AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​ ಬಾಸ್​ ಮನೆಯಲ್ಲಿರುವ ತಪ್ಪು ಕಲ್ಪನೆ ಬಗ್ಗೆ ಬಾಯ್ಬಿಟ್ಟ ಕೌಸ್ತುಭ; ಅವರು ಟೀಕಿಸಿದ್ದು ಯಾರನ್ನ?

‘ನನ್ನರಸಿ ರಾಧೆ’ ಧಾರಾವಾಹಿಯಲ್ಲಿ ತುಂಬಾನೇ ಮುಗ್ಧ ಹುಡುಗಿಯಾಗಿ ಕಾಣಿಸಿಕೊಂಡಿದ್ದಾರೆ ಕೌಸ್ತುಭ. ಅಗಸ್ತ್ಯ ಮತ್ತು ಇಂಚರ ಕಾಂಬಿನೇಷನ್​ ಎಲ್ಲರಿಗೂ ಇಷ್ಟವಾಗಿದೆ. ಕೌಸ್ತುಭ ಮಾಡಿರುವ ಇಂಚರ ಪಾತ್ರ ತುಂಬಾ ಜನರಿಗೆ ಇಷ್ಟವಾಗಿದೆ.

ಬಿಗ್​ ಬಾಸ್​ ಮನೆಯಲ್ಲಿರುವ ತಪ್ಪು ಕಲ್ಪನೆ ಬಗ್ಗೆ ಬಾಯ್ಬಿಟ್ಟ ಕೌಸ್ತುಭ; ಅವರು ಟೀಕಿಸಿದ್ದು ಯಾರನ್ನ?
ಬಿಗ್​ ಬಾಸ್​ ಮನೆಯಲ್ಲಿರುವ ತಪ್ಪು ಕಲ್ಪನೆ ಬಗ್ಗೆ ಬಾಯ್ಬಿಟ್ಟ ಕೌಸ್ತುಭ; ಅವರು ಟೀಕಿಸಿದ್ದು ಯಾರನ್ನ?
TV9 Web
| Edited By: |

Updated on:Aug 18, 2021 | 3:50 PM

Share

ಬಿಗ್​ ಬಾಸ್​ ಮಿನಿ ಸೀಸನ್​ ಪ್ರಸಾರ ಆರಂಭವಾಗಿದೆ. ಸೀರಿಯಲ್​ ಮೂಲಕ ಮಿಂಚಿದ್ದ ನಟ-ನಟಿಯರು ಈಗ ಮಿನಿ ಸೀಸನ್​ನಲ್ಲಿ ತಮ್ಮ ಟ್ಯಾಲೆಂಟ್​ ತೋರಿಸುತ್ತಿದ್ದಾರೆ. ನಾನಾ ರೀತಿಯ ಟಾಸ್ಕ್​ಗಳನ್ನು ಎದುರಿಸುತ್ತಾ, ತಮ್ಮ ವೈಯಕ್ತಿಕ ಜೀವನದ ಬಗ್ಗೆ ಮಾಹಿತಿ ನೀಡುತ್ತಾ ಕಾಲ ಕಳೆಯುತ್ತಿದ್ದಾರೆ. ಇದು ವೀಕ್ಷಕರಿಗೂ ಇಷ್ಟವಾಗುತ್ತಿದೆ. ಈ ಮಧ್ಯೆ ‘ನನ್ನರಸಿ ರಾಧೆ’ ನಟಿ ಕೌಸ್ತುಭ ಅವರು ಬಿಗ್​ ಬಾಸ್​ ಮನೆಯಲ್ಲಿರುವ ತಪ್ಪು ಕಲ್ಪನೆ ಬಗ್ಗೆ ಹೇಳಿಕೊಂಡಿದ್ದಾರೆ.

‘ನನ್ನರಸಿ ರಾಧೆ’ ಧಾರಾವಾಹಿಯಲ್ಲಿ ತುಂಬಾನೇ ಮುಗ್ಧ ಹುಡುಗಿಯಾಗಿ ಕಾಣಿಸಿಕೊಂಡಿದ್ದಾರೆ ಕೌಸ್ತುಭ. ಅಗಸ್ತ್ಯ ಮತ್ತು ಇಂಚರ ಕಾಂಬಿನೇಷನ್​ ಎಲ್ಲರಿಗೂ ಇಷ್ಟವಾಗಿದೆ. ಕೌಸ್ತುಭ ಮಾಡಿರುವ ಇಂಚರ ಪಾತ್ರ ತುಂಬಾ ಜನರಿಗೆ ಇಷ್ಟವಾಗಿದೆ. ಬಿಗ್​ ಬಾಸ್​ ಮನೆಯಲ್ಲಿ ಅವರು ಸಾಕಷ್ಟು ವಿಚಾರಗಳನ್ನು ಹಂಚಿಕೊಳ್ಳುತ್ತಿದ್ದಾರೆ. ಅವರು ಪ್ರಮುಖ ವಿಚಾರವೊಂದರ ಬಗ್ಗೆ ಮಾತನಾಡಿದ್ದು, ಎಲ್ಲರ ಗಮನ ಸೆಳೆಯುತ್ತಿದೆ.

ಬಿಗ್​ ಬಾಸ್​ ಮನೆಯಲ್ಲಿ ಕಿಚನ್​ ಎಲ್ಲರ ಹಾಟ್​ಸ್ಪಾಟ್​. ಅಡುಗೆ ಮನೆಯಲ್ಲಿ ಸಾಕಷ್ಟು ಜಗಳಗಳು ನಡೆದಿವೆ. ಅಲ್ಲಿದ್ದರೆ ಹೈಲೈಟ್​ ಆಗುತ್ತೇವೆ ಎನ್ನುವ ನಂಬಿಕೆ ಅನೇಕರಲ್ಲಿದೆ. ಆದರೆ, ಅದು ತಪ್ಪು ಅನ್ನೋದು ಕೌಸ್ತುಭ ಮಾತು. ‘ಅಡುಗೆ ಮನೆಗೆ ಹೋದರೆ ಹೈಲೈಟ್​ ಆಗ್ತೀವಿ, ಎಲ್ಲರ ಗಮನ ನಮ್ಮ ಕಡೆ ಇರುತ್ತದೆ ಎಂದು ಎಲ್ಲರೂ ಭಾವಿಸುತ್ತಾರೆ. ಆದರೆ ಅದು ತಪ್ಪಲ್ವಾ? ಎಲ್ಲರೂ ಒಂದೇ ಕಡೆ ಸೇರಿಕೊಳ್ಳುತ್ತಾರೆ. ನನಗನ್ನಿಸೋ ಹಾಗೆ ಅದು ಒಂದೇ ಜಾಗದಿಂದ ಹೈಲೈಟ್​ ಆಗೋಕೆ ಆಗಲ್ಲ. ಅಟೆನ್ಶನ್​ಗೋಸ್ಕರ ಈ ರೀತಿ ಮಾಡೋ ಅವಶ್ಯಕತೆ ಇಲ್ಲ ಎಂದು ನನಗನ್ನಿಸುತ್ತದೆ. ನಾನು ಯಾರನ್ನೋ ಒಬ್ಬರನ್ನು ಉದ್ದೇಶಿಸಿ ಇದನ್ನು ಹೇಳುತ್ತಿಲ್ಲ’ ಎಂದಿದ್ದಾರೆ ಅವರು.

ಬಿಗ್​ ಬಾಸ್​ ಮಿನಿ ಸೀಸನ್​ ಆರು ದಿನಗಳ ಕಾಲ ನಡೆಯಲಿದೆ. ಸಾಕಷ್ಟು ಸೆಲೆಬ್ರಿಟಿಗಳು ಬಿಗ್​ ಬಾಸ್​ ಮನೆ ಪ್ರವೇಶ ಮಾಡಿದ್ದಾರೆ. ಇಷ್ಟು ದಿನ ಕೇವಲ ಹೊರಗಿನಿಂದ ಬಿಗ್​ ಬಾಸ್​ ಮನೆ ನೋಡುತ್ತಿದ್ದ ಸೀರಿಯಲ್​ ಕಲಾವಿದರಿಗೆ ಬಿಗ್​ ಬಾಸ್​ ಮನೆ ಒಳಗೆ ಕಾಲಿಡುವ ಅವಕಾಶ ಸಿಕ್ಕಿದೆ.

ಇದನ್ನೂ ಓದಿ: ಬಿಗ್​ ಬಾಸ್​ ನಿರೂಪಣೆ ಬಗ್ಗೆ ಸುದೀಪ್​ ಫ್ಯಾನ್ಸ್​ಗೆ ಇದ್ದ ಅನುಮಾನಕ್ಕೆ ಪರಮ್ ಫುಲ್​ ಸ್ಟಾಪ್​

‘ನನ್ನರಸಿ ರಾಧೆ’ ನಟಿ ಕೌಸ್ತುಭ ಅವರ ಮೈನಸ್​ ಪಾಯಿಂಟ್​ ಏನು? ಬಿಗ್​ ಬಾಸ್​ ಮನೆಯಲ್ಲಿ ಸತ್ಯ ಬಾಯ್ಟಿಟ್ಟ ಇಂಚರ

Published On - 3:48 pm, Wed, 18 August 21

Follow Us
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್