AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕನ್ನಡ ಮಿನಿ ಬಿಗ್​ ಬಾಸ್​ ಬಗ್ಗೆ ಹೊಸ ಅಪ್​ಡೇಟ್​; ನೀವಂದುಕೊಂಡಂತಿರಲ್ಲ ಸ್ಪರ್ಧಿಗಳು

ಕಳೆದ ಭಾನುವಾರ (ಆಗಸ್ಟ್​ 8) ‘ಬಿಗ್​ ಬಾಸ್​ ಸೀಸನ್​ 8’ ಪೂರ್ಣಗೊಂಡಿತ್ತು. ಮಂಜು ಪಾವಗಡ ವಿನ್ನರ್ ಹಾಗೂ ಅರವಿಂದ್​ ಕೆ.ಪಿ. ರನ್ನರ್​ ಅಪ್​ ಎಂದು ಘೋಷಣೆ ಮಾಡಲಾಗಿತ್ತು.

ಕನ್ನಡ ಮಿನಿ ಬಿಗ್​ ಬಾಸ್​ ಬಗ್ಗೆ ಹೊಸ ಅಪ್​ಡೇಟ್​; ನೀವಂದುಕೊಂಡಂತಿರಲ್ಲ ಸ್ಪರ್ಧಿಗಳು
ಕನ್ನಡ ಮಿನಿ ಬಿಗ್​ ಬಾಸ್​ ಬಗ್ಗೆ ಹೊಸ ಅಪ್​ಡೇಟ್​; ನೀವಂದುಕೊಂಡಂತಿರಲ್ಲ ಸ್ಪರ್ಧಿಗಳು
TV9 Web
| Edited By: |

Updated on: Aug 12, 2021 | 2:48 PM

Share

‘ಕನ್ನಡ ಬಿಗ್​ ಬಾಸ್​ ಸೀಸನ್​ 8’ ಪೂರ್ಣಗೊಂಡಿತಲ್ಲ ಎಂದು ಬೇಸರ ಮಾಡಿಕೊಂಡವರಿಗೆ ಕಲರ್ಸ್​ ಕನ್ನಡ ವಾಹಿನಿ ಸಿಹಿ ಸುದ್ದಿ ನೀಡಿದೆ. ಕಿರುತೆರೆಯ ತಾರೆಗಳನ್ನೇ ಇಟ್ಟುಕೊಂಡು ಒಂದು ವಾರಗಳ ಕಾಲ ಮಿನಿ ಬಿಗ್​ ಬಾಸ್​ ನಡೆಸಲಾಗುತ್ತಿದೆ. ಈಗ ಈ ಶೋ ಬಗ್ಗೆ ಹೊಸ ಅಪ್​ಡೇಟ್ ಒಂದು ಸಿಕ್ಕಿದೆ.

ಕಳೆದ ಭಾನುವಾರ (ಆಗಸ್ಟ್​ 8) ‘ಬಿಗ್​ ಬಾಸ್​ ಸೀಸನ್​ 8’ ಪೂರ್ಣಗೊಂಡಿತ್ತು. ಮಂಜು ಪಾವಗಡ ವಿನ್ನರ್ ಹಾಗೂ ಅರವಿಂದ್​ ಕೆ.ಪಿ. ರನ್ನರ್​ ಅಪ್​ ಎಂದು ಘೋಷಣೆ ಮಾಡಲಾಗಿತ್ತು. ನಿತ್ಯ ಒಂದೂವರೆ ಗಂಟೆ ಮನರಂಜನೆ ನೀಡುತ್ತಿದ್ದ ಶೋ ಪೂರ್ಣಗೊಂಡಿತಲ್ಲ ಎಂದು ಅನೇಕರು ಬೇಸರ ಮಾಡಿಕೊಂಡಿದ್ದರು. ಹೀಗಿರುವಾಗಲೇ ಕಲರ್ಸ್​ ಕನ್ನಡ ವಾಹಿನಿ ಖುಷಿ ಸುದ್ದಿ ನೀಡಿದೆ.

ಒಂದು ವಾರಗಳ ಕಾಲ ಬಿಗ್​ ಬಾಸ್​ ಮನೆ ತುಂಬಲಿದೆ. ಕಲರ್ಸ್​ ಕನ್ನಡ ವಾಹಿನಿಯ ಧಾರಾವಾಹಿ ಕಲಾವಿದರೇ ಈ ಬಾರಿಯ ಬಿಗ್​ ಬಾಸ್​ ಸ್ಪರ್ಧಿಗಳು. ಕಿರಣ್​ ರಾಜ್​, ಅಕುಲ್​ ಸೇರಿ ಸಾಕಷ್ಟು ಜನರು ಮನೆ ಒಳಗೆ ಸೇರಿದ್ದಾರೆ. ಎಲ್ಲರಿಗೂ ನಾನಾ ರೀತಿಯ ಟಾಸ್ಕ್ ನೀಡಲಾಗುತ್ತಿದೆ.

ತಮ್ಮಿಷ್ಟದ ನಟ-ನಟಿಯರನ್ನು ಧಾರಾವಾಹಿಗಳಲ್ಲಿ ಕೇವಲ ಕಲಾವಿದರಾಗಿ ನೋಡುತ್ತಾರೆ ವೀಕ್ಷಕರು. ಆದರೆ, ಈಗ ಎಲ್ಲಾ ಕಲಾವಿದರು ಬಿಗ್​ ಬಾಸ್​ ಮನೆ ಸೇರಿರುವುದರಿಂದ ಅವರ ನಿಜವಾದ ವ್ಯಕ್ತಿತ್ವ ಅನಾವರಣಗೊಳ್ಳಲಿದೆ.  ಹೀಗಾಗಿ, ಇಂದು ಹಂಚಿಕೊಂಡಿರುವ ಪ್ರೋಮೋಗೆ ‘ನೆಚ್ಚಿನ ಟೆಲಿವಿಶನ್ ಪಾತ್ರಗಳ ರಿಯಲ್ ಲೈಫ್’ ಎನ್ನುವ ಕ್ಯಾಪ್ಶನ್​ ನೀಡಲಾಗಿದೆ.

ಅಂದಹಾಗೆ, ಈ ಮಿನಿ ಬಿಗ್​ ಬಾಸ್​ ಹೇಗಿರುತ್ತದೆ? ಅದರ ರೂಪುರೇಷೆ ಏನು ಎಂಬುದನ್ನು ಕಲರ್ಸ್​ ಕನ್ನಡ ವಾಹಿನಿ ಬಿಟ್ಟುಕೊಟ್ಟಿಲ್ಲ. ವೇದಿಕೆ ಮೇಲೆ ಕಿಚ್ಚ ಸುದೀಪ್​ ಇರುತ್ತಾರಾ? ಎಂಬಿತ್ಯಾದಿ ಪ್ರಶ್ನೆಗೆ ಶನಿವಾರ ಉತ್ತರ ಸಿಗಲಿದೆ.

ಇದನ್ನೂ ಓದಿ: ‘ಅರವಿಂದ್​ ಜತೆ ಮದುವೆ ಆಗ್ತೀರಾ? ಕನ್ನಡದಲ್ಲೇ ಉತ್ತರ ಕೊಡಿ’; ದಿವ್ಯಾಗೆ ಪಟ್ಟು ಹಿಡಿದು ಪ್ರಶ್ನೆ ಕೇಳಿದ ಮಂಜು

ಬಿಗ್​ ಬಾಸ್ ಪಾಸ್​ ಆದ ಮಂಜು ಕಾಲೇಜಿನಲ್ಲಿ 9 ಬಾರಿ ಪರೀಕ್ಷೆ ಕಟ್ಟಿದರೂ ಪಾಸ್​ ಆಗಲಿಲ್ಲ; ಅವರ ವಿದ್ಯಾರ್ಹತೆ ಏನು?

Follow Us
Web contact
Web contact

TV9 Kannada

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು