AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂದಿನ ವರ್ಷದಿಂದ ಹೊಸ ಚಾನೆಲ್​ನಲ್ಲಿ ‘ಬಿಗ್ ಬಾಸ್​’; ಬೇರೆ ಆ್ಯಂಕರ್​ಗೆ ಮಣೆ?

ಬಿಗ್ ಬಾಸ್​ ಮನೆ ಒಳಗೆ ಯಾವ ಸ್ಪರ್ಧಿಗಳು ಬರುತ್ತಾರೆ ಅನ್ನೋದು ತುಂಬಾನೇ ಮುಖ್ಯವಾಗುತ್ತದೆ. ಅದರ ಆಧಾರದ ಮೇಲೆ ಟಿಆರ್​ಪಿ ನಿರ್ಧಾರ ಆಗುತ್ತದೆ. ಇನ್ನು ವಾರಾಂತ್ಯದ ಎಪಿಸೋಡ್​ಗೆ ಹೆಚ್ಚಿನ ಟಿಆರ್​ಪಿ ಸಿಗುತ್ತದೆ. ಆದರೆ, ತೆಲುಗಿನಲ್ಲಿ ಈ ಶೋಗೆ ಟಿಆರ್​ಪಿ ಸಿಗುತ್ತಿಲ್ಲ.

ಮುಂದಿನ ವರ್ಷದಿಂದ ಹೊಸ ಚಾನೆಲ್​ನಲ್ಲಿ ‘ಬಿಗ್ ಬಾಸ್​’; ಬೇರೆ ಆ್ಯಂಕರ್​ಗೆ ಮಣೆ?
bigg boss
TV9 Web
| Edited By: |

Updated on: Dec 05, 2022 | 6:30 AM

Share

ಹಲವು ಭಾಷೆಗಳಲ್ಲಿ ಬಿಗ್ ಬಾಸ್ ಫೇಮಸ್ ಆಗಿದೆ. ಈ ವರ್ಷ ಕನ್ನಡ, ಹಿಂದಿ, ತೆಲುಗು ಭಾಷೆಗಳಲ್ಲಿ ಬಿಗ್ ಬಾಸ್ ಏಕಕಾಲಕ್ಕೆ ಆರಂಭ ಆಗಿದೆ. ಕನ್ನಡದಲ್ಲಿ ಸುದೀಪ್, (Sudeep) ಹಿಂದಿಯಲ್ಲಿ ಸಲ್ಮಾನ್ ಖಾನ್, ತೆಲುಗಿನಲ್ಲಿ ಅಕ್ಕಿನೇನಿ ನಾಗಾರ್ಜುನ (Akkineni Nagarjun) ಹಾಗೂ ತಮಿಳಿನಲ್ಲಿ ಕಮಲ್ ಹಾಸನ್ ಅವರು ಈ ಶೋನ ನಡೆಸಿಕೊಡುತ್ತಿದ್ದಾರೆ. ಈಗ ತೆಲುಗು ಕಿರುತೆರೆ​ ಅಂಗಳದಿಂದ ಹೊಸದೊಂದು ಅಪ್​ಡೇಟ್ ಸಿಕ್ಕಿದೆ. ತೆಲುಗು ಬಿಗ್ ಬಾಸ್​ಗೆ ಮುಂದಿನ ವರ್ಷದಿಂದ ಹೊಸ ಆ್ಯಂಕರ್ ಬರಲಿದ್ದಾರಂತೆ! ಸದ್ಯ ಈ ವಿಚಾರ ಕೇಳಿ ಒಂದು ವರ್ಗದ ಜನರು ಬೇಸರ ಮಾಡಿಕೊಂಡಿದ್ದಾರೆ.

ಅಕ್ಕಿನೇನಿ ನಾಗಾರ್ಜುನ ಅವರು ತೆಲುಗು ಬಿಗ್​ ಬಾಸ್​ನ ಹಲವು ಸೀಸನ್​ಗಳನ್ನು ನಿರೂಪಣೆ ಮಾಡಿದ್ದಾರೆ. ಅವರ ಅನುಪಸ್ಥಿತಿಯಲ್ಲಿ ಬೇರೆ ಆ್ಯಂಕರ್​ಗಳು ಬಂದಿದ್ದೂ ಇದೆ. ಆದರೆ, ಅಕ್ಕಿನೇನಿ ನಾಗಾರ್ಜುನ ಅವರಿಗೆ ಹೆಚ್ಚು ಚಾರ್ಮ್ ಇರುವ ಕಾರಣ ಪ್ರತಿ ಬಾರಿ ಅವರಿಗೆ ಮಣೆ ಹಾಕುವ ಕೆಲಸ ಆಗುತ್ತಿದೆ. ಆದರೆ, ತೆಲುಗಿ​ನಲ್ಲಿ ಬಿಗ್ ಬಾಸ್​ಗೆ ಟಿಆರ್​ಪಿ ಕುಸಿಯುತ್ತಿದೆ.

ಬಿಗ್ ಬಾಸ್​ ಮನೆ ಒಳಗೆ ಯಾವ ಸ್ಪರ್ಧಿಗಳು ಬರುತ್ತಾರೆ ಅನ್ನೋದು ತುಂಬಾನೇ ಮುಖ್ಯವಾಗುತ್ತದೆ. ಅದರ ಆಧಾರದ ಮೇಲೆ ಟಿಆರ್​ಪಿ ನಿರ್ಧಾರ ಆಗುತ್ತದೆ. ಇನ್ನು ವಾರಾಂತ್ಯದ ಎಪಿಸೋಡ್​ಗೆ ಹೆಚ್ಚಿನ ಟಿಆರ್​ಪಿ ಸಿಗುತ್ತದೆ. ಆದರೆ, ತೆಲುಗಿನಲ್ಲಿ ಈ ಶೋಗೆ ಟಿಆರ್​ಪಿ ಸಿಗುತ್ತಿಲ್ಲ. ಇದು ಸ್ಟಾರ್ ಮಾ ವಾಹಿನಯ ಚಿಂತೆಗೆ ಕಾರಣ ಆಗಿದೆ.

ಮೂಲಗಳ ಪ್ರಕಾರ ಮುಂದಿನ ವರ್ಷದಿಂದ ಬೇರೆ ಚಾನೆಲ್​ನಲ್ಲಿ ಬಿಗ್ ಬಾಸ್ ಪ್ರಸಾರ ಕಾಣಲಿದೆ. ಇದರ ಜತೆಗೆ ನಿರೂಪಕರನ್ನು ಬದಲಿಸಲು ಆಲೋಚನೆ ನಡೆದಿದೆ. ಅಕ್ಕಿನೇನಿ ನಾಗಾರ್ಜುನ ಬದಲಿಗೆ ಯಾರನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ ಎಂಬುದನ್ನು ಕಾದು ನೋಡಬೇಕಿದೆ. ಸಮಂತಾ ರುತ್ ಪ್ರಭು ಸೇರಿ ಅನೇಕರಿಗೆ ಈ ಶೋನ ನಡೆಸಿಕೊಟ್ಟ ಅನುಭವ ಇದೆ. ಅವರಲ್ಲಿ ಯಾರಿಗೆ ಮಣೆ ಹಾಕಲಾಗುತ್ತದೆ ಎಂಬುದನ್ನು ಕಾದು ನೋಡಬೇಕಿದೆ.

ಇದನ್ನೂ ಓದಿ: ಬಿಗ್ ಬಾಸ್ ಮನೆಗೆ ಎಂಟ್ರಿ ಕೊಟ್ಟ ಸ್ಪರ್ಧಿಗಳ​ ಕುಟುಂಬದವರು; ಹೇಗಿತ್ತು ಸ್ಪರ್ಧಿಗಳ ರಿಯಾಕ್ಷನ್? 

ಇನ್ನು ಸ್ಪರ್ಧಿಗಳ ಆಯ್ಕೆಯಲ್ಲೂ ಹೆಚ್ಚಿನ ಎಚ್ಚರಿಕೆ ವಹಿಸಲು ನಿರ್ಧರಿಸಲಾಗಿದೆ. ಖ್ಯಾತ ಸೆಲೆಬ್ರಿಟಿಗಳನ್ನು ಮನೆ ಒಳಗೆ ಕಳುಹಿಸುವ ಆಲೋಚನೆ ಸದ್ಯಕ್ಕಿದೆ. ಹಾಗೆ ಮಾಡಿದ ಬಳಿಕವಾದರೂ ಶೋನ ಟಿಆರ್​ಪಿ ಹೆಚ್ಚಲಿದೆಯೇ ಎಂಬುದನ್ನು ಕಾದು ನೋಡಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ