AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶುರುವಾಯ್ತು ಮರಾಠಿ ಬಿಗ್​ಬಾಸ್ 5, ಸುದೀಪ್ ಆಪ್ತ ನಿರೂಪಕ

Bigg Boss Marathi: ಮರಾಠಿ ಬಿಗ್​ಬಾಸ್ ಸೀಸನ್ 5 ಪ್ರಾರಂಭವಾಗುತ್ತಿದೆ. ಕಿಚ್ಚ ಸುದೀಪ್​ರ ಆಪ್ತ ಗೆಳೆಯ ರಿತೇಶ್ ಈ ಬಾರಿ ಶೋ ನಿರೂಪಣೆ ಮಾಡಲಿದ್ದಾರೆ. ಬಿಗ್​ಬಾಸ್ ಮರಾಠಿ ಶೋಗೆ ಈ ಬಾರಿ ತುಸು ಗ್ಲಾಮರ್ ತುಂಬಲಾಗಿದೆ.

ಶುರುವಾಯ್ತು ಮರಾಠಿ ಬಿಗ್​ಬಾಸ್ 5, ಸುದೀಪ್ ಆಪ್ತ ನಿರೂಪಕ
ಮಂಜುನಾಥ ಸಿ.
|

Updated on: Jul 28, 2024 | 7:42 AM

Share

ಮತ್ತೆ ಬಿಗ್​ಬಾಸ್​ ಋತು ಪ್ರಾರಂಭವಾಗುತ್ತಿದೆ. ಈಗಾಗಲೇ ಹಿಂದಿಯಲ್ಲಿ ಬಿಗ್​ಬಾಸ್ ಒಟಿಟಿ ಪ್ರಾರಂಭವಾಗಿದೆ. ಇನ್ನು ಕೆಲವು ಭಾಷೆಗಳಲ್ಲಿ ಬಿಗ್​ಬಾಸ್ ಟಿವಿ ಸೀಸನ್ ಪ್ರಾರಂಭವಾಗುತ್ತಿದೆ. ತೆಲುಗು ಬಿಗ್​ಬಾಸ್ ಇನ್ನೇನು ಕೆಲವು ದಿನಗಳಲ್ಲಿ ಆರಂಭವಾಗಲಿದೆ. ಹಿಂದಿ ಬಿಗ್​ಬಾಸ್​ಗೆ ಸಿದ್ಧತೆ ನಡೆಯುತ್ತಿದೆ. ಕನ್ನಡದಲ್ಲಿಯೂ ಸಿದ್ಧತೆ ಆರಂಭವಾಗಿದೆ. ಇದರ ನಡುವೆ ಮರಾಠಿ ಬಿಗ್​ಬಾಸ್​ ಇಂದಿನಿಂದ ಆರಂಭವಾಗುತ್ತಿದೆ.

ಮರಾಠಿ ಬಿಗ್​ಬಾಸ್ ಸೀಸನ್ 5 ಇಂದು (ಜುಲೈ 28) ಆರಂಭವಾಗುತ್ತಿದ್ದು, ಕಾರ್ಯಕ್ರಮದ ಪ್ರೋಮೋಗಳು, ಸ್ಪರ್ಧಿಗಳ ಪಟ್ಟಿ ಈಗಾಗಲೇ ವೈರಲ್ ಆಗುತ್ತಿದೆ. ವಿಶೇಷವೆಂದರೆ ಮರಾಠಿ ಬಿಗ್​ಬಾಸ್ ಆರಂಭವಾದಾಗಿನಿಂದಲೂ ಇದೇ ಮೊದಲ ಬಾರಿಗೆ ಶೋನ ನಿರೂಪಕರು ಬದಲಾಗಿದ್ದು, ಕಿಚ್ಚ ಸುದೀಪ್​ರ ಆಪ್ತ ಗೆಳೆಯ ರಿತೇಶ್ ದೇಶ್​ಮುಖ್​ ಈ ಬಾರಿ ಕಾರ್ಯಕ್ರಮ ನಿರೂಪಣೆ ಮಾಡಲಿದ್ದಾರೆ.

ಹಿಂದಿ, ಕನ್ನಡ, ತೆಲುಗು, ತಮಿಳಿಗೆ ಹೋಲಿಸಿದರೆ ಮರಾಠಿ ಬಿಗ್​ಬಾಸ್ ಹೆಚ್ಚು ಯಶಸ್ಸು ಕಂಡಿರಲಿಲ್ಲ. ಆದರೆ ಕಳೆದೆರಡು ಸೀಸನ್​ಗಳಿಂದ ತುಸು ಚೇತರಿಕೆ ಕಂಡಿದೆ. ಅದೇ ಕಾರಣಕ್ಕೆ ಈ ಬಾರಿ ನಿರೂಪಕರನ್ನು ಬದಲಾಯಿಸಿದ್ದು, ಶೋಗೆ ಇನ್ನಷ್ಟು ಮಾದಕತೆ, ಗ್ಲಾಮರ್ ತುಂಬುವ ಪ್ರಯತ್ನ ಮಾಡಲಾಗುತ್ತಿದೆ. ಇದೇ ಕಾರಣಕ್ಕೆ ರಿತೇಶ್ ದೇಶ್​ಮುಖ್ ಅವರನ್ನು ನಿರೂಪಕರನ್ನಾಗಿ ಆಯ್ಕೆ ಮಾಡಲಾಗಿದ್ದು, ಗ್ಲಾಮರಸ್ ಬ್ಯೂಟಿ ನಿಕ್ಕಿ ತಾಂಬೋಲಿ ಸೇರಿದಂತೆ ಇನ್ನೂ ಕೆಲವು ಯುವ ನಟ-ನಟಿಯರನ್ನು ಸ್ಪರ್ಧಿಗಳನ್ನಾಗಿ ಆಯ್ಕೆ ಮಾಡಲಾಗಿದೆ. ಈ ಹಿಂದೆ ಮರಾಠಿ ಬಿಗ್​ಬಾಸ್ ಶೋ ಅನ್ನು ಹಿರಿಯ ನಟ, ನಿರ್ದೇಶಕ ಮಹೇಶ್ ಮಾಂಜ್ರೆಕರ್ ನಿರೂಪಣೆ ಮಾಡುತ್ತಿದ್ದರು.

ಇದನ್ನೂ ಓದಿ:ಬಿಗ್ ಬಾಸ್ ಮನೆಯ ಸೆ* ವಿಡಿಯೋ ವೈರಲ್; ತಪ್ಪು ಮಾಡಿದ ಪತಿಯನ್ನು ವಹಿಸಿಕೊಂಡು ಬಂದ ಪತ್ನಿ

ರಿತೇಶ್ ದೇಶ್​ಮುಖ್ ಮತ್ತು ಕಿಚ್ಚ ಸುದೀಪ್ ಅತ್ಯಾಪ್ತ ಗೆಳೆಯರು. ಸುದೀಪ್ ನಟಿಸಿದ ಮೊದಲ ಹಿಂದಿ ಸಿನಿಮಾ ‘ರಣ್’ನಲ್ಲಿ ರಿತೇಶ್ ದೇಶ್​ಮುಖ್ ಸಹ ನಾಯಕನಾಗಿ ನಟಿಸಿದ್ದರು. ಆ ಸಿನಿಮಾದಲ್ಲಿ ಅಮಿತಾಬ್ ಬಚ್ಚನ್ ಸಹ ನಟಿಸಿದ್ದರು. ಆ ಸಿನಿಮಾದಿಂದ ಈವರೆಗೆ ರಿತೇಶ್ ಹಾಗೂ ಸುದೀಪ್ ಆಪ್ತ ಗೆಳೆಯರು. ರಿತೇಶ್​ರ ಪತ್ನಿ ಜೆನಿಲಿಯಾ ದೇಶ್​ಮುಖ್ ಸಹ ಸುದೀಪ್​ರ ಆಪ್ತ ಗೆಳತಿ. ಇದೀಗ ಬಿಡುಗಡೆ ಆಗಿರುವ ಮರಾಠಿ ಪ್ರೋಮೋನಲ್ಲಿ ಸಹ ರಿತೇಶ್ ದೇಶ್​ಮುಖ್, ಸುದೀಪ್​ರ ಸ್ಟೈಲ್ ಅನ್ನೇ ಕಾಪಿ ಮಾಡಿದ್ದಾರೆ.

ಬಿಗ್​ಬಾಸ್ ಒಟಿಟಿ ಪ್ರಸ್ತುತ ಚಾಲ್ತಿಯಲ್ಲಿದ್ದು, ನಟ ಅನಿಲ್ ಕಪೂರ್ ಆ ಶೋ ನಿರೂಪಣೆ ಮಾಡುತ್ತಿದ್ದಾರೆ. ತೆಲುಗು ಬಿಗ್​ಬಾಸ್​ಗೆ ಸಿದ್ಧತೆ ಆರಂಭವಾಗಿದ್ದು ಕೆಲವು ಸ್ಪರ್ಧಿಗಳು ಖಾತ್ರಿ ಆಗಿದ್ದಾರೆ. ಹೋಟೆಲ್ ಆಂಟಿ, ಅಮೃತಾ ಪ್ರಣಯ್ ಸೇರಿದಂತೆ ಕೆಲವು ಜನಪ್ರಿಯ ಸ್ಪರ್ಧಿಗಳು ಶೋನಲ್ಲಿ ಭಾಗಿಯಾಗಲಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು