AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bigg Boss: ಬಿಗ್ ಬಾಸ್​ ನೋಡೋಕೆ ಸಿದ್ಧರಾಗಿ; ಈ ಬಾರಿ ಹೊಸ ನಿಯಮ, ಹೊಸ ನಿರೂಪಕ

ಬಿಗ್ ಬಾಸ್ ಹೊಸ ಸೀಸನ್ ಆರಂಭಕ್ಕೆ ತಯಾರಿ ನಡೆಸಲಾಗುತ್ತಿದೆ. ಜೂನ್​ನಿಂದ ಸ್ಪರ್ಧಿಗಳ ಆಯ್ಕೆ ಪ್ರಕ್ರಿಯೆ ಆರಂಭಿಸಲಾಗುತ್ತದೆ.

Bigg Boss: ಬಿಗ್ ಬಾಸ್​ ನೋಡೋಕೆ ಸಿದ್ಧರಾಗಿ; ಈ ಬಾರಿ ಹೊಸ ನಿಯಮ, ಹೊಸ ನಿರೂಪಕ
ಬಿಗ್ ಬಾಸ್
ರಾಜೇಶ್ ದುಗ್ಗುಮನೆ
|

Updated on: May 15, 2023 | 7:16 AM

Share

ಮುಖ್ಯಾಂಶಗಳು

  • ಶೀಘ್ರವೇ ಆರಂಭ ಆಗಲಿದೆ ಬಿಗ್ ಬಾಸ್
  • ತೆಲುಗು ಬಿಗ್ ಬಾಸ್ ಆರಂಭಕ್ಕೆ ಕ್ಷಣಗಣನೆ
  • ಈ ಬಾರಿ ಹೊಸ ನಿಯಮದೊಂದಿಗೆ ಬರ್ತಿದೆ ದೊಡ್ಮನೆ ಆಟ

‘ಬಿಗ್ ಬಾಸ್’ ಎಲ್ಲಾ ಭಾಷೆಗಳಲ್ಲೂ ಜನಪ್ರಿಯತೆ ಪಡೆದುಕೊಂಡಿರೋ ರಿಯಾಲಿಟಿ ಶೋ. ಕನ್ನಡ, ಹಿಂದಿ, ತೆಲುಗು ಸೇರಿ ಅನೇಕ ಭಾಷೆಗಳಲ್ಲಿ ಈ ಶೋ ನಡೆಸಲಾಗುತ್ತಿದೆ. ಬೇರೆ ಬೇರೆ ವಾಹಿನಿಗಳಲ್ಲಿ ಇದನ್ನು ಪ್ರಸಾರ ಮಾಡಲಾಗುತ್ತದೆ. 100 ದಿನಕ್ಕೂ ಹೆಚ್ಚು ಕಾಲ ನಡೆಯುವ ಈ ಆಟ ನೋಡೋಕೆ ದೊಡ್ಡ ವೀಕ್ಷಕ ವರ್ಗ ಇದೆ. ಪ್ರತಿ ವರ್ಷ ನಿಯಮಗಳಲ್ಲಿ ಕೆಲ ಬದಲಾವಣೆ ಮಾಡಿಕೊಂಡು ಆಟ ನಡೆಸಲಾಗುತ್ತದೆ. ಈಗ ತೆಲುಗು ಬಿಗ್ ಬಾಸ್ (Bigg Boss) ಹೊಸ ಸೀಸನ್ ಆರಂಭಕ್ಕೆ ಸಿದ್ಧತೆ ನಡೆಸಲಾಗುತ್ತಿದೆ. ಈ ವರ್ಷ ಹೊಸ ನಿಯಮ, ಹೊಸ ನಿರೂಪಕನೊಂದಿಗೆ ಆಟ ಬರುತ್ತಿದೆ ಎನ್ನಲಾಗಿದೆ.

ತೆಲುಗಿನಲ್ಲಿ ಈಗಾಗಲೇ ಆರು ಸೀಸನ್​ಗಳು ಪೂರ್ಣಗೊಂಡಿವೆ. ಈಗ ಏಳನೇ ಸೀಸನ್ ಆರಂಭಕ್ಕೆ ತಯಾರಿ ನಡೆಸಲಾಗುತ್ತಿದೆ. ಜೂನ್​ನಿಂದ ಸ್ಪರ್ಧಿಗಳ ಆಯ್ಕೆ ಪ್ರಕ್ರಿಯೆ ಆರಂಭಿಸಲಾಗುತ್ತದೆ. ಪ್ರೇಕ್ಷಕರನ್ನು ಸೆಳೆಯುವ ನಿಟ್ಟಿನಲ್ಲಿ ಜನಪ್ರಿಯ ಕಲಾವಿದರನ್ನು ಮನೆ ಒಳಗೆ ಕಳುಹಿಸುವ ಆಲೋಚನೆಯಲ್ಲಿ ಚಿತ್ರತಂಡದವರು ಇದ್ದಾರೆ. ಈ ಬಾರಿ ಹೊಸ ನಿಯಮಗಳನ್ನು ಕೂಡ ತರಲಾಗುತ್ತಿದೆ ಎನ್ನಲಾಗಿದೆ.

ಇದನ್ನೂ ಓದಿ: Sania Mirza: ಬಿಗ್ ಬಾಸ್ ವಿನ್ನರ್ ಎಂಸಿ ಸ್ಟಾನ್​ಗೆ ಲಕ್ಷ ಮೌಲ್ಯದ ಶೂ ಗಿಫ್ಟ್ ಕೊಟ್ಟ ಸಾನಿಯಾ ಮಿರ್ಜಾ

ಜುಲೈ ವೇಳೆಗೆ ಸ್ಪರ್ಧಿಗಳ ಆಯ್ಕೆ ಪೂರ್ಣಗೊಳ್ಳುವ ನಿರೀಕ್ಷೆ ಇದೆ. ಸೆಪ್ಟೆಂಬರ್ ವೇಳೆಗೆ ಹೊಸ ಸೀಸನ್​ ಶುರು ಆಗಲಿದೆ. ಜನಪ್ರಿಯ ಕಲಾವಿದರ ಕಾಲ್​ಶೀಟ್ ಬೇಕು ಎಂದರೆ ಮೊದಲೇ ಎಲ್ಲರನ್ನೂ ಸಂಪರ್ಕಿಸಬೇಕು. ಹೊಸ ಸಿನಿಮಾ ಒಪ್ಪಿಕೊಳ್ಳದಂತೆ ಕೋರಿಕೊಳ್ಳಬೇಕು. ಹೀಗಾಗಿ, ಜೂನ್​ನಲ್ಲೇ ಎಲ್ಲರನ್ನೂ ಸಂಪರ್ಕಿಸಲಾಗುತ್ತಿದೆ. ಒಂದೊಮ್ಮೆ ಅವರು ಮನೆ ಒಳಗೆ ಹೋಗಲು ಒಪ್ಪದೇ ಇದ್ದರೆ ಬೇರೆ ಕಲಾವಿದರ ಆಯ್ಕೆ ಅನಿವಾರ್ಯ ಆಗುತ್ತದೆ.

ಈ ರೀತಿಯ ಶೋಗಳಿಗೆ ಆ್ಯಂಕರ್ ತುಂಬಾನೇ ಮುಖ್ಯ. ಸದ್ಯ ತೆಲುಗಿನಲ್ಲಿ ಅಕ್ಕಿನೇನಿ ನಾಗಾರ್ಜುನ ಅವರು ಈ ಶೋ ನಡೆಸಿಕೊಡುತ್ತಿದ್ದಾರೆ. ಆದರೆ, ಈ ಮೊದಲ ಸೀಸನ್​ಗೆ ಟಿಆರ್​ಪಿ ಕುಗ್ಗಿದೆ. ನಿರೂಪಕರನ್ನು ಬದಲಾಯಿಸಿ ಎನ್ನುವ ಒತ್ತಾಯ ಕೇಳಿ ಬಂದಿದೆ. ಈ ಕಾರಣಕ್ಕೆ ಈ ಬಾರಿ ನಿರೂಪಕರ ಬದಲಾವಣೆ ಖಚಿತ ಎನ್ನಲಾಗುತ್ತಿದೆ. ರಾಣಾ ದಗ್ಗುಬಾಟಿ ಅವರು ಹೊಸ ಶೋ ನಡೆಸಿಕೊಡೋ ಸಾಧ್ಯತೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ