AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಬ್ಬಬ್ಬಾ ಇದೆಂಥಾ ಜಗಳ; ಕಿತ್ತಾಟದ ವೇಳೆ ರೂಪೇಶ್ ಶೆಟ್ಟಿ ಅಂಗಿಯನ್ನು ಹರಿದ ಪ್ರಶಾಂತ್ ಸಂಬರ್ಗಿ

ಬಿಗ್ ಬಾಸ್​ನಲ್ಲಿ ಗೊಂಬೆ ತಯಾರಿಸುವ ಟಾಸ್ಕ್ ನೀಡಲಾಗಿತ್ತು. ಗೊಂಬೆ ತಯಾರಿಸಲು ಕಚ್ಚಾ ವಸ್ತುಗಳು ಬರುತ್ತವೆ. ಅದನ್ನು ಪಡೆಯಲು ಮನೆ ಮಂದಿ ಮಧ್ಯೆ ಜಗಳ ಏರ್ಪಟ್ಟಿದೆ.

ಅಬ್ಬಬ್ಬಾ ಇದೆಂಥಾ ಜಗಳ; ಕಿತ್ತಾಟದ ವೇಳೆ ರೂಪೇಶ್ ಶೆಟ್ಟಿ ಅಂಗಿಯನ್ನು ಹರಿದ ಪ್ರಶಾಂತ್ ಸಂಬರ್ಗಿ
TV9 Web
| Edited By: |

Updated on:Nov 16, 2022 | 10:39 PM

Share

ಬಿಗ್ ಬಾಸ್ (Bigg Boss) ಮನೆಯಲ್ಲಿ ನವೆಂಬರ್ 16ರ ಎಪಿಸೋಡ್​ನಲ್ಲಿ ದೊಡ್ಡ ಫೈಟ್ ನಡೆದಿದೆ. ಗೊಂಬೆ ತಯಾರಿಸುವ ಟಾಸ್ಕ್​ಗೆ ಇಡೀ ಮನೆ ರಣರಂಗವಾಗಿದೆ. ಪ್ರಶಾಂತ್ ಸಂಬರ್ಗಿ (Prashanth Sambargi) ಹಾಗೂ ರೂಪೇಶ್ ಶೆಟ್ಟಿ ಮಧ್ಯೆ ಭಾರೀ ಜಗಳ ನಡೆದಿದೆ. ರೂಪೇಶ್ ಶೆಟ್ಟಿ ಅವರ ಶರ್ಟ್​​ನ ಪ್ರಶಾಂತ್ ಸಂಬರ್ಗಿ ಕಿತ್ತೆಸೆದಿದ್ದಾರೆ. ಪ್ರಶಾಂತ್ ಸಂಬರ್ಗಿ ನಡೆದುಕೊಳ್ಳುತ್ತಿರುವ ರೀತಿ ಎಲ್ಲರಿಗೂ ಶಾಕ್ ತಂದಿದೆ. ಈ ರೀತಿಯ ಟಾಸ್ಕ್​​ಗಳನ್ನು ನೀಡಬೇಡಿ ಎಂದು ಕೆಲವರು ಕೋರಿದ್ದಾರೆ.

ಬಿಗ್ ಬಾಸ್​ನಲ್ಲಿ ಗೊಂಬೆ ತಯಾರಿಸುವ ಟಾಸ್ಕ್ ನೀಡಲಾಗಿತ್ತು. ಗೊಂಬೆ ತಯಾರಿಸಲು ಕಚ್ಚಾ ವಸ್ತುಗಳು ಬರುತ್ತವೆ. ಅದನ್ನು ಪಡೆಯಲು ಮನೆ ಮಂದಿ ಮಧ್ಯೆ ಜಗಳ ಏರ್ಪಟ್ಟಿದೆ. ಪ್ರಶಾಂತ್ ಸಂಬರ್ಗಿ ಎಲ್ಲರಿಂದಲೂ ವಸ್ತುಗಳನ್ನು ಕಿತ್ತುಕೊಂಡರು ಎನ್ನುವ ಆರೋಪವನ್ನು ಮಾಡಿದರು. ಇದಕ್ಕೆ ಅರುಣ್ ಸಾಗರ್ ಸಿಟ್ಟಾದರು.

‘ಪ್ರಶಾಂತ್ ಸಂಬರ್ಗಿ ಅವರೇ ನೀವು ನಡೆದುಕೊಂಡ ರೀತಿ ಸರಿ ಇಲ್ಲ. ನಾನು ಈಗ ಸಂಬರ್ಗಿ ಆಡಿದ ರೀತಿಯೇ ಆಡುತ್ತೇನೆ’ ಎಂದು ಚಾಲೆಂಜ್ ಮಾಡಿದರು. ಅದೇ ರೀತಿ ನಡೆದುಕೊಂಡರು. ಅವರು ಕೂಡ ವೈಲೆಂಟ್ ಆಗಿ ಆಟ ಆಡಿದರು. ಇದನ್ನು ನೋಡಿ ಮನೆ ಮಂದಿಗೆ ಭಯ ಆಯಿತು.

ಇದನ್ನೂ ಓದಿ
Image
Bigg Boss Elimination: ಬಿಗ್​ ಬಾಸ್​ನಲ್ಲಿ ದರ್ಶ್​ ಆಟ ಅಂತ್ಯ; 3ನೇ ವಾರದ ಎಲಿಮಿನೇಷನ್​ನಲ್ಲಿ ಮಯೂರಿ ಸೇಫ್​
Image
BBK9: ಬಿಗ್​ ಬಾಸ್​ ಮೇಲೆ ಮ್ಯಾಚ್​ ಫಿಕ್ಸಿಂಗ್​ ಆರೋಪ; ಗುರೂಜಿ ವಿರುದ್ಧ ಗುಡುಗಿದ ಸುದೀಪ್​
Image
BBK9: ಬಿಗ್​ ಬಾಸ್​ 2ನೇ ವಾರ ನವಾಜ್​ ಎಲಿಮಿನೇಟ್​; ದೊಡ್ಮನೆಯಲ್ಲಿ ನಡೆಯಲಿಲ್ಲ ಪ್ರಾಸದ ಆಟ
Image
BBK9: ಬಿಗ್​ ಬಾಸ್​ನಿಂದ ಐಶ್ವರ್ಯಾ ಪಿಸ್ಸೆ ಎಲಿಮಿನೇಟ್​; ಒಂದೇ ವಾರಕ್ಕೆ ಮುಗಿಯಿತು ದೊಡ್ಮನೆ ಆಟ

ರೂಪೇಶ್ ಶೆಟ್ಟಿ ಅವರಿಂದ ಪ್ರಶಾಂತ್ ಸಂಬರ್ಗಿ ವಸ್ತುಗಳನ್ನು ಕದಿಯಲು ಪ್ರಯತ್ನಿಸಿದರು ಎಂಬ ಆರೋಪ ಕೇಳಿ ಬಂತು. ಪ್ರಶಾಂತ್ ಸಂಬರ್ಗಿ ಹಾಗೂ ರೂಪೇಶ್ ಶೆಟ್ಟಿ ಜಗಳ ಮಾಡಿಕೊಂಡರು. ರೂಪೇಶ್ ಶೆಟ್ಟಿಯ ಅಂಗಿಯನ್ನು ಹಿಡಿದು ಪ್ರಶಾಂತ್ ಸಂಬರ್ಗಿ ಎಳೆದಾಡಿದರು. ರೂಪೇಶ್ ಶೆಟ್ಟಿಯ ಅಂಗಿ ಕಳಚಿತು.

ಇದನ್ನೂ ಓದಿ: ಪ್ರಶಾಂತ್ ಸಂಬರ್ಗಿ, ಅನುಪಮಾ ಗೌಡಗೆ ಸಖತ್ ಆಗಿ ಕ್ಲಾಸ್ ತೆಗೆದುಕೊಂಡ ಕಿಚ್ಚ ಸುದೀಪ್

ಈ ಕಿತ್ತಾಟ ನೋಡಿ ಮನೆ ಮಂದಿ ಭಯಗೊಂಡರು. ಪ್ರಶಾಂತ್ ಸಂಬರ್ಗಿ ‘ನಾನು ಏನೂ ಮಾಡಿಲ್ಲ’ ಎಂದು ವಾದಿಸುತ್ತಾ ಬಂದರು. ಪ್ರಶಾಂತ್ ಸಂಬರ್ಗಿ ಎಲ್ಲರಿಗೂ ಹಾನಿ ಮಾಡಿದ್ದಾರೆ ಎನ್ನುವ ಆರೋಪ ಕೇಳಿ ಬಂತು. ಒಟ್ಟಾರೆ ಇಡೀ ಮನೆ ವೈಲೆಂಟ್ ಆಯಿತು.

Published On - 10:25 pm, Wed, 16 November 22

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್