AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Fact Check: ಬಿಗ್ ಬಾಸ್ ಗೆದ್ದ ಬಳಿಕವೂ ಗದ್ದೆಯಲ್ಲಿ ಮರದ ನೆರಳಲ್ಲಿ ಮಲಗಿದ ಹನುಮಂತ?

ಬಿಗ್ ಬಾಸ್ ಗೆದ್ದ ಹನುಮಂತರ ಅವರ ವಿಡಿಯೋ ಒಂದು ವೈರಲ್ ಆಗಿದೆ. ಈ ವಿಡಿಯೋ ಸುಳ್ಳು ಎಂದು ಬಹಿರಂಗವಾಗಿದೆ. ಈ ವಿಡಿಯೋದಲ್ಲಿ ಗದ್ದೆಯಲ್ಲಿ ಮಲಗಿರುವ ಹನುಮಂತರನ್ನು ತೋರಿಸಲಾಗಿದೆ. ಆದರೆ, ಇದು ಹಳೆಯ ವಿಡಿಯೋ. ಹನುಮಂತರು ಪ್ರಸ್ತುತ ಬೆಂಗಳೂರಿನಲ್ಲಿದ್ದಾರೆ ಮತ್ತು ಶೀಘ್ರದಲ್ಲೇ ತಮ್ಮ ಊರಿಗೆ ಹೋಗುವ ಸಾಧ್ಯತೆ ಇದೆ.

Fact Check: ಬಿಗ್ ಬಾಸ್ ಗೆದ್ದ ಬಳಿಕವೂ ಗದ್ದೆಯಲ್ಲಿ ಮರದ ನೆರಳಲ್ಲಿ ಮಲಗಿದ ಹನುಮಂತ?
ಹನುಮಂತ
ರಾಜೇಶ್ ದುಗ್ಗುಮನೆ
|

Updated on:Jan 30, 2025 | 12:23 PM

Share

‘ಬಿಗ್ ಬಾಸ್’ ಗೆದ್ದ ಬಳಿಕ ಸ್ಪರ್ಧಿಗಳಿಗೆ ಸಿಗೋ ಖ್ಯಾತಿ ಅಷ್ಟಿಷ್ಟಲ್ಲ. ಬಿಗ್ ಬಾಸ್ ಗೆದ್ದ ಬಳಿಕ ಸ್ಪರ್ಧಿಗಳು ನಾನಾ ಪ್ರದೇಶಗಳಿಗೆ ಭೇಟಿ ನೀಡುತ್ತಾರೆ. ಅಭಿಮಾನಿಗಳನ್ನು ಭೇಟಿ ಮಾಡಿ ಖುಷಿ ಪಡುತ್ತಾರೆ. ಆದರೆ, ಹನುಮಂತ ಮಾತ್ರ ಸಿಂಪಲ್ ವ್ಯಕ್ತಿ. ಅವರು ಬಿಗ್ ಬಾಸ್ ಗೆದ್ದ ಬಳಿಕವೂ ಗದ್ದೆಯಲ್ಲಿ ಮರದ ನೆರಳಲ್ಲಿ ಮಲಗಿದ್ದಾರೆ ಎನ್ನುವ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ವಿಡಿಯೋದ ಅಸಲಿಯತ್ತು ಇಲ್ಲಿದೆ.

ಸೋಶಿಯಲ್ ಮೀಡಿಯಾದಲ್ಲಿ ಇತ್ತೀಚೆಗೆ ಸಾಕಷ್ಟು ಸುದ್ದಿಗಳು ವೈರಲ್ ಆಗುತ್ತವೆ. ಇದರಲ್ಲಿ ನಿಜ ಯಾವುದು, ಸುಳ್ಳು ಯಾವುದು ಎಂಬುದು ಹೇಳುವುದೇ ಕಷ್ಟ. ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುವ ಎಲ್ಲಾ ವಿಡಿಯೋಗಳನ್ನು ನಂಬಲು ಸಾಧ್ಯವೇ ಇಲ್ಲ. ಅಷ್ಟರಮಟ್ಟಿಗೆ ಪರಿಸ್ಥಿತಿ ಬಂದು ನಿಂತಿದೆ.

ಈಗ ಸೋಶಿಯಲ್ ಮೀಡಿಯಾದಲ್ಲಿ ಹನುಮಂತ ಅವರ ವಿಡಿಯೀ ಒಂದು ವೈರಲ್ ಆಗಿದೆ. ಈ ವಿಡಿಯೋದಲ್ಲಿ ವ್ಯಕ್ತಿಯೋರ್ವ ರಸ್ತೆಯಿಂದ ಹನುಮಂತನ ಭೇಟಿ ಮಾಡಿಸುತ್ತೇನೆ ಎಂದು ಗದ್ದೆ ಕಡೆ ತೆರಳುತ್ತಾರೆ. ಗದ್ದೆಯಲ್ಲಿ ಹನುಮಂತ ಅವರು ಕಂಬಳಿ ಹಾಸಿ, ಮರದ ನೆರಳಲ್ಲಿ ಮಲಗಿರುವ ರೀತಿ ಇದೆ. ‘ಎಲ್ಲರೂ ಬಿಗ್ ಬಾಸ್ ಗೆದ್ರೆ ಟ್ರೋಫಿ ಇಟ್ಟುಕೊಂಡು ರೋಡ್ ಶೋ ಮಾಡುತ್ತಾರೆ, ಆದರೆ ಹನುಮಂತ ನೋಡ್ರಿ’ ಎಂದು ವಿಡಿಯೋಗೆ ಕ್ಯಾಪ್ಶನ್ ಕೊಡಲಾಗಿದೆ.

ಆದರೆ, ಇದರಲ್ಲಿ ಯಾವುದೇ ಸತ್ಯ ಇಲ್ಲ. ಇದು ಹಳೆಯ ವಿಡಿಯೋ. ಹನುಮಂತ ಅವರು ಸದ್ಯ ಬೆಂಗಳೂರಿನಲ್ಲೇ ಇದ್ದಾರೆ. ಅವರು ಇನ್ನೂ ಊರಿಗೆ ತೆರಳಿಲ್ಲ. ಅವರು ‘ಬಾಯ್ಸ್ vs ಗರ್ಲ್ಸ್’ ಶೋನ ಶೂಟಿಂಗ್ ಕೂಡ ಮಾಡಬೇಕಿತ್ತು. ಈ ಕಾರಣದಿಂದ ಅವರು ಬಿಗ್ ಬಾಸ್ ಗೆದ್ದ ಬಳಿಕವೂ ಬೆಂಗಳೂರಲ್ಲೇ ಇದ್ದರು. ಇಂದು (ಜನವರಿ 30) ಅವರು ಊರಿಗೆ ಹೋಗುವ ಸಾಧ್ಯತೆ ಇದೆ. ಹೀಗಾಗಿ, ವೈರಲ್ ಆಗಿರೋದು ಫೇಕ್ ವಿಡಿಯೋ.

ಇದನ್ನೂ ಓದಿ: ಬಿಗ್ ಬಾಸ್ ವಿನ್ನರ್ ಹನುಮಂತನ ಮದುವೆ ಮಾತುಕತೆ ಹೇಗೆ ನಡೆದಿದೆ? ಉತ್ತರ ನೀಡಿದ ತಾಯಿ

ಹನುಮಂತ ಅವರು ಸಿಂಪಲ್ ವ್ಯಕ್ತಿ. ಜೀ ಕನ್ನಡದಲ್ಲಿ ಅವರು ಗಮನ ಸೆಳೆದ ಬಳಿಕವೂ ಊರಲ್ಲಿ ಕುರಿ ಕಾಯುವ ಕೆಲಸ ಮುಂದುವರಿಸಿದ್ದರು. ಈಗ ಬಿಗ್ ಬಾಸ್ ಬಳಿಕ ಅವರು ಏನು ಮಾಡುತ್ತಾರೆ ಎಂಬುದನ್ನು ನೋಡಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 7:09 am, Thu, 30 January 25

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್