AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bigg Boss Kannada: ಓಡಿ ಹೋಗೋಕೆ ನಿರ್ಧರಿಸಿದ್ದ ಬಿಗ್ ಬಾಸ್; ಕಾರಣ ತಿಳಿಸಿದ ಕಿಚ್ಚ

ಬಿಗ್​ ಬಾಸ್​ ಹೇಗಿರಬಹುದು ಎಂಬದನ್ನು ಕಲ್ಪಿಸಿಕೊಂಡು ಚಿತ್ರ ಬಿಡಿಸಲು ಅವಕಾಶ ನೀಡಲಾಯಿತು. ಒಬ್ಬೊಬ್ಬರು ಒಂದೊಂದು ರೀತಿಯ ಕಲ್ಪನೆ ಮಾಡಿಕೊಂಡರು. ಇದರಿಂದ ಬಿಗ್ ಬಾಸ್ ಬೇಸರಗೊಂಡಿದ್ದಾರಂತೆ.

Bigg Boss Kannada: ಓಡಿ ಹೋಗೋಕೆ ನಿರ್ಧರಿಸಿದ್ದ ಬಿಗ್ ಬಾಸ್; ಕಾರಣ ತಿಳಿಸಿದ ಕಿಚ್ಚ
ಸುದೀಪ್​
ರಾಜೇಶ್ ದುಗ್ಗುಮನೆ
|

Updated on: Dec 18, 2023 | 7:27 AM

Share

ಬಿಗ್ ಬಾಸ್​ನ (Bigg Boss) ಭಾನುವಾರದ ಎಪಿಸೋಡ್ ಸಖತ್ ಫನ್ ಆಗಿರುತ್ತದೆ. ಕಳೆದ ವಾರದ ಎಪಿಸೋಡ್ ಕೂಡ ಸಾಕಷ್ಟು ಎಂಟರ್​ಟೇನಿಂಗ್​ ಆಗಿತ್ತು. ಈಗ ಸುದೀಪ್ (Sudeep) ಅವರು ಒಂದು ಅಚ್ಚರಿಯ ವಿಚಾರ ಬಿಚ್ಚಿಟ್ಟಿದ್ದಾರೆ. ಬಿಗ್ ಬಾಸ್ ಓಡಿ ಹೋಗೋಕೆ ನಿರ್ಧರಿಸಿದ್ದರಂತೆ. ಇದಕ್ಕೆ ಕಾರಣ ಏನು ಎಂಬುದನ್ನು ಸುದೀಪ್ ಅವರು ವಿವರಿಸಿದ್ದಾರೆ. ಇದನ್ನು ಕೇಳಿ ಎಲ್ಲರೂ ನಕ್ಕಿದ್ದಾರೆ. ಜೊತೆಗೆ ಬಿಗ್​ ಬಾಸ್​ಗೆ ಸ್ಪರ್ಧಿಗಳು ಕ್ಷಮೆ ಕೇಳಿದ್ದಾರೆ.

ಕಳೆದ ವಾರ ಮಕ್ಕಳಿಗೆ ಸ್ಕೂಲ್ ಟಾಸ್ಕ್ ನೀಡಲಾಯಿತು. ಎಲ್ಲರೂ ಮಕ್ಕಳಂತೆ ಆಗಿದ್ದರು. ಈ ವೇಳೆ ಬಿಗ್​ ಬಾಸ್​ ಹೇಗಿರಬಹುದು ಎಂಬದನ್ನು ಕಲ್ಪಿಸಿಕೊಂಡು ಚಿತ್ರ ಬಿಡಿಸಲು ಅವಕಾಶ ನೀಡಲಾಯಿತು. ಒಬ್ಬೊಬ್ಬರು ಒಂದೊಂದು ರೀತಿಯ ಕಲ್ಪನೆ ಮಾಡಿಕೊಂಡರು. ತುಕಾಲಿ ಸಂತೋಷ್ ಅವರಂತೂ ಕಲ್ಪನೆಯ ತುತ್ತತುದಿಗೆ ಹೋಗಿ ಮೊಟ್ಟೆ ಇಡುವ ಕೋಳಿಯನ್ನು ಬಿಡಿಸಿದ್ದರು. ‘ಬಿಗ್ ಬಾಸ್​ 17 ಮೊಟ್ಟೆಗಳನ್ನು ಇಟ್ಟು, ಕಾವುಕೊಟ್ಟು ಮರಿ ಮಾಡಿ ಅವುಗಳನ್ನು ಬೆಳೆಸುವ ಕೆಲಸ ಮಾಡುತ್ತಾರೆ’ ಎಂದು ಅದಕ್ಕೆ ವಿವರಣೆ ನೀಡಿದರು. ಈ ಬಗ್ಗೆ ಸುದೀಪ್ ಮಾತನಾಡಿದ್ದಾರೆ.

‘ನೀವು ಈ ವಾರ ಬಿಗ್ ಬಾಸ್ ಹೇಗಿರುತ್ತಾರೆ ಎಂಬುದನ್ನು ಬಿಡಿಸಿದ್ದನ್ನು ನೋಡಿ ಸ್ವತಃ ಬಿಗ್ ಬಾಸ್ ಕಂಗಾಲಾದರು. ಅವರು ಕಂಪೌಡ್ ಹಾರಿ ಜಿಗಿದು ಹೋಗುವವರಿದ್ದರು. ನಾವು ಅವರನ್ನು ತಡೆ ಹಿಡಿದು ಸಮಾಧಾನ ಮಾಡಿದೆವು. ಏನೋ ತಪ್ಪಾಗಿದೆ ಕ್ಷಮಿಸಿ ಎಂದು ಕೇಳಿಕೊಂಡೆವು’ ಎಂದು ಸುದೀಪ್ ಹೇಳಿದರು. ಇದನ್ನು ಕೇಳಿ ಎಲ್ಲರೂ ಜೋರಾಗಿ ನಕ್ಕಿದ್ದಾರೆ.

ಇದನ್ನೂ ಓದಿ: ‘ಈ ರೀತಿ ಬದುಕಿರೋಕಾಗಲ್ಲ, ಮನೆಗೆ ಕಳುಹಿಸಿ’; ಬಿಗ್ ಬಾಸ್ ಎದುರು ವಿನಯ್ ಹೊಸ ಬೇಡಿಕೆ

ಕಲರ್ಸ್ ಕನ್ನಡ ಹಾಗೂ ಜಿಯೋ ಸಿನಿಮಾದಲ್ಲಿ ಬಿಗ್ ಬಾಸ್ ಪ್ರಸಾರ ಕಾಣುತ್ತಿದೆ. ಜಿಯೋ ಸಿನಿಮಾದಲ್ಲಿ 24 ಗಂಟೆ ಬಿಗ್ ಬಾಸ್ ನೋಡಬಹುದು. ಭಾನುವಾರದ (ಡಿಸೆಂಬರ್ 17) ಎಪಿಸೋಡ್​ನಲ್ಲಿ ಪವಿ ಪೂವಪ್ಪ ಎಲಿಮಿನೇಟ್ ಆಗಿದ್ದಾರೆ. ಎಲ್ಲರೂ ಇದನ್ನು ನಿರೀಕ್ಷಿಸಿದ್ದರು. ವೈಲ್ಡ್ ಕಾರ್ಡ್ ಮೂಲಕ ಎಂಟ್ರಿ ಕೊಟ್ಟ ಅವರಿಗೆ ಮೋಡಿ ಮಾಡಲು ಸಾಧ್ಯವಾಗಿಲ್ಲ. ಹೀಗಾಗಿ ಕೆಲವೇ ವಾರಗಳಲ್ಲಿ ಅವರು ಔಟ್ ಆಗಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಸಂಕಷ್ಟದ ಸಮಯದಲ್ಲಿ 63 ರನ್ ಚಚ್ಚಿದ ರಜತ್ ಪಾಟಿದರ್
ಸಂಕಷ್ಟದ ಸಮಯದಲ್ಲಿ 63 ರನ್ ಚಚ್ಚಿದ ರಜತ್ ಪಾಟಿದರ್
ಗೆಳೆಯ ಹಸುವಿಗಾಗಿ ಬ್ರೆಡ್ ಕಚ್ಚಿಕೊಂಡು ಬಂದ ನಾಯಿ; ಈ ಸ್ನೇಹಕ್ಕೆ ಏನಂತೀರಿ!
ಗೆಳೆಯ ಹಸುವಿಗಾಗಿ ಬ್ರೆಡ್ ಕಚ್ಚಿಕೊಂಡು ಬಂದ ನಾಯಿ; ಈ ಸ್ನೇಹಕ್ಕೆ ಏನಂತೀರಿ!
ಮಳೆ: ಬೆಂಗಳೂರಿನಲ್ಲಿ ಲ್ಯಾಂಡ್​ ಆಗದೇ ವಾಪಸಾದ ರಾಜ್ಯಪಾಲರಿದ್ದ ವಿಮಾನ
ಮಳೆ: ಬೆಂಗಳೂರಿನಲ್ಲಿ ಲ್ಯಾಂಡ್​ ಆಗದೇ ವಾಪಸಾದ ರಾಜ್ಯಪಾಲರಿದ್ದ ವಿಮಾನ
ದಾವಣಗೆರೆ ಬೈ ಎಲೆಕ್ಷನ್ ರಿಸಲ್ಟ್ ಬಗ್ಗೆ ಜಾರಕಿಹೊಳಿ ಸ್ಫೋಟಕ ಹೇಳಿಕೆ
ದಾವಣಗೆರೆ ಬೈ ಎಲೆಕ್ಷನ್ ರಿಸಲ್ಟ್ ಬಗ್ಗೆ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಅಮೆರಿಕದ ಜೊತೆ ಆಟವಾಡಬೇಡಿ; ಇರಾನ್​ಗೆ ಜೆಡಿ ವ್ಯಾನ್ಸ್ ಎಚ್ಚರಿಕೆ
ಅಮೆರಿಕದ ಜೊತೆ ಆಟವಾಡಬೇಡಿ; ಇರಾನ್​ಗೆ ಜೆಡಿ ವ್ಯಾನ್ಸ್ ಎಚ್ಚರಿಕೆ
ವೃಂದಾವನದ ಯಮುನಾ ನದಿಯಲ್ಲಿ ಬೋಟ್ ಮುಳುಗಿ 10 ಜನ ಸಾವು
ವೃಂದಾವನದ ಯಮುನಾ ನದಿಯಲ್ಲಿ ಬೋಟ್ ಮುಳುಗಿ 10 ಜನ ಸಾವು
ಪ್ರಗತಿ ಪರಿಶೀಲನಾ ಸಭೆಯಲ್ಲಿ ರುದ್ರಪ್ಪ ಲಮಾಣಿ ಕಣ್ಣೀರು
ಪ್ರಗತಿ ಪರಿಶೀಲನಾ ಸಭೆಯಲ್ಲಿ ರುದ್ರಪ್ಪ ಲಮಾಣಿ ಕಣ್ಣೀರು
ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಿಖಿಲ್ ಅಚ್ಚರಿ ಮಾತು
ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಿಖಿಲ್ ಅಚ್ಚರಿ ಮಾತು
ರಾಜಾರೋಷವಾಗಿ ಬೈಕ್‌ನಲ್ಲಿ ಬಂದು ಯುವತಿಯ ಬೆನ್ನು ಸವರಿದ ಕಾಮಪಿಶಾಚಿ
ರಾಜಾರೋಷವಾಗಿ ಬೈಕ್‌ನಲ್ಲಿ ಬಂದು ಯುವತಿಯ ಬೆನ್ನು ಸವರಿದ ಕಾಮಪಿಶಾಚಿ
2000 ಅಡಿ ಪ್ರಪಾತ, ದೊಡ್ಡ ಗಿಡ-ಮರಗಳು: ಶ್ರೀನಂದಾ ಬಿದ್ದ ಸ್ಥಳ ಭಯಾನಕವಾಗಿದೆ
2000 ಅಡಿ ಪ್ರಪಾತ, ದೊಡ್ಡ ಗಿಡ-ಮರಗಳು: ಶ್ರೀನಂದಾ ಬಿದ್ದ ಸ್ಥಳ ಭಯಾನಕವಾಗಿದೆ