ಯುವತಿಯ ಖಾಸಗಿ ಫೋಟೋ ಇಟ್ಟುಕೊಂಡು ಬ್ಲ್ಯಾಕ್​ಮೇಲ್; ಕಿರುತೆರೆ ನಟ ವರುಣ್ ಆರಾಧ್ಯ ವಿರುದ್ಧ ಕೇಸ್

ಧಾರಾವಾಹಿ ನಟ ವರುಣ್​ ಆರಾಧ್ಯ ವಿರುದ್ಧ ಐಟಿ ಕಾಯ್ದೆ ಅನ್ವಯ ಕೇಸ್​ ದಾಖಲು ಮಾಡಿಕೊಳ್ಳಲಾಗಿದ್ದು, ಪೊಲೀಸರು ವಿಚಾರಣೆ ಆರಂಭಿಸಿದ್ದಾರೆ. ಪ್ರೀತಿಸಿದ ಹುಡುಗಿಯ ಖಾಸಗಿ ಫೋಟೋಗಳನ್ನು ಇಟ್ಟುಕೊಂಡು ಬ್ಲ್ಯಾಕ್​ಮೇಲ್​ ಮಾಡಿದ ಆರೋಪ ವರುಣ್​ ಆರಾಧ್ಯ ಮೇಲಿದೆ. ನಟನ ಫೋನ್​ನಲ್ಲಿ ಇನ್ನೋರ್ವ ಯುವತಿಯ ಖಾಸಗಿ ಫೋಟೋಗಳು ಇವೆ ಎನ್ನಲಾಗಿದೆ.

ಯುವತಿಯ ಖಾಸಗಿ ಫೋಟೋ ಇಟ್ಟುಕೊಂಡು ಬ್ಲ್ಯಾಕ್​ಮೇಲ್; ಕಿರುತೆರೆ ನಟ ವರುಣ್ ಆರಾಧ್ಯ ವಿರುದ್ಧ ಕೇಸ್
ವರುಣ್ ಆರಾಧ್ಯ
Follow us
| Updated By: ಮದನ್​ ಕುಮಾರ್​

Updated on: Sep 11, 2024 | 5:37 PM

ಕಿರುತೆರೆಯ ಸೀರಿಯಲ್​ಗಳಲ್ಲಿ ನಟಿಸಿರುವ ವರುಣ್​ ಆರಾಧ್ಯ ವಿರುದ್ಧ ಗಂಭೀರ ಆರೋಪ ಎದುರಾಗಿದೆ. ಪ್ರೀತಿಸಿದ ಯುವತಿಯ ಖಾಸಗಿ ಫೋಟೋ ಇಟ್ಟುಕೊಂಡು ಈತ ಬ್ಲ್ಯಾಕ್​ಮೇಲ್ ಮಾಡಿದ್ದಾನೆ ಎನ್ನಲಾಗಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಪಶ್ಚಿಮ ವಿಭಾಗದ CEN​ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಐಟಿ ಕಾಯ್ದೆ ಅನ್ವಯ ವರುಣ್ ಆರಾಧ್ಯ ವಿರುದ್ಧ ದೂರು ದಾಖಲು ಮಾಡಿಕೊಳ್ಳಲಾಗಿದೆ. ಈ ಹಿಂದೆ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದ ವರುಣ್ಯ ಆರಾಧ್ಯ ನಂತರ ಬ್ರೇಕಪ್ ಮಾಡಿಕೊಂಡಿದ್ದ. ಈಗ ಬೇರೊಬ್ಬ ಯುವತಿಯನ್ನು ಪ್ರೀತಿಸುತ್ತಿದ್ದಾನೆ ಎನ್ನಲಾಗಿದೆ. ಬ್ರೇಕಪ್​ ಆದರೂ ಫೋಟೋ ಇಟ್ಟುಕೊಂಡು ಬ್ಲ್ಯಾಕ್​ಮೇಲ್ ಮಾಡಿದ ಆರೋಪದಲ್ಲಿ ಕೇಸ್​ ದಾಖಲಾಗಿದೆ.

2019ರಲ್ಲಿ ಸಾಮಾಜಿಕ ‌ಜಾಲತಾಣದಲ್ಲಿ‌ ಪರಿಚಯವಾಗಿದ್ದ‌ ಯುವತಿಯ ಜತೆ ನಟ ವರುಣ್​ ಆರಾಧ್ಯ ಪ್ರೀತಿಯಲ್ಲಿ ಬಿದ್ದಿದ್ದ. ಜಾಲತಾಣದ ಮಾರ್ಕೆಟಿಂಗ್ ‌ಮಾಡ್ತಿದ್ದ ಯುವತಿಯನ್ನು ಪ್ರೀತಿಸಿ ವಂಚನೆ ಮಾಡಿದ್ದಾನೆ ಎಂಬ ಆರೋಪ ಎದುರಾಗಿದೆ. ಸುಮಾರು ‌ನಾಲ್ಕು ವರ್ಷಗಳ ಕಾಲ ಪರಸ್ಪರ ‌ಪ್ರೀತಿ‌ಯಲ್ಲಿದ್ದ ಜೋಡಿಯ ನಡುವೆ ನಂತರ ಬಿರುಕು ಮೂಡಿತು. ಖಾಸಗಿ ಫೋಟೋವನ್ನು ಜಾಲತಾಣದಲ್ಲಿ ಹರಿಬಿಡುವುದಾಗಿ ಬ್ಲ್ಯಾಕ್​ಮೇಲ್ ಮಾಡಿದ್ದಾನೆ ಎಂಬ ಆರೋಪ ಕೇಳಿಬಂದಿದೆ.

ಇದನ್ನೂ ಓದಿ: ಖಾಸಗಿ ಫೋಟೋ ಇಟ್ಟುಕೊಂಡು ಬ್ಲಾಕ್​ಮೇಲ್ ಮಾಡಿದ್ದಕ್ಕೆ ಮಹಿಳೆ ಆತ್ಮಹತ್ಯೆ​; ‘ಪುಷ್ಪ’ ಚಿತ್ರದ ನಟ ಅರೆಸ್ಟ್​

2023ರಲ್ಲಿ ವರುಣ್ ಮೊಬೈಲ್​ ‌ನೋಡುವಾಗ ಯುವತಿಗೆ‌ ಆಘಾತ ಆಯಿತು. ಫೋನ್​ನಲ್ಲಿ‌ ಮತ್ತೊಬ್ಬ ‌ಯುವತಿಯ ಜೊತೆಗಿದ್ದ ಖಾಸಗಿ ‌ಫೋಟೋ ಪತ್ತೆ ಆದವು. ಈ‌ ಬಗ್ಗೆ ಪ್ರಶ್ನೆ ಮಾಡಿ ಬ್ರೇಕಪ್ ಮಾಡಿಕೊಳ್ಳಲು ಯುವತಿ ಮುಂದಾದಾಗ ಬೇರೆ ಹುಡುಗಿ ಜೊತೆಗಿನ ಸಂಪರ್ಕದ ಬಗ್ಗೆ ಮಾಹಿತಿ ಬಹಿರಂಗ ಮಾಡದಂತೆ ಬೆದರಿಕೆ ಹಾಕಿದ್ದಾನೆ. ಖಾಸಗಿ ಫೋಟೋ ಬಗ್ಗೆ ಬಾಯಿಬಿಡದಂತೆ ಮಾಜಿ‌ ಪ್ರಿಯತಮೆಗೆ ಧಮ್ಕಿ ಹಾಕಿದ್ದಾನೆ.

ಇದನ್ನೂ ಓದಿ: ‘ಆತಂಕ ಬೇಡ, ನಾನು ಆರೋಗ್ಯವಾಗಿದ್ದೇನೆ’; ಹೆಲ್ತ್​ ಬಗ್ಗೆ ಅಪ್​ಡೇಟ್ ಕೊಟ್ಟ ಕಿರಣ್ ರಾಜ್

ಪ್ರೀತಿಸಿದ ಯುವತಿಗೆ ತನ್ನ ಜೊತೆಯಲ್ಲಿರುವ ಖಾಸಗಿ ‌ಫೋಟೋ ಕಳುಹಿಸಿ‌ ಬ್ಲ್ಯಾಕ್​ಮೇಲ್ ಮಾಡಿದ್ದಾನೆ. ‘ನನ್ನ ಬಳಿ ನಿನ್ನ ಜೊತೆಗಿರುವ ಖಾಸಗಿ ‌ಫೋಟೋ‌, ವಿಡಿಯೋಗಳಿವೆ. ನೀ‌ನು‌ ನನ್ನ ವಿಚಾರ ಬಾಯಿಬಿಟ್ಟರೆ‌ ಖಾಸಗಿ ಪೋಟೋ ಹರಿಬಿಡ್ತೇನೆ. ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್​ ಮಾಡುತ್ತೇನೆ’ ಎಂದು ಬ್ಲ್ಯಾಕ್​ಮೇಲ್ ಮಾಡಿದ್ದಾನೆ. ಈ ದೂರಿಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿಕೊಂಡು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಬಿಜೆಪಿ ಶಾಸಕ ಮುನಿರತ್ನ ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್
ಬಿಜೆಪಿ ಶಾಸಕ ಮುನಿರತ್ನ ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್
ಚಹಾ ಕುಡಿಯುತ್ತಾ ಒಡಿಶಾದ ಮಹಿಳೆಯರ ಜೊತೆ ಪ್ರಧಾನಿ ಮೋದಿ ಸಂವಾದ
ಚಹಾ ಕುಡಿಯುತ್ತಾ ಒಡಿಶಾದ ಮಹಿಳೆಯರ ಜೊತೆ ಪ್ರಧಾನಿ ಮೋದಿ ಸಂವಾದ
ದರ್ಶನ್ ಪ್ರಕರಣ: ಉಪೇಂದ್ರ ಮೊದಲ ಪ್ರತಿಕ್ರಿಯೆ ಹೀಗಿತ್ತು
ದರ್ಶನ್ ಪ್ರಕರಣ: ಉಪೇಂದ್ರ ಮೊದಲ ಪ್ರತಿಕ್ರಿಯೆ ಹೀಗಿತ್ತು
ಕಗ್ಗತ್ತಲ ರಾತ್ರಿ, ನಡು ರಸ್ತೆಯಲ್ಲಿ ಹುಲಿರಾಯನ ಓಡಾಟ; ವಿಡಿಯೋ ಸೆರೆ
ಕಗ್ಗತ್ತಲ ರಾತ್ರಿ, ನಡು ರಸ್ತೆಯಲ್ಲಿ ಹುಲಿರಾಯನ ಓಡಾಟ; ವಿಡಿಯೋ ಸೆರೆ
ಬಿಜೆಪಿ ಕಾರ್ಯಾಲಯದಲ್ಲಿ ರಂಗೋಲಿಯಲ್ಲಿ ಅರಳಿದ ಪ್ರಧಾನಿ ಮೋದಿ ಭಾವಚಿತ್ರ
ಬಿಜೆಪಿ ಕಾರ್ಯಾಲಯದಲ್ಲಿ ರಂಗೋಲಿಯಲ್ಲಿ ಅರಳಿದ ಪ್ರಧಾನಿ ಮೋದಿ ಭಾವಚಿತ್ರ
ರಿಲಯನ್ಸ್ ಜಿಯೋ 4G ಫೀಚರ್ ಫೋನ್​ ದೇಶದ ಮಾರುಕಟ್ಟೆಗೆ ಬಿಡುಗಡೆ
ರಿಲಯನ್ಸ್ ಜಿಯೋ 4G ಫೀಚರ್ ಫೋನ್​ ದೇಶದ ಮಾರುಕಟ್ಟೆಗೆ ಬಿಡುಗಡೆ
ಧರ್ಮಸ್ಥಳ ಸಂಘದ ಬಗ್ಗೆ ಕಾಂಗ್ರೆಸ್ ಶಾಸಕ ನರೇಂದ್ರಸ್ವಾಮಿ ಆಘಾತಕಾರಿ ಹೇಳಿಕೆ
ಧರ್ಮಸ್ಥಳ ಸಂಘದ ಬಗ್ಗೆ ಕಾಂಗ್ರೆಸ್ ಶಾಸಕ ನರೇಂದ್ರಸ್ವಾಮಿ ಆಘಾತಕಾರಿ ಹೇಳಿಕೆ
ನಾವು ಸೇಡು ತೀರಿಸಿಕೊಂಡರೆ ಬಿಜೆಪಿಗೆ ಜೈಲುಗಳು ಸಾಕಾಗಲ್ಲ: ಹೆಬ್ಬಾಳ್ಕರ್
ನಾವು ಸೇಡು ತೀರಿಸಿಕೊಂಡರೆ ಬಿಜೆಪಿಗೆ ಜೈಲುಗಳು ಸಾಕಾಗಲ್ಲ: ಹೆಬ್ಬಾಳ್ಕರ್
‘ಕನ್ನಡ ಚಿತ್ರರಂಗಕ್ಕೆ ಸಮಿತಿ ಬೇಡ, ಇದರಿಂದ ಚಿತ್ರರಂಗಕ್ಕೆ ನಷ್ಟ’; ಗೋವಿಂದು
‘ಕನ್ನಡ ಚಿತ್ರರಂಗಕ್ಕೆ ಸಮಿತಿ ಬೇಡ, ಇದರಿಂದ ಚಿತ್ರರಂಗಕ್ಕೆ ನಷ್ಟ’; ಗೋವಿಂದು
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ