Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕನ್ನಡ ಮಿನಿ ಬಿಗ್​ ಬಾಸ್​ ಬಗ್ಗೆ ಹೊಸ ಅಪ್​ಡೇಟ್​; ನೀವಂದುಕೊಂಡಂತಿರಲ್ಲ ಸ್ಪರ್ಧಿಗಳು

ಕಳೆದ ಭಾನುವಾರ (ಆಗಸ್ಟ್​ 8) ‘ಬಿಗ್​ ಬಾಸ್​ ಸೀಸನ್​ 8’ ಪೂರ್ಣಗೊಂಡಿತ್ತು. ಮಂಜು ಪಾವಗಡ ವಿನ್ನರ್ ಹಾಗೂ ಅರವಿಂದ್​ ಕೆ.ಪಿ. ರನ್ನರ್​ ಅಪ್​ ಎಂದು ಘೋಷಣೆ ಮಾಡಲಾಗಿತ್ತು.

ಕನ್ನಡ ಮಿನಿ ಬಿಗ್​ ಬಾಸ್​ ಬಗ್ಗೆ ಹೊಸ ಅಪ್​ಡೇಟ್​; ನೀವಂದುಕೊಂಡಂತಿರಲ್ಲ ಸ್ಪರ್ಧಿಗಳು
ಕನ್ನಡ ಮಿನಿ ಬಿಗ್​ ಬಾಸ್​ ಬಗ್ಗೆ ಹೊಸ ಅಪ್​ಡೇಟ್​; ನೀವಂದುಕೊಂಡಂತಿರಲ್ಲ ಸ್ಪರ್ಧಿಗಳು
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on: Aug 12, 2021 | 2:48 PM

‘ಕನ್ನಡ ಬಿಗ್​ ಬಾಸ್​ ಸೀಸನ್​ 8’ ಪೂರ್ಣಗೊಂಡಿತಲ್ಲ ಎಂದು ಬೇಸರ ಮಾಡಿಕೊಂಡವರಿಗೆ ಕಲರ್ಸ್​ ಕನ್ನಡ ವಾಹಿನಿ ಸಿಹಿ ಸುದ್ದಿ ನೀಡಿದೆ. ಕಿರುತೆರೆಯ ತಾರೆಗಳನ್ನೇ ಇಟ್ಟುಕೊಂಡು ಒಂದು ವಾರಗಳ ಕಾಲ ಮಿನಿ ಬಿಗ್​ ಬಾಸ್​ ನಡೆಸಲಾಗುತ್ತಿದೆ. ಈಗ ಈ ಶೋ ಬಗ್ಗೆ ಹೊಸ ಅಪ್​ಡೇಟ್ ಒಂದು ಸಿಕ್ಕಿದೆ.

ಕಳೆದ ಭಾನುವಾರ (ಆಗಸ್ಟ್​ 8) ‘ಬಿಗ್​ ಬಾಸ್​ ಸೀಸನ್​ 8’ ಪೂರ್ಣಗೊಂಡಿತ್ತು. ಮಂಜು ಪಾವಗಡ ವಿನ್ನರ್ ಹಾಗೂ ಅರವಿಂದ್​ ಕೆ.ಪಿ. ರನ್ನರ್​ ಅಪ್​ ಎಂದು ಘೋಷಣೆ ಮಾಡಲಾಗಿತ್ತು. ನಿತ್ಯ ಒಂದೂವರೆ ಗಂಟೆ ಮನರಂಜನೆ ನೀಡುತ್ತಿದ್ದ ಶೋ ಪೂರ್ಣಗೊಂಡಿತಲ್ಲ ಎಂದು ಅನೇಕರು ಬೇಸರ ಮಾಡಿಕೊಂಡಿದ್ದರು. ಹೀಗಿರುವಾಗಲೇ ಕಲರ್ಸ್​ ಕನ್ನಡ ವಾಹಿನಿ ಖುಷಿ ಸುದ್ದಿ ನೀಡಿದೆ.

ಒಂದು ವಾರಗಳ ಕಾಲ ಬಿಗ್​ ಬಾಸ್​ ಮನೆ ತುಂಬಲಿದೆ. ಕಲರ್ಸ್​ ಕನ್ನಡ ವಾಹಿನಿಯ ಧಾರಾವಾಹಿ ಕಲಾವಿದರೇ ಈ ಬಾರಿಯ ಬಿಗ್​ ಬಾಸ್​ ಸ್ಪರ್ಧಿಗಳು. ಕಿರಣ್​ ರಾಜ್​, ಅಕುಲ್​ ಸೇರಿ ಸಾಕಷ್ಟು ಜನರು ಮನೆ ಒಳಗೆ ಸೇರಿದ್ದಾರೆ. ಎಲ್ಲರಿಗೂ ನಾನಾ ರೀತಿಯ ಟಾಸ್ಕ್ ನೀಡಲಾಗುತ್ತಿದೆ.

ತಮ್ಮಿಷ್ಟದ ನಟ-ನಟಿಯರನ್ನು ಧಾರಾವಾಹಿಗಳಲ್ಲಿ ಕೇವಲ ಕಲಾವಿದರಾಗಿ ನೋಡುತ್ತಾರೆ ವೀಕ್ಷಕರು. ಆದರೆ, ಈಗ ಎಲ್ಲಾ ಕಲಾವಿದರು ಬಿಗ್​ ಬಾಸ್​ ಮನೆ ಸೇರಿರುವುದರಿಂದ ಅವರ ನಿಜವಾದ ವ್ಯಕ್ತಿತ್ವ ಅನಾವರಣಗೊಳ್ಳಲಿದೆ.  ಹೀಗಾಗಿ, ಇಂದು ಹಂಚಿಕೊಂಡಿರುವ ಪ್ರೋಮೋಗೆ ‘ನೆಚ್ಚಿನ ಟೆಲಿವಿಶನ್ ಪಾತ್ರಗಳ ರಿಯಲ್ ಲೈಫ್’ ಎನ್ನುವ ಕ್ಯಾಪ್ಶನ್​ ನೀಡಲಾಗಿದೆ.

ಅಂದಹಾಗೆ, ಈ ಮಿನಿ ಬಿಗ್​ ಬಾಸ್​ ಹೇಗಿರುತ್ತದೆ? ಅದರ ರೂಪುರೇಷೆ ಏನು ಎಂಬುದನ್ನು ಕಲರ್ಸ್​ ಕನ್ನಡ ವಾಹಿನಿ ಬಿಟ್ಟುಕೊಟ್ಟಿಲ್ಲ. ವೇದಿಕೆ ಮೇಲೆ ಕಿಚ್ಚ ಸುದೀಪ್​ ಇರುತ್ತಾರಾ? ಎಂಬಿತ್ಯಾದಿ ಪ್ರಶ್ನೆಗೆ ಶನಿವಾರ ಉತ್ತರ ಸಿಗಲಿದೆ.

ಇದನ್ನೂ ಓದಿ: ‘ಅರವಿಂದ್​ ಜತೆ ಮದುವೆ ಆಗ್ತೀರಾ? ಕನ್ನಡದಲ್ಲೇ ಉತ್ತರ ಕೊಡಿ’; ದಿವ್ಯಾಗೆ ಪಟ್ಟು ಹಿಡಿದು ಪ್ರಶ್ನೆ ಕೇಳಿದ ಮಂಜು

ಬಿಗ್​ ಬಾಸ್ ಪಾಸ್​ ಆದ ಮಂಜು ಕಾಲೇಜಿನಲ್ಲಿ 9 ಬಾರಿ ಪರೀಕ್ಷೆ ಕಟ್ಟಿದರೂ ಪಾಸ್​ ಆಗಲಿಲ್ಲ; ಅವರ ವಿದ್ಯಾರ್ಹತೆ ಏನು?

VIDEO: ಧೋನಿ ಚಮತ್ಕಾರ... ಹೀಗೂ ರನೌಟ್ ಮಾಡಬಹುದು!
VIDEO: ಧೋನಿ ಚಮತ್ಕಾರ... ಹೀಗೂ ರನೌಟ್ ಮಾಡಬಹುದು!
ಆಸ್ಪತ್ರೆಯಲ್ಲಿ ಅಗ್ನಿ ಅವಘಡ, ಓರ್ವ ರೋಗಿ ಸಾವು, ಹಲವರಿಗೆ ಗಾಯ
ಆಸ್ಪತ್ರೆಯಲ್ಲಿ ಅಗ್ನಿ ಅವಘಡ, ಓರ್ವ ರೋಗಿ ಸಾವು, ಹಲವರಿಗೆ ಗಾಯ
ಹೊಸ ದಾಖಲೆ... ಕೇವಲ 26 ರನ್ ಬಾರಿಸಿ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದ ಧೋನಿ
ಹೊಸ ದಾಖಲೆ... ಕೇವಲ 26 ರನ್ ಬಾರಿಸಿ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದ ಧೋನಿ
ಉತ್ಸವಗಳ ಸಂದರ್ಭ ಪಾನಕ ಹಾಗೂ ಮಜ್ಜಿಗೆ ನೀಡುವುದರ ಹಿಂದಿನ ಅಧ್ಯಾತ್ಮಿಕ ರಹಸ್ಯ
ಉತ್ಸವಗಳ ಸಂದರ್ಭ ಪಾನಕ ಹಾಗೂ ಮಜ್ಜಿಗೆ ನೀಡುವುದರ ಹಿಂದಿನ ಅಧ್ಯಾತ್ಮಿಕ ರಹಸ್ಯ
ಚಂದ್ರ ವೃಶ್ಚಿಕ ರಾಶಿಯಲ್ಲಿ ಸಂಚರಿಸುವ ಈ ದಿನದ ಭವಿಷ್ಯ ಇಲ್ಲಿ ತಿಳಿಯಿರಿ
ಚಂದ್ರ ವೃಶ್ಚಿಕ ರಾಶಿಯಲ್ಲಿ ಸಂಚರಿಸುವ ಈ ದಿನದ ಭವಿಷ್ಯ ಇಲ್ಲಿ ತಿಳಿಯಿರಿ
ಬೆಂಗಳೂರು ಹೈವೇಯಲ್ಲಿ 3 ಬಾರಿ ಪಲ್ಟಿಯಾದ ನೀರಿನ ಟ್ಯಾಂಕರ್; ವಿಡಿಯೋ ವೈರಲ್
ಬೆಂಗಳೂರು ಹೈವೇಯಲ್ಲಿ 3 ಬಾರಿ ಪಲ್ಟಿಯಾದ ನೀರಿನ ಟ್ಯಾಂಕರ್; ವಿಡಿಯೋ ವೈರಲ್
ಬಂಗಾಳದಲ್ಲಿ ವಕ್ಫ್ ವಿರೋಧಿ ಪ್ರತಿಭಟನೆ; ಪೊಲೀಸ್ ವಾಹನಗಳಿಗೆ ಬೆಂಕಿ
ಬಂಗಾಳದಲ್ಲಿ ವಕ್ಫ್ ವಿರೋಧಿ ಪ್ರತಿಭಟನೆ; ಪೊಲೀಸ್ ವಾಹನಗಳಿಗೆ ಬೆಂಕಿ
ದೇವರ ಮೊರೆ ಹೋದ ಸಿಎಸ್​ಕೆ ತಂಡ; ಗೈರಾದ ಧೋನಿ
ದೇವರ ಮೊರೆ ಹೋದ ಸಿಎಸ್​ಕೆ ತಂಡ; ಗೈರಾದ ಧೋನಿ
ಸನ್‌ರೈಸರ್ಸ್ ಹೈದರಾಬಾದ್ ತಂಡ ಉಳಿದುಕೊಂಡಿರುವ ಹೋಟೆಲ್‌ನಲ್ಲಿ ಬೆಂಕಿ ದುರಂತ
ಸನ್‌ರೈಸರ್ಸ್ ಹೈದರಾಬಾದ್ ತಂಡ ಉಳಿದುಕೊಂಡಿರುವ ಹೋಟೆಲ್‌ನಲ್ಲಿ ಬೆಂಕಿ ದುರಂತ
ಶಾಸಕರು ಬಯಸಿದರೆ ಶಿವಕುಮಾರ್ ಸಿಎಂ ಆಗುವುದನ್ನು ಯಾರು ತಡೆದಾರು? ರಾಯರೆಡ್ಡಿ
ಶಾಸಕರು ಬಯಸಿದರೆ ಶಿವಕುಮಾರ್ ಸಿಎಂ ಆಗುವುದನ್ನು ಯಾರು ತಡೆದಾರು? ರಾಯರೆಡ್ಡಿ