AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇವಲ 24 ಗಂಟೆಯಲ್ಲಿ ಬಿಗ್​ಬಾಸ್​ನಿಂದ ಎಲಿಮಿನೇಟ್ ಆದ ನಟಿ

Bigg Boss: ಬಿಗ್​ಬಾಸ್​ನಲ್ಲಿ ಸಾಮಾನ್ಯವಾಗಿ ಪ್ರತಿ ವಾರ ಒಬ್ಬರು ಹೊರಗೆ ಹೋಗುತ್ತಾರೆ. ಆದರೆ ಬಿಗ್​ಬಾಸ್​ ಪ್ರಾರಂಭವಾದ ಒಂದೇ ದಿನದಲ್ಲಿ ಸ್ಪರ್ಧಿಯೊಬ್ಬರು ಎಲಿಮಿನೇಟ್ ಆಗಿದ್ದಾರೆ.

ಕೇವಲ 24 ಗಂಟೆಯಲ್ಲಿ ಬಿಗ್​ಬಾಸ್​ನಿಂದ ಎಲಿಮಿನೇಟ್ ಆದ ನಟಿ
ಮಂಜುನಾಥ ಸಿ.
|

Updated on: Oct 08, 2024 | 12:22 PM

Share

ಬಿಗ್​ಬಾಸ್ ಸೀಸನ್ ಶುರುವಾಗಿದೆ. ಮರಾಠಿ, ಕನ್ನಡ, ತೆಲುಗು, ಹಿಂದಿ, ತಮಿಳು ಎಲ್ಲ ಭಾಷೆಗಳಲ್ಲಿ ಬಿಗ್​ಬಾಸ್ ಪ್ರಾರಂಭವಾಗಿದೆ. ಅಕ್ಟೋಬರ್ 6 ರಂದು ಬಿಗ್​ಬಾಸ್ ತಮಿಳಿನ ಹೊಸ ಸೀಸನ್ ಪ್ರಾರಂಭವಾಗಿತ್ತು. ಇಷ್ಟು ವರ್ಷ ಕಮಲ್ ಹಾಸನ್ ಈ ಶೋ ನಡೆಸಿಕೊಟ್ಟಿದ್ದರು, ಆದರೆ ಮೊದಲ ಬಾರಿಗೆ ವಿಜಯ್ ಸೇತುಪತಿ ಸಾರಥ್ಯ ವಹಿಸಿಕೊಂಡಿದ್ದರು. ಶೋನಲ್ಲಿ ಕೆಲವು ಬದಲಾವಣೆಗಳನ್ನು ಸಹ ಮಾಡಲಾಗಿತ್ತು. ಅಕ್ಟೋಬರ್ 06 ರಂದು ಬಿಗ್​ಬಾಸ್​ 8 ರ ಪ್ರಾರಂಭ ಆಗಿತ್ತು. ಅದಾದ ಕೇವಲ ಒಂದೇ ದಿನದಲ್ಲಿ ಒಬ್ಬ ಸ್ಪರ್ಧಿಯನ್ನು ಎಲಿಮಿನೇಟ್ ಮಾಡಲಾಗಿದೆ. ಅದೂ ಭಾರಿ ನಿರೀಕ್ಷೆ ಇದ್ದ ಸ್ಪರ್ಧಿಯೇ ಮನೆಯಿಂದ ಹೊರಗೆ ಹೋಗಿದ್ದಾರೆ.

ಮೊದಲ ದಿನ ಬರೋಬ್ಬರಿ 18 ಮಂದಿ ಬಿಗ್​ಬಾಸ್ ಮನೆಗೆ ಎಂಟ್ರಿ ಕೊಟ್ಟಿದ್ದರು. ಹೋಗುವಾಗ ಎಲ್ಲರಿಗೂ ಒಂದೊಂದು ಟ್ರೋಫಿಯನ್ನು ವಿಜಯ್ ಸೇತುಪತಿ ಕೊಟ್ಟು ಕಳಿಸಿದ್ದರು. ಮೊದಲ ದಿನವೇ ಮನೆಯ ಸದಸ್ಯರಿಗೆ ಕಠಿಣ ಟಾಸ್ಕ್ ಒಂದನ್ನು ನೀಡಲಾಯ್ತು. ಒಂದೇ ದಿನಕ್ಕೆ ಎಲ್ಲರೂ ಸೇರಿ ಒಬ್ಬರನ್ನು ನಾಮಿನೇಟ್ ಮಾಡಿ ಅವರನ್ನು ಮನೆಯಿಂದ ಹೊರಗೆ ಕಳಿಸಬೇಕು ಎನ್ನಲಾಗಿತ್ತು.

ಇದನ್ನೂ ಓದಿ:ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?

ತಮಿಳಿನ ಸೂಪರ್ ಹಿಟ್ ಸಿನಿಮಾ ‘ಮಹಾರಾಜ’ನಲ್ಲಿ ವಿಜಯ್ ಸೇತುಪತಿ ಅವರ ಮಗಳ ಪಾತ್ರದಲ್ಲಿ ಅದ್ಭುತವಾಗಿ ನಟಿಸಿದ್ದ ನಟಿ ಸಚಾನಾ ನಮಿದಾಸ್ ಸಹ ಬಿಗ್​ಬಾಸ್​ಗೆ ಹೋಗಿದ್ದರು. ಸ್ಪರ್ಧಿಗಳಲ್ಲಿ ಅತ್ಯಂತ ಕಿರಿಯ ವಯಸ್ಸಿನ ಸ್ಪರ್ಧಿ ಇವರಾಗಿದ್ದು, ಇವರ ಮೇಲೆ ದೊಡ್ಡ ನಿರೀಕ್ಷೆ ಇತ್ತು. ಸಚಾನಾ ಈ ಬಾರಿ ಕಪ್ ಗೆಲ್ಲುತ್ತಾರೆ ಎಂದೇ ಭರವಸೆ ಇಡಲಾಗಿತ್ತು. ಆದರೆ ಮೊದಲ ದಿನವೇ ಇತರೆ ಸ್ಪರ್ಧಿಗಳಿಂದ ನಾಮಿನೇಟ್ ಆಗಿ ಸಚಾನಾ ಬಿಗ್​ಬಾಸ್ ಮನೆಗೆ ಹೋದ ಒಂದೇ ದಿನಕ್ಕೆ ಮನೆಯಿಂದ ಹೊರಗೆ ಬಂದಿದ್ದಾರೆ.

ಬಿಗ್​ಬಾಸ್ ಮನೆಗೆ ಹೋದ ಕೇವಲ ದಿನಕ್ಕೆ ಸಚನಾ ನಮಿದಾಸ್ ಭಾರವಾದ ಹೃದಯ ಹೊತ್ತು ಮನೆಯಿಂದ ಹೊರಗೆ ಬಂದಿದ್ದಾರೆ. ವಿಜಯ್ ಸೇತುಪತಿ ಅವರಿಗೆ ನೀಡಿದ್ದ ಮೂರ್ತಿಯನ್ನು ಅಲ್ಲಿಯೇ ಒಡೆದು ಹಾಕಿ, ಕಣ್ಣೀರು ಹಾಕುತ್ತಾ ಬಿಗ್​ಬಾಸ್ ಮನೆಯಿಂದ ಹೊರಗೆ ಹೋಗಿದ್ದಾರೆ. ಕೇವಲ ಒಂದೇ ದಿನಕ್ಕೆ ಒಬ್ಬ ಆಟಗಾರರನ್ನು ಹೊರಗೆ ಹಾಕಿರುವುದಕ್ಕೆ ಪ್ರೇಕ್ಷಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬಹುಷಃ ವೈಲ್ಡ್ ಕಾರ್ಡ್ ಎಂಟ್ರಿ ಮೂಲಕ ಸಚಾನಾ ಒಳಗೆ ಬರಬಹುದು ಎಂಬ ನಿರೀಕ್ಷೆ ಇದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ