AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೆಲುಗು ಬಿಗ್​ಬಾಸ್ ವಿನ್ನರ್-ರನ್ನರ್ ಅಪ್ ಅಭಿಮಾನಿಗಳ ನಡುವೆ ಗಲಾಟೆ, ಕಾರು, ಬಸ್ಸುಗಳು ಜಖಂ

Bigg Boss: ತೆಲುಗು ಬಿಗ್​ಬಾಸ್​ ವಿನ್ನರ್ ಪಲ್ಲವಿ ಪ್ರಶಾಂತ್ ಅಭಿಮಾನಿಗಳು, ರನ್ನರ್ ಅಪ್ ಅಮರ್​ದೀಪ್​ರ ಕಾರಿನ ಮೇಲೆ ದಾಳಿ ನಡೆಸಿ ಜಖಂ ಗೊಳಿಸಿದ್ದಾರೆ. ಆರು ಬಸ್ಸುಗಳಿಗೂ ಈ ವೇಳೆ ಹಾನಿ ಮಾಡಲಾಗಿದೆ.

ತೆಲುಗು ಬಿಗ್​ಬಾಸ್ ವಿನ್ನರ್-ರನ್ನರ್ ಅಪ್ ಅಭಿಮಾನಿಗಳ ನಡುವೆ ಗಲಾಟೆ, ಕಾರು, ಬಸ್ಸುಗಳು ಜಖಂ
ಬಿಗ್​ಬಾಸ್
ಮಂಜುನಾಥ ಸಿ.
|

Updated on: Dec 19, 2023 | 3:55 PM

Share

ತೆಲುಗು ಬಿಗ್​ಬಾಸ್ (BiggBoss) ಗ್ರ್ಯಾಂಡ್ ಫಿನಾಲೆ ಇದೇ ಶನಿವಾರ ನಡೆದಿದೆ. 105 ದಿನಗಳ ಕಾಲ ನಡೆದ ರಿಯಾಲಿಟಿ ಶೋನಲ್ಲಿ ಅಂತಿಮವಾಗಿ ರೈತ ಯುವಕ ಪಲ್ಲವಿ ಪ್ರಶಾಂತ್ ಗೆದ್ದಿದ್ದಾರೆ. ಪಲ್ಲವಿ ಪ್ರಶಾಂತ್ ಆಡಿದ ರೀತಿಯನ್ನು ತೆಲುಗು ಪ್ರೇಕ್ಷಕರು ಸಖತ್ ಮೆಚ್ಚಿಕೊಂಡಿದ್ದರು. ರೈತ ಯುವಕ, ಬಡ ಮಧ್ಯಮ ವರ್ಗದ ಯುವಕನಾಗಿದ್ದ ಪಲ್ಲವಿ ಪ್ರಶಾಂತ್ ಜೊತೆ ಕೋಟ್ಯಂತರ ಮಂದಿ ಪ್ರೇಕ್ಷಕರು ಕನೆಕ್ಟ್ ಆಗಿದ್ದರು. ಆದರೆ ಅದೇ ಶೋನ ರನ್ನರ್ ಅಪ್ ಆದ ಅನುದೀಪ್ ಹಾಗೂ ವಿನ್ನರ್ ಪಲ್ಲವಿ ಪ್ರಶಾಂತ್ ನಡುವೆ ಮನೆಯಲ್ಲಿ ಆಗಾಗ್ಗೆ ಜಗಳಗಳು ನಡೆದಿದ್ದವು. ವಿನ್ನರ್ ಹಾಗೂ ರನ್ನರ್ ಅಪ್​ ಹೆಸರುಗಳನ್ನು ಘೋಷಿಸಿದ ಬಳಿಕ ಹೊರಗಡೆ ಪಲ್ಲವಿ ಪ್ರಶಾಂತ್ ಹಾಗೂ ಅನುದೀಪ್ ಅವರ ಅಭಿಮಾನಿಗಳ ನಡುವೆ ಜೋರು ಗಲಾಟೆ ನಡೆದಿದ್ದು, ಅನುದೀಪ್ ಕಾರಿನ ಮೇಲೆ ಪಲ್ಲವಿ ಪ್ರಶಾಂತ್ ಅಭಿಮಾನಿಗಳು ದಾಳಿ ನಡೆಸಿ ಜಖಂ ಗೊಳಿಸಿದ್ದಾರೆ. ಮಾತ್ರವಲ್ಲದೆ ಹಲವು ಬಸ್ಸುಗಳ ಮೇಲೂ ಕಲ್ಲು ತೂರಾಟ ಮಾಡಲಾಗಿದೆ.

ಅನ್ನಪೂರ್ಣ ಸ್ಟುಡಿಯೋನಲ್ಲಿ ಬಿಗ್​ಬಾಸ್ ಫಿನಾಲೆ ನಡೆಯಿತು. ಪಲ್ಲವಿ ಪ್ರಶಾಂತ್ ವಿನ್ನರ್ ಎಂದು ಘೋಷಣೆ ಆದ ಬಳಿಕ ಹೊರಗಡೆ ಹಾಜರಿದ್ದ ನೂರಾರು ಪಲ್ಲವಿ ಪ್ರಶಾಂತ್ ಅಭಿಮಾನಿಗಳು ಅತ್ಯುತ್ತಾಹಗೊಂಡರು. ರನ್ನರ್ ಅಪ್ ಅಮರ್​ದೀಪ್ ಹಾಗೂ ಅವರ ಕುಟುಂಬ ಕಾರಿನಲ್ಲಿ ತೆರಳುವಾಗ ಕೆಲವು ಅಭಿಮಾನಿಗಳು ಕಾರನ್ನು ಅಡ್ಡಹಾಕಿದರಲ್ಲದೆ ಕಾರಿನ ಮೇಲೆ ಕಲ್ಲುಗಳನ್ನು ತೂರಿ, ಅವಾಚ್ಯ ಶಬ್ದಗಳಿಂದ ಅಮರ್​ದೀಪ್ ಅನ್ನು ನಿಂದಿಸಿದರು. ಅಮರ್​ದೀಪ್​ರ ಫೋರ್ಡ್ ಕಾರಿನ ಹಿಂಬದಿಯ ಗಾಜುಗಳನ್ನು ಒಡೆದರು. ಬಳಿಕ ಪಾರ್ಕಿಂಗ್​ನಲ್ಲಿ ನಿಂತಿದ್ದ ಮತ್ತೊಬ್ಬ ಸ್ಪರ್ಧಿ ಪ್ರಿಯಾಂಕಾರ ದುಬಾರಿ ಕಾರಿನ ಎರಡೂ ಬದಿಯ ಗಾಜುಗಳನ್ನು ಒಡೆದಿದ್ದಾರೆ.

ವಿನ್ನರ್ ಪಲ್ಲವಿ ಪ್ರಶಾಂತ್ ಅನ್ನು ಅದ್ಧೂರಿಯಾಗಿ ಮೆರವಣಿಗೆಯನ್ನೂ ಸಹ ಅಭಿಮಾನಿಗಳು ಮಾಡಿದ್ದಾರೆ. ಈ ವೇಳೆ ಕೆಲವು ಪುಂಡ ಅಭಿಮಾನಿಗಳು ಸರ್ಕಾರಿ ಬಸ್ಸುಗಳ ಮೇಲೆ ಕಲ್ಲು ತೂರಿದ್ದು ಇದರಿಂದಾಗಿ ಸುಮಾರು ಆರು ಬಸ್ಸಿಗಳಿಗೆ ಹಾನಿ ಆಗಿದೆ. ಈ ವೇಳೆ ಪೊಲೀಸರು ಲಾಠಿ ಪ್ರಹಾರ ಸಹ ನಡೆಸಿದ್ದಾರೆ.

ಇದನ್ನೂ ಓದಿ:ತೆಲುಗು ಬಿಗ್​ಬಾಸ್ ಫೈನಲಿಸ್ಟ್​ಗಳಿವರು: ರೈತನ ಮಗ ಚಾಂಪಿಯನ್

ಹಾನಿ ಆಗಿರುವ ಬಸ್ಸುಗಳ ಚಿತ್ರಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಆರ್​ಟಿಸಿ ಉನ್ನತಾಧಿಕಾರಿ ವಿಸಿ ಸಜ್ಜನರ್, ‘‘ಬಿಗ್ ಬಾಸ್ 7 ರ ಫಿನಾಲೆ ವೇಳೆ, ಹೈದರಾಬಾದ್‌ನ ಕೃಷ್ಣನಗರ ಅನ್ನಪೂರ್ಣ ಸ್ಟುಡಿಯೋ ಬಳಿ ಭಾನುವಾರ ರಾತ್ರಿ ಕೆಲವರು ಟಿಎಸ್​ಆರ್​ಟಿಸಿ ಬಸ್‌ಗಳ ಮೇಲೆ ದಾಳಿ ಮಾಡಿದ್ದಾರೆ. ಈ ದಾಳಿಯಲ್ಲಿ 6 ಬಸ್‌ಗಳಿಗೆ ಹಾನಿಯಾಗಿದೆ. ಘಟನೆ ಕುರಿತು ಆರ್‌ಟಿಸಿ ಅಧಿಕಾರಿಗಳು ಜುಬ್ಲಿ ಹಿಲ್ಸ್‌ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಇದಕ್ಕೆ ಕಾರಣರಾದವರ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಕೋರಲಾಗಿದೆ. ದೂರಿನನ್ವಯ ಪೊಲೀಸರು ಎಫ್‌ಐಆರ್ ಕೂಡ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ’’ ಎಂದಿದ್ದಾರೆ.

ಮುಂದುವರೆದು, ‘‘ಅಭಿಮಾನದ ಹೆಸರಿನಲ್ಲಿ ಮಾಡುವ ಹುಚ್ಚುತನ ಸಮಾಜಕ್ಕೆ ಒಳ್ಳೆಯದಲ್ಲ. ಜನರನ್ನು ಸುರಕ್ಷಿತವಾಗಿ ಅವರ ಸ್ಥಳಗಳಿಗೆ ಕರೆದೊಯ್ಯುವ ಆರ್‌ಟಿಸಿ ಬಸ್‌ಗಳ ಮೇಲೆ ದಾಳಿ ಮಾಡುವುದು ಸಮಾಜದ ಮೇಲಿನ ದಾಳಿಯಾಗಿದೆ. ಇಂತಹ ಘಟನೆಗಳನ್ನು ಟಿಎಸ್‌ಆರ್‌ಟಿಸಿ ಆಡಳಿತ ಸಹಿಸುವುದಿಲ್ಲ. ಟಿಎಸ್​ಆರ್​ಟಿಸಿ ಬಸ್ಸುಗಳು ಸಾರ್ವಜನಿಕ ಆಸ್ತಿ. ಅವರನ್ನು ರಕ್ಷಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ’’ ಎಂದಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್