AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bigg Boss Kannada: ಓಡಿ ಹೋಗೋಕೆ ನಿರ್ಧರಿಸಿದ್ದ ಬಿಗ್ ಬಾಸ್; ಕಾರಣ ತಿಳಿಸಿದ ಕಿಚ್ಚ

ಬಿಗ್​ ಬಾಸ್​ ಹೇಗಿರಬಹುದು ಎಂಬದನ್ನು ಕಲ್ಪಿಸಿಕೊಂಡು ಚಿತ್ರ ಬಿಡಿಸಲು ಅವಕಾಶ ನೀಡಲಾಯಿತು. ಒಬ್ಬೊಬ್ಬರು ಒಂದೊಂದು ರೀತಿಯ ಕಲ್ಪನೆ ಮಾಡಿಕೊಂಡರು. ಇದರಿಂದ ಬಿಗ್ ಬಾಸ್ ಬೇಸರಗೊಂಡಿದ್ದಾರಂತೆ.

Bigg Boss Kannada: ಓಡಿ ಹೋಗೋಕೆ ನಿರ್ಧರಿಸಿದ್ದ ಬಿಗ್ ಬಾಸ್; ಕಾರಣ ತಿಳಿಸಿದ ಕಿಚ್ಚ
ಸುದೀಪ್​
ರಾಜೇಶ್ ದುಗ್ಗುಮನೆ
|

Updated on: Dec 18, 2023 | 7:27 AM

Share

ಬಿಗ್ ಬಾಸ್​ನ (Bigg Boss) ಭಾನುವಾರದ ಎಪಿಸೋಡ್ ಸಖತ್ ಫನ್ ಆಗಿರುತ್ತದೆ. ಕಳೆದ ವಾರದ ಎಪಿಸೋಡ್ ಕೂಡ ಸಾಕಷ್ಟು ಎಂಟರ್​ಟೇನಿಂಗ್​ ಆಗಿತ್ತು. ಈಗ ಸುದೀಪ್ (Sudeep) ಅವರು ಒಂದು ಅಚ್ಚರಿಯ ವಿಚಾರ ಬಿಚ್ಚಿಟ್ಟಿದ್ದಾರೆ. ಬಿಗ್ ಬಾಸ್ ಓಡಿ ಹೋಗೋಕೆ ನಿರ್ಧರಿಸಿದ್ದರಂತೆ. ಇದಕ್ಕೆ ಕಾರಣ ಏನು ಎಂಬುದನ್ನು ಸುದೀಪ್ ಅವರು ವಿವರಿಸಿದ್ದಾರೆ. ಇದನ್ನು ಕೇಳಿ ಎಲ್ಲರೂ ನಕ್ಕಿದ್ದಾರೆ. ಜೊತೆಗೆ ಬಿಗ್​ ಬಾಸ್​ಗೆ ಸ್ಪರ್ಧಿಗಳು ಕ್ಷಮೆ ಕೇಳಿದ್ದಾರೆ.

ಕಳೆದ ವಾರ ಮಕ್ಕಳಿಗೆ ಸ್ಕೂಲ್ ಟಾಸ್ಕ್ ನೀಡಲಾಯಿತು. ಎಲ್ಲರೂ ಮಕ್ಕಳಂತೆ ಆಗಿದ್ದರು. ಈ ವೇಳೆ ಬಿಗ್​ ಬಾಸ್​ ಹೇಗಿರಬಹುದು ಎಂಬದನ್ನು ಕಲ್ಪಿಸಿಕೊಂಡು ಚಿತ್ರ ಬಿಡಿಸಲು ಅವಕಾಶ ನೀಡಲಾಯಿತು. ಒಬ್ಬೊಬ್ಬರು ಒಂದೊಂದು ರೀತಿಯ ಕಲ್ಪನೆ ಮಾಡಿಕೊಂಡರು. ತುಕಾಲಿ ಸಂತೋಷ್ ಅವರಂತೂ ಕಲ್ಪನೆಯ ತುತ್ತತುದಿಗೆ ಹೋಗಿ ಮೊಟ್ಟೆ ಇಡುವ ಕೋಳಿಯನ್ನು ಬಿಡಿಸಿದ್ದರು. ‘ಬಿಗ್ ಬಾಸ್​ 17 ಮೊಟ್ಟೆಗಳನ್ನು ಇಟ್ಟು, ಕಾವುಕೊಟ್ಟು ಮರಿ ಮಾಡಿ ಅವುಗಳನ್ನು ಬೆಳೆಸುವ ಕೆಲಸ ಮಾಡುತ್ತಾರೆ’ ಎಂದು ಅದಕ್ಕೆ ವಿವರಣೆ ನೀಡಿದರು. ಈ ಬಗ್ಗೆ ಸುದೀಪ್ ಮಾತನಾಡಿದ್ದಾರೆ.

‘ನೀವು ಈ ವಾರ ಬಿಗ್ ಬಾಸ್ ಹೇಗಿರುತ್ತಾರೆ ಎಂಬುದನ್ನು ಬಿಡಿಸಿದ್ದನ್ನು ನೋಡಿ ಸ್ವತಃ ಬಿಗ್ ಬಾಸ್ ಕಂಗಾಲಾದರು. ಅವರು ಕಂಪೌಡ್ ಹಾರಿ ಜಿಗಿದು ಹೋಗುವವರಿದ್ದರು. ನಾವು ಅವರನ್ನು ತಡೆ ಹಿಡಿದು ಸಮಾಧಾನ ಮಾಡಿದೆವು. ಏನೋ ತಪ್ಪಾಗಿದೆ ಕ್ಷಮಿಸಿ ಎಂದು ಕೇಳಿಕೊಂಡೆವು’ ಎಂದು ಸುದೀಪ್ ಹೇಳಿದರು. ಇದನ್ನು ಕೇಳಿ ಎಲ್ಲರೂ ಜೋರಾಗಿ ನಕ್ಕಿದ್ದಾರೆ.

ಇದನ್ನೂ ಓದಿ: ‘ಈ ರೀತಿ ಬದುಕಿರೋಕಾಗಲ್ಲ, ಮನೆಗೆ ಕಳುಹಿಸಿ’; ಬಿಗ್ ಬಾಸ್ ಎದುರು ವಿನಯ್ ಹೊಸ ಬೇಡಿಕೆ

ಕಲರ್ಸ್ ಕನ್ನಡ ಹಾಗೂ ಜಿಯೋ ಸಿನಿಮಾದಲ್ಲಿ ಬಿಗ್ ಬಾಸ್ ಪ್ರಸಾರ ಕಾಣುತ್ತಿದೆ. ಜಿಯೋ ಸಿನಿಮಾದಲ್ಲಿ 24 ಗಂಟೆ ಬಿಗ್ ಬಾಸ್ ನೋಡಬಹುದು. ಭಾನುವಾರದ (ಡಿಸೆಂಬರ್ 17) ಎಪಿಸೋಡ್​ನಲ್ಲಿ ಪವಿ ಪೂವಪ್ಪ ಎಲಿಮಿನೇಟ್ ಆಗಿದ್ದಾರೆ. ಎಲ್ಲರೂ ಇದನ್ನು ನಿರೀಕ್ಷಿಸಿದ್ದರು. ವೈಲ್ಡ್ ಕಾರ್ಡ್ ಮೂಲಕ ಎಂಟ್ರಿ ಕೊಟ್ಟ ಅವರಿಗೆ ಮೋಡಿ ಮಾಡಲು ಸಾಧ್ಯವಾಗಿಲ್ಲ. ಹೀಗಾಗಿ ಕೆಲವೇ ವಾರಗಳಲ್ಲಿ ಅವರು ಔಟ್ ಆಗಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ