AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bigg Boss: ಬಿಗ್ ಬಾಸ್​ ನೋಡೋಕೆ ಸಿದ್ಧರಾಗಿ; ಈ ಬಾರಿ ಹೊಸ ನಿಯಮ, ಹೊಸ ನಿರೂಪಕ

ಬಿಗ್ ಬಾಸ್ ಹೊಸ ಸೀಸನ್ ಆರಂಭಕ್ಕೆ ತಯಾರಿ ನಡೆಸಲಾಗುತ್ತಿದೆ. ಜೂನ್​ನಿಂದ ಸ್ಪರ್ಧಿಗಳ ಆಯ್ಕೆ ಪ್ರಕ್ರಿಯೆ ಆರಂಭಿಸಲಾಗುತ್ತದೆ.

Bigg Boss: ಬಿಗ್ ಬಾಸ್​ ನೋಡೋಕೆ ಸಿದ್ಧರಾಗಿ; ಈ ಬಾರಿ ಹೊಸ ನಿಯಮ, ಹೊಸ ನಿರೂಪಕ
ಬಿಗ್ ಬಾಸ್
ರಾಜೇಶ್ ದುಗ್ಗುಮನೆ
|

Updated on: May 15, 2023 | 7:16 AM

Share

‘ಬಿಗ್ ಬಾಸ್’ ಎಲ್ಲಾ ಭಾಷೆಗಳಲ್ಲೂ ಜನಪ್ರಿಯತೆ ಪಡೆದುಕೊಂಡಿರೋ ರಿಯಾಲಿಟಿ ಶೋ. ಕನ್ನಡ, ಹಿಂದಿ, ತೆಲುಗು ಸೇರಿ ಅನೇಕ ಭಾಷೆಗಳಲ್ಲಿ ಈ ಶೋ ನಡೆಸಲಾಗುತ್ತಿದೆ. ಬೇರೆ ಬೇರೆ ವಾಹಿನಿಗಳಲ್ಲಿ ಇದನ್ನು ಪ್ರಸಾರ ಮಾಡಲಾಗುತ್ತದೆ. 100 ದಿನಕ್ಕೂ ಹೆಚ್ಚು ಕಾಲ ನಡೆಯುವ ಈ ಆಟ ನೋಡೋಕೆ ದೊಡ್ಡ ವೀಕ್ಷಕ ವರ್ಗ ಇದೆ. ಪ್ರತಿ ವರ್ಷ ನಿಯಮಗಳಲ್ಲಿ ಕೆಲ ಬದಲಾವಣೆ ಮಾಡಿಕೊಂಡು ಆಟ ನಡೆಸಲಾಗುತ್ತದೆ. ಈಗ ತೆಲುಗು ಬಿಗ್ ಬಾಸ್ (Bigg Boss) ಹೊಸ ಸೀಸನ್ ಆರಂಭಕ್ಕೆ ಸಿದ್ಧತೆ ನಡೆಸಲಾಗುತ್ತಿದೆ. ಈ ವರ್ಷ ಹೊಸ ನಿಯಮ, ಹೊಸ ನಿರೂಪಕನೊಂದಿಗೆ ಆಟ ಬರುತ್ತಿದೆ ಎನ್ನಲಾಗಿದೆ.

ತೆಲುಗಿನಲ್ಲಿ ಈಗಾಗಲೇ ಆರು ಸೀಸನ್​ಗಳು ಪೂರ್ಣಗೊಂಡಿವೆ. ಈಗ ಏಳನೇ ಸೀಸನ್ ಆರಂಭಕ್ಕೆ ತಯಾರಿ ನಡೆಸಲಾಗುತ್ತಿದೆ. ಜೂನ್​ನಿಂದ ಸ್ಪರ್ಧಿಗಳ ಆಯ್ಕೆ ಪ್ರಕ್ರಿಯೆ ಆರಂಭಿಸಲಾಗುತ್ತದೆ. ಪ್ರೇಕ್ಷಕರನ್ನು ಸೆಳೆಯುವ ನಿಟ್ಟಿನಲ್ಲಿ ಜನಪ್ರಿಯ ಕಲಾವಿದರನ್ನು ಮನೆ ಒಳಗೆ ಕಳುಹಿಸುವ ಆಲೋಚನೆಯಲ್ಲಿ ಚಿತ್ರತಂಡದವರು ಇದ್ದಾರೆ. ಈ ಬಾರಿ ಹೊಸ ನಿಯಮಗಳನ್ನು ಕೂಡ ತರಲಾಗುತ್ತಿದೆ ಎನ್ನಲಾಗಿದೆ.

ಇದನ್ನೂ ಓದಿ: Sania Mirza: ಬಿಗ್ ಬಾಸ್ ವಿನ್ನರ್ ಎಂಸಿ ಸ್ಟಾನ್​ಗೆ ಲಕ್ಷ ಮೌಲ್ಯದ ಶೂ ಗಿಫ್ಟ್ ಕೊಟ್ಟ ಸಾನಿಯಾ ಮಿರ್ಜಾ

ಜುಲೈ ವೇಳೆಗೆ ಸ್ಪರ್ಧಿಗಳ ಆಯ್ಕೆ ಪೂರ್ಣಗೊಳ್ಳುವ ನಿರೀಕ್ಷೆ ಇದೆ. ಸೆಪ್ಟೆಂಬರ್ ವೇಳೆಗೆ ಹೊಸ ಸೀಸನ್​ ಶುರು ಆಗಲಿದೆ. ಜನಪ್ರಿಯ ಕಲಾವಿದರ ಕಾಲ್​ಶೀಟ್ ಬೇಕು ಎಂದರೆ ಮೊದಲೇ ಎಲ್ಲರನ್ನೂ ಸಂಪರ್ಕಿಸಬೇಕು. ಹೊಸ ಸಿನಿಮಾ ಒಪ್ಪಿಕೊಳ್ಳದಂತೆ ಕೋರಿಕೊಳ್ಳಬೇಕು. ಹೀಗಾಗಿ, ಜೂನ್​ನಲ್ಲೇ ಎಲ್ಲರನ್ನೂ ಸಂಪರ್ಕಿಸಲಾಗುತ್ತಿದೆ. ಒಂದೊಮ್ಮೆ ಅವರು ಮನೆ ಒಳಗೆ ಹೋಗಲು ಒಪ್ಪದೇ ಇದ್ದರೆ ಬೇರೆ ಕಲಾವಿದರ ಆಯ್ಕೆ ಅನಿವಾರ್ಯ ಆಗುತ್ತದೆ.

ಈ ರೀತಿಯ ಶೋಗಳಿಗೆ ಆ್ಯಂಕರ್ ತುಂಬಾನೇ ಮುಖ್ಯ. ಸದ್ಯ ತೆಲುಗಿನಲ್ಲಿ ಅಕ್ಕಿನೇನಿ ನಾಗಾರ್ಜುನ ಅವರು ಈ ಶೋ ನಡೆಸಿಕೊಡುತ್ತಿದ್ದಾರೆ. ಆದರೆ, ಈ ಮೊದಲ ಸೀಸನ್​ಗೆ ಟಿಆರ್​ಪಿ ಕುಗ್ಗಿದೆ. ನಿರೂಪಕರನ್ನು ಬದಲಾಯಿಸಿ ಎನ್ನುವ ಒತ್ತಾಯ ಕೇಳಿ ಬಂದಿದೆ. ಈ ಕಾರಣಕ್ಕೆ ಈ ಬಾರಿ ನಿರೂಪಕರ ಬದಲಾವಣೆ ಖಚಿತ ಎನ್ನಲಾಗುತ್ತಿದೆ. ರಾಣಾ ದಗ್ಗುಬಾಟಿ ಅವರು ಹೊಸ ಶೋ ನಡೆಸಿಕೊಡೋ ಸಾಧ್ಯತೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು