AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bigg Boss: ‘ಬಿಗ್​ ಬಾಸ್​ ನಿರೂಪಕರನ್ನು ಬದಲಾಯಿಸಿ ಪ್ಲೀಸ್​’: ಹೊಸ ಸೀಸನ್​ ಶುರುವಿಗೂ ಮುನ್ನವೇ ಜನರಿಂದ ಭಾರಿ ಒತ್ತಾಯ

ಬಿಗ್​ ಬಾಸ್​ನಲ್ಲಿ ನಿರೂಪಕರು ಯಾರು ಎಂಬುದರ ಮೇಲೆ ಇಡೀ ಶೋನ ಮಜಾ ನಿರ್ಧಾರ ಆಗಿರುತ್ತದೆ. ಹಾಗಾಗಿ ಒಳ್ಳೆಯ ನಿರೂಪಕರಿಗಾಗಿ ವೀಕ್ಷಕರ ವಲಯದಿಂದ ಬೇಡಿಕೆ ಕೇಳಿಬರುತ್ತಿದೆ.

Bigg Boss: ‘ಬಿಗ್​ ಬಾಸ್​ ನಿರೂಪಕರನ್ನು ಬದಲಾಯಿಸಿ ಪ್ಲೀಸ್​’: ಹೊಸ ಸೀಸನ್​ ಶುರುವಿಗೂ ಮುನ್ನವೇ ಜನರಿಂದ ಭಾರಿ ಒತ್ತಾಯ
ಬಿಗ್​ ಬಾಸ್​
TV9 Web
| Edited By: |

Updated on: Aug 15, 2021 | 8:53 AM

Share

ಕನ್ನಡ ಬಿಗ್​ ಬಾಸ್​ ಸೀಸನ್​ 8ಕ್ಕೆ ಇತ್ತೀಚೆಗಷ್ಟೇ ತೆರೆಬಿದ್ದಿದೆ. ಮಂಜು ಪಾವಗಡ ಅವರು ಬಿಗ್​ ಬಾಸ್​ ಟ್ರೋಫಿ ಎತ್ತಿ ಹಿಡಿದಿರುವುದು ಅವರ ಅಭಿಮಾನಿಗಳಿಗೆ ಸಖತ್​ ಖುಷಿ ನೀಡಿದೆ. ಮುಂದಿನ ಸೀಸನ್​ ಆದಷ್ಟು ಬೇಗ ಶುರುವಾಗಲಿ ಎಂದು ವೀಕ್ಷಕರು ಕಾಯುತ್ತಿದ್ದಾರೆ. ಹೊಸ ಸೀಸನ್​ನಲ್ಲೂ ಕಿಚ್ಚ ಸುದೀಪ್ (Kichcha Sudeep)​ ಅವರೇ ನಿರೂಪಣೆ ಮಾಡಲಿದ್ದಾರೆ. ಆದರೆ ಬೇರೆ ಭಾಷೆಯ ಬಿಗ್​ ಬಾಸ್​ ಕಾರ್ಯಕ್ರಮದಲ್ಲಿ ನಿರೂಪಕರ ಆಯ್ಕೆ ಬಗ್ಗೆ ವೀಕ್ಷಕರಿಗೆ ಕಿರಿಕಿರಿ ಎನಿಸಿದೆ. ತೆಲುಗು ಬಿಗ್ ಬಾಸ್​ಗೆ ಜ್ಯೂ. ಎನ್​ಟಿಆರ್​, ನಾನಿ ಮತ್ತು ಅಕ್ಕಿನೇನಿ ನಾಗಾರ್ಜುನ (Akkineni Nagarjuna) ಅವರು ಹೋಸ್ಟ್​ ಆಗಿ ಕೆಲಸ ಮಾಡಿದ್ದರು. ಹೊಸ ಸೀಸನ್​ನಲ್ಲಿ ದಯವಿಟ್ಟು ನಿರೂಪಕರನ್ನು ಬದಲಾಯಿಸಿ ಎಂಬ ಕೂಗು ವೀಕ್ಷಕರ ವಯಲದಿಂದ ಕೇಳಿಬರುತ್ತಿದೆ.

ಈವರೆಗೂ ತೆಲುಗು ಬಿಗ್​ ಬಾಸ್​ ಕಾರ್ಯಕ್ರಮವು 4 ಸೀಸನ್​ಗಳನ್ನು ಪೂರ್ಣಗೊಳಿಸಿದೆ. 5ನೇ ಸೀಸನ್​ಗೆ ಸಿದ್ಧತೆಗಳು ನಡೆದಿವೆ. ಮೂರು ಮತ್ತು ನಾಲ್ಕನೇ ಸೀಸನ್​ಗೆ ನಿರೂಪಕರಾಗಿದ್ದ ನಾಗಾರ್ಜುನ ಅವರೇ 5ನೇ ಸೀಸನ್​ನಲ್ಲೂ ಮುಂದುವರಿಯಲಿದ್ದಾರೆ ಎಂಬುದು ಖುಚಿತವಾಗಿದೆ. ಆ.14ರಂದು ಹೊಸ ಸೀಸನ್​ನ ಪ್ರೋಮೋ ಬಿಡುಗಡೆ ಮಾಡಲಾಗಿದೆ. ಅದನ್ನು ಕಂಡು ವೀಕ್ಷಕರು ನಿರಾಶರಾಗಿದ್ದಾರೆ.

ಒಂದು ವರ್ಗದ ವೀಕ್ಷಕರಿಗೆ ನಾಗಾರ್ಜುನ ನಿರೂಪಣೆ ಮಾಡುವ ಶೈಲಿ ಇಷ್ಟವಾಗಿಲ್ಲ. ಹಾಗಾಗಿ ಈ ಬಾರಿ ದಯವಿಟ್ಟು ನಾಗಾರ್ಜುನ ಬಿಗ್​ ಬಾಸ್​ ನಿರೂಪಣೆ ಮಾಡುವುದು ಬೇಡ ಎಂದು ಕೆಲವರು ಪಟ್ಟು ಹಿಡಿದಿದ್ದಾರೆ. ಪ್ರೋಮೋದಲ್ಲಿ ನಾಗಾರ್ಜುನ ಅವರನ್ನು ಕಂಡ ಅನೇಕರು ಕಮೆಂಟ್​ಗಳ ಮೂಲಕ ತಮ್ಮ ಅಸಮಾಧಾನವನ್ನು ತೋಡಿಕೊಂಡಿದ್ದಾರೆ. ಅವರ ಬದಲಿಗೆ ದಯವಿಟ್ಟು ನಟ ನಾನಿ ಅವರನ್ನು ಕರೆತನ್ನಿ ಎಂಬ ಒತ್ತಾಯ ಕೇಳಿಬರುತ್ತಿದೆ. ಆದರೆ ಈಗಾಗಲೇ ನಾಗಾರ್ಜುನ ಜೊತೆ ‘ಸ್ಟಾರ್​ ಮಾ’ ಮಾಹಿನಿ ಒಪ್ಪಂದ ಮಾಡಿಕೊಂಡಿರುವುದರಿಂದ 5ನೇ ಸೀಸನ್​ನಲ್ಲೂ ಅವರೇ ನಿರೂಪಕರಾಗಿ ಮುಂದುವರಿಯಲಿದ್ದಾರೆ.

ತಮ್ಮ ಸಿನಿಮಾಗಳ ಶೂಟಿಂಗ್​ ಇದ್ದಾಗ ನಾಗಾರ್ಜುನ ಅವರು ಬಿಗ್​ ಬಾಸ್​ ನಿರೂಪಣೆಗೆ ಚಕ್ಕರ್​ ಹಾಕುತ್ತಾರೆ. ಮೂರು ಮತ್ತು ನಾಲ್ಕನೇ ಸೀಸನ್​ನಲ್ಲಿ ಅದೇ ರೀತಿ ಆಗಿತ್ತು. ಆಗ ಅವರ ಬದಲಿಗೆ ಒಮ್ಮೆ ರಮ್ಯಾ ಕೃಷ್ಣ ಹಾಗೂ ಇನ್ನೊಮ್ಮೆ ಸಮಂತಾ ಅಕ್ಕಿನೇನಿ ಬಂದು ನಿರೂಪಣೆ ಮಾಡಿದ್ದರು. ಈ ಬಾರಿ ಕೂಡ ಅದು ಮರುಕಳಿಸಿದರೆ ಅಚ್ಚರಿ ಏನಿಲ್ಲ.

ಇದನ್ನೂ ಓದಿ:

ಕಿಚ್ಚ ಸುದೀಪ್​ ಹೆಸರು ಹೇಳಿಕೊಂಡು ಹಣ ಲೂಟಿ; ಸಿಕ್ಕಿ ಬಿದ್ದ ಇಬ್ಬರು ಖದೀಮರು

‘ಮಂಜು ತಂದೆ-ತಾಯಿ ಬಳಿ ಮದುವೆ ಬಗ್ಗೆ ಮಾತಾಡಿದ್ದೇನೆ’; ಎಲ್ಲರ ಮುಂದೆ ವಿಷಯ ತಿಳಿಸಿದ ದಿವ್ಯಾ ಸುರೇಶ್​

Follow Us
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ಯುದ್ಧ ಪೀಡಿತ ಪ್ರದೇಶದಲ್ಲಿರೋ ಕನ್ನಡಿಗರ ಬಗ್ಗೆ ಕುಮಾರಸ್ವಾಮಿ ಶಾಕಿಂಗ್ ಹೇಳಿ
ಯುದ್ಧ ಪೀಡಿತ ಪ್ರದೇಶದಲ್ಲಿರೋ ಕನ್ನಡಿಗರ ಬಗ್ಗೆ ಕುಮಾರಸ್ವಾಮಿ ಶಾಕಿಂಗ್ ಹೇಳಿ
ಭಾರತ ಮತ್ತು ಇಲ್ಲಿನ ಜನರ ಪ್ರೀತಿ ಅದ್ಭುತ: ಇರಾನ್ ಮೂಲದ ಪೈಲ್ವಾನ್ ಮಿರ್ಜಾ
ಭಾರತ ಮತ್ತು ಇಲ್ಲಿನ ಜನರ ಪ್ರೀತಿ ಅದ್ಭುತ: ಇರಾನ್ ಮೂಲದ ಪೈಲ್ವಾನ್ ಮಿರ್ಜಾ