AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕನ್ನಡ ಮಿನಿ ಬಿಗ್​ ಬಾಸ್​ ಬಗ್ಗೆ ಹೊಸ ಅಪ್​ಡೇಟ್​; ನೀವಂದುಕೊಂಡಂತಿರಲ್ಲ ಸ್ಪರ್ಧಿಗಳು

ಕಳೆದ ಭಾನುವಾರ (ಆಗಸ್ಟ್​ 8) ‘ಬಿಗ್​ ಬಾಸ್​ ಸೀಸನ್​ 8’ ಪೂರ್ಣಗೊಂಡಿತ್ತು. ಮಂಜು ಪಾವಗಡ ವಿನ್ನರ್ ಹಾಗೂ ಅರವಿಂದ್​ ಕೆ.ಪಿ. ರನ್ನರ್​ ಅಪ್​ ಎಂದು ಘೋಷಣೆ ಮಾಡಲಾಗಿತ್ತು.

ಕನ್ನಡ ಮಿನಿ ಬಿಗ್​ ಬಾಸ್​ ಬಗ್ಗೆ ಹೊಸ ಅಪ್​ಡೇಟ್​; ನೀವಂದುಕೊಂಡಂತಿರಲ್ಲ ಸ್ಪರ್ಧಿಗಳು
ಕನ್ನಡ ಮಿನಿ ಬಿಗ್​ ಬಾಸ್​ ಬಗ್ಗೆ ಹೊಸ ಅಪ್​ಡೇಟ್​; ನೀವಂದುಕೊಂಡಂತಿರಲ್ಲ ಸ್ಪರ್ಧಿಗಳು
TV9 Web
| Edited By: |

Updated on: Aug 12, 2021 | 2:48 PM

Share

‘ಕನ್ನಡ ಬಿಗ್​ ಬಾಸ್​ ಸೀಸನ್​ 8’ ಪೂರ್ಣಗೊಂಡಿತಲ್ಲ ಎಂದು ಬೇಸರ ಮಾಡಿಕೊಂಡವರಿಗೆ ಕಲರ್ಸ್​ ಕನ್ನಡ ವಾಹಿನಿ ಸಿಹಿ ಸುದ್ದಿ ನೀಡಿದೆ. ಕಿರುತೆರೆಯ ತಾರೆಗಳನ್ನೇ ಇಟ್ಟುಕೊಂಡು ಒಂದು ವಾರಗಳ ಕಾಲ ಮಿನಿ ಬಿಗ್​ ಬಾಸ್​ ನಡೆಸಲಾಗುತ್ತಿದೆ. ಈಗ ಈ ಶೋ ಬಗ್ಗೆ ಹೊಸ ಅಪ್​ಡೇಟ್ ಒಂದು ಸಿಕ್ಕಿದೆ.

ಕಳೆದ ಭಾನುವಾರ (ಆಗಸ್ಟ್​ 8) ‘ಬಿಗ್​ ಬಾಸ್​ ಸೀಸನ್​ 8’ ಪೂರ್ಣಗೊಂಡಿತ್ತು. ಮಂಜು ಪಾವಗಡ ವಿನ್ನರ್ ಹಾಗೂ ಅರವಿಂದ್​ ಕೆ.ಪಿ. ರನ್ನರ್​ ಅಪ್​ ಎಂದು ಘೋಷಣೆ ಮಾಡಲಾಗಿತ್ತು. ನಿತ್ಯ ಒಂದೂವರೆ ಗಂಟೆ ಮನರಂಜನೆ ನೀಡುತ್ತಿದ್ದ ಶೋ ಪೂರ್ಣಗೊಂಡಿತಲ್ಲ ಎಂದು ಅನೇಕರು ಬೇಸರ ಮಾಡಿಕೊಂಡಿದ್ದರು. ಹೀಗಿರುವಾಗಲೇ ಕಲರ್ಸ್​ ಕನ್ನಡ ವಾಹಿನಿ ಖುಷಿ ಸುದ್ದಿ ನೀಡಿದೆ.

ಒಂದು ವಾರಗಳ ಕಾಲ ಬಿಗ್​ ಬಾಸ್​ ಮನೆ ತುಂಬಲಿದೆ. ಕಲರ್ಸ್​ ಕನ್ನಡ ವಾಹಿನಿಯ ಧಾರಾವಾಹಿ ಕಲಾವಿದರೇ ಈ ಬಾರಿಯ ಬಿಗ್​ ಬಾಸ್​ ಸ್ಪರ್ಧಿಗಳು. ಕಿರಣ್​ ರಾಜ್​, ಅಕುಲ್​ ಸೇರಿ ಸಾಕಷ್ಟು ಜನರು ಮನೆ ಒಳಗೆ ಸೇರಿದ್ದಾರೆ. ಎಲ್ಲರಿಗೂ ನಾನಾ ರೀತಿಯ ಟಾಸ್ಕ್ ನೀಡಲಾಗುತ್ತಿದೆ.

ತಮ್ಮಿಷ್ಟದ ನಟ-ನಟಿಯರನ್ನು ಧಾರಾವಾಹಿಗಳಲ್ಲಿ ಕೇವಲ ಕಲಾವಿದರಾಗಿ ನೋಡುತ್ತಾರೆ ವೀಕ್ಷಕರು. ಆದರೆ, ಈಗ ಎಲ್ಲಾ ಕಲಾವಿದರು ಬಿಗ್​ ಬಾಸ್​ ಮನೆ ಸೇರಿರುವುದರಿಂದ ಅವರ ನಿಜವಾದ ವ್ಯಕ್ತಿತ್ವ ಅನಾವರಣಗೊಳ್ಳಲಿದೆ.  ಹೀಗಾಗಿ, ಇಂದು ಹಂಚಿಕೊಂಡಿರುವ ಪ್ರೋಮೋಗೆ ‘ನೆಚ್ಚಿನ ಟೆಲಿವಿಶನ್ ಪಾತ್ರಗಳ ರಿಯಲ್ ಲೈಫ್’ ಎನ್ನುವ ಕ್ಯಾಪ್ಶನ್​ ನೀಡಲಾಗಿದೆ.

ಅಂದಹಾಗೆ, ಈ ಮಿನಿ ಬಿಗ್​ ಬಾಸ್​ ಹೇಗಿರುತ್ತದೆ? ಅದರ ರೂಪುರೇಷೆ ಏನು ಎಂಬುದನ್ನು ಕಲರ್ಸ್​ ಕನ್ನಡ ವಾಹಿನಿ ಬಿಟ್ಟುಕೊಟ್ಟಿಲ್ಲ. ವೇದಿಕೆ ಮೇಲೆ ಕಿಚ್ಚ ಸುದೀಪ್​ ಇರುತ್ತಾರಾ? ಎಂಬಿತ್ಯಾದಿ ಪ್ರಶ್ನೆಗೆ ಶನಿವಾರ ಉತ್ತರ ಸಿಗಲಿದೆ.

ಇದನ್ನೂ ಓದಿ: ‘ಅರವಿಂದ್​ ಜತೆ ಮದುವೆ ಆಗ್ತೀರಾ? ಕನ್ನಡದಲ್ಲೇ ಉತ್ತರ ಕೊಡಿ’; ದಿವ್ಯಾಗೆ ಪಟ್ಟು ಹಿಡಿದು ಪ್ರಶ್ನೆ ಕೇಳಿದ ಮಂಜು

ಬಿಗ್​ ಬಾಸ್ ಪಾಸ್​ ಆದ ಮಂಜು ಕಾಲೇಜಿನಲ್ಲಿ 9 ಬಾರಿ ಪರೀಕ್ಷೆ ಕಟ್ಟಿದರೂ ಪಾಸ್​ ಆಗಲಿಲ್ಲ; ಅವರ ವಿದ್ಯಾರ್ಹತೆ ಏನು?

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್