AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾಪಸ್ ಕರೆಸಬೇಕು ಅಂದ್ರೆ ಹುಚ್ಚ ವೆಂಕಟ್​ನೂ ಕರೆಸಬೇಕಾಗತ್ತೆ, ಅದು ಆಗಲ್ಲ: ಸುದೀಪ್ ಖಡಕ್ ನಿರ್ಧಾರ

ಜಗದೀಶ್ ಮಾಡಿದ ಅವಾಂತರದಿಂದ ಇಡೀ ಬಿಗ್ ಬಾಸ್ ಮನೆಯ ವಾತಾವರಣ ಹಾಳಾಗಿದೆ. ಅವರ ಮೇಲೆ ಕೈ ಮಾಡಿದ್ದಕ್ಕಾಗಿ ರಂಜಿತ್ ಅವರನ್ನು ಹೊರಗೆ ಹಾಕಲಾಗಿದೆ. ಆದರೆ ತಮ್ಮನ್ನು ಮತ್ತೆ ಬಿಗ್ ಬಾಸ್​ ಮನೆಗೆ ಕರೆಸಿಕೊಳ್ಳಿ ಎಂದು ಜಗದೀಶ್ ಅವರು ಮನವಿ ಮಾಡಿಕೊಂಡಿದ್ದಾರೆ. ಅದಕ್ಕೆ ಕಿಚ್ಚ ಸುದೀಪ್ ಅವರು ತಮ್ಮ ನಿರ್ಧಾರ ಏನು ಎಂಬುದನ್ನು ತಿಳಿಸಿದ್ದಾರೆ.

ವಾಪಸ್ ಕರೆಸಬೇಕು ಅಂದ್ರೆ ಹುಚ್ಚ ವೆಂಕಟ್​ನೂ ಕರೆಸಬೇಕಾಗತ್ತೆ, ಅದು ಆಗಲ್ಲ: ಸುದೀಪ್ ಖಡಕ್ ನಿರ್ಧಾರ
ಹುಚ್ಚ ವೆಂಕಟ್, ಜಗದೀಶ್, ಕಿಚ್ಚ ಸುದೀಪ್​
ಮದನ್​ ಕುಮಾರ್​
|

Updated on: Oct 20, 2024 | 11:11 PM

Share

ವಿವಾದಗಳಿಂದಲೇ ತುಂಬಿರುವ ಬಿಗ್ ಬಾಸ್​ ಕಾರ್ಯಕ್ರಮದ ನಿರೂಪಣೆ ಮಾಡುವುದು ಸುಲಭವೇ ಅಲ್ಲ. ಅದರಲ್ಲೂ ದೊಡ್ಮನೆ ಒಳಗೆ ಇರುವ ಸ್ಪರ್ಧಿಗಳು ಮಿತಿ ಮೀರಿ ನಡೆದುಕೊಂಡಾಗ ಅವರನ್ನು ದಾರಿಗೆ ತರುವುದು ಕೂಡ ಕಷ್ಟದ ಕೆಲಸ. ಯಾರಿಗೂ ಅನ್ಯಾಯ ಆಗದೇ ರೀತಿಯಲ್ಲಿ ಸುದೀಪ್ ಎಲ್ಲವನ್ನೂ ನಿಭಾಯಿಸಬೇಕಾಗುತ್ತದೆ. ಈ ಸೀಸನ್​ನಲ್ಲಿ ಒಂದಷ್ಟು ಟ್ವಿಸ್ಟ್​ಗಳು ಎದುರಾಗಿವೆ. ಜಗದೀಶ್ ಅವರನ್ನು ಮಿಡ್ ವೀಕ್​ನಲ್ಲೇ ಹೊರಗೆ ಹಾಕಲಾಗಿದೆ. ರಂಜಿತ್ ಕೂಡ ನಿಯಮ ಉಲ್ಲಂಘಿಸಿ ಎಲಿಮಿನೇಟ್ ಆಗಿದ್ದಾರೆ. ಆದರೆ ತಮಗೆ ಇನ್ನೊಂದು ಅವಕಾಶ ಬೇಕು ಎಂದು ಜಗದೀಶ್ ಕೇಳಿದ್ದಾರೆ.

ಬಿಗ್ ಬಾಸ್​ ಮನೆಯ ಮೂಲ ನಿಯಮಗಳನ್ನು ಉಲ್ಲಂಘಿಸಿ ಎಲಿಮಿನೇಟ್ ಆದವರನ್ನು ಮತ್ತೆ ವೇದಿಕೆಗೆ ಕರೆಸಿ ಸುದೀಪ್ ಅವರು ಮಾತನಾಡುವುದಿಲ್ಲ. ಆದರೆ ಈ ಬಾರಿ ಜಗದೀಶ್ ಅವರನ್ನು ವಿಡಿಯೋ ಕಾಲ್ ಮೂಲಕ ಸುದೀಪ್ ಅವರು ಮಾತನಾಡಿಸಿದರು. ತಾವು ಮಾಡಿದ ತಪ್ಪಿಗೆ ಜಗದೀಶ್ ಅವರು ಕ್ಷಮೆ ಕೇಳಿದ್ದಾರೆ. ಅಲ್ಲದೇ ಸಾಧ್ಯವಾದರೆ ತಮ್ಮನ್ನು ಪುನಃ ಬಿಗ್ ಬಾಸ್​ ಆಟಕ್ಕೆ ಸೇರಿಸಿಕೊಳ್ಳಿ ಎಂದು ಜಗದೀಶ್ ಅವರು ಮನವಿ ಮಾಡಿದ್ದಾರೆ.

ಈ ಬಾರಿ ಜಗದೀಶ್ ಅವರು ಎಲಿಮಿನೇಟ್​ ಆಗಿದ್ದಕ್ಕೆ ಕೇವಲ ಅವರೊಬ್ಬರ ತಪ್ಪು ಮಾತ್ರ ಕಾರಣವಲ್ಲ. ಬೇರೆಯವರ ಪ್ರಚೋಚನೆ ಕೂಡ ಕಾರಣ ಆಗಿದೆ. ಅಲ್ಲದೇ, ಇನ್ನುಳಿದವರು ಕೂಡ ಕೆಲವು ತಪ್ಪುಗಳನ್ನು ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಅವರ ವಾದವನ್ನು ಕೂಡ ಕೇಳಬೇಕು ಎಂಬ ಉದ್ದೇಶದಿಂದ ವಿಡಿಯೋ ಕಾಲ್ ಮೂಲಕ ಅವರನ್ನು ಮಾತನಾಡಿಸಲಾಗಿದೆ. ಈ ವೇಳೆ ಅವರು ಮತ್ತೆ ಬಿಗ್ ಬಾಸ್​ ಮನೆಯ ಒಳಗೆ ಬರುವ ಹಂಬಲವನ್ನು ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ನಿಮ್ಮ ವಿಡಿಯೋ ಬಹಳ ಕೆಟ್ಟದಾಗಿದೆ: ಚೈತ್ರಾ ಮುಖಕ್ಕೆ ಹೊಡೆದಂತೆ ಮಾತಾಡಿದ ಸುದೀಪ್

ಜಗದೀಶ್ ಅವರು ಮತ್ತೆ ಬಿಗ್ ಬಾಸ್​ ಮನೆಗೆ ಕಾಲಿಡುತ್ತಾರಾ ಎಂಬ ಪ್ರಶ್ನೆ ಅವರ ಅಭಿಮಾನಿಗಳಿಗೆ ಇದೆ. ಅದಕ್ಕೆ ಸುದೀಪ್ ಅವರು ತಮ್ಮ ನಿರ್ಧಾರ ತಿಳಿಸಿದ್ದಾರೆ. ತಪ್ಪು ಮಾಡಿ ಮನೆಯಿಂದ ಹೊರಗೆ ಹಾಕಿಸಿಕೊಂಡವರನ್ನು ಪುನಃ ಮನೆಯ ಒಳಗೆ ಕರೆಸಿಕೊಳ್ಳಬೇಕು ಎಂಬುದಾದರೆ 3ನೇ ಸೀಸನ್​ನಲ್ಲಿ ಹಲ್ಲೆ ಮಾಡಿ ಹೊರಹಾಕಿಸಿಕೊಂಡ ಹುಚ್ಚ ವೆಂಕಟ್​ ಅವರನ್ನು ಕೂಡ ಮತ್ತೆ ಕರೆಸಬೇಕಾಗುತ್ತದೆ. ಆದರೆ ಅದು ಸಾಧ್ಯವಿಲ್ಲ. ಅದನ್ನು ಸುದೀಪ್ ಅವರು ಸ್ಪಷ್ಟಪಡಿಸಿದ್ದಾರೆ. ‘ಹೋಗಿರುವವರ ಬಗ್ಗೆ ಜಾಸ್ತಿ ಮಾತಾಡಲ್ಲ’ ಎನ್ನುವ ಮೂಲಕ ಸುದೀಪ್ ಅವರು ಎಪಿಸೋಡ್ ಪೂರ್ಣಗೊಳಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ವಿಜಯೇಂದ್ರ ಮತ್ತು ಅಶೋಕ್​ಗೆ ಹುಷಾರ್​​ ಆಗಿರಿ ಎಂದಿದ್ದೇಕೆ ಯತ್ನಾಳ್​
ವಿಜಯೇಂದ್ರ ಮತ್ತು ಅಶೋಕ್​ಗೆ ಹುಷಾರ್​​ ಆಗಿರಿ ಎಂದಿದ್ದೇಕೆ ಯತ್ನಾಳ್​