ಕೇವಲ 24 ಗಂಟೆಯಲ್ಲಿ ಬಿಗ್​ಬಾಸ್​ನಿಂದ ಎಲಿಮಿನೇಟ್ ಆದ ನಟಿ

Bigg Boss: ಬಿಗ್​ಬಾಸ್​ನಲ್ಲಿ ಸಾಮಾನ್ಯವಾಗಿ ಪ್ರತಿ ವಾರ ಒಬ್ಬರು ಹೊರಗೆ ಹೋಗುತ್ತಾರೆ. ಆದರೆ ಬಿಗ್​ಬಾಸ್​ ಪ್ರಾರಂಭವಾದ ಒಂದೇ ದಿನದಲ್ಲಿ ಸ್ಪರ್ಧಿಯೊಬ್ಬರು ಎಲಿಮಿನೇಟ್ ಆಗಿದ್ದಾರೆ.

ಕೇವಲ 24 ಗಂಟೆಯಲ್ಲಿ ಬಿಗ್​ಬಾಸ್​ನಿಂದ ಎಲಿಮಿನೇಟ್ ಆದ ನಟಿ
Follow us
|

Updated on: Oct 08, 2024 | 12:22 PM

ಬಿಗ್​ಬಾಸ್ ಸೀಸನ್ ಶುರುವಾಗಿದೆ. ಮರಾಠಿ, ಕನ್ನಡ, ತೆಲುಗು, ಹಿಂದಿ, ತಮಿಳು ಎಲ್ಲ ಭಾಷೆಗಳಲ್ಲಿ ಬಿಗ್​ಬಾಸ್ ಪ್ರಾರಂಭವಾಗಿದೆ. ಅಕ್ಟೋಬರ್ 6 ರಂದು ಬಿಗ್​ಬಾಸ್ ತಮಿಳಿನ ಹೊಸ ಸೀಸನ್ ಪ್ರಾರಂಭವಾಗಿತ್ತು. ಇಷ್ಟು ವರ್ಷ ಕಮಲ್ ಹಾಸನ್ ಈ ಶೋ ನಡೆಸಿಕೊಟ್ಟಿದ್ದರು, ಆದರೆ ಮೊದಲ ಬಾರಿಗೆ ವಿಜಯ್ ಸೇತುಪತಿ ಸಾರಥ್ಯ ವಹಿಸಿಕೊಂಡಿದ್ದರು. ಶೋನಲ್ಲಿ ಕೆಲವು ಬದಲಾವಣೆಗಳನ್ನು ಸಹ ಮಾಡಲಾಗಿತ್ತು. ಅಕ್ಟೋಬರ್ 06 ರಂದು ಬಿಗ್​ಬಾಸ್​ 8 ರ ಪ್ರಾರಂಭ ಆಗಿತ್ತು. ಅದಾದ ಕೇವಲ ಒಂದೇ ದಿನದಲ್ಲಿ ಒಬ್ಬ ಸ್ಪರ್ಧಿಯನ್ನು ಎಲಿಮಿನೇಟ್ ಮಾಡಲಾಗಿದೆ. ಅದೂ ಭಾರಿ ನಿರೀಕ್ಷೆ ಇದ್ದ ಸ್ಪರ್ಧಿಯೇ ಮನೆಯಿಂದ ಹೊರಗೆ ಹೋಗಿದ್ದಾರೆ.

ಮೊದಲ ದಿನ ಬರೋಬ್ಬರಿ 18 ಮಂದಿ ಬಿಗ್​ಬಾಸ್ ಮನೆಗೆ ಎಂಟ್ರಿ ಕೊಟ್ಟಿದ್ದರು. ಹೋಗುವಾಗ ಎಲ್ಲರಿಗೂ ಒಂದೊಂದು ಟ್ರೋಫಿಯನ್ನು ವಿಜಯ್ ಸೇತುಪತಿ ಕೊಟ್ಟು ಕಳಿಸಿದ್ದರು. ಮೊದಲ ದಿನವೇ ಮನೆಯ ಸದಸ್ಯರಿಗೆ ಕಠಿಣ ಟಾಸ್ಕ್ ಒಂದನ್ನು ನೀಡಲಾಯ್ತು. ಒಂದೇ ದಿನಕ್ಕೆ ಎಲ್ಲರೂ ಸೇರಿ ಒಬ್ಬರನ್ನು ನಾಮಿನೇಟ್ ಮಾಡಿ ಅವರನ್ನು ಮನೆಯಿಂದ ಹೊರಗೆ ಕಳಿಸಬೇಕು ಎನ್ನಲಾಗಿತ್ತು.

ಇದನ್ನೂ ಓದಿ:ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?

ತಮಿಳಿನ ಸೂಪರ್ ಹಿಟ್ ಸಿನಿಮಾ ‘ಮಹಾರಾಜ’ನಲ್ಲಿ ವಿಜಯ್ ಸೇತುಪತಿ ಅವರ ಮಗಳ ಪಾತ್ರದಲ್ಲಿ ಅದ್ಭುತವಾಗಿ ನಟಿಸಿದ್ದ ನಟಿ ಸಚಾನಾ ನಮಿದಾಸ್ ಸಹ ಬಿಗ್​ಬಾಸ್​ಗೆ ಹೋಗಿದ್ದರು. ಸ್ಪರ್ಧಿಗಳಲ್ಲಿ ಅತ್ಯಂತ ಕಿರಿಯ ವಯಸ್ಸಿನ ಸ್ಪರ್ಧಿ ಇವರಾಗಿದ್ದು, ಇವರ ಮೇಲೆ ದೊಡ್ಡ ನಿರೀಕ್ಷೆ ಇತ್ತು. ಸಚಾನಾ ಈ ಬಾರಿ ಕಪ್ ಗೆಲ್ಲುತ್ತಾರೆ ಎಂದೇ ಭರವಸೆ ಇಡಲಾಗಿತ್ತು. ಆದರೆ ಮೊದಲ ದಿನವೇ ಇತರೆ ಸ್ಪರ್ಧಿಗಳಿಂದ ನಾಮಿನೇಟ್ ಆಗಿ ಸಚಾನಾ ಬಿಗ್​ಬಾಸ್ ಮನೆಗೆ ಹೋದ ಒಂದೇ ದಿನಕ್ಕೆ ಮನೆಯಿಂದ ಹೊರಗೆ ಬಂದಿದ್ದಾರೆ.

ಬಿಗ್​ಬಾಸ್ ಮನೆಗೆ ಹೋದ ಕೇವಲ ದಿನಕ್ಕೆ ಸಚನಾ ನಮಿದಾಸ್ ಭಾರವಾದ ಹೃದಯ ಹೊತ್ತು ಮನೆಯಿಂದ ಹೊರಗೆ ಬಂದಿದ್ದಾರೆ. ವಿಜಯ್ ಸೇತುಪತಿ ಅವರಿಗೆ ನೀಡಿದ್ದ ಮೂರ್ತಿಯನ್ನು ಅಲ್ಲಿಯೇ ಒಡೆದು ಹಾಕಿ, ಕಣ್ಣೀರು ಹಾಕುತ್ತಾ ಬಿಗ್​ಬಾಸ್ ಮನೆಯಿಂದ ಹೊರಗೆ ಹೋಗಿದ್ದಾರೆ. ಕೇವಲ ಒಂದೇ ದಿನಕ್ಕೆ ಒಬ್ಬ ಆಟಗಾರರನ್ನು ಹೊರಗೆ ಹಾಕಿರುವುದಕ್ಕೆ ಪ್ರೇಕ್ಷಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬಹುಷಃ ವೈಲ್ಡ್ ಕಾರ್ಡ್ ಎಂಟ್ರಿ ಮೂಲಕ ಸಚಾನಾ ಒಳಗೆ ಬರಬಹುದು ಎಂಬ ನಿರೀಕ್ಷೆ ಇದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಲೋಕಾಯುಕ್ತ ದಾಳಿ, ಹುಮ್ನಾಬಾದ್ ಸಾರಿಗೆ ತನಿಖಾ ಕಚೇರಿ ಸಿಬ್ಬಂದಿಗೆ ಶಾಕ್!
ಲೋಕಾಯುಕ್ತ ದಾಳಿ, ಹುಮ್ನಾಬಾದ್ ಸಾರಿಗೆ ತನಿಖಾ ಕಚೇರಿ ಸಿಬ್ಬಂದಿಗೆ ಶಾಕ್!
ಕ್ಯಾಪ್ಟನ್​ಗೆ ಲೈನ್ ಹಾಕೋಕೆ ಆರಂಭಿಸಿದ ಜಗದೀಶ್
ಕ್ಯಾಪ್ಟನ್​ಗೆ ಲೈನ್ ಹಾಕೋಕೆ ಆರಂಭಿಸಿದ ಜಗದೀಶ್
ನವರಾತ್ರಿ 6ನೇ ದಿನ ಕಾತ್ಯಾಯಿನಿ ದೇವಿ ಆರಾಧನೆ ಮಹತ್ವ ತಿಳಿಯಿರಿ
ನವರಾತ್ರಿ 6ನೇ ದಿನ ಕಾತ್ಯಾಯಿನಿ ದೇವಿ ಆರಾಧನೆ ಮಹತ್ವ ತಿಳಿಯಿರಿ
ಈ ರಾಶಿಯವರು ಸರ್ಕಾರಿ ಉದ್ಯೋಗದಲ್ಲಿ ಹೆಚ್ಚಿನ‌ ಪ್ರಗತಿ ಕಾಣಲಿದ್ದಾರೆ
ಈ ರಾಶಿಯವರು ಸರ್ಕಾರಿ ಉದ್ಯೋಗದಲ್ಲಿ ಹೆಚ್ಚಿನ‌ ಪ್ರಗತಿ ಕಾಣಲಿದ್ದಾರೆ
45 ಲಕ್ಷ ರೂ. ನೋಟುಗಳಿಂದ ದುರ್ಗಾದೇವಿಗೆ ಅಲಂಕಾರ! ಬೆರಗಾದ ಭಕ್ತರು
45 ಲಕ್ಷ ರೂ. ನೋಟುಗಳಿಂದ ದುರ್ಗಾದೇವಿಗೆ ಅಲಂಕಾರ! ಬೆರಗಾದ ಭಕ್ತರು
ನವರಾತ್ರಿ ಉತ್ಸವದಲ್ಲಿ ಕಣ್ಮನ ಸೆಳೆದ ಕಾಂತಾರ ಚಿತ್ರದ ಪಂಜುರ್ಲಿ ನೃತ್ಯ
ನವರಾತ್ರಿ ಉತ್ಸವದಲ್ಲಿ ಕಣ್ಮನ ಸೆಳೆದ ಕಾಂತಾರ ಚಿತ್ರದ ಪಂಜುರ್ಲಿ ನೃತ್ಯ
ಇದು ಮೌನವಾಗಿರುವ ಕಾಲ: ಜೈಲಿಂದ ಹೊರಬಂದ ಮುರುಘಾಶ್ರೀ ಮೊದಲ ಮಾತು
ಇದು ಮೌನವಾಗಿರುವ ಕಾಲ: ಜೈಲಿಂದ ಹೊರಬಂದ ಮುರುಘಾಶ್ರೀ ಮೊದಲ ಮಾತು
ನರಕದ ನೋವು ಹೆಚ್ಚಲು ಕಾರಣವಾದ ಚೈತ್ರಾ ಕುಂದಾಪುರ? ಎಲ್ಲ ಮುಗಿದ ಬಳಿಕ ಅಳು
ನರಕದ ನೋವು ಹೆಚ್ಚಲು ಕಾರಣವಾದ ಚೈತ್ರಾ ಕುಂದಾಪುರ? ಎಲ್ಲ ಮುಗಿದ ಬಳಿಕ ಅಳು
ಒಳ ಉಡುಪಿನ ವಿಷಯ ಪ್ರಸ್ತಾಪಿಸಿ ಮಹಿಳಾ ಸ್ಪರ್ಧಿಗಳಿಗೆ ಮುಜುಗರ ತಂದ ಜಗದೀಶ್
ಒಳ ಉಡುಪಿನ ವಿಷಯ ಪ್ರಸ್ತಾಪಿಸಿ ಮಹಿಳಾ ಸ್ಪರ್ಧಿಗಳಿಗೆ ಮುಜುಗರ ತಂದ ಜಗದೀಶ್
ಬೆಂಗಳೂರು: ನಿಂತಿದ್ದ ಮಹಿಳೆ ಮೇಲೆ ವಿದ್ಯುತ್ ಲೈನ್ ಬಿದ್ದು ಸಾವು
ಬೆಂಗಳೂರು: ನಿಂತಿದ್ದ ಮಹಿಳೆ ಮೇಲೆ ವಿದ್ಯುತ್ ಲೈನ್ ಬಿದ್ದು ಸಾವು