ಟಾಸ್ಕ್ ಆಡುವಾಗ ಗಾಯ: ಬಿಗ್​ಬಾಸ್ ಮನೆಯಿಂದ ಸಂಗೀತಾ-ಪ್ರತಾಪ್ ಹೊರಗೆ

Bigg Boss: ನೀರು ಎರಚಿ ಕುರ್ಚಿಯಿಂದ ಎಬ್ಬಿಸುವ ಟಾಸ್ಕ್​ನಲ್ಲಿ ವರ್ತೂರು ಸಂತೋಷ್ ತಂಡ ಮಾನವೀಯತೆ ಗೆರೆ ದಾಟಿ ಆಡಿದ ಆಟದಿಂದ ಪ್ರತಾಪ್ ಹಾಗೂ ಸಂಗೀತಾಗೆ ಹಾನಿಯಾಗಿದ್ದು ಚಿಕಿತ್ಸೆಗೆಂದು ಅವರನ್ನು ಮನೆಯಿಂದ ಹೊರಗೆ ಕಳಿಸಲಾಗಿದೆ.

ಟಾಸ್ಕ್ ಆಡುವಾಗ ಗಾಯ: ಬಿಗ್​ಬಾಸ್ ಮನೆಯಿಂದ ಸಂಗೀತಾ-ಪ್ರತಾಪ್ ಹೊರಗೆ
ಪ್ರತಾಪ್-ಸಂಗೀತಾ
Follow us
|

Updated on:Dec 09, 2023 | 12:08 AM

ಬಿಗ್​ಬಾಸ್ (BiggBoss) ಮನೆಯಲ್ಲಿ ಗಂಧರ್ವರು-ರಾಕ್ಷಸರು ಟಾಸ್ಕ್​ನಲ್ಲಿ ಎರಡೂ ತಂಡಗಳ ಸ್ಪರ್ಧಿಗಳ ವರ್ತನೆ ಮಿತಿ ಮೀರಿದೆ. ‘ಚೇರ್ ಆಫ್ ಥಾನ್ಸ್’ ಆಟದಲ್ಲಿ ಮೊದಲಿಗೆ ಸಂಗೀತ ಮತ್ತು ತಂಡ ವರ್ತೂರು ಸಂತೋಷ್​ರ ತಂಡದ ಮೇಲೆ ನೀರು ಎರಚಿ ಅವರನ್ನು ಕುರ್ಚಿಯಿಂದ ಏಳಿಸುವ ಪ್ರಯತ್ನ ಮಾಡಿದ್ದರು. ಆಟದಲ್ಲಿ ವರ್ತೂರು ಸಂತೋಷ್ ಮೇಲೆದ್ದಿದ್ದರು, ಪವಿ ಚೆನ್ನಾಗಿ ಆಡಿದ್ದರಿಂದ ವರ್ತೂರು ಸಂತೋಷ್​ರ ತಂಡ ಮುನ್ನಡೆ ಪಡೆದುಕೊಂಡಿತ್ತು.

ಅದೇ ಟಾಸ್ಕ್​ ಅನ್ನು ಮತ್ತೊಮ್ಮೆ ಆಡಿಸಿ, ಸಂಗೀತಾ ತಂಡವನ್ನು ಕುರ್ಚಿಯಲ್ಲಿ ಕೂರಿಸಲಾಗಿತ್ತು. ಅವರಿಗೆ ನೀರು ಎರಚಿ ಏಳಿಸುವ ಕಾರ್ಯ ವರ್ತೂರು ಸಂತೋಷ್ ತಂಡದ್ದಾಗಿತ್ತು. ತಂಡದ ವಿನಯ್, ಮೈಖಲ್, ನಮ್ರತಾ ಹಾಗೂ ಸ್ವತಃ ವರ್ತೂರು ಸಂತೋಷ್​ ಅವರುಗಳು ತುಸು ಹೆಚ್ಚೇ ಬಲ ಪ್ರದರ್ಶಿಸಿ ಆಡಿದರು. ನೀರಿಗೆ ವಿಪರೀತ ಸೋಪು ಬೆರೆಸಿ, ಕುರ್ಚಿಯ ಮೇಲೆ ಮೂತಿದ್ದ ಸಿರಿ, ಪ್ರತಾಪ್, ಕಾರ್ತಿಕ್ ಹಾಗೂ ಸಂಗೀತಾ ಮೇಲೆ ಎರಚಿದರು.

ಮೊದಲಿಗೆ ಸಂಗೀತಾರನ್ನು ಟಾರ್ಗೆಟ್ ಮಾಡಿದ ವರ್ತೂರು ತಂಡದ ವಿನಯ್ ಹಾಗೂ ಮೈಖಲ್, ಬಲ ಬಳಸಿ ಜೋರಾಗಿ ನೀರು ಎರಚಿದರು. ವಿನಯ್ ಅಂತೂ ಸಂಗೀತಾ ಉಸಿರೆಳೆಯುವುದನ್ನೇ ಕಾದು ಅದೇ ಸಮಯಕ್ಕೆ ನೀರು ಮೂಗು ಮತ್ತು ಬಾಯಿಗೆ ಎರಚಿದರು. ಆ ನಂತರ ಬಂದ ನಮ್ರತಾ, ಪವಿ, ವರ್ತೂರು ಸಹ ಅದನ್ನೇ ಮಾಡಿ ಸೋಪಿನ ನೊರೆ ಕಣ್ಣು, ಬಾಯಿ, ಮೂಗಿಗೆ ಹೋಗುವಂತೆ ಮಾಡಿ ಸಂಗೀತಾ ಮೇಲೇಳುವಂತೆ ಮಾಡಿದರು.

ಇದನ್ನೂ ಓದಿ:ಈ ವಾರ ಬಿಗ್​ಬಾಸ್ ಮನೆಯಲ್ಲಿ ಅತಿ ಹೆಚ್ಚು ಮತ ಗಳಿಸಿರುವುದು ಯಾರು? ಡ್ರೋನ್ ಪ್ರತಾಪ್​ಗೆ ಎಷ್ಟನೆ ಸ್ಥಾನ?

ಬಳಿಕ ಡ್ರೋನ್ ಪ್ರತಾಪ್​ರ ಬಳಿ ಹೋದ ತಂಡ ಅವರ ಮೇಲೂ ನೀರಿನ ಸತತ ದಾಳಿ ಮಾಡಿತು, ಪ್ರತಾಪ್, ತಾನು ಕೂತಿದ್ದ ಕುರ್ಚಿಯಲ್ಲಿಯೇ ವಿಲ-ವಿಲನೆ ಒದ್ದಾಡಿದರೂ ಸಹ ಆಟಗಾರರು ನೀರು ಎರಚುವುದು ಬಿಡಲಿಲ್ಲ. ಪ್ರತಾಪ್​ಗೆ ಆಗುತ್ತಿದ್ದ ಹಿಂಸೆ ಗಮನಿಸಿ, ಬಿಗ್​ಬಾಸ್ ಆಟವನ್ನು ಕೂಡಲೇ ಸ್ಥಗಿತಗೊಳಿಸುವಂತೆ ಹೇಳಿದರು. ಬಿಗ್​ಬಾಸ್​ನ ನಿರ್ಣಯ ವರ್ತೂರು ಸಂತೋಷ್​​ ತಂಡಕ್ಕೆ ಸಮಾಧಾನವಾಗಲಿಲ್ಲ.

ಸೋಪಿನ ಪುಡಿ ಬೆರೆಸಿದ ನೀರು ಕಣ್ಣು, ಬಾಯಿ, ಮೂಗಿಗೆಲ್ಲ ಹೋದ ಕಾರಣದಿಂದ ಸಂಗೀತಾ ಹಾಗೂ ಪ್ರತಾಪ್ ತೀವ್ರ ಬಾಧೆಯಲ್ಲಿದ್ದರು. ಸೀಕ್ರೆಟ್​ ರೂಂಗೆ ಹೋಗಿ ಪ್ರತಾಪ್ ಕಣ್ಣೀರು ಸಹ ಹಾಕಿದರು. ಅವರನ್ನು ಅಗತ್ಯ ಚಿಕಿತ್ಸೆಗಾಗಿ ಹೊರಗೆ ಕಳಿಸಿದ ಕಾರಣ ಆ ನಂತರದ ಇಡೀ ದಿನ ಅವರು ಬಿಗ್​ಬಾಸ್ ಮನೆಯಲ್ಲಿ ಕಂಡು ಬರಲಿಲ್ಲ. ಮನೆಯ ಇತರೆ ಕೆಲವು ಸ್ಪರ್ಧಿಗಳು ಅವರಿಗೆ ಏನೂ ಆಗದಿದ್ದರೆ ಸಾಕೆಂದು ಮಾತನಾಡಿಕೊಂಡರು ಸಹ. ಈ ಘಟನೆ ಮಂಗಳವಾರ ನಡೆದಿದ್ದು, ಅದರ ಪ್ರಸಾರ ಗುರುವಾರ ಆಗಿರುವ ಕಾರಣ, ಶನಿವಾರದ ವೀಕೆಂಡ್ ಪಂಚಾಯ್ತಿಗೆ ಇಬ್ಬರೂ ಹಾಜರಾಗುವ ಸಾಧ್ಯತೆ ಇದೆ. ಡ್ರೋನ್ ಪ್ರತಾಪ್ ಈಗಾಗಲೇ ಬಿಗ್​ಬಾಸ್ ಮನೆಗೆ ಬಂದಿದ್ದಾರೆ ಎನ್ನಲಾಗುತ್ತಿದೆ.

ಸಂಗೀತಾ ತಂಡಕ್ಕಿಂತಲೂ ಹೆಚ್ಚು ಕ್ರೂರವಾಗಿ ವರ್ತೂರು ತಂಡ ಆಡಿದ್ದು ಮೇಲ್ನೋಟಕ್ಕೆ ಕಾಣಿಸಿತು. ಶನಿವಾರದ ಎಪಿಸೋಡ್​ನಲ್ಲಿ ನಟ ಸುದೀಪ್ ಆಟಗಾರರ ಈ ವರ್ತನೆಯನ್ನು ಹೇಗೆ ವಿಮರ್ಶಿಸುತ್ತಾರೆ ಎಂದು ಕಾದು ನೋಡಬೇಕಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:31 pm, Fri, 8 December 23

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ