ ರಿತೇಶ್ ದೇಶ್​​ಮುಖ್

ಬಿಗ್ ಬಾಸ್ ಮರಾಠಿ ಸೀಸನ್ 6 ಗ್ರ್ಯಾಂಡ್ ಫಿನಾಲೆಯಲ್ಲಿ ತನ್ವಿ ಕೋಲ್ಟೆ ವಿಜೇತರಾಗಿ ಹೊರಹೊಮ್ಮಿದ್ದಾರೆ. 15 ಲಕ್ಷ ನಗದು, ವಜ್ರದ ವೋಚರ್ ಮತ್ತು ಇ-ಬೈಕ್ ಗೆದ್ದ ತನ್ವಿ, ತಮ್ಮ ಪ್ರಯಾಣದ ಬಗ್ಗೆ ಮಾತನಾಡಿದರು. ಈ ಗೆಲುವನ್ನು ಕುಟುಂಬಕ್ಕೆ ಹಾಗೂ ತಮ್ಮನ್ನು ನಂಬಿದವರಿಗೆ ಅರ್ಪಿಸಿದ್ದಾರೆ. ಬಿಗ್ ಬಾಸ್ ಮರಾಠಿ ತಮ್ಮನ್ನು ಬ್ರ್ಯಾಂಡ್ ಆಗಿ ಪರಿವರ್ತಿಸಿದೆ ಎಂದು ಹೆಮ್ಮೆಯಿಂದ ಹೇಳಿಕೊಂಡಿದ್ದಾರೆ.

ಬಿಗ್ ಬಾಸ್ ವಿನ್ನರ್ ಘೋಷಣೆ ಮಾಡಿದ ನಟ ರಿತೇಶ್ ದೇಶ್​​ಮುಖ್
Tanvi
 ಶ್ರೀಲಕ್ಷ್ಮೀ ಎಚ್
| Edited By: |

Updated on: Apr 20, 2026 | 12:00 PM

Share

‘ಬಿಗ್ ಬಾಸ್’ ಶೋ ವಿವಿಧ ಭಾಷೆಯಲ್ಲಿ ಪ್ರಸಾರ ಕಾಣುತ್ತಿದೆ. ಅದೇ ರೀತಿ ಮರಾಠಿಯಲ್ಲಿ ‘ಬಿಗ್ ಬಾಸ್ 6′ ಸೀಸನ್ ಪೂರ್ಣಗೊಂಡಿದೆ. ಮೂರು ತಿಂಗಳ ಹಿಂದೆ ಕಲರ್ಸ್ ಮರಾಠಿ ಚಾನೆಲ್‌ನಲ್ಲಿ ಈ ಶೋ ಪ್ರಾರಂಭವಾಯಿತು. ಬಿಗ್ ಬಾಸ್ ಮರಾಠಿಯ ಈ ಸೀಸನ್‌ನಲ್ಲಿ, ಒಟ್ಟು 17 ಸದಸ್ಯರು 100 ದಿನಗಳ ಕಾಲ ಇದ್ದರು. ಈ ಪ್ರಯಾಣವು ಏಪ್ರಿಲ್ 19ರಂದು ಕೊನೆಗೊಂಡಿತು. ‘ಬಿಗ್ ಬಾಸ್ ಮರಾಠಿ ಸೀಸನ್ 6’ ರ ಗ್ರ್ಯಾಂಡ್ ಫಿನಾಲೆಯಲ್ಲಿ ತನ್ವಿ ಕೋಲ್ಟೆ ಪ್ರಶಸ್ತಿಯನ್ನು ಗೆದ್ದರು.

ಕೊನೆಯವರೆಗೂ ಯಾರು ಗೆಲ್ಲುತ್ತಾರೆ ಎಂಬ ಕುತೂಹಲ ಇತ್ತು. ತನ್ವಿ ಗೆಲುವಿನ ನಗೆ ಬೀರಿದರು. ವಿಜೇತರಿಗೆ ಕಲರ್ಸ್ ಮರಾಠಿಯಿಂದ 15 ಲಕ್ಷ ರೂ. ನಗದು ಬಹುಮಾನ ಮತ್ತು ಟ್ರೋಫಿಯನ್ನು ನೀಡಲಾಯಿತು . ವಜ್ರದ ಆಭರಣಗಳನ್ನು ಖರೀದಿಸಲು 10 ಲಕ್ಷ ರೂ.ಗಳ ವೋಚರ್ ಅನ್ನು ನೀಡಲಾಯಿತು. ವಿಜೇತರಿಗೆ ಇ-ಬೈಕ್ ಅನ್ನು ಸಹ ನೀಡಲಾಗಿದೆ. ರಿತೇಶ್ ದೇಶ್​​ಮುಖ್ ಈ ಘೋಷಣೆ ಮಾಡಿದರು.

View this post on Instagram

A post shared by Tanvi Kolte (@tanvikolte06)

ಆ ಬಳಿಕ ಮಾತನಾಡಿದ ತನ್ವಿ, ‘ಈ ಪ್ರಯಾಣ ನನಗೆ ತುಂಬಾ ವಿಶೇಷವಾಗಿದೆ. ಈ ಮನೆ ನನ್ನನ್ನು ನಾನು ತಿಳಿದುಕೊಳ್ಳಲು, ಪ್ರತಿಯೊಂದು ಸನ್ನಿವೇಶದಲ್ಲೂ ಬಲವಾಗಿರಲು ನನಗೆ ಕಲಿಸಿದೆ. ಪ್ರೇಕ್ಷಕರು ನೀಡಿದ ಪ್ರೀತಿ ಮತ್ತು ಬೆಂಬಲವೇ ನನ್ನ ನಿಜವಾದ ಶಕ್ತಿ. ನಾನು ಈ ಗೆಲುವನ್ನು ನನ್ನ ಕುಟುಂಬ ಮತ್ತು ನನ್ನಲ್ಲಿ ನಂಬಿಕೆ ಇಡುವ ಎಲ್ಲರಿಗೂ ಅರ್ಪಿಸುತ್ತೇನೆ’ ಎಂದರು.

ಇದನ್ನೂ ಓದಿ: ‘ನಷ್ಟ ಪರಿಹಾರ ಕೊಡಿ’: ಬಿಗ್ ಬಾಸ್​​ಗೆ ನೊಟೀಸ್ ಕಳಿಸಿದ ಮಾಜಿ ಸ್ಪರ್ಧಿ

‘ಮನೆಯಲ್ಲಿ ಎಲ್ಲರೂ ನನ್ನೊಂದಿಗೆ ಮಾತನಾಡುತ್ತಿದ್ದರು. ನಾನು ಏನು ಕೆಲಸ ಮಾಡಿದ್ದೇನೆ. ನಾನು ಯಾರು ಎಂದು ಅನೇಕರು ಕೇಳುತ್ತಿದ್ದರು. ಆಗ ನನಗೆ ಕೆಟ್ಟ ಭಾವನೆ ಬಂತು. ಆದರೆ ನಾನು ಈ ಮನೆಯಿಂದ ಹೊರಬಂದಾಗ, ನನ್ನ ಹೆಸರು ಎಲ್ಲರ ಬಾಯಲ್ಲೂ ಇರುತ್ತದೆ ಎಂದು ನಾನು ನಿರ್ಧರಿಸಿದ್ದೆ. ಬಿಗ್ ಬಾಸ್ ಮರಾಠಿ ನನ್ನ ಹೆಸರನ್ನು ದೊಡ್ಡದಾಗಿಸಿದೆ. ನಾನು ತನ್ವಿ ಕೋಲ್ಟೆಯಾಗಿ ಬಂದಿದ್ದೇನೆ ಮತ್ತು ಈಗ ತನ್ವಿ ಕೋಲ್ಟೆ ಒಂದು ಬ್ರಾಂಡ್ ಆಗಿದೆ’ ಎಂದು ಹೆಮ್ಮೆ ಹೊರಹಾಕಿದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ