AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​ ಬಾಸ್​ ವಿನ್ನರ್​ ಪಲ್ಲವಿ ಪ್ರಶಾಂತ್​ ತಲೆ ಮರೆಸಿಕೊಂಡ್ರಾ? ಕೇಸ್​ ಹಾಕಿದ ಬಳಿಕ ಸಿಕ್ತು ಸ್ಪಷ್ಟನೆ

ಪಲ್ಲವಿ ಪ್ರಶಾಂತ್​ ಅವರ ಬೆಂಬಲಿಗರು ಬಿಗ್​ ಬಾಸ್​ ನಡೆಯುತ್ತಿದ್ದ ಸ್ಟುಡಿಯೋ ಎದುರು ಜಮಾಯಿಸಿದ್ದರು. ಕೆಲವು ಕಾರುಗಳಿಗೆ ಹಾನಿ ಮಾಡಲಾಗಿದೆ. ಸಿಸಿಟಿವಿಯಲ್ಲಿ ಸೆರೆಯಾದ ದೃಶ್ಯಗಳನ್ನು ಆಧರಿಸಿ ಕಿಡಿಗೇಡಿಗಳನ್ನು ಗುರುತಿಸಲಾಗಿದೆ. ಪೊಲೀಸರು ವಿಚಾರಣೆಗಾಗಿ ಪಲ್ಲವಿ ಪ್ರಶಾಂತ್​ ಅವರ ಮನೆಗೆ ಭೇಟಿ ನೀಡಿದಾಗ ಅಲ್ಲಿ ಅವರು ಇರಲಿಲ್ಲ.

ಬಿಗ್​ ಬಾಸ್​ ವಿನ್ನರ್​ ಪಲ್ಲವಿ ಪ್ರಶಾಂತ್​ ತಲೆ ಮರೆಸಿಕೊಂಡ್ರಾ? ಕೇಸ್​ ಹಾಕಿದ ಬಳಿಕ ಸಿಕ್ತು ಸ್ಪಷ್ಟನೆ
ಪಲ್ಲವಿ ಪ್ರಶಾಂತ್​
ಮದನ್​ ಕುಮಾರ್​
|

Updated on: Dec 20, 2023 | 6:22 PM

Share

ಬಿಗ್​ ಬಾಸ್​ ಕಾರ್ಯಕ್ರಮದಲ್ಲಿ ವಿವಾದಗಳು ಸಹಜ. ಆದರೆ ಈ ಶೋ ಮುಗಿದ ನಂತರವೂ ವಿವಾದ ಮುಂದುವರಿಯುವುದು ವಿಪರ್ಯಾಸ. ‘ಬಿಗ್​ ಬಾಸ್​ ತೆಲುಗು ಸೀಸನ್​ 7’ (Bigg Boss Telugu 7) ರಿಯಾಲಿಟಿ ಶೋ ಇತ್ತೀಚೆಗಷ್ಟೇ ಪೂರ್ಣಗೊಂಡಿದೆ. ಈ ಕಾರ್ಯಕ್ರಮದ ಫಿನಾಲೆಯಲ್ಲಿ ಪಲ್ಲವಿ ಪ್ರಶಾಂತ್​ (Pallavi Prashanth) ಅವರು ಟ್ರೋಫಿ ಎತ್ತಿದ್ದಾರೆ. ವಿನ್​ ಆದ ಬಳಿಕ ಅವರ ಮೇಲೆ ಒಂದಷ್ಟು ಆರೋಪಗಳು ಎದುರಾಗಿವೆ. ಆ ನಂತರ ಅವರು ತಲೆ ಮರೆಸಿಕೊಂಡಿದ್ದಾರೆ ಎಂಬ ಸುದ್ದಿ ಹರಡಿತ್ತು. ಅದಕ್ಕೆ ಈಗ ಅವರೇ ಒಂದು ವಿಡಿಯೋ ಮೂಲಕ ಸ್ಪಷ್ಟನೆ ನೀಡಿದ್ದಾರೆ.

ಪ್ರತಿ ಬಾರಿಯೂ ಬಿಗ್​ ಬಾಸ್​ ಶೋನಲ್ಲಿ ವಿನ್ನರ್​ ಹೆಸರು ಅನೌನ್ಸ್​ ಆದ ಬಳಿಕ ಕೆಲವರು ಅಸಮಾಧಾನ ಹೊರಹಾಕುತ್ತಾರೆ. ತಮಗೆ ಬೇಕಾದ ಸ್ಪರ್ಧಿ ಗೆಲ್ಲಲಿಲ್ಲ ಎಂದು ಒಂದಷ್ಟು ಮಂದಿ ಕೂಗಾಡುತ್ತಾರೆ. ಹೀಗೆ ಪರ-ವಿರೋಧದ ಚರ್ಚೆ ನಡೆಯುತ್ತದೆ. ಈ ಬಾರಿಯ ತೆಲುಗು ಬಿಗ್​ ಬಾಸ್​ ಮುಗಿದ ಬಳಿಕ ಕೆಲವು ಕಿಡಿಗೇಡಿಗಳು ದಾಂಧಲೆ ನಡೆಸಿದ್ದಾರೆ. ಆ ಬಳಿಕ ಬಿಗ್​ ಬಾಸ್​ ವಿನ್ನರ್​ ಪಲ್ಲವಿ ಪ್ರಶಾಂತ್​ ಮತ್ತು ಅವರ ಬೆಂಬಲಿಗರ ವಿರುದ್ಧ ಕೇಸ್​ ದಾಖಲಾಗಿದೆ.

ಪಲ್ಲವಿ ಪ್ರಶಾಂತ್​ ಅವರ ಬೆಂಬಲಿಗರು ಬಿಗ್​ ಬಾಸ್​ ನಡೆಯುತ್ತಿದ್ದ ಸ್ಟುಡಿಯೋ ಎದುರು ಜಮಾಯಿಸಿದ್ದರು. ಕೆಲವು ಕಾರುಗಳಿಗೆ ಹಾನಿ ಮಾಡಲಾಗಿದೆ. ಸಿಸಿಟಿವಿಯಲ್ಲಿ ಸೆರೆಯಾದ ದೃಶ್ಯಗಳನ್ನು ಆಧರಿಸಿ ಕಿಡಿಗೇಡಿಗಳನ್ನು ಗುರುತಿಸಲಾಗಿದೆ. ಪೊಲೀಸರು ವಿಚಾರಣೆಗಾಗಿ ಪಲ್ಲವಿ ಪ್ರಶಾಂತ್​ ಅವರ ಮನೆಗೆ ಭೇಟಿ ನೀಡಿದಾಗ ಅಲ್ಲಿ ಅವರು ಇರಲಿಲ್ಲ ಎಂದು ಹೇಳಲಾಗುತ್ತಿದೆ. ಹಾಗಾಗಿ ತಲೆ ಮರೆಸಿಕೊಂಡಿದ್ದಾರೆ ಎಂಬ ಸುದ್ದಿ ಹರಡಿದೆ.

ಇದನ್ನೂ ಓದಿ: ತೆಲುಗು ಬಿಗ್​ಬಾಸ್ ಗೆದ್ದ ಪಲ್ಲವಿ ಪ್ರಶಾಂತ್ ಯಾರು?

ಕೇಸ್​ ಬಿದ್ದ ಬಳಿಕ ಪಲ್ಲವಿ ಪ್ರಶಾಂತ್​ ಅವರ ಫೋನ್​ ಆಫ್​ ಆಗಿದೆ. ಇದಕ್ಕೆ ಕಾರಣ ಏನು ಎಂದು ಅವರು ತಿಳಿಸಿದ್ದಾರೆ. ‘ನಿನ್ನೆಯಿಂದ ನಾನು ಮನೆಯಲ್ಲೇ ಇದ್ದೆ. ಎಲ್ಲಿಯೂ ತಲೆ ಮರೆಸಿಕೊಂಡಿಲ್ಲ. ಫೋನ್​ ಹಾಳಾಗಿದ್ದರಿಂದ ಸ್ವಿಚ್​ ಆಫ್​ ಆಗಿತ್ತು’ ಎಂದು ಅವರು ಸ್ಪಷ್ಟನೆ ನೀಡಿದ್ದಾರೆ. ಈ ಪ್ರಕರಣದಲ್ಲಿ ಈಗಾಗಲೇ ಅನೇಕರನ್ನು ವಿಚಾರಣೆಗೆ ಒಳಪಡಿಸಲಾಗಿದೆ. ಪಲ್ಲವಿ ಪ್ರಶಾಂತ್​ ಅವರನ್ನು ಎ1 ಎಂದು ದೂರಿನಲ್ಲಿ ತಿಳಿಸಲಾಗಿದೆ. ಆದ್ದರಿಂದ ಅವರಿಗೆ ಕಾನೂನಿನ ಸಂಕಷ್ಟ ಎದುರಾಗಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ