AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಜನಾ ಗಲ್ರಾನಿ ಆರ್ಭಟಕ್ಕೆ ಹೆದರಿದ ಮನೆ ಮಂದಿ, ಕಣ್ಣೀರು ಹಾಕಿದ ನಟಿ

Bigg Boss Telugu 09: ಕನ್ನಡದ ನಟಿ ಸಂಜನಾ ಗಲ್ರಾನಿ ತೆಲುಗು ಬಿಗ್​​ಬಾಸ್ ಸೀಸನ್ 9ಕ್ಕೆ ಸ್ಪರ್ಧಿಯಾಗಿ ಹೋಗಿದ್ದಾರೆ. ತೆಲುಗಿನಲ್ಲಿಯೂ ಹಲವು ಸಿನಿಮಾಗಳಲ್ಲಿ ನಟಿಸಿರುವ ಸಂಜನಾ ಗಲ್ರಾನಿ ತೆಲುಗು ಪ್ರೇಕ್ಷಕರಿಗೆ ಚಿರ ಪರಿಚಿತ ನಟಿ. ಇದೀಗ ಸಂಜನಾ ಗಲ್ರಾನಿ ಮೊದಲ ವಾರದಲ್ಲಿಯೇ ಬಿಗ್​​ಬಾಸ್ ಮನೆಯಲ್ಲಿ ತಮ್ಮ ವಿಶ್ವರೂಪ ದರ್ಶನ ಮಾಡಿದ್ದಾರೆ. ಖ್ಯಾತ ನಟಿಯೊಟ್ಟಿಗೆ ಜಗಳವಾಡಿ ಕಣ್ಣೀರು ಹಾಕಿಸಿದ್ದಾರೆ.

ಸಂಜನಾ ಗಲ್ರಾನಿ ಆರ್ಭಟಕ್ಕೆ ಹೆದರಿದ ಮನೆ ಮಂದಿ, ಕಣ್ಣೀರು ಹಾಕಿದ ನಟಿ
Sanjana Galrani
ಮಂಜುನಾಥ ಸಿ.
|

Updated on: Sep 10, 2025 | 11:30 AM

Share

ಕನ್ನಡದ ನಟಿ ಸಂಜನಾ ಗಲ್ರಾನಿ (Sanjana Galrani) ತೆಲುಗು ಬಿಗ್​​ಬಾಸ್ ಮನೆ ಸೇರಿಕೊಂಡಿದ್ದಾರೆ. 12 ವರ್ಷಗಳ ಹಿಂದೆ ಕನ್ನಡದ ಮೊದಲ ಬಿಗ್​​ಬಾಸ್​​ಗೆ ಸ್ಪರ್ಧಿಯಾಗಿ ಹೋಗಿದ್ದ ನಟಿ ಸಂಜನಾ ಈಗ ಒಂದು ದಶಕಕ್ಕೂ ಹೆಚ್ಚು ಸಮಯದ ಬಳಿಕ ತೆಲುಗು ಬಿಗ್​​ಬಾಸ್ ಮನೆ ಪ್ರವೇಶಿಸಿದ್ದಾರೆ. ಸಂಜನಾ, ಇದೀಗ ತೆಲುಗು ಬಿಗ್​​ಬಾಸ್​​ನಲ್ಲಿ ತಮ್ಮ ವಿಶ್ವರೂಪ ದರ್ಶನ ಮಾಡಿಸುತ್ತಿದ್ದಾರೆ. ಮನೆ ಮಂದಿಯ ಮೇಲೆ ಹಾರಿ ಬಿದ್ದಿದ್ದು, ಹಲವರೊಟ್ಟಿಗೆ ಜಗಳ ಮಾಡಿದ್ದಾರೆ. ಖ್ಯಾತ ನಟಿಯನ್ನು ಟಾರ್ಗೆಟ್ ಮಾಡಿ ವಾಗ್ದಾಳಿ ನಡೆಸಿದ್ದು, ನಟಿ ಕಣ್ಣೀರು ಹಾಕಿದ್ದಾರೆ.

ಕನ್ನಡ ಸೇರಿದಂತೆ ಹಲವಾರು ಭಾಷೆಗಳಲ್ಲಿ ಸೂಪರ್ ಸ್ಟಾರ್​ ನಟರುಗಳೊಟ್ಟಿಗೆ ನಟಿಸಿರವ ಫ್ಲೋರಾ ಸೈನಿ ಅವರಿಗೆ ಮೊದಲ ವಾರ ಬಾತ್​​ರೂಂ ಸ್ವಚ್ಛ ಮಾಡುವ ಜವಾಬ್ದಾರಿ ನೀಡಲಾಗಿದೆ. ಫ್ಲೋರಾ ಸೈನಿ ಅದನ್ನು ಶ್ರದ್ಧೆಯಿಂದಲೇ ಮಾಡುತ್ತಿದ್ದಾರೆ. ಆದರೆ ಅವರಿಗೆ ಸಂಜನಾ ಪದೇ ಪದೇ ಕಿರಿ-ಕಿರಿ ನೀಡುತ್ತಿದ್ದಾರೆ. ಇದರಿಂದಾಗಿ ಈ ಇಬ್ಬರ ನಡುವೆ ದೊಡ್ಡ ಜಗಳವೇ ಆಗಿದೆ. ಇದು ಮನೆಯ ಇತರೆ ಸದಸ್ಯರ ಮೇಲೂ ಸಹ ಪರಿಣಾಮ ಬೀರಿದೆ.

ನಿನ್ನೆಯ ಎಪಿಸೋಡ್​​ನಲ್ಲಿ ನಟಿ ಸಂಜನಾ ಗಲ್ರಾನಿ, ಮನೆಯ ಸಹ ಸ್ಪರ್ಧಿ ಖ್ಯಾತ ಹಿರಿಯ ನಟಿ ಫ್ಲೋರಾ ಸೈನಿ ವಿರುದ್ಧ ಹರಿಹಾಯ್ದಿದ್ದಾರೆ. ಅದೂ ಶಾಂಪು ಬಾಟಲಿ ವಿಷಯಕ್ಕೆ ಜೋರು ಜಗಳ ಮಾಡಿದ್ದಾರೆ. ಫ್ಲೋರಾ ಸೈನಿ, ಮೃದು ಸ್ವಭಾವದ ಮಹಿಳೆಯಾಗಿದ್ದು, ಸಂಜನಾರ ಆರ್ಭಟಕ್ಕೆ ಪೆಚ್ಚಾಗಿ ಕಣ್ಣೀರು ಹಾಕಿದ್ದಾರೆ.

ಇದನ್ನೂ ಓದಿ:10ನೇ ಸ್ಪರ್ಧಿಯಾಗಿ ಬಿಗ್ ಬಾಸ್ ಮನೆ ಸೇರಿದ ಸಂಜನಾ ಗಲ್ರಾನಿ

ಸಂಜನಾ ಗಲ್ರಾನಿ ತಮ್ಮ ಶಾಂಪು, ಕಂಡಿಷನರ್ ಬಾಟಿಗಳನ್ನು ಬಾತ್​​ರೂಂನಲ್ಲಿ ಬಿಟ್ಟಿದ್ದರು. ಇದು ಬಾತ್​ರೂಂ ಸ್ವಚ್ಛ ಮಾಡುವ ಜವಾಬ್ದಾರಿ ಹೊತ್ತುಕೊಂಡಿರುವ ಫ್ಲೋರಾ ಸೈನಿಗೆ ಸಿಟ್ಟು ತರಿಸಿದೆ. ಈ ವಿಷಯವಾಗಿ ಸಂಜನಾ ಬಳಿ ಹೇಳಿದ್ದಾರೆ. ‘ಪ್ರತಿ ಬಾರಿಯೂ ಬಾತ್​​ರೂಂ ಸ್ವಚ್ಛ ಮಾಡಲು ಹೋದಾಗಲೂ ನಾನು ಆ ಬಾಟಲಿಗಳನ್ನು ಎತ್ತಿಡಬೇಕಾ? ಅವು ನಿಮ್ಮ ವಸ್ತುಗಳನ್ನು ಅವನ್ನು ನೀವೇ ಸರಿಯಾಗಿ ಇಟ್ಟುಕೊಳ್ಳಬೇಕು’ ಎಂದು ಫ್ಲೋರಾ ಹೇಳಿದ್ದಾರೆ. ಆದರೆ ಅದನ್ನು ಸಂಜನಾ ಮಾತಿಗೆ ಮಾತು ಬೆಳೆದು ದೊಡ್ಡ ಜಗಳವೇ ಆಗಿವೆ. ಸಂಜನಾರ ವಾಗ್ದಾಳಿಗೆ ಎದುರುತ್ತರ ಕೊಡಲಾಗದೆ ನಟಿ ಫ್ಲೋರಾ ಸೈನಿ ಕಣ್ಣೀರು ಹಾಕಿದ್ದಾರೆ.

‘ಮನೆಯ ಕ್ಯಾಪ್ಟನ್ ಬಂದು ಸಂಜನಾಗೆ ಆ ಶಾಂಪು ಬಾಟಲಿ ಇನ್ನಿತರೆಗಳನ್ನು ನಿಗದಿತ ಪ್ರದೇಶದಲ್ಲಿ ಇಡುವಂತೆ ಹೇಳಿದರೂ ಸಹ ಸಂಜನಾ ಅವರ ಮಾತನ್ನು ಕೇಳಿಲ್ಲ. ನೇರವಾಗಿ ‘ಇಲ್ಲ ನಾನು ಇರುವುದೇ ಹೀಗೆ ನಾನು ಇಡುವುದಿಲ್ಲ’ ಎಂದು ಖಾರವಾಗಿ ಉತ್ತರಿಸಿದ್ದಾರೆ. ಆ ನಂತರ ನಾಮಿನೇಷನ್​​​ನಲ್ಲಿ ಶುರುವಾದಾಗ ಸಾಮಾನ್ಯರೆಲ್ಲ ಸೇರಿ ಸಂಜನಾರನ್ನೇ ನಾಮಿನೇಟ್ ಮಾಡಿದ್ದಾರೆ. ಆ ಮೂಲಕ ಸಂಜನಾ ಗಲ್ರಾನಿ ಮೊದಲ ವಾರದಲ್ಲಿಯೇ ನಾಮಿನೇಟ್ ಆಗಿದ್ದು ಡೇಂಜರ್ ಜೋನ್​​ನಲ್ಲಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ