AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೀಲ್ಸ್ ಮಾಡಿ ಮತ್ತೆ ಇಕ್ಕಟ್ಟಿಕೆ ಸಿಲುಕಿದ ರಜತ್; ಮತ್ತೊಂದು ದೂರು ದಾಖಲು

ಬಿಗ್ ಬಾಸ್ ಸ್ಪರ್ಧಿ ರಜತ್ ಮತ್ತೊಮ್ಮೆ ಕಾನೂನು ಸಂಕಷ್ಟಕ್ಕೆ ಸಿಲುಕಿದ್ದಾರೆ. ಮೈಸೂರಿನ ಹಳೆಯ ಜಿಲ್ಲಾಧಿಕಾರಿ ಕಚೇರಿ ಕಟ್ಟಡದ ಬಳಿ ಸಿಗರೇಟ್ ಹಚ್ಚಿ ವಿಡಿಯೋ ಮಾಡಿದ ಆರೋಪ ಅವರ ಮೇಲಿದೆ. ಈ ಕುರಿತು ಲಕ್ಷ್ಮಿಪುರಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಈ ಹಿಂದೆ ಮಚ್ಚು ಹಿಡಿದು ರೀಲ್ಸ್ ಮಾಡಿ ಜೈಲು ಪಾಲಾಗಿದ್ದ ರಜತ್, ಈಗ ಮತ್ತೆ ಅದೇ ರೀತಿ ವಿವಾದ ಸೃಷ್ಟಿಸಿದ್ದಾರೆ.

ರೀಲ್ಸ್ ಮಾಡಿ ಮತ್ತೆ ಇಕ್ಕಟ್ಟಿಕೆ ಸಿಲುಕಿದ ರಜತ್; ಮತ್ತೊಂದು ದೂರು ದಾಖಲು
ರಜತ್
ರಾಮ್​, ಮೈಸೂರು
| Edited By: |

Updated on: Feb 05, 2026 | 2:58 PM

Share

ಬಿಗ್ ಬಾಸ್ ಸ್ಪರ್ಧಿ ಹಾಗೂ ನಟ ರಜತ್ (Rajat) ಅವರು ಈಗ ಮತ್ತೆ ಇಕ್ಕಟ್ಟಿಕ್ಕೆ ಸಿಲುಕಿದ್ದಾರೆ. ಈ ಮೊದಲು ಮಚ್ಚು ಹಿಡಿದು ರೀಲ್ಸ್ ಮಾಡಿ ಅವರು ಜೈಲುವಾಸ ಅನುಭವಿಸಬೇಕಾಗಿ ಬಂದಿತ್ತು. ಈಗ ಅವರು ಮತ್ತೆ ರೀಲ್ಸ್ ಮಾಡಿದ ಕಾರಣಕ್ಕೆ ತೊಂದರೆ ಅನುಭವಿಸುವಂತಾಗಿದೆ. ಮೈಸೂರು ಹಳೆ ಜಿಲ್ಲಾಧಿಕಾರಿ ಕಚೇರಿ ಕಟ್ಟಡದ ಬಳಿ ರಜತ್ ವಿಡಿಯೋ ಮಾಡಿದ್ದಾರೆ. ಈ ವೇಳೆ ಅವರು ಸಿಗರೇಟ್ ಹಚ್ಚಿದ್ದಾರೆ. ಇದರಿಂದ ಅವರ ವಿರುದ್ಧ ದೂರು ದಾಖಲಾಗಿದೆ.

ಇತ್ತೀಚೆಗೆ ರಜತ್ ಅವರು ವಿಡಿಯೋ ಒಂದನ್ನು ಮಾಡಿದರು. ಈ ವಿಡಿಯೋದಲ್ಲಿ ಅವರು ರೆಟ್ರೋ ಸ್ಟೈಲ್ ಕಾರಲ್ಲಿ ಬರುತ್ತಾರೆ. ಈ ವೇಳೆ ಅವರು ಸಿಗರೇಟ್ ಕೂಡ ಹಚ್ಚುತ್ತಾರೆ. ಈ ವಿಡಿಯೋ ಶೂಟ್ ಆಗಿದ್ದು ಮೈಸೂರು ಹಳೆ ಜಿಲ್ಲಾಧಿಕಾರಿ ಕಚೇರಿ ಕಟ್ಟಡದ ಎದುರು. ಈ ಸಂಬಂಧ ಲಕ್ಷ್ಮಿಪುರಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

View this post on Instagram

A post shared by Rajath kishan G (@bujjjjii)

ದೂರಿನಲ್ಲಿ ಏನಿದೆ?

ಕರ್ನಾಟಕ ಸೇನಾ ಪಡೆ ಕಾರ್ಯಕರ್ತರು ಈ ದೂರನ್ನು ನೀಡಿದ್ದಾರೆ. ರಜತ್ ವಿರುದ್ದ ಎಫ್​ಐಆರ್ ದಾಖಲಿಸಬೇಕು ಎಂದು ಒತ್ತಾಯಿಸಲಾಗಿದೆ. ‘ರಜತ್ ಪಾರಂಪರಿಕ ಕಟ್ಟಡದ ಮುಂದೆ ಅನುಮತಿ ಪಡೆಯದೆ ವಿಡಿಯೋ ಮಾಡಿದ್ದಾರೆ. ಸಿಗರೇಟ್ ಹಿಡಿದು ಕಾರಿನಿಂದ ಇಳಿದಿದ್ದಾರೆ. ಇದು ಅವರ ಫಾಲೋರ್ಸ್‌ಗೆ ಕೆಟ್ಟ ಸಂದೇಶ ನೀಡುತ್ತದೆ. ಈ ಮೊದಲು ಕೂಡ ಮಚ್ಚು ಹಿಡಿದು ರೀಲ್ಸ್ ಮಾಡಿದ್ದಕ್ಕೆ ಎಫ್​ಐಅರ್ ದಾಖಲಾಗಿತ್ತು. ಇದೀಗ ಮತ್ತೆ ಅದೇ ರೀತಿ ಮಾಡಿದ್ದಾರೆ. ಅವರ ವಿರುದ್ದ ಕ್ರಮ ಕೈಗೊಳ್ಳಿ’ ಎಂದು ದೂರಿನಲ್ಲಿ ಕೋರಲಾಗಿದೆ.

ಇದನ್ನೂ ಓದಿ: ನಿಮಗೆ ಬೇಕಾದವರಿಗೇ ಕಿಚ್ಚನ ಚಪ್ಪಾಳೆ ಕೊಡೋಕೆ ಆಗತ್ತಾ? ರಜತ್ ಕಿಶನ್ ಖಡಕ್ ಪ್ರಶ್ನೆ

ಹಿಂದಿನ ಪ್ರಕರಣ

ಕಲರ್ಸ್​​ ರಿಯಾಲಿಟಿ ಶೋ ಒಂದರಲ್ಲಿ ರಜತ್ ಹಾಗೂ ವಿನಯ್ ಗೌಡ ಭಾಗಿ ಆಗಿದ್ದರು. ಶೋ ಶೂಟಿಂಗ್ ಮುಗಿದ ಬಳಿಕ ಸ್ಟುಡಿಯೋ ಹೊರಗೆ ವಿನಯ್ ಹಾಗೂ ರಜತ್ ನಿಜವಾದ ಮಚ್ಚು ಹಿಡಿದು ರೀಲ್ಸ್ ಮಾಡಿದ್ದರು. ಈ ಸಂಬಂಧ ಎಫ್​​ಐಆರ್ ದಾಖಲಿಸಿ, ಇಬ್ಬರನ್ನೂ ಅರೆಸ್ಟ್ ಮಾಡಲಾಗಿತ್ತು. ಆ ಬಳಿಕ ಜಾಮೀನು ಪಡೆದು ಇಬ್ಬರೂ ಹೊರ ಬಂದಿದ್ದರು. ನಂತರ ಕೋರ್ಟ್​​ಗೆ ಸರಿಯಾಗಿ ಹಾಜರಾಗದ ಕಾರಣ ಅವರನ್ನು ಮತ್ತೆ ಬಂಧಿಸಲಾಯಿತು. ಈ ಪ್ರಕರಣದ ನೆನಪು ಮಾಸುವ ಮುನ್ನವೇ ಅವರಿಗೆ ಮತ್ತೊಂದು ತೊಂದರೆ ಎದುರಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Ram
Ram

ರಾಮ್ ಮೈಸೂರು ಪತ್ರಕರ್ತನಾಗಿ 20 ವರ್ಷದ ಅನುಭವ. ಕಳೆದ 14 ವರ್ಷಗಳಿಂದ ಟಿವಿ9 ಕನ್ನಡದ ಮೈಸೂರು ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ನಿರ್ವಹಣೆ. ರಾಜ್ಯದ ವಿಧಾನಸಭಾ ಲೋಕಸಭಾ ಚುನಾವಣೆಯ ವಿಶೇಷ ವರದಿ ಹಾಗೂ ರಾಜ್ಯದ ವಿವಿಧ ಕ್ಷೇತ್ರಗಳ ಉಪಚುನಾವಣಾ ವರದಿ, ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದ್ದ ಚುನಾವಣಾ ವರದಿ ಸೇರಿದಂತೆ ಹಲವು ಚುನಾವಣೆಯ ವರದಿಯ ಅನುಭವ. ಮುಂಬೈ ಮಹಾಮಳೆಯ ಕವರೇಜ್, ಕೊಡಗು ಜಿಲ್ಲೆಯ ಗುಡ್ಡ ಕುಸಿತ, ಸೇರಿದಂತೆ ಹಲವು ಸ್ಟಿಂಗ್ ಕಾರ್ಯಾಚರಣೆ, ಸಾಮಾಜಿಕ‌ ಸಮಸ್ಯೆ ಹಾಗೂ ಮಾನವೀಯ ಕಳಕಳಿಯುಳ್ಳ ವರದಿ ಮಾಡಿದ ಅನುಭವ.

Read More