AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಬ್ಬಬ್ಬಾ ಇದೆಂಥಾ ಜಗಳ; ಕಿತ್ತಾಟದ ವೇಳೆ ರೂಪೇಶ್ ಶೆಟ್ಟಿ ಅಂಗಿಯನ್ನು ಹರಿದ ಪ್ರಶಾಂತ್ ಸಂಬರ್ಗಿ

ಬಿಗ್ ಬಾಸ್​ನಲ್ಲಿ ಗೊಂಬೆ ತಯಾರಿಸುವ ಟಾಸ್ಕ್ ನೀಡಲಾಗಿತ್ತು. ಗೊಂಬೆ ತಯಾರಿಸಲು ಕಚ್ಚಾ ವಸ್ತುಗಳು ಬರುತ್ತವೆ. ಅದನ್ನು ಪಡೆಯಲು ಮನೆ ಮಂದಿ ಮಧ್ಯೆ ಜಗಳ ಏರ್ಪಟ್ಟಿದೆ.

ಅಬ್ಬಬ್ಬಾ ಇದೆಂಥಾ ಜಗಳ; ಕಿತ್ತಾಟದ ವೇಳೆ ರೂಪೇಶ್ ಶೆಟ್ಟಿ ಅಂಗಿಯನ್ನು ಹರಿದ ಪ್ರಶಾಂತ್ ಸಂಬರ್ಗಿ
TV9 Web
| Updated By: ರಾಜೇಶ್ ದುಗ್ಗುಮನೆ|

Updated on:Nov 16, 2022 | 10:39 PM

Share

ಬಿಗ್ ಬಾಸ್ (Bigg Boss) ಮನೆಯಲ್ಲಿ ನವೆಂಬರ್ 16ರ ಎಪಿಸೋಡ್​ನಲ್ಲಿ ದೊಡ್ಡ ಫೈಟ್ ನಡೆದಿದೆ. ಗೊಂಬೆ ತಯಾರಿಸುವ ಟಾಸ್ಕ್​ಗೆ ಇಡೀ ಮನೆ ರಣರಂಗವಾಗಿದೆ. ಪ್ರಶಾಂತ್ ಸಂಬರ್ಗಿ (Prashanth Sambargi) ಹಾಗೂ ರೂಪೇಶ್ ಶೆಟ್ಟಿ ಮಧ್ಯೆ ಭಾರೀ ಜಗಳ ನಡೆದಿದೆ. ರೂಪೇಶ್ ಶೆಟ್ಟಿ ಅವರ ಶರ್ಟ್​​ನ ಪ್ರಶಾಂತ್ ಸಂಬರ್ಗಿ ಕಿತ್ತೆಸೆದಿದ್ದಾರೆ. ಪ್ರಶಾಂತ್ ಸಂಬರ್ಗಿ ನಡೆದುಕೊಳ್ಳುತ್ತಿರುವ ರೀತಿ ಎಲ್ಲರಿಗೂ ಶಾಕ್ ತಂದಿದೆ. ಈ ರೀತಿಯ ಟಾಸ್ಕ್​​ಗಳನ್ನು ನೀಡಬೇಡಿ ಎಂದು ಕೆಲವರು ಕೋರಿದ್ದಾರೆ.

ಬಿಗ್ ಬಾಸ್​ನಲ್ಲಿ ಗೊಂಬೆ ತಯಾರಿಸುವ ಟಾಸ್ಕ್ ನೀಡಲಾಗಿತ್ತು. ಗೊಂಬೆ ತಯಾರಿಸಲು ಕಚ್ಚಾ ವಸ್ತುಗಳು ಬರುತ್ತವೆ. ಅದನ್ನು ಪಡೆಯಲು ಮನೆ ಮಂದಿ ಮಧ್ಯೆ ಜಗಳ ಏರ್ಪಟ್ಟಿದೆ. ಪ್ರಶಾಂತ್ ಸಂಬರ್ಗಿ ಎಲ್ಲರಿಂದಲೂ ವಸ್ತುಗಳನ್ನು ಕಿತ್ತುಕೊಂಡರು ಎನ್ನುವ ಆರೋಪವನ್ನು ಮಾಡಿದರು. ಇದಕ್ಕೆ ಅರುಣ್ ಸಾಗರ್ ಸಿಟ್ಟಾದರು.

‘ಪ್ರಶಾಂತ್ ಸಂಬರ್ಗಿ ಅವರೇ ನೀವು ನಡೆದುಕೊಂಡ ರೀತಿ ಸರಿ ಇಲ್ಲ. ನಾನು ಈಗ ಸಂಬರ್ಗಿ ಆಡಿದ ರೀತಿಯೇ ಆಡುತ್ತೇನೆ’ ಎಂದು ಚಾಲೆಂಜ್ ಮಾಡಿದರು. ಅದೇ ರೀತಿ ನಡೆದುಕೊಂಡರು. ಅವರು ಕೂಡ ವೈಲೆಂಟ್ ಆಗಿ ಆಟ ಆಡಿದರು. ಇದನ್ನು ನೋಡಿ ಮನೆ ಮಂದಿಗೆ ಭಯ ಆಯಿತು.

ಇದನ್ನೂ ಓದಿ
Image
Bigg Boss Elimination: ಬಿಗ್​ ಬಾಸ್​ನಲ್ಲಿ ದರ್ಶ್​ ಆಟ ಅಂತ್ಯ; 3ನೇ ವಾರದ ಎಲಿಮಿನೇಷನ್​ನಲ್ಲಿ ಮಯೂರಿ ಸೇಫ್​
Image
BBK9: ಬಿಗ್​ ಬಾಸ್​ ಮೇಲೆ ಮ್ಯಾಚ್​ ಫಿಕ್ಸಿಂಗ್​ ಆರೋಪ; ಗುರೂಜಿ ವಿರುದ್ಧ ಗುಡುಗಿದ ಸುದೀಪ್​
Image
BBK9: ಬಿಗ್​ ಬಾಸ್​ 2ನೇ ವಾರ ನವಾಜ್​ ಎಲಿಮಿನೇಟ್​; ದೊಡ್ಮನೆಯಲ್ಲಿ ನಡೆಯಲಿಲ್ಲ ಪ್ರಾಸದ ಆಟ
Image
BBK9: ಬಿಗ್​ ಬಾಸ್​ನಿಂದ ಐಶ್ವರ್ಯಾ ಪಿಸ್ಸೆ ಎಲಿಮಿನೇಟ್​; ಒಂದೇ ವಾರಕ್ಕೆ ಮುಗಿಯಿತು ದೊಡ್ಮನೆ ಆಟ

ರೂಪೇಶ್ ಶೆಟ್ಟಿ ಅವರಿಂದ ಪ್ರಶಾಂತ್ ಸಂಬರ್ಗಿ ವಸ್ತುಗಳನ್ನು ಕದಿಯಲು ಪ್ರಯತ್ನಿಸಿದರು ಎಂಬ ಆರೋಪ ಕೇಳಿ ಬಂತು. ಪ್ರಶಾಂತ್ ಸಂಬರ್ಗಿ ಹಾಗೂ ರೂಪೇಶ್ ಶೆಟ್ಟಿ ಜಗಳ ಮಾಡಿಕೊಂಡರು. ರೂಪೇಶ್ ಶೆಟ್ಟಿಯ ಅಂಗಿಯನ್ನು ಹಿಡಿದು ಪ್ರಶಾಂತ್ ಸಂಬರ್ಗಿ ಎಳೆದಾಡಿದರು. ರೂಪೇಶ್ ಶೆಟ್ಟಿಯ ಅಂಗಿ ಕಳಚಿತು.

ಇದನ್ನೂ ಓದಿ: ಪ್ರಶಾಂತ್ ಸಂಬರ್ಗಿ, ಅನುಪಮಾ ಗೌಡಗೆ ಸಖತ್ ಆಗಿ ಕ್ಲಾಸ್ ತೆಗೆದುಕೊಂಡ ಕಿಚ್ಚ ಸುದೀಪ್

ಈ ಕಿತ್ತಾಟ ನೋಡಿ ಮನೆ ಮಂದಿ ಭಯಗೊಂಡರು. ಪ್ರಶಾಂತ್ ಸಂಬರ್ಗಿ ‘ನಾನು ಏನೂ ಮಾಡಿಲ್ಲ’ ಎಂದು ವಾದಿಸುತ್ತಾ ಬಂದರು. ಪ್ರಶಾಂತ್ ಸಂಬರ್ಗಿ ಎಲ್ಲರಿಗೂ ಹಾನಿ ಮಾಡಿದ್ದಾರೆ ಎನ್ನುವ ಆರೋಪ ಕೇಳಿ ಬಂತು. ಒಟ್ಟಾರೆ ಇಡೀ ಮನೆ ವೈಲೆಂಟ್ ಆಯಿತು.

Published On - 10:25 pm, Wed, 16 November 22

ವಿಷ್ಣುವರ್ಧನ್​​ಗೆ ಕರ್ನಾಟಕ ರತ್ನ ನೀಡುವ ಬಗ್ಗೆ ಸಿಎಂ ಸಕಾರಾತ್ಮಕ ಸ್ಪಂದನೆ
ವಿಷ್ಣುವರ್ಧನ್​​ಗೆ ಕರ್ನಾಟಕ ರತ್ನ ನೀಡುವ ಬಗ್ಗೆ ಸಿಎಂ ಸಕಾರಾತ್ಮಕ ಸ್ಪಂದನೆ
ಅಪಾಯದ ಮಟ್ಟ ಮೀರಿದ ಜಮ್ಮು-ಕಾಶ್ಮೀರದ ಝೀಲಂ ನದಿ, ಪ್ರವಾಹದ ಎಚ್ಚರಿಕೆ
ಅಪಾಯದ ಮಟ್ಟ ಮೀರಿದ ಜಮ್ಮು-ಕಾಶ್ಮೀರದ ಝೀಲಂ ನದಿ, ಪ್ರವಾಹದ ಎಚ್ಚರಿಕೆ
ಬಾನು ಮುಸ್ತಾಕ್ ಮನೆಯಲ್ಲಿ ಕುರಾನ್ ಜತೆ ಭಗವದ್ಗೀತೆ
ಬಾನು ಮುಸ್ತಾಕ್ ಮನೆಯಲ್ಲಿ ಕುರಾನ್ ಜತೆ ಭಗವದ್ಗೀತೆ
ಮೈಸೂರು ದಸರಾ ಉದ್ಘಾಟನೆ: ಫಲತಾಂಬೂಲ ನೀಡಿ ಬಾನು ಮುಸ್ತಾಕ್​ಗೆ ಆಹ್ವಾನ
ಮೈಸೂರು ದಸರಾ ಉದ್ಘಾಟನೆ: ಫಲತಾಂಬೂಲ ನೀಡಿ ಬಾನು ಮುಸ್ತಾಕ್​ಗೆ ಆಹ್ವಾನ
ಕೇದಾರನಾಥ- ಸೋನ್‌ಪ್ರಯಾಗ ಮಾರ್ಗದಲ್ಲಿ ಭೂಕುಸಿತ; ಹಲವಾರು ವಾಹನಗಳಿಗೆ ಹಾನಿ
ಕೇದಾರನಾಥ- ಸೋನ್‌ಪ್ರಯಾಗ ಮಾರ್ಗದಲ್ಲಿ ಭೂಕುಸಿತ; ಹಲವಾರು ವಾಹನಗಳಿಗೆ ಹಾನಿ
ರಾಧಿಕಾ ಕುಮಾರಸ್ವಾಮಿ ಜತೆಗಿನ ಹಣಕಾಸಿನ ವ್ಯವಹಾರ ಬಗ್ಗೆ ಜಮೀರ್ ಸ್ಪಷ್ಟನೆ
ರಾಧಿಕಾ ಕುಮಾರಸ್ವಾಮಿ ಜತೆಗಿನ ಹಣಕಾಸಿನ ವ್ಯವಹಾರ ಬಗ್ಗೆ ಜಮೀರ್ ಸ್ಪಷ್ಟನೆ
ಜಮೀರ್ ಅಹಮ್ಮದ್​​ ಜೊತೆಗಿನ ಹಣಕಾಸಿನ ವ್ಯವಹಾರ ಬಿಚ್ಚಿಟ್ಟ ಕೆಜಿಎಫ್ ಬಾಬು
ಜಮೀರ್ ಅಹಮ್ಮದ್​​ ಜೊತೆಗಿನ ಹಣಕಾಸಿನ ವ್ಯವಹಾರ ಬಿಚ್ಚಿಟ್ಟ ಕೆಜಿಎಫ್ ಬಾಬು
ಬಿಜೆಪಿ ಸೇರ್ಪಡೆ ಬಗ್ಗೆ ಮಾಜಿ ಸಚಿವ ಕೆಎನ್ ರಾಜಣ್ಣ ಹೇಳಿದ್ದಿಷ್ಟು
ಬಿಜೆಪಿ ಸೇರ್ಪಡೆ ಬಗ್ಗೆ ಮಾಜಿ ಸಚಿವ ಕೆಎನ್ ರಾಜಣ್ಣ ಹೇಳಿದ್ದಿಷ್ಟು
ವಿಷ್ಣು ಸ್ಮಾರಕ: ಸಿಎಂ ಭೇಟಿ ಬಳಿಕ ಹಿರಿಯ ನಟಿ ಭಾರತಿ ಹೇಳಿದ್ದು ಹೀಗೆ
ವಿಷ್ಣು ಸ್ಮಾರಕ: ಸಿಎಂ ಭೇಟಿ ಬಳಿಕ ಹಿರಿಯ ನಟಿ ಭಾರತಿ ಹೇಳಿದ್ದು ಹೀಗೆ
ಧರ್ಮಸ್ಥಳ ಪ್ರಕರಣ: ಎನ್​ಐಎಗೆ ವಹಿಸುವ ಬಗ್ಗೆ ಶಾ ಭೇಟಿ ಮಾಡಲಿರುವ ಹೆಚ್​ಡಿಕೆ
ಧರ್ಮಸ್ಥಳ ಪ್ರಕರಣ: ಎನ್​ಐಎಗೆ ವಹಿಸುವ ಬಗ್ಗೆ ಶಾ ಭೇಟಿ ಮಾಡಲಿರುವ ಹೆಚ್​ಡಿಕೆ