AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​​ಬಾಸ್​​ಗೆ ಹೋಗಿದ್ದಕ್ಕೆ ನನ್ನ ಚಪ್ಪಲಿಯಲ್ಲಿ ನಾನು ಹೊಡೆದುಕೊಳ್ಳುವೆ: ಮಾಜಿ ಸ್ಪರ್ಧಿ

Bigg Boss reality show: ಬಿಗ್​​ಬಾಸ್ ಹಲವರ ಜೀವನವನ್ನೇ ಬದಲಾಯಿಸಿದೆ. ಬಿಗ್​​ಬಾಸ್​​ನಲ್ಲಿ ಪಾಲ್ಗೊಂಡ ನಟ-ನಟಿಯರ ವೃತ್ತಿ ಜೀವನಕ್ಕೆ ಏಣಿಯೂ ಆದ ಉದಾಹರಣೆಗಳು ಸಾಕಷ್ಟಿವೆ. ಬಿಗ್​​ಬಾಸ್​​ಗೆ ಹೋಗಿದ್ದಕ್ಕೆ ದೊರಕಿದ ಜನಪ್ರಿಯತೆಯನ್ನೇ ಬಂಡವಾಳ ಮಾಡಿಕೊಂಡು ಬದುಕುತ್ತಿರುವವರು ಸಾಕಷ್ಟು ಮಂದಿ ಇದ್ದಾರೆ. ಆದರೆ ಇಲ್ಲೊಬ್ಬ ಮಾಜಿ ಸ್ಪರ್ಧಿ, ಬಿಗ್​​ಬಾಸ್​​ ಶೋಗೆ ಹೋಗಿದ್ದಕ್ಕೆ ನನ್ನ ಚಪ್ಪಲಿಯಲ್ಲಿ ನಾನು ಹೊಡೆದುಕೊಳ್ಳಬೇಕು ಅನಿಸಿದೆ’ ಎಂದಿದ್ದಾರೆ.

ಬಿಗ್​​ಬಾಸ್​​ಗೆ ಹೋಗಿದ್ದಕ್ಕೆ ನನ್ನ ಚಪ್ಪಲಿಯಲ್ಲಿ ನಾನು ಹೊಡೆದುಕೊಳ್ಳುವೆ: ಮಾಜಿ ಸ್ಪರ್ಧಿ
Vishnu Priya
ಮಂಜುನಾಥ ಸಿ.
|

Updated on: Nov 04, 2025 | 1:15 PM

Share

ಬಿಗ್​​ಬಾಸ್ (Bigg Boss) ಶೋ ಹಲವರಿಗೆ ಜನಪ್ರಿಯತೆ ನೀಡಿದೆ, ಹಲವರ ಜೀವನವನ್ನೇ ಬದಲಾಯಿಸಿ ಬಿಟ್ಟಿದೆ. ಬಿಗ್​​ಬಾಸ್​​ನಲ್ಲಿ ಪಾಲ್ಗೊಂಡ ನಟ-ನಟಿಯರ ವೃತ್ತಿ ಜೀವನಕ್ಕೆ ಏಣಿಯೂ ಆದ ಉದಾಹರಣೆಗಳು ಸಾಕಷ್ಟಿವೆ. ಬಿಗ್​​ಬಾಸ್​​ಗೆ ಹೋಗಿದ್ದಕ್ಕೆ ದೊರಕಿದ ಜನಪ್ರಿಯತೆಯನ್ನೇ ಬಂಡವಾಳ ಮಾಡಿಕೊಂಡು ಬದುಕುತ್ತಿರುವವರು ಸಾಕಷ್ಟು ಮಂದಿ ಮಾಜಿ ಸ್ಪರ್ಧಿಗಳು ಇದ್ದಾರೆ. ಆದರೆ ಇಲ್ಲೊಬ್ಬ ಮಾಜಿ ಸ್ಪರ್ಧಿ, ಬಿಗ್​​ಬಾಸ್​​ ಶೋಗೆ ಹೋಗಿದ್ದಕ್ಕೆ ನನ್ನ ಚಪ್ಪಲಿಯಲ್ಲಿ ನಾನು ಹೊಡೆದುಕೊಳ್ಳಬೇಕು ಅನಿಸಿದೆ’ ಎಂದಿದ್ದಾರೆ. ಆ ಮೂಲಕ ಬಿಗ್​​ಬಾಸ್ ಶೋ ಅನ್ನು ತೀವ್ರವಾಗಿ ನಿಂದಿಸಿದ್ದಾರೆ.

ಅಂದಹಾಗೆ, ಹೀಗೆ ಬಿಗ್​​ಬಾಸ್ ಅನ್ನು ನಿಂದಿಸಿರುವ ಸ್ಪರ್ಧಿ ಕನ್ನಡದವರಲ್ಲ ಬದಲಿಗೆ ತೆಲುಗು ಬಿಗ್​​ಬಾಸ್​​ನಲ್ಲಿ ಭಾಗವಹಿಸಿದ್ದ ಮಾಜಿ ಸ್ಪರ್ಧಿ, ನಿರೂಪಕಿ ವಿಷ್ಣುಪ್ರಿಯ. ಕಳೆದ ತೆಲುಗು ಬಿಗ್​​ಬಾಸ್ ಸೀಸನ್​​ನಲ್ಲಿ ವಿಷ್ಣುಪ್ರಿಯ ಭಾಗವಹಿಸಿದ್ದರು. ಬಿಗ್​​ಬಾಸ್ ತೆಲುಗು 8ರ ಸ್ಪರ್ಧಿ ಆಗಿದ್ದರು ವಿಷ್ಣುಪ್ರಿಯ. ಶೋನಲ್ಲಿ ಚೆನ್ನಾಗಿಯೇ ಆಡಿದ್ದ ವಿಷ್ಣುಪ್ರಿಯ 98 ದಿನಗಳ ಕಾಲ ಮನೆಯಲ್ಲಿದ್ದರು, ಫಿನಾಲೆ ವಾರದ ಹಿಂದಿನ ವಾರ ಎಲಿಮಿನೇಟ್ ಆಗಿ ಹೊರಬಂದರು.

ಇದೀಗ ಸಂದರ್ಶನವೊಂದರಲ್ಲಿ ಮಾತನಾಡಿರುವ ವಿಷ್ಣುಪ್ರಿಯ, ‘ನಾನು ಯಾಕಾದರೂ ಬಿಗ್​​ಬಾಸ್​​ಗೆ ಹೋದೆನೋ ಎಂದು ಬಹಳ ಬಾರಿ ಅಂದುಕೊಂಡಿದ್ದೇನೆ. ಆ ಶೋಗೆ ಹೋಗಿದ್ದಕ್ಕೆ ನನ್ನ ಚಪ್ಪಲಿಯಲ್ಲಿ ನಾನು ಹೊಡೆದುಕೊಳ್ಳಬೇಕು. ನಾನು ಆ ಶೋನಲ್ಲಿ ಬಹಳ ಹಿಂಸೆ ಅನುಭವಿಸಿದೆ. ನಿದ್ದೆ ಇಲ್ಲ, ಊಟ ಸರಿಯಿಲ್ಲ, ಸಮಯಕ್ಕೆ ಸರಿಯಾಗಿ ಕಾಫಿ, ಟೀಗಳು ಸಹ ಸಿಗುತ್ತಿರಲಿಲ್ಲ. ಒಟ್ಟಾರೆ ಬಹಳ ಕಷ್ಟಪಟ್ಟಿದ್ದೇನೆ’ ಎಂದಿದ್ದಾರೆ ವಿಷ್ಣುಪ್ರಿಯ.

‘ನಾನು ಹೊಸ ಮನೆ ಖರೀದಿ ಮಾಡುವ ಆಸೆಯಿಂದ ಶೋಗೆ ಹೋದೆ. ಶೋನಲ್ಲಿ ಬರುವ ಸಂಭಾವನೆಯಿಂದ ಮನೆ ಖರೀದಿ ಮಾಡುವ ಯೋಚನೆ ಹಾಕಿಕೊಂಡಿದ್ದೆ. ಆದರೆ ಅದ್ಯಾವುದೂ ಆಗಲಿಲ್ಲ. ನಾನು ಈಗಲೂ ಹಳೆಯ ಮನೆಯಲ್ಲೇ ಇದ್ದೀನಿ. ಶೋನಿಂದ ಹೊರಬಂದ ಮೇಲೆ ಶೋ ಅನ್ನು ಚೆನ್ನಾಗಿ ಬೈಯ್ಯೋಣ ಅಂದುಕೊಂಡಿದ್ದೆ. ಆದರೆ ಶೋನಿಂದಾಗಿ ಜನರ ಪ್ರೀತಿ ನನಗೆ ಸಿಕ್ಕಿತು ಹಾಗಾಗಿ ಹೋಗ್ಲಿ ಬಿಡು ಎಂದು ಸುಮ್ಮನಾದೆ’ ಎಂದಿದ್ದಾರೆ ವಿಷ್ಣುಪ್ರಿಯ.

ಹೊರಗೆ ನಾನು ಆರಾಮ ಜೀವನಕ್ಕೆ ಹೊಂದಿಕೊಂಡಿದ್ದೆ. ಮೂರು ದಿನ ಕೆಲಸ ಮಾಡಿದರೆ ನಾಲ್ಕನೇ ದಿನ ರೆಸ್ಟ್ ತೆಗೆದುಕೊಳ್ಳುತ್ತಿದ್ದೆ. ಬಾಡಿ ಮಸಾಜ್ ಮಾಡಿಸಿಕೊಳ್ಳುತ್ತಿದ್ದೆ, ಹೈ-ಫೈ ಜೀವನಕ್ಕೆ ಹೊಂದಿಕೊಂಡಿದ್ದೆ. ಆದರೆ ಬಿಗ್​​ಬಾಸ್ ಶೋನಲ್ಲಿ ನರಕ ಅನುಭವಿಸಿದೆ. ಮಸಾಜ್ ಇಲ್ಲ, ಕಾಫಿ-ಟೀ ಇಲ್ಲ. ಸರಿಯಾಗಿ ನಿದ್ದೆ ಇಲ್ಲ, ಹೊಟ್ಟೆ ತುಂಬ ಊಟ ಸಹ ಇರುತ್ತಿರಲಿಲ್ಲ’ ಎಂದಿದ್ದಾರೆ ವಿಷ್ಣುಪ್ರಿಯ. ಆಂಖರ್ ಆಗಿ ಜನಪ್ರಿಯತೆ ಪಡೆದಿದ್ದ ವಿಷ್ಣುಪ್ರಿಯ. ಬಳಿಕ ಕೆಲ ತೆಲುಗು ಸಿನಿಮಾಗಳಲ್ಲಿಯೂ ನಟಿಸಿದರು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ