Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹನುಮಂತನ ಆ ಗುಣ ನನ್ನಲ್ಲೂ ಇದೆ: ಸುದೀಪ್ ಹೇಳಿದ ಆ ಗುಣ ಯಾವುದು?

Bigg Bosss Kannada: ಬಿಗ್​ಬಾಸ್ ಕನ್ನಡ ಸೀಸನ್ 11ರ ಫಿನಾಲೆ ಕೆಲವೇ ದಿನಗಳಲ್ಲಿ ನಡೆಯಲಿದೆ. ಹನುಮಂತುಗೆ ಫಿನಾಲೆ ಟಿಕೆಟ್ ದೊರೆತಿದೆ. ಕಳೆದ ವಾರ ಅತ್ಯುತ್ತಮ ಆಟವಾಡಿದ ಹನುಮಂತು ನೇರವಾಗಿ ಫಿನಾಲೆಗೆ ಹೋಗಿದ್ದಾರೆ. ಶನಿವಾರದ ಎಪಿಸೋಡ್​ನಲ್ಲಿ ಸುದೀಪ್ ಈ ಬಗ್ಗೆ ಮಾತನಾಡಿ, ಹನುಮಂತು ಆಟವನ್ನು ಬಹುವಾಗಿ ಕೊಂಡಾಡಿದರು. ಹನುಮಂತು ಅವರ ಗುಣ ನನ್ನಲ್ಲೂ ಇದೆ ಎಂದರು. ಯಾವುದು ಆ ಗುಣ?

ಹನುಮಂತನ ಆ ಗುಣ ನನ್ನಲ್ಲೂ ಇದೆ: ಸುದೀಪ್ ಹೇಳಿದ ಆ ಗುಣ ಯಾವುದು?
Bigg Boss Kannada
Follow us
ಮಂಜುನಾಥ ಸಿ.
|

Updated on: Jan 12, 2025 | 7:08 AM

ಬಿಗ್​ಬಾಸ್ ಕನ್ನಡ ಸೀಸನ್ 11ರ ಫಿನಾಲೆಗೆ ಇನ್ನೊಂದು ವಾರವೇ ಬಾಕಿ ಇದೆ. ಈ ವಾರ ಮುಗಿಯಿತೆಂದರೆ ಶುರುವಾಗುವುದು ಫಿನಾಲೆ ವಾರ. ಇದೀಗ ಮನೆಯಲ್ಲಿ ಸ್ಪರ್ಧಿಗಳ ನಡುವೆ ಆಟ ಜೋರಾಗಿದೆ. ಒಬ್ಬರ ಮೇಲೊಬ್ಬರು ಜಿದ್ದಿಗೆ ಬಿದ್ದವರಂತೆ ಆಡುತ್ತಿದ್ದಾರೆ. ಕೆಲವರು ಅಚಾನಕ್ಕಾಗಿ ಅದ್ಭುತವಾಗಿ ಆಡಲು ಪ್ರಾರಂಭಿಸಿದ್ದಾರೆ. ಇದೆಲ್ಲದರ ಮಧ್ಯೆ ಕಳೆದ ವಾರ ಅದ್ಭುತವಾಗಿ ಆಡಿದ ಹನುಮಂತುಗೆ ಫಿನಾಲೆ ಟಿಕೆಟ್ ದೊರೆತಿದೆ. ಶನಿವಾರದ ಎಪಿಸೋಡ್ ನಡೆಸಿಕೊಡಲು ಬಂದಿದ್ದ ಸುದೀಪ್, ಹನುಮಂತು ಅವರ ಆಟವನ್ನು ಬಹುವಾಗಿ ಕೊಂಡಾಡಿದರು. ‘ಕರ್ನಾಟಕವೇ ಮೆಚ್ಚುವಂತೆ ಆಡುತ್ತಿದ್ದೀರಿ’ ಎಂದರು.

ಹನುಮಂತನ ಆಟದ ವೈಖರಿಯನ್ನು ಹೊಗಳಿದ ಸುದೀಪ್, ‘ಮನೆಯಲ್ಲಿರುವ ಬೇರೆ ಸ್ಪರ್ಧಿಗಳು ಮಾತ್ರವೇ ಅಲ್ಲದೆ ಹೊರಗೆ ಕೂತು ಕಾರ್ಯಕ್ರಮ ವೀಕ್ಷಿಸುತ್ತಿರುವವರು ಸಹ ನಿಮ್ಮಿಂದ ಕಲಿಯಬೇಕಿದೆ’ ಎಂದರು. ಇತರೆ ಸ್ಪರ್ಧಿಗಳಿಗೆ ಹನುಮಂತನ ಆಟ ಹೇಗನ್ನಿಸಿತು ಎಂಬುದನ್ನು ಸುದೀಪ್ ಕೇಳಿದರು. ಆ ವೇಳೆ ಒಬ್ಬೊಬ್ಬರು ಒಂದೊಂದು ರೀತಿ ಹನುಮಂತನ ಆಟವನ್ನು ವಿಶ್ಲೇಷಿಸಿದರು. ಆದರೆ ಭವ್ಯಾ ಮಾತನಾಡುವಾಗ ಋಣಾತ್ಮಕವಾಗಿ ಹೊಗಳಿದರು. ಹನುಮಂತ ಎಲ್ಲವನ್ನೂ ಬಚ್ಚಿಟ್ಟುಕೊಳ್ಳುತ್ತಾನೆ ಬಹಳ ‘ಸ್ಮಾರ್ಟ್’ (ಕಿಲಾಡಿ) ಎಂದರು.

ಕೂಡಲೇ ಮಾತನಾಡಿದ ಸುದೀಪ್, ಆ ಗುಣ ನನ್ನಲ್ಲೂ ಇದೆ. ನಾನು ಸಹ ಏನೂ ಮಾತನಾಡುವುದಿಲ್ಲ, ಏನನ್ನೂ ಹೇಳುವುದಿಲ್ಲ. ನನಗೆ ಹೇಳಲು ಇಷ್ಟ ಇಲ್ಲ ಎಂದಲ್ಲ. ಹೇಳಿದರೆ ಅವರಿಗೆ ಅರ್ಥ ಆಗುವುದಿಲ್ಲ. ವಿತಂಡ ವಾದ ನನಗೆ ಇಷ್ಟವಿಲ್ಲ. ಈ ವಿಷಯದಲ್ಲಿ ಹನುಮಂತನ ಗುಣ ನನ್ನಲ್ಲೂ ಇದೆ, ಹಾಗಿದ್ದರೆ ನಾನೂ ಸಹ ಸ್ಮಾರ್ಟ್​ ಹಾ? ಎಂದು ಪ್ರಶ್ನೆ ಮಾಡಿದರು. ಮುಂದುವರೆದು ಮಾತನಾಡಿದ ಸುದೀಪ್, ಹನುಮಂತನ ಆಟವನ್ನು ವಿಶ್ಲೇಷಣೆ ಮಾಡುತ್ತಾ, ಆತ ಯಾವುದನ್ನೂ ಗಂಭೀರವಾಗಿ ತೆಗೆದುಕೊಳ್ಳುವುದಿಲ್ಲ. ತನ್ನ ಮುಂದಿರುವ ಗುರಿ ನೋಡುತ್ತಾನೆ ಅದನ್ನು ಆಡಿ ಗೆಲ್ಲುತ್ತಾನೆ ಬೇರೆ ಏನೇನೋ ಲೆಕ್ಕಾಚಾರ ಹಾಕುವುದಿಲ್ಲ, ಓವರ್ ಥಿಂಕಿಂಗ್ ಮಾಡುವುದಿಲ್ಲ ಇದೇ ಅವನ ಗೆಲುವಿನ ಸೂತ್ರ.

ಇದನ್ನೂ ಓದಿ:ಯಾರು ಏನೇ ಅರಚಾಡಲಿ, ನಾನು ಅಖಾಡಕ್ಕೆ ಇಳಿಯುವುದು ಆಗಲೇ: ಸುದೀಪ್

ಅವನಿಗೆ ಟಾಸ್ಕ್ ಗೆಲ್ಲುವುದು ಬಿಟ್ಟರೆ ಬೇರೆಯದ್ದರ ಬಗ್ಗೆ ತಲೆ ಕೆಡಿಸಿಕೊಳ್ಳುವುದಿಲ್ಲ. ‘ಎಲ್ಲರೂ ಕಪ್ ಗೆಲ್ಲೋಕೆ ಆಡುತ್ತಿದ್ದಾರೆ ನಾವು ಟಾಸ್ಕ್ ಗೆಲ್ಲೋಣ’ ಎನ್ನುತ್ತಾರೆ ಹನುಮಂತು. ಅವರಷ್ಟು ಸುಲಭವಾಗಿ ಆಟವನ್ನು ತೆಗೆದುಕೊಂಡಿರುವವರನ್ನು ನಾನು ಬಹಳ ಕಡಿಮೆ ನೋಡಿದ್ದೇನೆ. ಯಾರು ಹೀಗೆ ಸಿಂಪಲ್ ಆಗಿ ಆಟವನ್ನು ತೆಗೆದುಕೊಳ್ಳುತ್ತಾರೋ ಅವರೇ ಅಂತಿಮವಾಗಿ ಗೆಲ್ಲುತ್ತಾರೆ. ವಾರಾಂತ್ಯದ ಎಪಿಸೋಡ್​ಗೆ ಎಲ್ಲರೂ ಚೆನ್ನಾಗಿ ಮೇಕಪ್ ಮಾಡಿಕೊಂಡು ಬರುತ್ತಾರೆ, ಈ ವ್ಯಕ್ತಿ ಒಂದು ಶರ್ಟ್, ಪಂಚೆ ತೊಟ್ಟು ಬರುತ್ತಾರೆ ಯಾವುದರ ಬಗ್ಗೆಯೂ ಅತಿಯಾಗಿ ತಲೆ ಕೆಡಿಸಿಕೊಳ್ಳುವುದಿಲ್ಲ. ಮೊದಲ ವಾರ ಟಾಸ್ಕ್ ಆಡಲಾಗದೆ ತಲೆಸುತ್ತಿ ಬಿದ್ದು ಹೋಗಿದ್ದರು, ಈಗ ಕರ್ನಾಟಕವೇ ಮೆಚ್ಚುವಂತೆ ಆಡುತ್ತಿದ್ದಾರೆ’ ಎಂದರು ಸುದೀಪ್.

ಹನುಮಂತು ಮಾತನಾಡಿ, ‘ನಾನೇನು ಗೆಲ್ಲಲೇ ಬೇಕು ಎಂದು ಆಡುವುದಿಲ್ಲ ರೀ, ನನಗೆ ಹೇಗೆ ಬರುತ್ತದೆಯೋ ಹಾಗೆ ಆಡುತ್ತೀನಿ. ಗೆಲ್ಲಲೇ ಬೇಕು ಎಂದು ನಾನು ಆಡಿಯೇ ಇಲ್ಲ. ಟಾಸ್ಕ್ ಗೆಲ್ಲಬೇಕು ಅದಕ್ಕೆ ಏನು ಮಾಡಬೇಕು ಇಷ್ಟೆ ನಾನು ಯೋಚಿಸುವುದು’ ಎಂದರು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಹನಿಮೂನ್ ಟ್ರಿಪ್​ನಲ್ಲಿ ಹೆಂಡ್ತಿಯೊಂದಿಗಿನ ವಿನಯ್ ನರ್ವಾಲ್​​​ ಕೊನೆ ರೀಲ್ಸ್
ಹನಿಮೂನ್ ಟ್ರಿಪ್​ನಲ್ಲಿ ಹೆಂಡ್ತಿಯೊಂದಿಗಿನ ವಿನಯ್ ನರ್ವಾಲ್​​​ ಕೊನೆ ರೀಲ್ಸ್
ಪಹಲ್ಗಾಮ್​ ಭೂಲೋಕದ ಸ್ವರ್ಗ ಎನ್ನುವುದ್ಹೇಕೆ? ಈ ವಿಡಿಯೋ ನೋಡಿ
ಪಹಲ್ಗಾಮ್​ ಭೂಲೋಕದ ಸ್ವರ್ಗ ಎನ್ನುವುದ್ಹೇಕೆ? ಈ ವಿಡಿಯೋ ನೋಡಿ
ಮಂಜುನಾಥ್ ಪಾರ್ಥೀವ ಶರೀರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರು ಬರುವ ನಿರೀಕ್ಷೆ
ಮಂಜುನಾಥ್ ಪಾರ್ಥೀವ ಶರೀರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರು ಬರುವ ನಿರೀಕ್ಷೆ
ಉಗ್ರರ ಅಟ್ಟಹಾಸದಿಂದ ರಕ್ತಪಾತವಾದ ಪಹಲ್ಗಾಮ್ ಈಗ ಹೇಗಿದೆ ನೋಡಿ...
ಉಗ್ರರ ಅಟ್ಟಹಾಸದಿಂದ ರಕ್ತಪಾತವಾದ ಪಹಲ್ಗಾಮ್ ಈಗ ಹೇಗಿದೆ ನೋಡಿ...
ಕಾಶ್ಮೀರದ ಉಗ್ರರ ದಾಳಿ ಬಗ್ಗೆ ಅಮೆರಿಕ ಉಪಾಧ್ಯಕ್ಷ ವ್ಯಾನ್ಸ್ ಹೇಳಿದ್ದೇನು?
ಕಾಶ್ಮೀರದ ಉಗ್ರರ ದಾಳಿ ಬಗ್ಗೆ ಅಮೆರಿಕ ಉಪಾಧ್ಯಕ್ಷ ವ್ಯಾನ್ಸ್ ಹೇಳಿದ್ದೇನು?
ಬಿಜೆಪಿಯಿಂದ ಹೊರಬಿದ್ದ ಬಳಿಕ ಜನಪ್ರಿಯತೆ ಹೆಚ್ಚುತ್ತಾ ಸಾಗಿದೆ: ಯತ್ನಾಳ್
ಬಿಜೆಪಿಯಿಂದ ಹೊರಬಿದ್ದ ಬಳಿಕ ಜನಪ್ರಿಯತೆ ಹೆಚ್ಚುತ್ತಾ ಸಾಗಿದೆ: ಯತ್ನಾಳ್
ಉಗ್ರರಿಗೆ ಪಾಕಿಸ್ತಾನ ತರಬೇತಿ ನೀಡುತ್ತಿರೋದನ್ನು ಖಂಡಿಸಬೇಕು: ಹರಿಪ್ರಸಾದ್​​
ಉಗ್ರರಿಗೆ ಪಾಕಿಸ್ತಾನ ತರಬೇತಿ ನೀಡುತ್ತಿರೋದನ್ನು ಖಂಡಿಸಬೇಕು: ಹರಿಪ್ರಸಾದ್​​
ಪಹಲ್ಗಾಮ್ ದಾಳಿ: ಹುಟ್ಟುಹಬ್ಬ ಆಚರಣೆ ರದ್ದು ಮಾಡಿದ ಯುವ
ಪಹಲ್ಗಾಮ್ ದಾಳಿ: ಹುಟ್ಟುಹಬ್ಬ ಆಚರಣೆ ರದ್ದು ಮಾಡಿದ ಯುವ
ಪಹಲ್ಗಾಮ್‌ ಉಗ್ರರ ದಾಳಿಯಿಂದ ಗ್ರೇಟ್​ ಎಸ್ಕೆಪ್​ ಆದ ಬಾಗಲಕೋಟೆಯ 13 ಮಂದಿ
ಪಹಲ್ಗಾಮ್‌ ಉಗ್ರರ ದಾಳಿಯಿಂದ ಗ್ರೇಟ್​ ಎಸ್ಕೆಪ್​ ಆದ ಬಾಗಲಕೋಟೆಯ 13 ಮಂದಿ
ಉಗ್ರರ ದಾಳಿಗೆ ಬಲಿಯಾದ ಲೆ. ವಿನಯ್ ನರ್ವಾಲ್​ಗೆ ಪತ್ನಿಯಿಂದ ಭಾವುಕ ವಿದಾಯ
ಉಗ್ರರ ದಾಳಿಗೆ ಬಲಿಯಾದ ಲೆ. ವಿನಯ್ ನರ್ವಾಲ್​ಗೆ ಪತ್ನಿಯಿಂದ ಭಾವುಕ ವಿದಾಯ