AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಿನಿ ಬಿಗ್​ ಬಾಸ್​ ನಿರೂಪಕರು ಯಾರು? ಸುದೀಪ್​ ಅಭಿಮಾನಿಗಳಿಗೆ ಇದು ಖುಷಿಯ ವಿಚಾರ

ಬಿಗ್​ ಬಾಸ್​ ಮಿನಿ ಸೀಸನ್​ ಕೆಲವೇ ದಿನಗಳ ಕಾಲ ನಡೆಯಲಿದೆ. ಸಾಕಷ್ಟು ಸೆಲೆಬ್ರಿಟಿಗಳು ಬಿಗ್​ ಬಾಸ್​ ಮನೆ ಪ್ರವೇಶ ಮಾಡಿದ್ದಾರೆ. ಇಷ್ಟು ದಿನ ಕೇವಲ ಹೊರಗಿನಿಂದ ಬಿಗ್​ ಬಾಸ್​ ಮನೆ ನೋಡುತ್ತಿದ್ದ ಸೀರಿಯಲ್​ ಕಲಾವಿದರಿಗೆ ಈಗ ಬಿಗ್​ ಬಾಸ್​ ಮನೆ ಒಳಗೆ ಕಾಲಿಡುವ ಅವಕಾಶ ಸಿಕ್ಕಿದೆ.

ಮಿನಿ ಬಿಗ್​ ಬಾಸ್​ ನಿರೂಪಕರು ಯಾರು? ಸುದೀಪ್​ ಅಭಿಮಾನಿಗಳಿಗೆ ಇದು ಖುಷಿಯ ವಿಚಾರ
ಸುದೀಪ್​
TV9 Web
| Updated By: ಮದನ್​ ಕುಮಾರ್​|

Updated on: Aug 14, 2021 | 7:22 AM

Share

‘ಕನ್ನಡ ಬಿಗ್​ ಬಾಸ್​ ಸೀಸನ್​ 8’ ಪೂರ್ಣಗೊಂಡ ಬೆನ್ನಲ್ಲೇ ಮಿನಿ ಬಿಗ್​ ಬಾಸ್​ ಆರಂಭಕ್ಕೆ ಕಲರ್ಸ್​ ಕನ್ನಡ ವಾಹಿನಿ ಸಿದ್ಧತೆ ನಡೆಸಿದೆ. ಈಗಾಗಲೇ ಕಲರ್ಸ್​ ಕನ್ನಡ ವಾಹಿನಿ ಸೀರಿಯಲ್​ನಲ್ಲಿ ನಟಿಸುತ್ತಿರುವ ಕಲಾವಿದರು ಬಿಗ್​ ಬಾಸ್​ ಮನೆ ಪ್ರವೇಶ ಮಾಡಿದ್ದಾರೆ. ಈಗ ವೀಕೆಂಡ್​ನಲ್ಲಿ ಈ ಎಪಿಸೋಡ್​ ನಡೆಸಿ ಕೊಡೋರು ಯಾರು ಎನ್ನುವ ಪ್ರಶ್ನೆಗೆ ಉತ್ತರ ಸಿಕ್ಕಿದೆ.

ಬಿಗ್​ ಬಾಸ್​ ಮಿನಿ ಸೀಸನ್​ ಕೆಲವೇ ದಿನಗಳ ಕಾಲ ನಡೆಯಲಿದೆ. ಸಾಕಷ್ಟು ಸೆಲೆಬ್ರಿಟಿಗಳು ಬಿಗ್​ ಬಾಸ್​ ಮನೆ ಪ್ರವೇಶ ಮಾಡಿದ್ದಾರೆ. ಇಷ್ಟು ದಿನ ಕೇವಲ ಹೊರಗಿನಿಂದ ಬಿಗ್​ ಬಾಸ್​ ಮನೆ ನೋಡುತ್ತಿದ್ದ ಸೀರಿಯಲ್​ ಕಲಾವಿದರಿಗೆ ಬಿಗ್​ ಬಾಸ್​ ಮನೆ ಒಳಗೆ ಕಾಲಿಡುವ ಅವಕಾಶ ಸಿಕ್ಕಿದೆ. ಕೆಲವೇ ದಿನಗಳ ಕಾಲ ಹೊರ ಜಗತ್ತಿನ ಸಂಪರ್ಕ ತೊರೆದು ಧಾರಾವಾಹಿ ಕಲಾವಿದರು ಬಿಗ್​ ಬಾಸ್​ ಮನೆ ಒಳಗೆ ಹೋಗಿದ್ದಾರೆ. ಶನಿವಾರ ಹಾಗೂ ಭಾನುವಾರ ಗ್ರ್ಯಾಂಡ್​ ಓಪನಿಂಗ್​ ಕಾರ್ಯಕ್ರಮ ಪ್ರಸಾರವಾಗಲಿದೆ.

ಹಾಗಾದರೆ, ಮಿನಿ ಬಿಗ್​ ಬಾಸ್​ ನಡೆಸಿ ಕೊಡುವವರು ಯಾರು? ಇದಕ್ಕೂ ಉತ್ತರ ಇದೆ. ಮೂಲಗಳ ಪ್ರಕಾರ ಕಿಚ್ಚ ಸುದೀಪ್ ಅವರೇ ಮಿನಿ ಸೀಸನ್​ ನಡೆಸಿಕೊಡಲಿದ್ದಾರಂತೆ. ಹೀಗೊಂದು ಸುದ್ದಿ ಎಲ್ಲ ಕಡೆಗಳಲ್ಲೂ ಹರಿದಾಡಿದೆ.

ಕಿಚ್ಚ ಸುದೀಪ್​ ಅವರು 8ಸೀಸನ್​ಗಳನ್ನು ಅತ್ಯುತ್ತಮವಾಗಿ ನಡೆಸಿಕೊಟ್ಟಿದ್ದಾರೆ. ಅವರ ನಿರೂಪಣೆಗೆ ಫಿದಾ ಆಗದವರಿಲ್ಲ. ಅವರ ಮಾತಿನ ಶೈಲಿ, ಅವರು ಹಾಕೋ ಬಟ್ಟೆ, ಕ್ಲಾಸ್​ ತೆಗೆದುಕೊಳ್ಳುವ ರೀತಿ ಅನೇಕರಿಗೆ ಇಷ್ಟವಾಗುತ್ತದೆ. ಇದೇ ಕಾರಣಕ್ಕೆ, ಬಿಗ್​ ಬಾಸ್​ ನೋಡುವ ಅನೇಕರಿದ್ದಾರೆ. ಮಿನಿ ಬಿಗ್​ ಬಾಸ್​ ಕೂಡ ಸುದೀಪ್​ ಅವರೇ ನಡೆಸಿದರೆ ವೀಕ್ಷಕರನ್ನು ಹೆಚ್ಚು ಸೆಳೆಯಬಹುದು ಎನ್ನುವ ಆಲೋಚನೆ ವಾಹಿನಿಯದ್ದು. ಹೀಗಾಗಿ, ಸುದೀಪ್​ಗೆ ಈ ಜವಾಬ್ದಾರಿ ನೀಡಲಾಗಿದೆ.

ಈ ಮಿನಿ ಬಿಗ್​ ಬಾಸ್​ ಹೇಗಿರುತ್ತದೆ? ಅದರ ರೂಪುರೇಷೆ ಏನು ಎಂಬುದನ್ನು ಕಲರ್ಸ್​ ಕನ್ನಡ ವಾಹಿನಿ ಬಿಟ್ಟುಕೊಟ್ಟಿಲ್ಲ. ವೇದಿಕೆ ಮೇಲೆ ಕಿಚ್ಚ ಸುದೀಪ್​ ಇರುತ್ತಾರಾ? ಎಂಬಿತ್ಯಾದಿ ಪ್ರಶ್ನೆಗೆ ಶನಿವಾರ (ಆಗಸ್ಟ್​ 14) ಉತ್ತರ ಸಿಗಲಿದೆ.

ಇದನ್ನೂ ಓದಿ:

ನಾನು ಬೈಸೆಕ್ಸುವಲ್​, ಮದುವೆ ಆಗೋದು ಹುಡುಗಿಯನ್ನೇ; ಅಚ್ಚರಿಯ ಹೇಳಿಕೆ ನೀಡಿದ ಬಿಗ್​ ಬಾಸ್​ ಸ್ಪರ್ಧಿ

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ