AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊಟ್ಟೆ ಯಾರಿಗೆ? ಅವಿನಾಶ್ ಉತ್ತರ ಕೇಳಿ ಬಿದ್ದು-ಬಿದ್ದು ನಕ್ಕ ವರ್ತೂರು-ತುಕಾಲಿ

Bigg Boss: ಬಿಗ್​ಬಾಸ್ ಮನೆಯಲ್ಲಿ ಮೊಟ್ಟೆಗಾಗಿ ಜಗಳ ನಡೆಯುವುದು ಸಾಮಾನ್ಯ ಆದರೆ ಬುಧವಾರದ ಎಪಿಸೋಡ್​ನಲ್ಲಿ ಮೊಟ್ಟೆಯಿಂದಾಗಿ ಸಖತ್ ಕಾಮಿಡಿ ನಡೆದಿದೆ. ಏನದು?

ಮೊಟ್ಟೆ ಯಾರಿಗೆ? ಅವಿನಾಶ್ ಉತ್ತರ ಕೇಳಿ ಬಿದ್ದು-ಬಿದ್ದು ನಕ್ಕ ವರ್ತೂರು-ತುಕಾಲಿ
ಅವಿನಾಶ್-ಸಂತು
Follow us
ಮಂಜುನಾಥ ಸಿ.
|

Updated on: Dec 13, 2023 | 11:40 PM

ಬಿಗ್​ಬಾಸ್ (BiggBoss) ಮನೆಯಲ್ಲಿ ತುಕಾಲಿ ಸಂತೋಷ್ (Tukali Santhosh) ಮತ್ತು ವರ್ತೂರು ಸಂತೋಷ್ ಗಳಸ್ಯ-ಕಂಠಸ್ಯ. ಸದಾ ಒಟ್ಟಿಗೆ ಕೂತು ಮನೆಯ ಇತರೆ ಸದಸ್ಯರ ಬಗ್ಗೆ ತಮಗೆ ತೋಚಿದಂತೆ ಮಾತನಾಡುತ್ತಾ, ತಮಾಷೆ ಮಾಡುತ್ತಾ ಇರುತ್ತಾರೆ. ವೈಲ್ಡ್ ಕಾರ್ಡ್​ನಲ್ಲಿ ಎಂಟ್ರಿ ಕೊಟ್ಟಿರುವ ಅವಿನಾಶ್ ಅವರನ್ನು ಸಹ ಜೊತೆಗೆ ಸೇರಿಸಿಕೊಂಡಿರುವ ತುಕಾಲಿ ಮತ್ತು ವರ್ತೂರು, ಅವಿನಾಶ್​ ಅನ್ನು ಆಡಿಕೊಂಡು ಒಳ್ಳೆಯ ಟೈಂಪಾಸ್ ಮಾಡುತ್ತಿದ್ದಾರೆ. ಈ ಹಿಂದೆ ಹಲವು ಬಾರಿ ಅವಿನಾಶ್ ಅನ್ನು ತಮಾಷೆ ಮಾಡಿದ್ದಾರೆ. ಆದರೆ ಬುಧವಾರದ ಎಪಿಸೋಡ್​ನಲ್ಲಿ ಅವಿನಾಶ್ ತಾವೇ ಬಂದು ಹಳ್ಳಕ್ಕೆ ಬಿದ್ದರು.

ಬಿಗ್​ಬಾಸ್, ಯಾರಿಗೆ ಹೇಗೆ ಅರ್ಥವಾಗಿದ್ದಾರೆ ತಿಳಿದುಕೊಳ್ಳುವ ಕುತೂಹಲ ಇದೆ ಎಂಬ ಕಾರಣಕ್ಕೆ ಬಿಗ್​ಬಾಸ್ ಮನೆಯ ಸದಸ್ಯರಿಗೆ ಟಾಸ್ಕ್ ಒಂದನ್ನು ನೀಡಿ, ನೀವು ಅರಿತುಕೊಂಡಂತೆ ಬಿಗ್​ಬಾಸ್ ಚಿತ್ರ ಬರೆಯಿರಿ ಎಂದರು. ಅಂತೆಯೇ ಎಲ್ಲರೂ ಚಿತ್ರ ಬಿಡಿಸಿದರು. ಹಲವರು ಬಿಗ್​ಬಾಸ್ ಅನ್ನು ವ್ಯಕ್ತಿಯ ರೀತಿಯಲ್ಲಿಯೇ ಚಿತ್ರ ಬಿಡಿಸಿದರು. ವಿನಯ್ ತುಸು ಭಿನ್ನವಾಗಿ ಮತ್ತು ಚೆನ್ನಾಗಿ ಚಿತ್ರ ಬಿಡಿಸಿದ್ದರು.

ಇದನ್ನೂ ಓದಿ:ಆ ಒಂದು ವಿಚಾರಕ್ಕೆ ಎಲ್ಲರ ಮೆಚ್ಚುಗೆ ಪಡೆದ ವಿನಯ್ ಗೌಡ

ಆದರೆ ಟಾಸ್ಕ್​ನ ಆರಂಭದಿಂದಲೂ ಚಿತ್ರ ಬಿಡಿಸಲು ಪರದಾಡಿದ ತುಕಾಲಿ ಕೊನೆಗೆ, ಮೊಟ್ಟೆ ಇಡುವ ಕೋಳಿಯ ಚಿತ್ರ ಬಿಡಿಸಿ, ನನ್ನ ಪ್ರಕಾರ ಬಿಗ್​ಬಾಸ್ ಎಂದರೆ ಮೊಟ್ಟೆ ಇಡುವ ಕೋಳಿ ಎಂದರು. ಟಾಸ್ಕ್​ ಎಲ್ಲ ಮುಗಿದ ಮೇಲೆ ವರ್ತೂರು ಹಾಗೂ ತುಕಾಲಿ ಇದೇ ವಿಷಯವಾಗಿ ಚರ್ಚೆ ಮಾಡುತ್ತಿದ್ದರು. ಅಲ್ಲಿಗೆ ವಿನಯ್ ಹಾಗೂ ಅವಿನಾಶ್ ಸಹ ಬಂದರು.

ಆಗ ವಿನಯ್, ಅವಿನಾಶ್ ಅವರನ್ನು ಉದ್ದೇಶಿಸಿ, ತುಕಾಲಿ ಹಾಗೂ ವರ್ತೂರು ಅವರ ಮನೆಗಳು ಅಕ್ಕ-ಪಕ್ಕದಲ್ಲಿವೆ. ನಡುವೆ ಕಾಂಪೌಂಡ್ ಇದೆ. ವರ್ತೂರು ಅವರ ಹುಂಜ, ಕಾಂಪೌಂಡ್ ಮೇಲೆ ಕೂತು ವರ್ತೂರು ಅವರ ಜಾಗದಲ್ಲಿ ಮೊಟ್ಟೆ ಇಟ್ಟರೆ ಆ ಮೊಟ್ಟೆ ಯಾರಿಗೆ ಸೇರುತ್ತದೆ? ಎಂದು ಪ್ರಶ್ನೆ ಮಾಡಿದ್ದಾರೆ. ಪ್ರಶ್ನೆಯನ್ನು ಕೇಳಿಸಿಕೊಂಡ ಅವಿನಾಶ್ ಸ್ವಲ್ಪ ಹೊತ್ತು ಯೋಚಿಸಿ ತುಕಾಲಿ ಅವರಿಗೆ ಸೇರುತ್ತದೆ ಎಂದು ಉತ್ತರ ನೀಡಿದ್ದಾರೆ.

ಉತ್ತರ ಕೇಳುತ್ತಿದ್ದಂತೆ, ವರ್ತೂರು, ‘ಈ ಬಾರಿ ನೀವೇ ಬಿಗ್​ಬಾಸ್ ಗೆಲ್ಲುವುದು’ ಎಂದು ಹೇಳಿ ನಗುತ್ತಾ ಹೊರಟು ಹೋದರೆ, ತುಕಾಲಿ ಹಾಗೂ ವಿನಯ್ ನಕ್ಕು ನಕ್ಕು ಸುಸ್ತಾಗಿದ್ದಾರೆ. ಬಳಿಕ, ತುಕಾಲಿ, ಹುಂಜ ಎಂದಾದರೂ ಮೊಟ್ಟೆ ಇಡುತ್ತಾ? ಎಂದು ಕೇಳಿದಾಗ, ಅಯ್ಯೋ, ಇಲ್ಲ ನಾನು ಪ್ರಶ್ನೆ ಸರಿಯಾಗಿ ಕೇಳಿಸಿಕೊಂಡಿಲ್ಲ ಎಂದು ಸಫಾಯಿ ಕೊಟ್ಟಿದ್ದಾರೆ ಅವಿನಾಶ್.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ
ಕನ್ನಡಿಗರು ಸಹನಶೀಲರು ಆದರೆ ಕಣಕಿದರೆ ಸುಮ್ಮನಿರಲ್ಲ: ನಾರಾಯಣಗೌಡ, ಕರವೇ
ಕನ್ನಡಿಗರು ಸಹನಶೀಲರು ಆದರೆ ಕಣಕಿದರೆ ಸುಮ್ಮನಿರಲ್ಲ: ನಾರಾಯಣಗೌಡ, ಕರವೇ
ನಟ ಕಮಲ್​ ಹಾಸನ್​ಗೆ ಕನ್ನಡದ ಇತಿಹಾಸ ಗೊತ್ತಿಲ್ಲ: ವ್ಯಂಗ್ಯವಾಡಿದ ಸಿಎಂ
ನಟ ಕಮಲ್​ ಹಾಸನ್​ಗೆ ಕನ್ನಡದ ಇತಿಹಾಸ ಗೊತ್ತಿಲ್ಲ: ವ್ಯಂಗ್ಯವಾಡಿದ ಸಿಎಂ
ಆರ್ಮಿ ಜಾಕೆಟ್ ತೊಟ್ಟು ಬೀಗಿದ ಸಿದ್ದರಾಮಯ್ಯ ಮತ್ತು ಶಿವಕುಮಾರ್
ಆರ್ಮಿ ಜಾಕೆಟ್ ತೊಟ್ಟು ಬೀಗಿದ ಸಿದ್ದರಾಮಯ್ಯ ಮತ್ತು ಶಿವಕುಮಾರ್
ಮೇಕೆಗೆ ಸುತ್ತಿಕೊಂಡಿತ್ತು ವಿಷಕಾರಿ ಹಾವು
ಮೇಕೆಗೆ ಸುತ್ತಿಕೊಂಡಿತ್ತು ವಿಷಕಾರಿ ಹಾವು
ರಜೆ ಮೇಲೆ ತೆರಳಿದ್ದ ಸಿಬ್ಬಂದಿಯನ್ನು ವಾಪಸ್ಸು ಕರೆಸಿಕೊಳ್ಳಲಾಗಿದೆ: ವೈದ್ಯ
ರಜೆ ಮೇಲೆ ತೆರಳಿದ್ದ ಸಿಬ್ಬಂದಿಯನ್ನು ವಾಪಸ್ಸು ಕರೆಸಿಕೊಳ್ಳಲಾಗಿದೆ: ವೈದ್ಯ
ಯಾದಗಿರಿ ಜಿಲ್ಲೆಯಲ್ಲಿ ಪ್ರವಾಹದ ಆತಂಕ
ಯಾದಗಿರಿ ಜಿಲ್ಲೆಯಲ್ಲಿ ಪ್ರವಾಹದ ಆತಂಕ