AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bigg Boss 5 Winner: ‘ಬಿಗ್​ ಬಾಸ್​ ತೆಲುಗು 5’ ವಿನ್ನರ್​ ಯಾರು? ಇಲ್ಲಿದೆ ಮಾಹಿತಿ

ಶ್ರೀರಾರಮಚಂದ್ರ, ಸನ್ನಿ, ಸಿರಿ ಶಣ್ಮುಖ್​ ಹಾಗೂ ಮಾನಸ್​ ಅವರು ಫಿನಾಲೆ ರೇಸ್​ನಲ್ಲಿದ್ದರು. ಭಾನುವಾರ ನಡೆದ ಗ್ರ್ಯಾಂಡ್​ ಫಿನಾಲೆಯನ್ನು ಅಕ್ಕಿನೇನಿ ನಾಗಾರ್ಜುನ ನಡೆಸಿಕೊಟ್ಟರು.

Bigg Boss 5 Winner: ‘ಬಿಗ್​ ಬಾಸ್​ ತೆಲುಗು 5’ ವಿನ್ನರ್​ ಯಾರು? ಇಲ್ಲಿದೆ ಮಾಹಿತಿ
ಬಿಗ್​ ಬಾಸ್​ ವಿನ್ನರ್​
TV9 Web
| Edited By: |

Updated on: Dec 20, 2021 | 3:00 AM

Share

ತೆಲುಗು ಬಿಗ್​ ಬಾಸ್​ ಸೀಸನ್​ 5 ಫಿನಾಲೆ (Bigg Boss Telugu 5 Finale) ಪೂರ್ಣಗೊಂಡಿದೆ. ಭಾನುವಾರ (ಡಿಸೆಂಬರ್​ 19) ಅದ್ದೂರಿಯಾಗಿ​ ಫಿನಾಲೆ ನಡೆದಿಯಿತು. ಯಾರು ವಿನ್​ ಆಗಲಿದ್ದಾರೆ ಎನ್ನುವ ಕುತೂಹಲ ಎಲ್ಲರಲ್ಲೂ ಇತ್ತು. ಒಟ್ಟೂ ಐದು ಮಂದಿ ಫಿನಾಲೆ ರೇಸ್​ನಲ್ಲಿದ್ದರು. ಈ ಪೈಕಿ ಕಿರುತೆರೆ ನಟ ವಿ.ಜೆ. ಸನ್ನಿ ‘ತೆಲುಗು ಬಿಗ್​ ಬಾಸ್​ 5’ ವಿನ್ನರ್​ ಆಗಿ ಹೊರಹೊಮ್ಮಿದ್ದಾರೆ. ಈ ಮೂಲಕ ಬಹುಮಾನದ ಹಣ ಹಾಗೂ ಟ್ರೋಫಿಯೊಂದಿಗೆ ಅವರು ಮನೆಗೆ ತೆರಳಿದ್ದಾರೆ. ಆರಂಭದಿಂದಲೂ ಹೆಚ್ಚು ಮನರಂಜನೆ ನೀಡುತ್ತಾ ಎಲ್ಲರ ಗಮನ ಸೆಳೆದಿದ್ದ ಅವರು ಕೊನೆಗೂ ಗೆಲುವು ಕಂಡಿದ್ದಾರೆ.

ಶ್ರೀರಾರಮಚಂದ್ರ, ಸನ್ನಿ, ಸಿರಿ ಶಣ್ಮುಖ್​ ಹಾಗೂ ಮಾನಸ್​ ಅವರು ಫಿನಾಲೆ ರೇಸ್​ನಲ್ಲಿದ್ದರು. ಭಾನುವಾರ ನಡೆದ ಗ್ರ್ಯಾಂಡ್​ ಫಿನಾಲೆಯನ್ನು ಅಕ್ಕಿನೇನಿ ನಾಗಾರ್ಜುನ ನಡೆಸಿಕೊಟ್ಟರು. ಫಿನಾಲೆ ವೀಕ್​ಗೆ 13 ಕೋಟಿ ಮತಗಳು ಬಿದ್ದಿದ್ದವು. ಈ ಪೈಕಿ ಅತಿ ಹೆಚ್ಚು ವೋಟ್ ಪಡೆದು ಸನ್ನಿ ಗೆಲುವು ಕಂಡಿದ್ದಾರೆ. ಶಣ್ಮುಖ್​ ಅವರು ಮೊದಲ ರನ್ನರ್​ ಅಪ್​ ಆದರೆ, ಶ್ರೀರಾಮಚಂದ್ರ ಅವರು ಎರಡನೇ ರನ್ನರ್​ ಅಪ್​ ಆಗಿ ಹೊರ ಹೊಮ್ಮಿದ್ದಾರೆ.

19 ಮಂದಿ ಬಿಗ್​ ಬಾಸ್ ಮನೆ ಸೇರಿದ್ದರು. ಈ ಪೈಕಿ ಸನ್ನಿ ಗೆದ್ದು ಬೀಗಿದ್ದಾರೆ. ಘಟಾಘಟಿಗಳು ಎನಿಸಿಕೊಂಡವರು ಅಷ್ಟಾಗಿ ಬಿಗ್​ ಬಾಸ್​ ಮನೆಯಲ್ಲಿ ಇರಲಿಲ್ಲ. ಈ ಕಾರಣಕ್ಕೆ ಸಾಕಷ್ಟು ಮಂದಿ ತಾವು ಈ ಬಾರಿಯ ಸೀಸನ್​ ನೋಡುವುದಿಲ್ಲ ಎನ್ನುವ ಮಾತನ್ನು ಹೇಳಿದ್ದರು. ಅಕ್ಕಿನೇನಿ ನಾಗಾರ್ಜುನ ಅವರ ಅದ್ಭುತವಾಗಿ ಈ ಬಾರಿಯ ಸೀಸನ್​ಅನ್ನು ನಡೆಸಿಕೊಟ್ಟಿದ್ದರು. ಪತ್ರಕರ್ತನಾಗಿದ್ದ ಸನ್ನಿ, ನಂತರ ಕಿರುತೆರೆಗೆ ಕಾಲಿಟ್ಟರು. ಧಾರಾವಾಹಿ ಮೂಲಕ ಹೆಚ್ಚು ಗುರುತಿಸಿಕೊಂಡಿದ್ದರು.

ಬಿಗ್​ ಬಾಸ್​ ಫಿನಾಲೆ ಸ್ಟಾರ್​ ನಟರು ಹಾಗೂ ನಿರ್ದೇಶಕರ ಸಮಾಗಮಕ್ಕೆ ಸಾಕ್ಷಿ ಆಯಿತು. ರಾಜಮೌಳಿ ನಿರ್ದೇಶನದ ‘ಆರ್​ಆರ್​ಆರ್​’ ಸಿನಿಮಾ ಜನವರಿ 7ರಂದು ತೆರೆಗೆ ಬರುತ್ತಿದೆ. ಈ ಚಿತ್ರದ ಪ್ರಚಾರದಲ್ಲಿ ರಾಜಮೌಳಿ ಬ್ಯುಸಿ ಆಗಿದ್ದಾರೆ. ಅವರು ಕೂಡ ಬಿಗ್​ ಬಾಸ್​ ವೇದಿಕೆ ಏರಿದ್ದರು. ರಣಬೀರ್​ ಕಪೂರ್ ಹಾಗೂ ಆಲಿಯಾ ‘ಬ್ರಹ್ಮಾಸ್ತ್ರ’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರ ತೆಲುಗು, ಕನ್ನಡ ಮೊದಲಾದ ಭಾಷೆಗಳಲ್ಲಿ ಬರುತ್ತಿದೆ. ಈ ಕಾರಣಕ್ಕೆ ಈ ಜೋಡಿ ಬಿಗ್​ ಬಾಸ್​ ಮನೆಯ ವೇದಿಕೆ ಹತ್ತಿತ್ತು.

ನಾನಿ ಹಾಗೂ ಸಾಯಿ ಪಲ್ಲವಿ ಅಭಿನಯದ ‘ಶ್ಯಾಮ್​ ಸಿಂಗ​ ರಾಯ್​’ ಕೂಡ ರಿಲೀಸ್​ ಆಗುತ್ತಿದೆ. ಈ ಚಿತ್ರದ ಬಗ್ಗೆ ಮಾಹಿತಿ ನೀಡಿದರು ಈ ಜೋಡಿ. ಇನ್ನು, ರಶ್ಮಿಕಾ ಮಂದಣ್ಣ ಅವರು ‘ಪುಷ್ಪ’ ಸಿನಿಮಾ ತಂಡದ ಪರವಾಗಿ ಆಗಮಿಸಿದ್ದರು. ಈ ಎಲ್ಲರನ್ನೂ ಸ್ವಾಗತ ಮಾಡಿದ್ದು ಅಕ್ಕಿನೇನಿ ನಾಗಾರ್ಜುನ. ‘ತೆಲುಗು ಬಿಗ್​ ಬಾಸ್​ 5’ ನಡೆಸಿಕೊಡುತ್ತಿರುವ ಅವರು, ಈ ಎಲ್ಲರನ್ನೂ ಸ್ವಾಗತಿಸಿ ಪ್ರೀತಿಯಿಂದ ನಾಲ್ಕು ಮಾತನಾಡಿದರು.

ಇದನ್ನೂ ಓದಿ: ತೆಲುಗು ಬಿಗ್​ ಬಾಸ್​ ಫಿನಾಲೆ; ವೇದಿಕೆ ಮೇಲೆ ರಶ್ಮಿಕಾ, ರಾಜಮೌಳಿ, ಆಲಿಯಾ ಭಟ್​, ರಣಬೀರ್​ ಕಪೂರ್

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?