AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕನ್ನಡ ಮಿನಿ ಬಿಗ್​ ಬಾಸ್​ ಬಗ್ಗೆ ಹೊಸ ಅಪ್​ಡೇಟ್​; ನೀವಂದುಕೊಂಡಂತಿರಲ್ಲ ಸ್ಪರ್ಧಿಗಳು

ಕಳೆದ ಭಾನುವಾರ (ಆಗಸ್ಟ್​ 8) ‘ಬಿಗ್​ ಬಾಸ್​ ಸೀಸನ್​ 8’ ಪೂರ್ಣಗೊಂಡಿತ್ತು. ಮಂಜು ಪಾವಗಡ ವಿನ್ನರ್ ಹಾಗೂ ಅರವಿಂದ್​ ಕೆ.ಪಿ. ರನ್ನರ್​ ಅಪ್​ ಎಂದು ಘೋಷಣೆ ಮಾಡಲಾಗಿತ್ತು.

ಕನ್ನಡ ಮಿನಿ ಬಿಗ್​ ಬಾಸ್​ ಬಗ್ಗೆ ಹೊಸ ಅಪ್​ಡೇಟ್​; ನೀವಂದುಕೊಂಡಂತಿರಲ್ಲ ಸ್ಪರ್ಧಿಗಳು
ಕನ್ನಡ ಮಿನಿ ಬಿಗ್​ ಬಾಸ್​ ಬಗ್ಗೆ ಹೊಸ ಅಪ್​ಡೇಟ್​; ನೀವಂದುಕೊಂಡಂತಿರಲ್ಲ ಸ್ಪರ್ಧಿಗಳು
TV9 Web
| Edited By: |

Updated on: Aug 12, 2021 | 2:48 PM

Share

‘ಕನ್ನಡ ಬಿಗ್​ ಬಾಸ್​ ಸೀಸನ್​ 8’ ಪೂರ್ಣಗೊಂಡಿತಲ್ಲ ಎಂದು ಬೇಸರ ಮಾಡಿಕೊಂಡವರಿಗೆ ಕಲರ್ಸ್​ ಕನ್ನಡ ವಾಹಿನಿ ಸಿಹಿ ಸುದ್ದಿ ನೀಡಿದೆ. ಕಿರುತೆರೆಯ ತಾರೆಗಳನ್ನೇ ಇಟ್ಟುಕೊಂಡು ಒಂದು ವಾರಗಳ ಕಾಲ ಮಿನಿ ಬಿಗ್​ ಬಾಸ್​ ನಡೆಸಲಾಗುತ್ತಿದೆ. ಈಗ ಈ ಶೋ ಬಗ್ಗೆ ಹೊಸ ಅಪ್​ಡೇಟ್ ಒಂದು ಸಿಕ್ಕಿದೆ.

ಕಳೆದ ಭಾನುವಾರ (ಆಗಸ್ಟ್​ 8) ‘ಬಿಗ್​ ಬಾಸ್​ ಸೀಸನ್​ 8’ ಪೂರ್ಣಗೊಂಡಿತ್ತು. ಮಂಜು ಪಾವಗಡ ವಿನ್ನರ್ ಹಾಗೂ ಅರವಿಂದ್​ ಕೆ.ಪಿ. ರನ್ನರ್​ ಅಪ್​ ಎಂದು ಘೋಷಣೆ ಮಾಡಲಾಗಿತ್ತು. ನಿತ್ಯ ಒಂದೂವರೆ ಗಂಟೆ ಮನರಂಜನೆ ನೀಡುತ್ತಿದ್ದ ಶೋ ಪೂರ್ಣಗೊಂಡಿತಲ್ಲ ಎಂದು ಅನೇಕರು ಬೇಸರ ಮಾಡಿಕೊಂಡಿದ್ದರು. ಹೀಗಿರುವಾಗಲೇ ಕಲರ್ಸ್​ ಕನ್ನಡ ವಾಹಿನಿ ಖುಷಿ ಸುದ್ದಿ ನೀಡಿದೆ.

ಒಂದು ವಾರಗಳ ಕಾಲ ಬಿಗ್​ ಬಾಸ್​ ಮನೆ ತುಂಬಲಿದೆ. ಕಲರ್ಸ್​ ಕನ್ನಡ ವಾಹಿನಿಯ ಧಾರಾವಾಹಿ ಕಲಾವಿದರೇ ಈ ಬಾರಿಯ ಬಿಗ್​ ಬಾಸ್​ ಸ್ಪರ್ಧಿಗಳು. ಕಿರಣ್​ ರಾಜ್​, ಅಕುಲ್​ ಸೇರಿ ಸಾಕಷ್ಟು ಜನರು ಮನೆ ಒಳಗೆ ಸೇರಿದ್ದಾರೆ. ಎಲ್ಲರಿಗೂ ನಾನಾ ರೀತಿಯ ಟಾಸ್ಕ್ ನೀಡಲಾಗುತ್ತಿದೆ.

ತಮ್ಮಿಷ್ಟದ ನಟ-ನಟಿಯರನ್ನು ಧಾರಾವಾಹಿಗಳಲ್ಲಿ ಕೇವಲ ಕಲಾವಿದರಾಗಿ ನೋಡುತ್ತಾರೆ ವೀಕ್ಷಕರು. ಆದರೆ, ಈಗ ಎಲ್ಲಾ ಕಲಾವಿದರು ಬಿಗ್​ ಬಾಸ್​ ಮನೆ ಸೇರಿರುವುದರಿಂದ ಅವರ ನಿಜವಾದ ವ್ಯಕ್ತಿತ್ವ ಅನಾವರಣಗೊಳ್ಳಲಿದೆ.  ಹೀಗಾಗಿ, ಇಂದು ಹಂಚಿಕೊಂಡಿರುವ ಪ್ರೋಮೋಗೆ ‘ನೆಚ್ಚಿನ ಟೆಲಿವಿಶನ್ ಪಾತ್ರಗಳ ರಿಯಲ್ ಲೈಫ್’ ಎನ್ನುವ ಕ್ಯಾಪ್ಶನ್​ ನೀಡಲಾಗಿದೆ.

ಅಂದಹಾಗೆ, ಈ ಮಿನಿ ಬಿಗ್​ ಬಾಸ್​ ಹೇಗಿರುತ್ತದೆ? ಅದರ ರೂಪುರೇಷೆ ಏನು ಎಂಬುದನ್ನು ಕಲರ್ಸ್​ ಕನ್ನಡ ವಾಹಿನಿ ಬಿಟ್ಟುಕೊಟ್ಟಿಲ್ಲ. ವೇದಿಕೆ ಮೇಲೆ ಕಿಚ್ಚ ಸುದೀಪ್​ ಇರುತ್ತಾರಾ? ಎಂಬಿತ್ಯಾದಿ ಪ್ರಶ್ನೆಗೆ ಶನಿವಾರ ಉತ್ತರ ಸಿಗಲಿದೆ.

ಇದನ್ನೂ ಓದಿ: ‘ಅರವಿಂದ್​ ಜತೆ ಮದುವೆ ಆಗ್ತೀರಾ? ಕನ್ನಡದಲ್ಲೇ ಉತ್ತರ ಕೊಡಿ’; ದಿವ್ಯಾಗೆ ಪಟ್ಟು ಹಿಡಿದು ಪ್ರಶ್ನೆ ಕೇಳಿದ ಮಂಜು

ಬಿಗ್​ ಬಾಸ್ ಪಾಸ್​ ಆದ ಮಂಜು ಕಾಲೇಜಿನಲ್ಲಿ 9 ಬಾರಿ ಪರೀಕ್ಷೆ ಕಟ್ಟಿದರೂ ಪಾಸ್​ ಆಗಲಿಲ್ಲ; ಅವರ ವಿದ್ಯಾರ್ಹತೆ ಏನು?

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ