AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಿನಿ ಬಿಗ್​ ಬಾಸ್​ ನಿರೂಪಕರು ಯಾರು? ಸುದೀಪ್​ ಅಭಿಮಾನಿಗಳಿಗೆ ಇದು ಖುಷಿಯ ವಿಚಾರ

ಬಿಗ್​ ಬಾಸ್​ ಮಿನಿ ಸೀಸನ್​ ಕೆಲವೇ ದಿನಗಳ ಕಾಲ ನಡೆಯಲಿದೆ. ಸಾಕಷ್ಟು ಸೆಲೆಬ್ರಿಟಿಗಳು ಬಿಗ್​ ಬಾಸ್​ ಮನೆ ಪ್ರವೇಶ ಮಾಡಿದ್ದಾರೆ. ಇಷ್ಟು ದಿನ ಕೇವಲ ಹೊರಗಿನಿಂದ ಬಿಗ್​ ಬಾಸ್​ ಮನೆ ನೋಡುತ್ತಿದ್ದ ಸೀರಿಯಲ್​ ಕಲಾವಿದರಿಗೆ ಈಗ ಬಿಗ್​ ಬಾಸ್​ ಮನೆ ಒಳಗೆ ಕಾಲಿಡುವ ಅವಕಾಶ ಸಿಕ್ಕಿದೆ.

ಮಿನಿ ಬಿಗ್​ ಬಾಸ್​ ನಿರೂಪಕರು ಯಾರು? ಸುದೀಪ್​ ಅಭಿಮಾನಿಗಳಿಗೆ ಇದು ಖುಷಿಯ ವಿಚಾರ
ಸುದೀಪ್​
TV9 Web
| Edited By: |

Updated on: Aug 14, 2021 | 7:22 AM

Share

‘ಕನ್ನಡ ಬಿಗ್​ ಬಾಸ್​ ಸೀಸನ್​ 8’ ಪೂರ್ಣಗೊಂಡ ಬೆನ್ನಲ್ಲೇ ಮಿನಿ ಬಿಗ್​ ಬಾಸ್​ ಆರಂಭಕ್ಕೆ ಕಲರ್ಸ್​ ಕನ್ನಡ ವಾಹಿನಿ ಸಿದ್ಧತೆ ನಡೆಸಿದೆ. ಈಗಾಗಲೇ ಕಲರ್ಸ್​ ಕನ್ನಡ ವಾಹಿನಿ ಸೀರಿಯಲ್​ನಲ್ಲಿ ನಟಿಸುತ್ತಿರುವ ಕಲಾವಿದರು ಬಿಗ್​ ಬಾಸ್​ ಮನೆ ಪ್ರವೇಶ ಮಾಡಿದ್ದಾರೆ. ಈಗ ವೀಕೆಂಡ್​ನಲ್ಲಿ ಈ ಎಪಿಸೋಡ್​ ನಡೆಸಿ ಕೊಡೋರು ಯಾರು ಎನ್ನುವ ಪ್ರಶ್ನೆಗೆ ಉತ್ತರ ಸಿಕ್ಕಿದೆ.

ಬಿಗ್​ ಬಾಸ್​ ಮಿನಿ ಸೀಸನ್​ ಕೆಲವೇ ದಿನಗಳ ಕಾಲ ನಡೆಯಲಿದೆ. ಸಾಕಷ್ಟು ಸೆಲೆಬ್ರಿಟಿಗಳು ಬಿಗ್​ ಬಾಸ್​ ಮನೆ ಪ್ರವೇಶ ಮಾಡಿದ್ದಾರೆ. ಇಷ್ಟು ದಿನ ಕೇವಲ ಹೊರಗಿನಿಂದ ಬಿಗ್​ ಬಾಸ್​ ಮನೆ ನೋಡುತ್ತಿದ್ದ ಸೀರಿಯಲ್​ ಕಲಾವಿದರಿಗೆ ಬಿಗ್​ ಬಾಸ್​ ಮನೆ ಒಳಗೆ ಕಾಲಿಡುವ ಅವಕಾಶ ಸಿಕ್ಕಿದೆ. ಕೆಲವೇ ದಿನಗಳ ಕಾಲ ಹೊರ ಜಗತ್ತಿನ ಸಂಪರ್ಕ ತೊರೆದು ಧಾರಾವಾಹಿ ಕಲಾವಿದರು ಬಿಗ್​ ಬಾಸ್​ ಮನೆ ಒಳಗೆ ಹೋಗಿದ್ದಾರೆ. ಶನಿವಾರ ಹಾಗೂ ಭಾನುವಾರ ಗ್ರ್ಯಾಂಡ್​ ಓಪನಿಂಗ್​ ಕಾರ್ಯಕ್ರಮ ಪ್ರಸಾರವಾಗಲಿದೆ.

ಹಾಗಾದರೆ, ಮಿನಿ ಬಿಗ್​ ಬಾಸ್​ ನಡೆಸಿ ಕೊಡುವವರು ಯಾರು? ಇದಕ್ಕೂ ಉತ್ತರ ಇದೆ. ಮೂಲಗಳ ಪ್ರಕಾರ ಕಿಚ್ಚ ಸುದೀಪ್ ಅವರೇ ಮಿನಿ ಸೀಸನ್​ ನಡೆಸಿಕೊಡಲಿದ್ದಾರಂತೆ. ಹೀಗೊಂದು ಸುದ್ದಿ ಎಲ್ಲ ಕಡೆಗಳಲ್ಲೂ ಹರಿದಾಡಿದೆ.

ಕಿಚ್ಚ ಸುದೀಪ್​ ಅವರು 8ಸೀಸನ್​ಗಳನ್ನು ಅತ್ಯುತ್ತಮವಾಗಿ ನಡೆಸಿಕೊಟ್ಟಿದ್ದಾರೆ. ಅವರ ನಿರೂಪಣೆಗೆ ಫಿದಾ ಆಗದವರಿಲ್ಲ. ಅವರ ಮಾತಿನ ಶೈಲಿ, ಅವರು ಹಾಕೋ ಬಟ್ಟೆ, ಕ್ಲಾಸ್​ ತೆಗೆದುಕೊಳ್ಳುವ ರೀತಿ ಅನೇಕರಿಗೆ ಇಷ್ಟವಾಗುತ್ತದೆ. ಇದೇ ಕಾರಣಕ್ಕೆ, ಬಿಗ್​ ಬಾಸ್​ ನೋಡುವ ಅನೇಕರಿದ್ದಾರೆ. ಮಿನಿ ಬಿಗ್​ ಬಾಸ್​ ಕೂಡ ಸುದೀಪ್​ ಅವರೇ ನಡೆಸಿದರೆ ವೀಕ್ಷಕರನ್ನು ಹೆಚ್ಚು ಸೆಳೆಯಬಹುದು ಎನ್ನುವ ಆಲೋಚನೆ ವಾಹಿನಿಯದ್ದು. ಹೀಗಾಗಿ, ಸುದೀಪ್​ಗೆ ಈ ಜವಾಬ್ದಾರಿ ನೀಡಲಾಗಿದೆ.

ಈ ಮಿನಿ ಬಿಗ್​ ಬಾಸ್​ ಹೇಗಿರುತ್ತದೆ? ಅದರ ರೂಪುರೇಷೆ ಏನು ಎಂಬುದನ್ನು ಕಲರ್ಸ್​ ಕನ್ನಡ ವಾಹಿನಿ ಬಿಟ್ಟುಕೊಟ್ಟಿಲ್ಲ. ವೇದಿಕೆ ಮೇಲೆ ಕಿಚ್ಚ ಸುದೀಪ್​ ಇರುತ್ತಾರಾ? ಎಂಬಿತ್ಯಾದಿ ಪ್ರಶ್ನೆಗೆ ಶನಿವಾರ (ಆಗಸ್ಟ್​ 14) ಉತ್ತರ ಸಿಗಲಿದೆ.

ಇದನ್ನೂ ಓದಿ:

ನಾನು ಬೈಸೆಕ್ಸುವಲ್​, ಮದುವೆ ಆಗೋದು ಹುಡುಗಿಯನ್ನೇ; ಅಚ್ಚರಿಯ ಹೇಳಿಕೆ ನೀಡಿದ ಬಿಗ್​ ಬಾಸ್​ ಸ್ಪರ್ಧಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್