AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೆಲುಗು ಬಿಗ್ ಬಾಸ್ ಗೆದ್ದು ಕನ್ನಡದಲ್ಲಿ ಮಾತನಾಡಿದ ನಿಖಿಲ್; ಇಲ್ಲಿದೆ ವಿಡಿಯೋ

ಮೈಸೂರಿನ ನಿಖಿಲ್ ಅವರು ಬಿಗ್ ಬಾಸ್ ತೆಲುಗು ಸೀಸನ್ 8ರಲ್ಲಿ ಗೆದ್ದು ದೊಡ್ಡ ಸಾಧನೆ ಮಾಡಿದ್ದಾರೆ. ಅವರ ಗೆಲುವಿನ ಸಂಭ್ರಮದ ಕನ್ನಡ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ತೆಲುಗು ರಿಯಾಲಿಟಿ ಶೋನಲ್ಲಿ 100 ದಿನಗಳಿಗೂ ಅಧಿಕ ಕಾಲ ಉಳಿದು ಗೆದ್ದ ನಿಖಿಲ್ ಅವರು ಕನ್ನಡ ಚಿತ್ರರಂಗದಲ್ಲಿ ‘ಊಟಿ’ ಚಿತ್ರದ ಮೂಲಕ ಖ್ಯಾತಿ ಪಡೆದಿದ್ದಾರೆ.

ತೆಲುಗು ಬಿಗ್ ಬಾಸ್ ಗೆದ್ದು ಕನ್ನಡದಲ್ಲಿ ಮಾತನಾಡಿದ ನಿಖಿಲ್; ಇಲ್ಲಿದೆ ವಿಡಿಯೋ
ನಿಖಿಲ್
 ಶ್ರೀಲಕ್ಷ್ಮೀ ಎಚ್
| Edited By: |

Updated on:Dec 18, 2024 | 7:47 AM

Share

‘ಬಿಗ್ ಬಾಸ್ ತೆಲುಗು ಸೀಸನ್ 8’ರಲ್ಲಿ ಮೈಸೂರಿನ ನಿಖಿಲ್ ಅವರು ಗೆದ್ದು ದಾಖಲೆ ಬರೆದಿದ್ದಾರೆ. ಅವರು ತೆಲುಗು ಬಿಗ್ ಬಾಸ್​ನಲ್ಲಿ 100 ದಿನಕ್ಕೂ ಹೆಚ್ಚು ಕಾಲ ಇದ್ದು ಗೆಲುವು ದಾಖಲು ಬರೆದಿದ್ದಾರೆ. ತೆಲುಗಿನ ಸ್ಪರ್ಧಿಗಳನ್ನು ಹಿಂದಿಕ್ಕಿ ಇವರು ಗೆಲುವು ಕಂಡಿದ್ದಾರೆ. ಈಗ ನಿಖಿಲ್ ಅವರ ಹೊಸ ವಿಡಿಯೋ ವೈರಲ್ ಆಗಿದೆ. ಇದರಲ್ಲಿ ಅವರು ಕನ್ನಡದಲ್ಲೇ ಮಾತನಾಡಿದ್ದಾರೆ.

ನಿಖಿಲ್ ಅವರು ಮೂಲತಃ ಮೈಸೂರಿನವರಾಗಿದ್ದಾರೆ. ಮೈಸೂರಿನವರಾಗಿ ಕನ್ನಡ ಬಂದಿಲ್ಲ ಎಂದರೆ ಹೇಗೆ ನೀವೇ ಹೇಳಿ? ನಿಖಿಲ್ ಅವರು ನಿರರ್ಗಳವಾಗಿ ಕನ್ನಡ ಮಾತನಾಡುತ್ತಾರೆ. ಇದಕ್ಕೆ ಸಾಕ್ಷಿ ಎಂಬಂತೆ ಹೊಸ ವಿಡಿಯೋ ಒಂದು ವೈರಲ್ ಆಗಿದೆ. ಈ ವಿಡಿಯೋದಲ್ಲಿ ನಿಖಿಲ್ ಅವರು ಖುಷಿ ಖುಷಿಯಿಂದ ಮಾತನಾಡಿದ್ದಾರೆ. ಈ ಮೊದಲು ಬಿಗ್ ಬಾಸ್​ನಲ್ಲೂ ಕೆಲವೊಮ್ಮೆ ಕನ್ನಡ ಮಾತನಾಡಿದ್ದು ಇದೆ.

ನಿಖಿಲ್ ಅವರು ಕಾರಿನಲ್ಲಿ ಕರೆದುಕೊಂಡು ಹೋಗಲಾಗುತ್ತಿತ್ತು. ‘ವಿನ್ ಆಗಿದ್ದಕ್ಕೆ ಹೇಗೆ ಅನಿಸುತ್ತಿದೆ’ ಎಂದು ಕೇಳಲಾಯಿತು. ‘ಹೀಗೆ ಅನಿಸುತ್ತಿದೆ’ ಎಂದು ಅವರು ಹೇಳಿಕೊಂಡಿದ್ದಾರೆ. ಅವರನ್ನು ಹಿಂದಿನ ಸೀಟ್​ನಲ್ಲಿ ಕೂರಿಸಲಾಗಿತ್ತು. ‘ನನ್ನನ್ನು ಕಳ್ಳರನ್ನು ಕರೆದುಕೊಂಡು ಹೋದಂತೆ ಹೋಗ್ತಾ ಇದೀರಲ್ಲೋ’ ಎಂದು ನಿಖಿಲ್ ಹೇಳಿದ್ದಾರೆ. ಈ ವಿಡಿಯೋ ಸಖತ್ ಫನ್ ಆಗಿದೆ. ಈ ವಿಡಿಯೋಗೆ ಫ್ಯಾನ್ಸ್ ನಾನಾ ರೀತಿಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.

ನಿಖಿಲ್ ಅವರು ಕನ್ನಡದ ‘ಊಟಿ’ ಹೆಸರಿನ ಸಿನಿಮಾ ಮಾಡಿದ್ದರು. ಈ ಚಿತ್ರದ ಮೂಲಕ ಕನ್ನಡದಲ್ಲಿ ಫೇಮಸ್ ಆದರು. ಆ ಬಳಿಕ ಅವರಿಗೆ ತೆಲುಗು ಧಾರಾವಾಹಿಗಳಿಂದ ಆಫರ್​ಗಳು ಬಂದವು. ಅವರು ತೆಲುಗಿನ ‘ಗೋರಿಂಟಕು’ ಧಾರಾವಾಹಿಯಲ್ಲಿ ನಟಿಸಿ ಗಮನ ಸೆಳೆದಿದ್ದಾರೆ. ಈ ಧಾರಾವಾಹಿ ಎಲ್ಲ ಕಡೆಗಳಿಂದ ಮೆಚ್ಚುಗೆ ಪಡೆಯಿತು. ಆ ಬಳಿಕ ಅವರು ಬಿಗ್ ಬಾಸ್​ ಶೋನಲ್ಲಿ ಕಾಣಿಸಿಕೊಂಡು ಗಮನ ಸೆಳೆದರು.

ಇದನ್ನೂ ಓದಿ: ತೆಲುಗು ಬಿಗ್ ಬಾಸ್​ ಕಿರೀಟ ಗೆದ್ದ ಕನ್ನಡದ ಹುಡುಗ ನಿಖಿಲ್; ಸೃಷ್ಟಿ ಆಯಿತು ದಾಖಲೆ

ಸೋಶಿಯಲ್ ಮೀಡಿಯಾದಲ್ಲಿ ನಿಖಿಲ್ ಅವರಿಗೆ ಎಲ್ಲರೂ ಶುಭಾಶಯ ಕೋರುತ್ತಿದ್ದಾರೆ. ಅವರು ಮುಂದಿನ ದಿನಗಳಲ್ಲಿ ಕನ್ನಡ ಬಿಗ್ ಬಾಸ್​ಗೂ ಬರಲಿ ಎಂದು ಕೋರುತ್ತಿದ್ದಾರೆ. ಆದರೆ, ಒಂದು ಶೋನ ವಿನ್ ಆದವರು ಇಲ್ಲಿಗೆ ಬರೋದು ಅನುಮಾನ. ಈ ಮೊದಲು ತೆಲುಗಿನಲ್ಲಿ ಹವಾ ಮಾಡಿದ್ದ ಶೋಭಾ ಶೆಟ್ಟಿ ಅವರು ಕನ್ನಡ ಬಿಗ್ ಬಾಸ್​ಗೆ ಬಂದರು. ಆದರೆ, ಎರಡೇ ವಾರಕ್ಕೆ ಅವರು ಔಟ್ ಆದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 7:46 am, Wed, 18 December 24

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?