ಸಂಗೀತಾ ಜತೆ ಸ್ನೇಹ ಮುಂದುವರಿಯುತ್ತಾ? ನಿರ್ಧಾರ ತಿಳಿಸಿದ ಬಿಗ್​ ಬಾಸ್​ ವಿನ್ನರ್​ ಕಾರ್ತಿಕ್​

‘ಸ್ನೇಹವನ್ನು ಉಪಯೋಗಿಸಿಕೊಳ್ಳುವ ಉದ್ದೇಶ ನನಗೆ ಇಲ್ಲ. ಮುಖದಲ್ಲಿ ಒಂದು ನಗು ಮತ್ತು ನಾಲ್ಕು ಒಳ್ಳೆಯ ಮಾತು ಸಾಕು. ಯಾಕೆಂದರೆ, ಇರುವುದು ಒಂದು ವಾರ ಮಾತ್ರ ಅಂತ ನಾನು ಹೇಳಿದ್ದೆ. ಆದರೆ ಮರುದಿನ ತುಂಬ ಸಣ್ಣ ವಿಷಯಕ್ಕೆ ಮತ್ತೆ ಜಗಳ ಆಯಿತು. ಹಾಗಾಗಿ ಅದು ಹಂಗೆ ಇದ್ದರೇನೇ ಒಳ್ಳೆಯದು’ ಎಂದು ಕಾರ್ತಿಕ್​ ಮಹೇಶ್​ ಹೇಳಿದ್ದಾರೆ.

ಸಂಗೀತಾ ಜತೆ ಸ್ನೇಹ ಮುಂದುವರಿಯುತ್ತಾ? ನಿರ್ಧಾರ ತಿಳಿಸಿದ ಬಿಗ್​ ಬಾಸ್​ ವಿನ್ನರ್​ ಕಾರ್ತಿಕ್​
ಕಾರ್ತಿಕ್​ ಮಹೇಶ್​, ಸಂಗೀತಾ ಶೃಂಗೇರಿ
Follow us
|

Updated on: Jan 29, 2024 | 6:30 PM

‘ಬಿಗ್​ ಬಾಸ್​ ಕನ್ನಡ ಸೀಸನ್​ 10’ (BBK 10) ಶೋನಲ್ಲಿ ಅತಿ ಹೆಚ್ಚು ಚರ್ಚೆ ಆಗಿದ್ದು ಸಂಗೀತಾ ಶೃಂಗೇರಿ ಮತ್ತು ಕಾರ್ತಿಕ್​ ಮಹೇಶ್​ (Karthik Mahesh) ಅವರ ವಿಷಯ. ಮೊದಲು ಸ್ನೇಹಿತರಾಗಿದ್ದ ಅವರು ನಂತರ ಬೇರೆ-ಬೇರೆ ಆದರು. ಹಲವು ಬಾರಿ ಈ ಸ್ನೇಹವನ್ನು ಮುಂದುವರಿಸಲು ಕಾರ್ತಿಕ್​ ಪ್ರಯತ್ನಿಸಿದರೂ ಕೂಡ ಅದಕ್ಕೆ ಸಂಗೀತಾ ಶೃಂಗೇರಿ (Sangeetha Sringeri) ಕಡೆಯಿಂದ ಸಕಾರಾತ್ಮಕ ಪ್ರತಿಕ್ರಿಯೆ ಸಿಕ್ಕಲಿಲ್ಲ. ಈಗ ಬಿಗ್​ ಬಾಸ್​ ಆಟ ಅಂತ್ಯವಾಗಿದೆ. ಕಾರ್ತಿಕ್​ ಅವರು ವಿನ್ನರ್​ ಆಗಿ ಹೊರಹೊಮ್ಮಿದ್ದಾರೆ. ಸಂಗೀತಾ ಶೃಂಗೇರಿ ಅವರು ಎರಡನೇ ರನ್ನರ್​ಅಪ್​ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದ್ದಾರೆ. ದೊಡ್ಮನೆಯಿಂದ ಹೊರಬಂದ ಬಳಿಕ ಸಂಗೀತಾ ಜೊತೆ ಸ್ನೇಹ ಮುಂದುವರಿಸುವ ಕುರಿತು ತಮ್ಮ ನಿರ್ಧಾರ ಏನು ಎಂಬುದನ್ನು ಕಾರ್ತಿಕ್​ ಮಹೇಶ್​ ತಿಳಿಸಿದ್ದಾರೆ. ‘ಟಿವಿ9 ಕನ್ನಡ’ ನಡೆಸಿದ ಸಂದರ್ಶನದಲ್ಲಿ ಅವರು ಈ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ.

ಬಿಗ್​ ಬಾಸ್​ ಗೆದ್ದ ಬಳಿಕ ಕಾರ್ತಿಕ್​ಗೆ ಸಂಗೀತಾ ಏನು ಹೇಳಿದರು ಎಂಬುದನ್ನು ತಿಳಿಯುವ ಕುತೂಹಲ ಎಲ್ಲರಿಗೂ ಇದೆ. ಆ ಪ್ರಶ್ನೆಗೆ ಕಾರ್ತಿಕ್​ ಮಹೇಶ್​ ಉತ್ತರಿಸಿದ್ದಾರೆ. ‘ಅವರು ಏನೂ ಹೇಳಲಿಲ್ಲ. ವಿಶ್​ ಮಾಡಿದರು ಅಷ್ಟೇ’ ಎಂದು ಕಾರ್ತಿಕ್​ ಹೇಳಿದ್ದಾರೆ. ‘ಸಂಗೀತಾ ಜೊತೆ ನಿಮ್ಮ ಸ್ನೇಹ ಮುಂದುವರಿಯುತ್ತಾ’ ಎಂದು ಕೇಳಿದ್ದಕ್ಕೆ ಕಾರ್ತಿಕ್​ ಅವರು ಮನದ ಮಾತನ್ನು ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ‘ಯಾರು ಗೆಲ್ಲಬೇಕು ಅನ್ನೋದು ಫಿಕ್ಸ್​ ಆಗಿತ್ತು’: ಬಿಗ್ ಬಾಸ್​ ಮೇಲೆ ದೊಡ್ಡ ಆರೋಪ

‘ನಾನು ಬಿಗ್​ ಬಾಸ್​ ಮನೆಯೊಳಗೆ ಇದ್ದಾಗಲೇ ಇದನ್ನು ಹೇಳಿದ್ದೆ. ಸ್ನೇಹಕ್ಕಾಗಿ ನಾನು ಈಗಲೂ ಸೋಲೋಕೆ ಸಿದ್ಧ ಎಂದು ಲೆಟರ್​ ಬರೆದು ಹೇಳಿದ್ದೆ. ನಿಮ್ಮ ಸ್ನೇಹವನ್ನು ಉಪಯೋಗಿಸಿಕೊಳ್ಳುವ ಉದ್ದೇಶ ನನಗೆ ಇಲ್ಲ. ಮುಖದಲ್ಲಿ ಒಂದು ನಗು ಮತ್ತು ನಾಲ್ಕು ಒಳ್ಳೆಯ ಮಾತು ಸಾಕು. ಯಾಕೆಂದರೆ, ಇರುವುದು ಒಂದು ವಾರ ಮಾತ್ರ ಅಂತ ನಾನು ಹೇಳಿದ್ದೆ. ಆದರೆ ಮರುದಿನ ತುಂಬ ಸಣ್ಣ ವಿಷಯಕ್ಕೆ ಮತ್ತೆ ಜಗಳ ಆಯಿತು. ಹಾಗಾಗಿ ಅದು ಹಂಗೆ ಇದ್ದರೇನೇ ಒಳ್ಳೆಯದು’ ಎಂದು ಕಾರ್ತಿಕ್​ ಮಹೇಶ್​ ಹೇಳಿದ್ದಾರೆ.

‘ನಾನು ಕಪ್​ ಹಿಡಿದುಕೊಂಡ ಬಂದಾಗ ಎಲ್ಲರೂ ಖುಷಿಪಟ್ಟರು. ವಿನಯ್​ ಔಟ್​ ಆಗಿದ್ದರೂ ಕೂಡ ಕಪ್​ ಹೊಡೆದುಕೊಂಡು ಬಾ ಅಂತ ನನಗೆ ಹೇಳಿದ್ದ. ಅದೆಲ್ಲ ಅವರ ಪ್ರೀತಿ. ತನಿಷಾ ಕೂಡ ಹೊರಗಡೆ ಹೋದ ನಂತರವೂ ಬೆಂಬಲ ನೀಡಿದರು. ಆಟಕ್ಕಾಗಿ ನಾನು ಅವಳನ್ನು ಬಿಟ್ಟುಕೊಟ್ಟರೂ ಅವಳು ನನ್ನನ್ನು ಬಿಟ್ಟುಕೊಡಲಿಲ್ಲ. ಅದಕ್ಕೆ ನಾನು ಅವಳಿಗೆ ಋಣಿ ಆಗಿರುತ್ತೇನೆ. ನನ್ನ ಗೆಲುವನ್ನು ಅವರ ಗೆಲುವು ಎಂಬ ರೀತಿಯಲ್ಲಿ ಖುಷಿಪಟ್ಟರು’ ಎಂದಿದ್ದಾರೆ ಕಾರ್ತಿಕ್​ ಮಹೇಶ್.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
VIDEO: ಮೈದಾನದಲ್ಲೇ ಹೊಡೆದಾಡಿಕೊಂಡ ಬ್ಯಾಟರ್-ಬೌಲರ್..!
VIDEO: ಮೈದಾನದಲ್ಲೇ ಹೊಡೆದಾಡಿಕೊಂಡ ಬ್ಯಾಟರ್-ಬೌಲರ್..!
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ ಲೈವ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ ಲೈವ್​
ಕೊಪ್ಪಳ: ಕೆಸರುಮಯವಾದ ರಸ್ತೆ, ಭತ್ತ ನಾಟಿ ಮಾಡಿ ಗ್ರಾಮಸ್ಥರ ಆಕ್ರೋಶ
ಕೊಪ್ಪಳ: ಕೆಸರುಮಯವಾದ ರಸ್ತೆ, ಭತ್ತ ನಾಟಿ ಮಾಡಿ ಗ್ರಾಮಸ್ಥರ ಆಕ್ರೋಶ