AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂದಿನ ವರ್ಷದಿಂದ ಹೊಸ ಚಾನೆಲ್​ನಲ್ಲಿ ‘ಬಿಗ್ ಬಾಸ್​’; ಬೇರೆ ಆ್ಯಂಕರ್​ಗೆ ಮಣೆ?

ಬಿಗ್ ಬಾಸ್​ ಮನೆ ಒಳಗೆ ಯಾವ ಸ್ಪರ್ಧಿಗಳು ಬರುತ್ತಾರೆ ಅನ್ನೋದು ತುಂಬಾನೇ ಮುಖ್ಯವಾಗುತ್ತದೆ. ಅದರ ಆಧಾರದ ಮೇಲೆ ಟಿಆರ್​ಪಿ ನಿರ್ಧಾರ ಆಗುತ್ತದೆ. ಇನ್ನು ವಾರಾಂತ್ಯದ ಎಪಿಸೋಡ್​ಗೆ ಹೆಚ್ಚಿನ ಟಿಆರ್​ಪಿ ಸಿಗುತ್ತದೆ. ಆದರೆ, ತೆಲುಗಿನಲ್ಲಿ ಈ ಶೋಗೆ ಟಿಆರ್​ಪಿ ಸಿಗುತ್ತಿಲ್ಲ.

ಮುಂದಿನ ವರ್ಷದಿಂದ ಹೊಸ ಚಾನೆಲ್​ನಲ್ಲಿ ‘ಬಿಗ್ ಬಾಸ್​’; ಬೇರೆ ಆ್ಯಂಕರ್​ಗೆ ಮಣೆ?
bigg boss
TV9 Web
| Edited By: |

Updated on: Dec 05, 2022 | 6:30 AM

Share

ಹಲವು ಭಾಷೆಗಳಲ್ಲಿ ಬಿಗ್ ಬಾಸ್ ಫೇಮಸ್ ಆಗಿದೆ. ಈ ವರ್ಷ ಕನ್ನಡ, ಹಿಂದಿ, ತೆಲುಗು ಭಾಷೆಗಳಲ್ಲಿ ಬಿಗ್ ಬಾಸ್ ಏಕಕಾಲಕ್ಕೆ ಆರಂಭ ಆಗಿದೆ. ಕನ್ನಡದಲ್ಲಿ ಸುದೀಪ್, (Sudeep) ಹಿಂದಿಯಲ್ಲಿ ಸಲ್ಮಾನ್ ಖಾನ್, ತೆಲುಗಿನಲ್ಲಿ ಅಕ್ಕಿನೇನಿ ನಾಗಾರ್ಜುನ (Akkineni Nagarjun) ಹಾಗೂ ತಮಿಳಿನಲ್ಲಿ ಕಮಲ್ ಹಾಸನ್ ಅವರು ಈ ಶೋನ ನಡೆಸಿಕೊಡುತ್ತಿದ್ದಾರೆ. ಈಗ ತೆಲುಗು ಕಿರುತೆರೆ​ ಅಂಗಳದಿಂದ ಹೊಸದೊಂದು ಅಪ್​ಡೇಟ್ ಸಿಕ್ಕಿದೆ. ತೆಲುಗು ಬಿಗ್ ಬಾಸ್​ಗೆ ಮುಂದಿನ ವರ್ಷದಿಂದ ಹೊಸ ಆ್ಯಂಕರ್ ಬರಲಿದ್ದಾರಂತೆ! ಸದ್ಯ ಈ ವಿಚಾರ ಕೇಳಿ ಒಂದು ವರ್ಗದ ಜನರು ಬೇಸರ ಮಾಡಿಕೊಂಡಿದ್ದಾರೆ.

ಅಕ್ಕಿನೇನಿ ನಾಗಾರ್ಜುನ ಅವರು ತೆಲುಗು ಬಿಗ್​ ಬಾಸ್​ನ ಹಲವು ಸೀಸನ್​ಗಳನ್ನು ನಿರೂಪಣೆ ಮಾಡಿದ್ದಾರೆ. ಅವರ ಅನುಪಸ್ಥಿತಿಯಲ್ಲಿ ಬೇರೆ ಆ್ಯಂಕರ್​ಗಳು ಬಂದಿದ್ದೂ ಇದೆ. ಆದರೆ, ಅಕ್ಕಿನೇನಿ ನಾಗಾರ್ಜುನ ಅವರಿಗೆ ಹೆಚ್ಚು ಚಾರ್ಮ್ ಇರುವ ಕಾರಣ ಪ್ರತಿ ಬಾರಿ ಅವರಿಗೆ ಮಣೆ ಹಾಕುವ ಕೆಲಸ ಆಗುತ್ತಿದೆ. ಆದರೆ, ತೆಲುಗಿ​ನಲ್ಲಿ ಬಿಗ್ ಬಾಸ್​ಗೆ ಟಿಆರ್​ಪಿ ಕುಸಿಯುತ್ತಿದೆ.

ಬಿಗ್ ಬಾಸ್​ ಮನೆ ಒಳಗೆ ಯಾವ ಸ್ಪರ್ಧಿಗಳು ಬರುತ್ತಾರೆ ಅನ್ನೋದು ತುಂಬಾನೇ ಮುಖ್ಯವಾಗುತ್ತದೆ. ಅದರ ಆಧಾರದ ಮೇಲೆ ಟಿಆರ್​ಪಿ ನಿರ್ಧಾರ ಆಗುತ್ತದೆ. ಇನ್ನು ವಾರಾಂತ್ಯದ ಎಪಿಸೋಡ್​ಗೆ ಹೆಚ್ಚಿನ ಟಿಆರ್​ಪಿ ಸಿಗುತ್ತದೆ. ಆದರೆ, ತೆಲುಗಿನಲ್ಲಿ ಈ ಶೋಗೆ ಟಿಆರ್​ಪಿ ಸಿಗುತ್ತಿಲ್ಲ. ಇದು ಸ್ಟಾರ್ ಮಾ ವಾಹಿನಯ ಚಿಂತೆಗೆ ಕಾರಣ ಆಗಿದೆ.

ಮೂಲಗಳ ಪ್ರಕಾರ ಮುಂದಿನ ವರ್ಷದಿಂದ ಬೇರೆ ಚಾನೆಲ್​ನಲ್ಲಿ ಬಿಗ್ ಬಾಸ್ ಪ್ರಸಾರ ಕಾಣಲಿದೆ. ಇದರ ಜತೆಗೆ ನಿರೂಪಕರನ್ನು ಬದಲಿಸಲು ಆಲೋಚನೆ ನಡೆದಿದೆ. ಅಕ್ಕಿನೇನಿ ನಾಗಾರ್ಜುನ ಬದಲಿಗೆ ಯಾರನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ ಎಂಬುದನ್ನು ಕಾದು ನೋಡಬೇಕಿದೆ. ಸಮಂತಾ ರುತ್ ಪ್ರಭು ಸೇರಿ ಅನೇಕರಿಗೆ ಈ ಶೋನ ನಡೆಸಿಕೊಟ್ಟ ಅನುಭವ ಇದೆ. ಅವರಲ್ಲಿ ಯಾರಿಗೆ ಮಣೆ ಹಾಕಲಾಗುತ್ತದೆ ಎಂಬುದನ್ನು ಕಾದು ನೋಡಬೇಕಿದೆ.

ಇದನ್ನೂ ಓದಿ: ಬಿಗ್ ಬಾಸ್ ಮನೆಗೆ ಎಂಟ್ರಿ ಕೊಟ್ಟ ಸ್ಪರ್ಧಿಗಳ​ ಕುಟುಂಬದವರು; ಹೇಗಿತ್ತು ಸ್ಪರ್ಧಿಗಳ ರಿಯಾಕ್ಷನ್? 

ಇನ್ನು ಸ್ಪರ್ಧಿಗಳ ಆಯ್ಕೆಯಲ್ಲೂ ಹೆಚ್ಚಿನ ಎಚ್ಚರಿಕೆ ವಹಿಸಲು ನಿರ್ಧರಿಸಲಾಗಿದೆ. ಖ್ಯಾತ ಸೆಲೆಬ್ರಿಟಿಗಳನ್ನು ಮನೆ ಒಳಗೆ ಕಳುಹಿಸುವ ಆಲೋಚನೆ ಸದ್ಯಕ್ಕಿದೆ. ಹಾಗೆ ಮಾಡಿದ ಬಳಿಕವಾದರೂ ಶೋನ ಟಿಆರ್​ಪಿ ಹೆಚ್ಚಲಿದೆಯೇ ಎಂಬುದನ್ನು ಕಾದು ನೋಡಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ
ಎಸ್. ಜಾನಕಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ಅಭಿಮಾನಿಗಳು
ಎಸ್. ಜಾನಕಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ಅಭಿಮಾನಿಗಳು
ಜುಲೈ 13 ರಿಂದ 19 ರವರೆಗಿನ ದ್ವಾದಶ ರಾಶಿಗಳ ವಾರ ಭವಿಷ್ಯ ಇಲ್ಲಿದೆ
ಜುಲೈ 13 ರಿಂದ 19 ರವರೆಗಿನ ದ್ವಾದಶ ರಾಶಿಗಳ ವಾರ ಭವಿಷ್ಯ ಇಲ್ಲಿದೆ
ಎಸ್​​. ಜಾನಕಿ ಅಂತಿಮ ದರ್ಶನದ ನೇರಪ್ರಸಾರ
ಎಸ್​​. ಜಾನಕಿ ಅಂತಿಮ ದರ್ಶನದ ನೇರಪ್ರಸಾರ