AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

KBC 13: ₹ 1 ಕೋಟಿ ಮೊತ್ತದ ಚೆಸ್ ಕುರಿತ ಪ್ರಶ್ನೆಗೆ ಉತ್ತರ ತಿಳಿಯದೇ ಕ್ವಿಟ್ ಮಾಡಿದ ಬಾಲಕಿ; ನೀವು ಉತ್ತರಿಸಬಲ್ಲಿರಾ?

Amitabh Bachchan: ಅಮಿತಾಭ್ ಬಚ್ಚನ್ ನಡೆಸಿಕೊಡುತ್ತಿರುವ ಕೆಬಿಸಿ 13ರಲ್ಲಿ ಇತ್ತೀಚೆಗೆ ಬಾಲಕಿಯೊಬ್ಬಳು ಸ್ಪರ್ಧಿಸಿದ್ದಾಳೆ. ಆದರೆ ಆಕೆಗೆ 1 ಕೋಟಿ ಮೊತ್ತದ ಪ್ರಶ್ನೆಗೆ ಉತ್ತರ ತಿಳಿಯಲಿಲ್ಲ. ಆ ಪ್ರಶ್ನೆ ಇಲ್ಲಿದೆ.

KBC 13: ₹ 1 ಕೋಟಿ ಮೊತ್ತದ ಚೆಸ್ ಕುರಿತ ಪ್ರಶ್ನೆಗೆ ಉತ್ತರ ತಿಳಿಯದೇ ಕ್ವಿಟ್ ಮಾಡಿದ ಬಾಲಕಿ; ನೀವು ಉತ್ತರಿಸಬಲ್ಲಿರಾ?
ಅಮಿತಾಭ್ ಬಚ್ಚನ್, ರಾಜ್​ನಂದಿನಿ ಕಲಿತಾ
TV9 Web
| Edited By: |

Updated on:Dec 02, 2021 | 10:13 AM

Share

ಅಮಿತಾಭ್ ಬಚ್ಚನ್ (Amitabh Bachcan) ನಡೆಸಿಕೊಡುವ ಕೌನ್ ಬನೇಗಾ ಕರೋಡ್​ಪತಿಯ 13ನೇ (KBC 13) ಸಂಚಿಕೆ ವೀಕ್ಷಕರಿಗೆ ಪ್ರಿಯವಾಗುವಂತೆ ಮೂಡಿಬರುತ್ತಿದ್ದು, ಈಗಾಗಲೇ ಮೂರು ಜನ ಕೋಟ್ಯಧಿಪತಿಗಳು ಹೊರಹೊಮ್ಮಿದ್ದಾರೆ. ಆದರೆ ಇದುವರೆಗೆ ಯಾರೂ ಕೂಡ ₹ 7 ಕೋಟಿ ಮೊತ್ತದ ಪ್ರಶ್ನೆಗೆ ಉತ್ತರಿಸಲು ಸಾಧ್ಯವಾಗಿಲ್ಲ. ಇತ್ತೀಚಿನ ವಿಶೇಷ ವಿದ್ಯಾರ್ಥಿ ಸಂಚಿಕೆಯಲ್ಲಿ 14 ವರ್ಷದ ಬಾಲಕಿ ರಾಜ್​ನಂದಿನಿ ಕಲಿತಾ (Rajnandini Kalita) ಭಾಗವಹಿಸಿದ್ದು, ₹ 1 ಕೋಟಿ ಮೊತ್ತದ ಪ್ರಶ್ನೆಯ ಹಂತದವರೆಗೆ ತಲುಪಿದ್ದಾಳೆ. ಆದರೆ ಚೆಸ್ (Chess) ಕುರಿತಾದ ಆ ಪ್ರಶ್ನೆಗೆ ಅವರಿಗೆ ಉತ್ತರ ತಿಳಿಯಲಿಲ್ಲ. ಅಂತಿಮವಾಗಿ ಅವರು ಕ್ವಿಟ್ ಮಾಡುವ ನಿರ್ಧಾರ ಕೈಗೊಂಡರು. ನೀವು ಆ ಪ್ರಶ್ನೆಗೆ ಉತ್ತರ ಊಹಿಸಬಲ್ಲಿರಾ? ಪ್ರಶ್ನೆ ಇಲ್ಲಿದೆ.

‘‘ಕೇವಲ 12 ವರ್ಷ, 4 ತಿಂಗಳು, 25 ದಿನ ತುಂಬಿದ ವ್ಯಕ್ತಿ, ಚೆಸ್ ಗ್ರಾಂಡ್ ಮಾಸ್ಟರ್ ಪಟ್ಟ ಅಲಂಕರಿಸುತ್ತಾರೆ. ಆ ಸ್ಥಾನ ಅಲಂಕರಿಸಿದ ವಿಶ್ವದ ಆ ಅತ್ಯಂತ ಕಿರಿಯ ವ್ಯಕ್ತಿಯ ಹೆಸರೇನು?’’. ಈ ಪ್ರಶ್ನೆಗೆ ಆಯ್ಕೆಗಳಾಗಿ ಅಮಿತಾಭ್, ‘‘ ರಮೇಶ್​​ಬಾಬು ಪ್ರಜ್ಞಾನಂದಾ, ಅಭಿಮನ್ಯು ಮಿಶ್ರಾ, ಬೆತ್ ಹಾರ್ಮನ್ ಹಾಗೂ ಗುಕೇಶ್ ದೊಮ್ಮರಾಜು ಹೆಸರನ್ನು ನೀಡಿದ್ದರು. ಆದರೆ ಸ್ಪರ್ಧಿ ರಾಜ್​ನಂದಿನಿ ಅವರಿಗೆ ಇದಕ್ಕೆ ಉತ್ತರ ತಿಳಿಯಲಿಲ್ಲ. ಕೊನೆಗೆ ಅವರು ಸ್ಪರ್ಧೆಯನ್ನು ಕ್ವಿಟ್ ಮಾಡಿದರು. ಸರಿಯಾದ ಉತ್ತರ ಅಭಿಮನ್ಯು ಮಿಶ್ರಾ ಆಗಿತ್ತು. ಅಂತಿಮವಾಗಿ ರಾಜ್​ನಂದಿನಿ ₹ 50 ಲಕ್ಷ ಮೊತ್ತವನ್ನು ಬಹುಮಾನವಾಗಿ ಪಡೆದರು.

ರಾಜ್​ನಂದಿನಿ ಕಲಿತಾ ಗುವಾಹಟಿ ಮೂಲದವರು. ಕೆಬಿಸಿಯಲ್ಲಿ ಪ್ರಸ್ತುತ ವಿದ್ಯಾರ್ಥಿಗಳು ಭಾಗವಹಿಸುವ ವಿಶೇಷ ಸಂಚಿಕೆಗಳನ್ನು ನಡೆಸಲಾಗುತ್ತಿದೆ. ಅದರಲ್ಲಿ 14 ವರ್ಷದ ಈ ಬಾಲಕಿ ಭಾಗಿಯಾಗಿ, ಎಲ್ಲರ ಕಣ್ಣರಳಿಸುವಂತೆ ಮಾಡಿದ್ದಾರೆ. ಅಮಿತಾಭ್ ಮುಂದೆ ರಾಜ್​ನಂದಿನಿ ತಾನು ರಾಷ್ಟ್ರಪತಿಯಾದರೆ… ಎಂಬ ವಿಷಯದ ಕುರಿತು ಸಣ್ಣ ಭಾಷಣವನ್ನೂ ಮಾಡಿ ಮನಗೆದ್ದರು. ಅವರ ಭಾಷಣಕ್ಕೆ ಅಮಿತಾಭ್ ತಲೆದೂಗಿ, ಇಷ್ಟು ಚಂದದ ಭಾಷಣವನ್ನು ರಾಜಕೀಯ ನಾಯಕರೂ ಮಾಡುವುದಿಲ್ಲ ಎಂದು ಗುಣಗಾನ ಮಾಡಿದರು. ಅಂತಿಮವಾಗಿ ರಾಜ್​ನಂದಿನಿ ₹ 50 ಲಕ್ಷ ಮೊತ್ತದೊಂದಿಗೆ ಸ್ಪರ್ಧೆ ಮುಗಿಸಿದ್ದಾರೆ.

ಇದನ್ನೂ ಓದಿ:

ಬಹುಕೋಟಿ ವಂಚನೆ ಆರೋಪಿ ಜತೆ ಜಾಕ್ವೆಲಿನ್​ ಲವ್ವಿಡವ್ವಿಗೆ ಸಿಕ್ತು ಇನ್ನಷ್ಟು ಫೋಟೋಗಳ ಸಾಕ್ಷಿ

ಕೊನೆಗೂ ಸುನೀಲ್ ಶೆಟ್ಟಿ ಕುಟುಂಬದೊಂದಿಗೆ ಸಾರ್ವಜನಿಕವಾಗಿ ಕಾಣಿಸಿಕೊಂಡ ರಾಹುಲ್; ಆಥಿಯಾ ಜತೆ ಭರ್ಜರಿ ಪೋಸ್

Published On - 10:00 am, Thu, 2 December 21

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?