AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾಪಸ್ ಕರೆಸಬೇಕು ಅಂದ್ರೆ ಹುಚ್ಚ ವೆಂಕಟ್​ನೂ ಕರೆಸಬೇಕಾಗತ್ತೆ, ಅದು ಆಗಲ್ಲ: ಸುದೀಪ್ ಖಡಕ್ ನಿರ್ಧಾರ

ಜಗದೀಶ್ ಮಾಡಿದ ಅವಾಂತರದಿಂದ ಇಡೀ ಬಿಗ್ ಬಾಸ್ ಮನೆಯ ವಾತಾವರಣ ಹಾಳಾಗಿದೆ. ಅವರ ಮೇಲೆ ಕೈ ಮಾಡಿದ್ದಕ್ಕಾಗಿ ರಂಜಿತ್ ಅವರನ್ನು ಹೊರಗೆ ಹಾಕಲಾಗಿದೆ. ಆದರೆ ತಮ್ಮನ್ನು ಮತ್ತೆ ಬಿಗ್ ಬಾಸ್​ ಮನೆಗೆ ಕರೆಸಿಕೊಳ್ಳಿ ಎಂದು ಜಗದೀಶ್ ಅವರು ಮನವಿ ಮಾಡಿಕೊಂಡಿದ್ದಾರೆ. ಅದಕ್ಕೆ ಕಿಚ್ಚ ಸುದೀಪ್ ಅವರು ತಮ್ಮ ನಿರ್ಧಾರ ಏನು ಎಂಬುದನ್ನು ತಿಳಿಸಿದ್ದಾರೆ.

ವಾಪಸ್ ಕರೆಸಬೇಕು ಅಂದ್ರೆ ಹುಚ್ಚ ವೆಂಕಟ್​ನೂ ಕರೆಸಬೇಕಾಗತ್ತೆ, ಅದು ಆಗಲ್ಲ: ಸುದೀಪ್ ಖಡಕ್ ನಿರ್ಧಾರ
ಹುಚ್ಚ ವೆಂಕಟ್, ಜಗದೀಶ್, ಕಿಚ್ಚ ಸುದೀಪ್​
ಮದನ್​ ಕುಮಾರ್​
|

Updated on: Oct 20, 2024 | 11:11 PM

Share

ವಿವಾದಗಳಿಂದಲೇ ತುಂಬಿರುವ ಬಿಗ್ ಬಾಸ್​ ಕಾರ್ಯಕ್ರಮದ ನಿರೂಪಣೆ ಮಾಡುವುದು ಸುಲಭವೇ ಅಲ್ಲ. ಅದರಲ್ಲೂ ದೊಡ್ಮನೆ ಒಳಗೆ ಇರುವ ಸ್ಪರ್ಧಿಗಳು ಮಿತಿ ಮೀರಿ ನಡೆದುಕೊಂಡಾಗ ಅವರನ್ನು ದಾರಿಗೆ ತರುವುದು ಕೂಡ ಕಷ್ಟದ ಕೆಲಸ. ಯಾರಿಗೂ ಅನ್ಯಾಯ ಆಗದೇ ರೀತಿಯಲ್ಲಿ ಸುದೀಪ್ ಎಲ್ಲವನ್ನೂ ನಿಭಾಯಿಸಬೇಕಾಗುತ್ತದೆ. ಈ ಸೀಸನ್​ನಲ್ಲಿ ಒಂದಷ್ಟು ಟ್ವಿಸ್ಟ್​ಗಳು ಎದುರಾಗಿವೆ. ಜಗದೀಶ್ ಅವರನ್ನು ಮಿಡ್ ವೀಕ್​ನಲ್ಲೇ ಹೊರಗೆ ಹಾಕಲಾಗಿದೆ. ರಂಜಿತ್ ಕೂಡ ನಿಯಮ ಉಲ್ಲಂಘಿಸಿ ಎಲಿಮಿನೇಟ್ ಆಗಿದ್ದಾರೆ. ಆದರೆ ತಮಗೆ ಇನ್ನೊಂದು ಅವಕಾಶ ಬೇಕು ಎಂದು ಜಗದೀಶ್ ಕೇಳಿದ್ದಾರೆ.

ಬಿಗ್ ಬಾಸ್​ ಮನೆಯ ಮೂಲ ನಿಯಮಗಳನ್ನು ಉಲ್ಲಂಘಿಸಿ ಎಲಿಮಿನೇಟ್ ಆದವರನ್ನು ಮತ್ತೆ ವೇದಿಕೆಗೆ ಕರೆಸಿ ಸುದೀಪ್ ಅವರು ಮಾತನಾಡುವುದಿಲ್ಲ. ಆದರೆ ಈ ಬಾರಿ ಜಗದೀಶ್ ಅವರನ್ನು ವಿಡಿಯೋ ಕಾಲ್ ಮೂಲಕ ಸುದೀಪ್ ಅವರು ಮಾತನಾಡಿಸಿದರು. ತಾವು ಮಾಡಿದ ತಪ್ಪಿಗೆ ಜಗದೀಶ್ ಅವರು ಕ್ಷಮೆ ಕೇಳಿದ್ದಾರೆ. ಅಲ್ಲದೇ ಸಾಧ್ಯವಾದರೆ ತಮ್ಮನ್ನು ಪುನಃ ಬಿಗ್ ಬಾಸ್​ ಆಟಕ್ಕೆ ಸೇರಿಸಿಕೊಳ್ಳಿ ಎಂದು ಜಗದೀಶ್ ಅವರು ಮನವಿ ಮಾಡಿದ್ದಾರೆ.

ಈ ಬಾರಿ ಜಗದೀಶ್ ಅವರು ಎಲಿಮಿನೇಟ್​ ಆಗಿದ್ದಕ್ಕೆ ಕೇವಲ ಅವರೊಬ್ಬರ ತಪ್ಪು ಮಾತ್ರ ಕಾರಣವಲ್ಲ. ಬೇರೆಯವರ ಪ್ರಚೋಚನೆ ಕೂಡ ಕಾರಣ ಆಗಿದೆ. ಅಲ್ಲದೇ, ಇನ್ನುಳಿದವರು ಕೂಡ ಕೆಲವು ತಪ್ಪುಗಳನ್ನು ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಅವರ ವಾದವನ್ನು ಕೂಡ ಕೇಳಬೇಕು ಎಂಬ ಉದ್ದೇಶದಿಂದ ವಿಡಿಯೋ ಕಾಲ್ ಮೂಲಕ ಅವರನ್ನು ಮಾತನಾಡಿಸಲಾಗಿದೆ. ಈ ವೇಳೆ ಅವರು ಮತ್ತೆ ಬಿಗ್ ಬಾಸ್​ ಮನೆಯ ಒಳಗೆ ಬರುವ ಹಂಬಲವನ್ನು ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ನಿಮ್ಮ ವಿಡಿಯೋ ಬಹಳ ಕೆಟ್ಟದಾಗಿದೆ: ಚೈತ್ರಾ ಮುಖಕ್ಕೆ ಹೊಡೆದಂತೆ ಮಾತಾಡಿದ ಸುದೀಪ್

ಜಗದೀಶ್ ಅವರು ಮತ್ತೆ ಬಿಗ್ ಬಾಸ್​ ಮನೆಗೆ ಕಾಲಿಡುತ್ತಾರಾ ಎಂಬ ಪ್ರಶ್ನೆ ಅವರ ಅಭಿಮಾನಿಗಳಿಗೆ ಇದೆ. ಅದಕ್ಕೆ ಸುದೀಪ್ ಅವರು ತಮ್ಮ ನಿರ್ಧಾರ ತಿಳಿಸಿದ್ದಾರೆ. ತಪ್ಪು ಮಾಡಿ ಮನೆಯಿಂದ ಹೊರಗೆ ಹಾಕಿಸಿಕೊಂಡವರನ್ನು ಪುನಃ ಮನೆಯ ಒಳಗೆ ಕರೆಸಿಕೊಳ್ಳಬೇಕು ಎಂಬುದಾದರೆ 3ನೇ ಸೀಸನ್​ನಲ್ಲಿ ಹಲ್ಲೆ ಮಾಡಿ ಹೊರಹಾಕಿಸಿಕೊಂಡ ಹುಚ್ಚ ವೆಂಕಟ್​ ಅವರನ್ನು ಕೂಡ ಮತ್ತೆ ಕರೆಸಬೇಕಾಗುತ್ತದೆ. ಆದರೆ ಅದು ಸಾಧ್ಯವಿಲ್ಲ. ಅದನ್ನು ಸುದೀಪ್ ಅವರು ಸ್ಪಷ್ಟಪಡಿಸಿದ್ದಾರೆ. ‘ಹೋಗಿರುವವರ ಬಗ್ಗೆ ಜಾಸ್ತಿ ಮಾತಾಡಲ್ಲ’ ಎನ್ನುವ ಮೂಲಕ ಸುದೀಪ್ ಅವರು ಎಪಿಸೋಡ್ ಪೂರ್ಣಗೊಳಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
49 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿದ ಇಶಾನ್ ಕಿಶನ್
49 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿದ ಇಶಾನ್ ಕಿಶನ್
ಊಟಿಯಂತಾದ ಕೋಲಾರ, ರಸ್ತೆ ಕಾಣದೇ ವಾಹನ ಸವಾರರು ಪರದಾಟ
ಊಟಿಯಂತಾದ ಕೋಲಾರ, ರಸ್ತೆ ಕಾಣದೇ ವಾಹನ ಸವಾರರು ಪರದಾಟ
ಔಷಧಿ ಖರೀದಿಲಿ ಭಾರಿ ಭ್ರಷ್ಟಾಚಾರ: ಕಮಿಷನ್ ಬೇಡಿಕೆಯ ಸ್ಫೋಟಕ ಆಡಿಯೋ ಇಲ್ಲಿದೆ
ಔಷಧಿ ಖರೀದಿಲಿ ಭಾರಿ ಭ್ರಷ್ಟಾಚಾರ: ಕಮಿಷನ್ ಬೇಡಿಕೆಯ ಸ್ಫೋಟಕ ಆಡಿಯೋ ಇಲ್ಲಿದೆ
2026 ಮಿಥುನ ರಾಶಿಯವರಿಗೆ ನಿರ್ಣಾಯಕ ವರ್ಷ; ವಾರ್ಷಿಕ ಭವಿಷ್ಯ ಇಲ್ಲಿದೆ
2026 ಮಿಥುನ ರಾಶಿಯವರಿಗೆ ನಿರ್ಣಾಯಕ ವರ್ಷ; ವಾರ್ಷಿಕ ಭವಿಷ್ಯ ಇಲ್ಲಿದೆ
ಸಿದ್ದರಾಮಯ್ಯ ಪರ ಯತ್ನಾಳ್ ಬ್ಯಾಟಿಂಗ್, ಬಿಜೆಪಿ ನಾಯಕರ ಬಗ್ಗೆ ವ್ಯಂಗ್ಯ
ಸಿದ್ದರಾಮಯ್ಯ ಪರ ಯತ್ನಾಳ್ ಬ್ಯಾಟಿಂಗ್, ಬಿಜೆಪಿ ನಾಯಕರ ಬಗ್ಗೆ ವ್ಯಂಗ್ಯ
ಮೂರು ತಿಂಗಳ ಗರ್ಭಿಣಿಯ ಕಪಾಳಕ್ಕೆ ಹೊಡೆದ ಪೊಲೀಸ್ ಅಧಿಕಾರಿ
ಮೂರು ತಿಂಗಳ ಗರ್ಭಿಣಿಯ ಕಪಾಳಕ್ಕೆ ಹೊಡೆದ ಪೊಲೀಸ್ ಅಧಿಕಾರಿ
ರೈತರಿಗೆ ಸಿಹಿ ಸುದ್ದಿ ಕೊಟ್ಟ ಸಿಎಂ: ಹಾಲಿಗೆ ಪ್ರೋತ್ಸಾಧನ ಏರಿಕೆ
ರೈತರಿಗೆ ಸಿಹಿ ಸುದ್ದಿ ಕೊಟ್ಟ ಸಿಎಂ: ಹಾಲಿಗೆ ಪ್ರೋತ್ಸಾಧನ ಏರಿಕೆ