AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಬಾರಿ ಬಿಗ್ ಬಾಸ್ ನಿರೂಪಣೆಗೆ ನಾಗಾರ್ಜುನ ಪಡೆಯುವ ಸಂಭಾವನೆ ಎಷ್ಟು ಕೋಟಿ?

ಟಾಲಿವುಡ್ ಸ್ಟಾರ್ ಹೀರೋ ನಾಗಾರ್ಜುನ ಅವರು ತೆಲುಗಿನಲ್ಲಿ ಬಿಗ್ ಬಾಸ್ ನಿರೂಪಣೆ ಮಾಡಲಿದ್ದಾರೆ. ಹೊಸ ಸೀಸನ್ (ಬಿಗ್ ಬಾಸ್ ತೆಲುಗು 9) ಆರಂಭಕ್ಕೆ ಈಗಾಗಲೇ ಸಕಲ ಸಿದ್ಧತೆ ನಡೆಯುತ್ತಿದೆ. ಈ ಬಾರಿ ನಾಗಾರ್ಜುನ ಅವರ ಸಂಭಾವನೆ ಏರಿಕೆ ಆಗಿದೆ. ಆ ಬಗ್ಗೆ ಇಂಟರೆಸ್ಟಿಂಗ್ ವಿಷಯ ಇಲ್ಲಿದೆ.

ಈ ಬಾರಿ ಬಿಗ್ ಬಾಸ್ ನಿರೂಪಣೆಗೆ ನಾಗಾರ್ಜುನ ಪಡೆಯುವ ಸಂಭಾವನೆ ಎಷ್ಟು ಕೋಟಿ?
Nagarjuna
ಮದನ್​ ಕುಮಾರ್​
|

Updated on: Aug 24, 2025 | 9:16 AM

Share

ವರ್ಷದಿಂದ ವರ್ಷಕ್ಕೆ ಬಿಗ್ ಬಾಸ್ (Bigg Boss) ರಿಯಾಲಿಟಿ ಶೋ ವ್ಯಾಪ್ತಿ ಹಿರಿದಾಗುತ್ತಲೇ ಇದೆ. ಟಿಆರ್​ಪಿ ಏರುತ್ತಲೇ ಇದೆ. ಹಾಗಾಗಿ ಶೋ ಆಯೋಜಕರು ಅದಕ್ಕೆ ಸುರಿಯುವ ಬಂಡವಾಳ ಕೂಡ ಪ್ರತಿ ವರ್ಷ ಹೆಚ್ಚಾಗುತ್ತಿದೆ. ಹಾಗೆಯೇ ಶೋ ನಿರೂಪಣೆ ಮಾಡುವ ಸ್ಟಾರ್ ನಟರ ಸಂಭಾವನೆಯಲ್ಲೂ ಭಾರಿ ಏರಿಕೆ ಆಗುತ್ತಿದೆ. ಕನ್ನಡದಲ್ಲಿ ಕಿಚ್ಚ ಸುದೀಪ್, ಹಿಂದಿಯಲ್ಲಿ ಸಲ್ಮಾನ್ ಖಾನ್, ತೆಲುಗಿನಲ್ಲಿ ನಾಗಾರ್ಜುನ (Nagarjuna) ಅವರು ಬಿಗ್ ಬಾಸ್ ಕಾರ್ಯಕ್ರಮದ ನಿರೂಪಣೆ ಮಾಡುತ್ತಿದ್ದಾರೆ. ತೆಲುಗು ಬಿಗ್ ಬಾಸ್ ಹೊಸ ಆವೃತ್ತಿಯ ನಿರೂಪಣೆ ಮಾಡಲು ನಾಗಾರ್ಜುನ ಪಡೆಯಲಿರುವ ಸಂಭಾವನೆ (Nagarjuna Bigg Boss Remuneration) ಬಗ್ಗೆ ಅಚ್ಚರಿಯ ಮಾಹಿತಿ ಕೇಳಿಬಂದಿದೆ.

ಟಾಲಿವುಡ್​​ನಲ್ಲಿ ನಾಗಾರ್ಜುನ ಅವರು ಸ್ಟಾರ್ ಹೀರೋ. ಇಂದಿಗೂ ಅವರಿಗೆ ಸಖತ್ ಬೇಡಿಕೆ ಇದೆ. ಇತ್ತೀಚೆಗೆ ಬಿಡುಗಡೆ ಆದ ‘ಕೂಲಿ’ ಸಿನಿಮಾದಲ್ಲಿ ಅವರು ಅಬ್ಬಿಸಿದ್ದಾರೆ. ಹಾಗೆಯೇ, ಬಿಗ್ ಬಾಸ್ ತೆಲುಗು 9ನೇ ಸೀಸನ್ ನಿರೂಪಣೆ ಮಾಡಲು ಅವರು ಸಜ್ಜಾಗಿದ್ದಾರೆ. ಈ ಬಾರಿ ಅವರಿಗೆ ಬಿಗ್ ಬಾಸ್ ಆಯೋಜಕರಿಂದ ಬರೋಬ್ಬರಿ 35 ಕೋಟಿ ರೂಪಾಯಿ ಸಂಭಾವನೆ ಸಿಗಲಿದೆ ಎಂದು ಹೇಳಲಾಗುತ್ತಿದೆ.

ಹಿಂದಿನ ಸೀಸನ್​​ನಲ್ಲಿ ನಾಗಾರ್ಜುನ ಅವರು 20 ಕೋಟಿ ರೂಪಾಯಿ ಸಂಭಾವನೆ ಪಡೆದಿದ್ದರು ಎಂಬ ಮಾಹಿತಿ ಇದೆ. ಆದರೆ ಈ ಸೀಸನ್​​ನಲ್ಲಿ ಅವರ ಸಂಭಾವನೆ ಏಕಾಏಕಿ ಏರಿಕೆ ಆಗಿದೆ. 35 ಕೋಟಿ ರೂಪಾಯಿ ಅವರ ಜೇಬು ಸೇರಲಿದೆ. ಆದರೆ ಈ ಬಗ್ಗೆ ಯಾರೂ ಅಧಿಕೃತವಾಗಿ ಹೇಳಿಕೆ ನೀಡಿಲ್ಲ. ಕನ್ನಡದಲ್ಲಿ ಕಿಚ್ಚ ಸುದೀಪ್ ಅವರ ಸಂಭಾವನೆ ಕೂಡ ಏರಿಕೆ ಆಗಿದೆ. ಎಷ್ಟು ಎಂಬುದು ಗೌಪ್ಯವಾಗಿದೆ.

ಎಲ್ಲ ಭಾಷೆಯಲ್ಲೂ ಬಿಗ್ ಬಾಸ್ ಕಾರ್ಯಕ್ರಮ ಫೇಮಸ್ ಆಗಿದೆ. ತೆಲುಗಿನಲ್ಲಿ ಈವರೆಗೂ ಒಟ್ಟು 8 ಸೀಸನ್​​ಗಳು ಯಶಸ್ವಿಯಾಗಿ ಮುಗಿದಿವೆ. 9ನೇ ಸೀಸನ್ ಆರಂಭಕ್ಕೆ ದಿನಗಣನೆ ಶುರುವಾಗಿದೆ. ಸೆಪ್ಟೆಂಬರ್ ಮೊದಲ ವಾರದಲ್ಲಿ ‘ಬಿಗ್ ಬಾಸ್ ತೆಲುಗು 9’ ಆರಂಭ ಆಗಲಿದೆ. ಯಾವೆಲ್ಲ ಸ್ಪರ್ಧಿಗಳು ಬರಬಹುದು ಎಂಬ ಬಗ್ಗೆ ವೀಕ್ಷಕರಿಗೆ ಸಿಕ್ಕಾಪಟ್ಟೆ ಕುತೂಹಲ ಇದೆ.

ಇದನ್ನೂ ಓದಿ: ಈ ಬಾರಿ ಬಿಗ್ ಬಾಸ್ ಮನೆಗೆ ಬರ್ತಾರಾ ಅಂಡರ್​​ಟೇಕರ್, ಮೈಕ್ ಟೈಸನ್?

ಹಿಂದಿಯಲ್ಲಿ ನಟ ಸಲ್ಮಾನ್ ಖಾನ್ ಅವರು ಬಿಗ್ ಬಾಸ್ ಕಾರ್ಯಕ್ರಮ ನಡೆಸಿ ಕೊಡುತ್ತಿದ್ದಾರೆ. ಈ ಬಾರಿ ಹೊಸ ಥೀಮ್​​​ನಲ್ಲಿ ಬಿಗ್ ಬಾಸ್ ರಿಯಾಲಿಟಿ ಶೋ ನಡೆಯಲಿದೆ. ಮೂರು ತಿಂಗಳಿಗೂ ಹೆಚ್ಚಿ ಕಾಲ ಈ ಶೋ ನಡೆಯಲಿದೆ ಎಂದು ಹೇಳಲಾಗುತ್ತಿದೆ. ಕನ್ನಡದಲ್ಲಿ ಕೂಡ ಸಾಕಷ್ಟು ಹೊಸತನ ಪರಿಚಯಿಸಲಾಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಇಂದು ವಟಸಾವಿತ್ರಿ ವೃತವನ್ನು ಆಚರಿಸುವ ಪವಿತ್ರ ದಿನ!
ಇಂದು ವಟಸಾವಿತ್ರಿ ವೃತವನ್ನು ಆಚರಿಸುವ ಪವಿತ್ರ ದಿನ!
ಮಗನಿಗೆ ಬಣ್ಣ ಹಚ್ಚಿಸಿದ ರಿಷಬ್ ಶೆಟ್ಟಿ: ಯಕ್ಷಗಾನ ವೇದಿಕೆಯಲ್ಲಿ ರನ್ವಿತ್
ಮಗನಿಗೆ ಬಣ್ಣ ಹಚ್ಚಿಸಿದ ರಿಷಬ್ ಶೆಟ್ಟಿ: ಯಕ್ಷಗಾನ ವೇದಿಕೆಯಲ್ಲಿ ರನ್ವಿತ್
ಬಿಡದಿ ಟೌನ್​ಶಿಪ್: ರಾಜ್ಯವ್ಯಾಪಿ ಜನಾಂದೋಲನಕ್ಕೆ ಕುಮಾರಸ್ವಾಮಿ ತಂತ್ರ
ಬಿಡದಿ ಟೌನ್​ಶಿಪ್: ರಾಜ್ಯವ್ಯಾಪಿ ಜನಾಂದೋಲನಕ್ಕೆ ಕುಮಾರಸ್ವಾಮಿ ತಂತ್ರ
ರಾಮಮಂದಿರ ದೇಣಿಗೆ ಲೂಟಿ; ಬೀದರ್​ ಶಾಸಕನ ವಿರುದ್ಧವೂ ಎಸ್​ಐಟಿಗೆ ದೂರು
ರಾಮಮಂದಿರ ದೇಣಿಗೆ ಲೂಟಿ; ಬೀದರ್​ ಶಾಸಕನ ವಿರುದ್ಧವೂ ಎಸ್​ಐಟಿಗೆ ದೂರು
ಪುತ್ರನ ಕಳೆದುಕೊಂಡ ಭಾಮಾ ಹರೀಶ್ ಅವರ ತಬ್ಬಿ ಸಂತೈಸಿದ ಧ್ರುವ ಸರ್ಜಾ
ಪುತ್ರನ ಕಳೆದುಕೊಂಡ ಭಾಮಾ ಹರೀಶ್ ಅವರ ತಬ್ಬಿ ಸಂತೈಸಿದ ಧ್ರುವ ಸರ್ಜಾ
ಶಾಲೆ ಒಳಗಡೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಯೂನಿಫಾರ್ಮ್ ಬೆಂಕಿಗಾಹುತಿ
ಶಾಲೆ ಒಳಗಡೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಯೂನಿಫಾರ್ಮ್ ಬೆಂಕಿಗಾಹುತಿ
ಪ್ರದೀಪ್ ಈಶ್ವರ್ ನಡವಳಿಕೆಗೆ ಕೈಮುಗಿದ ಕುಮಾರಸ್ವಾಮಿ
ಪ್ರದೀಪ್ ಈಶ್ವರ್ ನಡವಳಿಕೆಗೆ ಕೈಮುಗಿದ ಕುಮಾರಸ್ವಾಮಿ
ಸೆಶೆಲ್ಸ್‌ನ ಸ್ಟೇಟ್ ಹೌಸ್‌ನಲ್ಲಿ ಪ್ರಧಾನಿ ಮೋದಿಗೆ ಸರ್ಕಾರಿ ಗೌರವದ ಸ್ವಾಗತ
ಸೆಶೆಲ್ಸ್‌ನ ಸ್ಟೇಟ್ ಹೌಸ್‌ನಲ್ಲಿ ಪ್ರಧಾನಿ ಮೋದಿಗೆ ಸರ್ಕಾರಿ ಗೌರವದ ಸ್ವಾಗತ
ಮಗನ ಮೃತದೇಹದ ಎದುರು ಬಿಕ್ಕಿ ಬಿಕ್ಕಿ ಅತ್ತ ನಿರ್ಮಾಪಕ ಭಾಮಾ ಹರೀಶ್
ಮಗನ ಮೃತದೇಹದ ಎದುರು ಬಿಕ್ಕಿ ಬಿಕ್ಕಿ ಅತ್ತ ನಿರ್ಮಾಪಕ ಭಾಮಾ ಹರೀಶ್
ಉತ್ತರ ಕನ್ನಡದ ಹಲವೆಡೆ ವರುಣಾರ್ಭಟ! ಹೊಳೆಯಂತಾದ ರಸ್ತೆಗಳು
ಉತ್ತರ ಕನ್ನಡದ ಹಲವೆಡೆ ವರುಣಾರ್ಭಟ! ಹೊಳೆಯಂತಾದ ರಸ್ತೆಗಳು