AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​ ಬಾಸ್​ ವಿನ್ನರ್​ ಪಲ್ಲವಿ ಪ್ರಶಾಂತ್​ ತಲೆ ಮರೆಸಿಕೊಂಡ್ರಾ? ಕೇಸ್​ ಹಾಕಿದ ಬಳಿಕ ಸಿಕ್ತು ಸ್ಪಷ್ಟನೆ

ಪಲ್ಲವಿ ಪ್ರಶಾಂತ್​ ಅವರ ಬೆಂಬಲಿಗರು ಬಿಗ್​ ಬಾಸ್​ ನಡೆಯುತ್ತಿದ್ದ ಸ್ಟುಡಿಯೋ ಎದುರು ಜಮಾಯಿಸಿದ್ದರು. ಕೆಲವು ಕಾರುಗಳಿಗೆ ಹಾನಿ ಮಾಡಲಾಗಿದೆ. ಸಿಸಿಟಿವಿಯಲ್ಲಿ ಸೆರೆಯಾದ ದೃಶ್ಯಗಳನ್ನು ಆಧರಿಸಿ ಕಿಡಿಗೇಡಿಗಳನ್ನು ಗುರುತಿಸಲಾಗಿದೆ. ಪೊಲೀಸರು ವಿಚಾರಣೆಗಾಗಿ ಪಲ್ಲವಿ ಪ್ರಶಾಂತ್​ ಅವರ ಮನೆಗೆ ಭೇಟಿ ನೀಡಿದಾಗ ಅಲ್ಲಿ ಅವರು ಇರಲಿಲ್ಲ.

ಬಿಗ್​ ಬಾಸ್​ ವಿನ್ನರ್​ ಪಲ್ಲವಿ ಪ್ರಶಾಂತ್​ ತಲೆ ಮರೆಸಿಕೊಂಡ್ರಾ? ಕೇಸ್​ ಹಾಕಿದ ಬಳಿಕ ಸಿಕ್ತು ಸ್ಪಷ್ಟನೆ
ಪಲ್ಲವಿ ಪ್ರಶಾಂತ್​
ಮದನ್​ ಕುಮಾರ್​
|

Updated on: Dec 20, 2023 | 6:22 PM

Share

ಬಿಗ್​ ಬಾಸ್​ ಕಾರ್ಯಕ್ರಮದಲ್ಲಿ ವಿವಾದಗಳು ಸಹಜ. ಆದರೆ ಈ ಶೋ ಮುಗಿದ ನಂತರವೂ ವಿವಾದ ಮುಂದುವರಿಯುವುದು ವಿಪರ್ಯಾಸ. ‘ಬಿಗ್​ ಬಾಸ್​ ತೆಲುಗು ಸೀಸನ್​ 7’ (Bigg Boss Telugu 7) ರಿಯಾಲಿಟಿ ಶೋ ಇತ್ತೀಚೆಗಷ್ಟೇ ಪೂರ್ಣಗೊಂಡಿದೆ. ಈ ಕಾರ್ಯಕ್ರಮದ ಫಿನಾಲೆಯಲ್ಲಿ ಪಲ್ಲವಿ ಪ್ರಶಾಂತ್​ (Pallavi Prashanth) ಅವರು ಟ್ರೋಫಿ ಎತ್ತಿದ್ದಾರೆ. ವಿನ್​ ಆದ ಬಳಿಕ ಅವರ ಮೇಲೆ ಒಂದಷ್ಟು ಆರೋಪಗಳು ಎದುರಾಗಿವೆ. ಆ ನಂತರ ಅವರು ತಲೆ ಮರೆಸಿಕೊಂಡಿದ್ದಾರೆ ಎಂಬ ಸುದ್ದಿ ಹರಡಿತ್ತು. ಅದಕ್ಕೆ ಈಗ ಅವರೇ ಒಂದು ವಿಡಿಯೋ ಮೂಲಕ ಸ್ಪಷ್ಟನೆ ನೀಡಿದ್ದಾರೆ.

ಪ್ರತಿ ಬಾರಿಯೂ ಬಿಗ್​ ಬಾಸ್​ ಶೋನಲ್ಲಿ ವಿನ್ನರ್​ ಹೆಸರು ಅನೌನ್ಸ್​ ಆದ ಬಳಿಕ ಕೆಲವರು ಅಸಮಾಧಾನ ಹೊರಹಾಕುತ್ತಾರೆ. ತಮಗೆ ಬೇಕಾದ ಸ್ಪರ್ಧಿ ಗೆಲ್ಲಲಿಲ್ಲ ಎಂದು ಒಂದಷ್ಟು ಮಂದಿ ಕೂಗಾಡುತ್ತಾರೆ. ಹೀಗೆ ಪರ-ವಿರೋಧದ ಚರ್ಚೆ ನಡೆಯುತ್ತದೆ. ಈ ಬಾರಿಯ ತೆಲುಗು ಬಿಗ್​ ಬಾಸ್​ ಮುಗಿದ ಬಳಿಕ ಕೆಲವು ಕಿಡಿಗೇಡಿಗಳು ದಾಂಧಲೆ ನಡೆಸಿದ್ದಾರೆ. ಆ ಬಳಿಕ ಬಿಗ್​ ಬಾಸ್​ ವಿನ್ನರ್​ ಪಲ್ಲವಿ ಪ್ರಶಾಂತ್​ ಮತ್ತು ಅವರ ಬೆಂಬಲಿಗರ ವಿರುದ್ಧ ಕೇಸ್​ ದಾಖಲಾಗಿದೆ.

ಪಲ್ಲವಿ ಪ್ರಶಾಂತ್​ ಅವರ ಬೆಂಬಲಿಗರು ಬಿಗ್​ ಬಾಸ್​ ನಡೆಯುತ್ತಿದ್ದ ಸ್ಟುಡಿಯೋ ಎದುರು ಜಮಾಯಿಸಿದ್ದರು. ಕೆಲವು ಕಾರುಗಳಿಗೆ ಹಾನಿ ಮಾಡಲಾಗಿದೆ. ಸಿಸಿಟಿವಿಯಲ್ಲಿ ಸೆರೆಯಾದ ದೃಶ್ಯಗಳನ್ನು ಆಧರಿಸಿ ಕಿಡಿಗೇಡಿಗಳನ್ನು ಗುರುತಿಸಲಾಗಿದೆ. ಪೊಲೀಸರು ವಿಚಾರಣೆಗಾಗಿ ಪಲ್ಲವಿ ಪ್ರಶಾಂತ್​ ಅವರ ಮನೆಗೆ ಭೇಟಿ ನೀಡಿದಾಗ ಅಲ್ಲಿ ಅವರು ಇರಲಿಲ್ಲ ಎಂದು ಹೇಳಲಾಗುತ್ತಿದೆ. ಹಾಗಾಗಿ ತಲೆ ಮರೆಸಿಕೊಂಡಿದ್ದಾರೆ ಎಂಬ ಸುದ್ದಿ ಹರಡಿದೆ.

ಇದನ್ನೂ ಓದಿ: ತೆಲುಗು ಬಿಗ್​ಬಾಸ್ ಗೆದ್ದ ಪಲ್ಲವಿ ಪ್ರಶಾಂತ್ ಯಾರು?

ಕೇಸ್​ ಬಿದ್ದ ಬಳಿಕ ಪಲ್ಲವಿ ಪ್ರಶಾಂತ್​ ಅವರ ಫೋನ್​ ಆಫ್​ ಆಗಿದೆ. ಇದಕ್ಕೆ ಕಾರಣ ಏನು ಎಂದು ಅವರು ತಿಳಿಸಿದ್ದಾರೆ. ‘ನಿನ್ನೆಯಿಂದ ನಾನು ಮನೆಯಲ್ಲೇ ಇದ್ದೆ. ಎಲ್ಲಿಯೂ ತಲೆ ಮರೆಸಿಕೊಂಡಿಲ್ಲ. ಫೋನ್​ ಹಾಳಾಗಿದ್ದರಿಂದ ಸ್ವಿಚ್​ ಆಫ್​ ಆಗಿತ್ತು’ ಎಂದು ಅವರು ಸ್ಪಷ್ಟನೆ ನೀಡಿದ್ದಾರೆ. ಈ ಪ್ರಕರಣದಲ್ಲಿ ಈಗಾಗಲೇ ಅನೇಕರನ್ನು ವಿಚಾರಣೆಗೆ ಒಳಪಡಿಸಲಾಗಿದೆ. ಪಲ್ಲವಿ ಪ್ರಶಾಂತ್​ ಅವರನ್ನು ಎ1 ಎಂದು ದೂರಿನಲ್ಲಿ ತಿಳಿಸಲಾಗಿದೆ. ಆದ್ದರಿಂದ ಅವರಿಗೆ ಕಾನೂನಿನ ಸಂಕಷ್ಟ ಎದುರಾಗಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು