AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಬಿಗ್​ ಬಾಸ್​ ಕನ್ನಡ ಸೀಸನ್​ 11’ ಅಖಾಡಕ್ಕೆ ಬಂದ ಮಧ್ಯಮ ವರ್ಗದ ಹುಡುಗ ತ್ರಿವಿಕ್ರಮ್

ಕ್ರಿಕೆಟರ್​ ಹಾಗೂ ನಟನಾಗಿ ಗುರುತಿಸಿಕೊಂಡ ತ್ರಿವಿಕ್ರಮ್​ ಅವರು ‘ಬಿಗ್​ ಬಾಸ್​ ಕನ್ನಡ ಸೀಸನ್​ 11’ ರಿಯಾಲಿಟಿ ಶೋಗೆ ಸ್ಪರ್ಧಿಯಾಗಿ ಕಾಲಿಟ್ಟಿದ್ದಾರೆ. ಮಧ್ಯಮ ವರ್ಗದಿಂದ ಬಂದಿರುವ ಅವರಿಗೆ ಈ ವೇದಿಕೆ ತುಂಬ ಮುಖ್ಯವಾಗುತ್ತಿದೆ. ಕಿರುತೆರೆ ನಟ ಶಿಶರ್​ ಅವರಿಗೆ ಪೈಪೋಟಿ ನೀಡುತ್ತಾ ತ್ರಿವಿಕ್ರಮ್​ ಅವರು ದೊಡ್ಮನೆ ಪ್ರವೇಶಿಸಿದ್ದಾರೆ. ಅವರ ಹಿನ್ನೆಲೆ ಬಗ್ಗೆ ಇಲ್ಲಿದೆ ಮಾಹಿತಿ..

‘ಬಿಗ್​ ಬಾಸ್​ ಕನ್ನಡ ಸೀಸನ್​ 11’ ಅಖಾಡಕ್ಕೆ ಬಂದ ಮಧ್ಯಮ ವರ್ಗದ ಹುಡುಗ ತ್ರಿವಿಕ್ರಮ್
ತ್ರಿವಿಕ್ರಮ್
ಮದನ್​ ಕುಮಾರ್​
|

Updated on: Sep 29, 2024 | 9:06 PM

Share

‘ಬಿಗ್ ಬಾಸ್​ ಕನ್ನಡ ಸೀಸನ್​ 11’ ಶೋ ಅದ್ದೂರಿಯಾಗಿ ಆರಂಭ ಆಗಿದೆ. ಸಿನಿಮಾ, ಕಿರುತೆರೆ, ಸೋಶಿಯಲ್​ ಮೀಡಿಯಾ ಮುಂತಾದ ಕ್ಷೇತ್ರದಲ್ಲಿ ಸದ್ದು ಮಾಡಿದ ವ್ಯಕ್ತಿಗಳು ಬಿಗ್ ಬಾಸ್​ ಅಖಾಡಕ್ಕೆ ಬಂದಿದ್ದಾರೆ. ಕ್ರಿಕೆಟರ್ ಆಗಬೇಕು ಅಂತ ಕನಸು ಕಂಡ ತ್ರಿವಿಕ್ರಮ್ ಅವರು ಕೂಡ ಬಿಗ್​ ಬಾಸ್​ ಕಾರ್ಯಕ್ರಮದಲ್ಲಿ ಸ್ಪರ್ಧಿಯಾಗಿ ಎಂಟ್ರಿ ನೀಡಿದ್ದಾರೆ. ಅವರಿಗೆ ಸೀರಿಯಲ್ ನಟ ಶಿಶಿರ್ ಅವರು ಪೈಪೋಟಿ ನೀಡಿದ್ದಾರೆ. ಅನುಷಾ ರೈ, ಲಾಯರ್​ ಜಗದೀಶ್​, ಚೈತ್ರಾ ಕುಂದಾಪುರ, ಗೋಲ್ಡ್ ಸುರೇಶ್​, ಧನರಾಜ್​, ಗೌತಮಿ ಜಾಧವ್, ಭವ್ಯಾ ಗೌಡ, ಯಮುನಾ ಶ್ರೀನಿಧಿ ಮುಂತಾದವರು ಕೂಡ ಬಿಗ್​ ಬಾಸ್​ ಮನೆಗೆ ಕಾಲಿಟ್ಟಿದ್ದಾರೆ.

ಝಗಮಗಿಸುವ ವೇದಿಕೆಯಲ್ಲಿ ತ್ರಿವಿಕ್ರಮ್​ ಅವರು ಎಂಟ್ರಿ ನೀಡಿದ್ದಾರೆ. ಸಿಸಿಎಲ್​ನಲ್ಲಿ ಅವರು ಆಟ ಆಡಿದ ಅನುಭವ ಹೊಂದಿದ್ದಾರೆ. ಮುಂದಿನ ಮೂರು ತಿಂಗಳ ಕಾಲ ಅವರು ಬಿಗ್​ ಬಾಸ್​ನಲ್ಲೇ ಇದ್ದರೆ ಜನವರಿಯಲ್ಲಿ ಸಿಸಿಎಲ್​ ಬಂದಾಗ ಏನು ಮಾಡೋದು ಎಂದು ಸುದೀಪ್​ ಅವರು ಕಾಲೆಳೆದರು. ತ್ರಿವಿಕ್ರಮ್​ ಅವರು ಎಷ್ಟು ವಾರಗಳ ಕಾಲ ಬಿಗ್ ಬಾಸ್​ ಮನೆಯಲ್ಲಿ ಇರುತ್ತಾರೆ ಎಂಬುದನ್ನು ಕಾದು ನೋಡಬೇಕು.

ಕಳೆದ 6 ವರ್ಷಗಳಿಂದ ತ್ರಿವಿಕ್ರಮ್​ ಅವರು ನಟನಾಗಿ ಗುರುತಿಸಿಕೊಂಡಿದ್ದಾರೆ. ‘ಮಧ್ಯಮವರ್ಗದಿಂದ ಬಂದಿರುವ ಜನರಿಗೆ ಬಿಗ್​ ಬಾಸ್​ ರೀತಿಯ ಒಂದು ವೇದಿಕೆ ಖಂಡಿತವಾಗಿಯೂ ಬೇಕು. ನಮ್ಮ ಅಪ್ಪ ಡ್ರೈವರ್​, ಅಮ್ಮ ಗೃಹಿಣಿ. ಕ್ರಿಕೆಟರ್​ ಆಗಬೇಕು ಅಂತ ಕನಸು ಇಟ್ಟುಕೊಂಡು ನಾನು ಬೆಂಗಳೂರಿಗೆ ಬಂದವನು’ ಎಂದು ತ್ರಿವಿಕ್ರಮ್​ ಅವರು ಹೇಳಿದ್ದಾರೆ.

‘ನಾನು ಕ್ರಿಕೆಟರ್ ಆಗಬೇಕು ಅಂತ ಬೆಂಗಳೂರಿಗೆ ಬಂದೆ. ಆದರೆ ಕ್ರಿಕೆಟರ್ ಆಗಲು ಒಂದು ಹಿನ್ನೆಲೆ ಬೇಕು ಅಂತ ಗೊತ್ತಾಯಿತು. ಜಿಮ್​ ಟ್ರೇನರ್​ ಆಗಿ ಸೇರಿಕೊಂಡೆ. ಅಲ್ಲಿ ಜನರ ಪರಿಚಯ ಆಯಿತು. ಸಿರಿಯಲ್ ಮತ್ತು ಸಿನಿಮಾದ ಅವಕಾಶಗಳು ಸಿಕ್ಕವು. ಆದರೆ ಅಷ್ಟರಲ್ಲೇ ಲಾಕ್​ಡೌನ್​ ಶುರುವಾಯಿತು. ಲಾಕ್​ಡೌನ್​ ಬಂದಿದ್ದರಿಂದ ನಮಗೆ ದೊಡ್ಡ ಹಿನ್ನಡೆ ಆಯಿತು’ ಎಂದಿದ್ದಾರೆ ತ್ರಿವಿಕ್ರಮ್.

ಇದನ್ನೂ ಓದಿ: ಬಿಗ್​ ಬಾಸ್​ 2ನೇ ಸ್ಪರ್ಧಿಯಾಗಿ ದೊಡ್ಮನೆಗೆ ಬಂದ ಯಮುನಾ ಶ್ರೀನಿಧಿ; ಸಿಕ್ತು ನೇರ ಸ್ವರ್ಗ

‘ನನಗೆ ಅಡುಗೆ ಬರುತ್ತದೆ. ಯಾವುದೇ ಕೆಲಸವನ್ನೂ ನೀಟಾಗಿ ಮಾಡುತ್ತೇನೆ. ಸ್ಪೋರ್ಟ್ಸ್​, ಜಿಮ್​ ಮತ್ತು ನಟನೆಯ ಅನುಭವವನ್ನು ಬಿಗ್​ ಬಾಸ್​ ಮನೆಯಲ್ಲಿ ಬಳಸಿಕೊಳ್ಳುತ್ತೇನೆ’ ಎಂದು ತ್ರಿವಿಕ್ರಮ್​ ಅವರು ಭರವಸೆ ವ್ಯಕ್ತಪಡಿಸಿದ್ದಾರೆ. ಬಿಗ್​ ಬಾಸ್​ ಮನೆಗೆ ಎಂಟ್ರಿ ನೀಡುವಾಗ ತ್ರಿವಿಕ್ರಮ್​ ಅವರು ಸ್ವರ್ಗಕ್ಕೆ ಕಾಲಿಟ್ಟಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಪಿಎಂ ಮೋದಿ ಬಗ್ಗೆ ಸ್ಮೃತಿ ಇರಾನಿ ಹೇಳಿದ ಆ ಒಂದು ಮಾತು ಸಖತ್​ ವೈರಲ್
ಪಿಎಂ ಮೋದಿ ಬಗ್ಗೆ ಸ್ಮೃತಿ ಇರಾನಿ ಹೇಳಿದ ಆ ಒಂದು ಮಾತು ಸಖತ್​ ವೈರಲ್
ಶಾಲೆಗಳಲ್ಲಿ ಕೇಸರಿ ಶಾಲಿಗೆ ಅವಕಾಶವಿಲ್ಲ: ಹಾಕಿಕೊಂಡು ಬಂದ್ರೆ ಕಾನೂನು ಕ್ರಮ
ಶಾಲೆಗಳಲ್ಲಿ ಕೇಸರಿ ಶಾಲಿಗೆ ಅವಕಾಶವಿಲ್ಲ: ಹಾಕಿಕೊಂಡು ಬಂದ್ರೆ ಕಾನೂನು ಕ್ರಮ
ಆರತಿ ಎತ್ತಿದ ಮಹಿಳೆಯರಿಗೆ ಗರಿಗರಿ ನೋಟ ನೀಡಿದ ಸಿಎಂ ಸಿದ್ದರಾಮಯ್ಯ
ಆರತಿ ಎತ್ತಿದ ಮಹಿಳೆಯರಿಗೆ ಗರಿಗರಿ ನೋಟ ನೀಡಿದ ಸಿಎಂ ಸಿದ್ದರಾಮಯ್ಯ
ಬೆಂಗಳೂರಲ್ಲಿ ಸಿಎನ್​​ಜಿ ದರ 2 ರೂ ಏರಿಕೆ: ವಾಹನ ಸವಾರರು ಕಂಗಾಲು
ಬೆಂಗಳೂರಲ್ಲಿ ಸಿಎನ್​​ಜಿ ದರ 2 ರೂ ಏರಿಕೆ: ವಾಹನ ಸವಾರರು ಕಂಗಾಲು
ಸ್ಪೀಡ್ ಬ್ರೇಕರ್ ಕಾಣದೆ ವೇಗವಾಗಿ ಬಂದ ಬೈಕ್​; ಮುಂದೇನಾಯಿತು ನೋಡಿ
ಸ್ಪೀಡ್ ಬ್ರೇಕರ್ ಕಾಣದೆ ವೇಗವಾಗಿ ಬಂದ ಬೈಕ್​; ಮುಂದೇನಾಯಿತು ನೋಡಿ
ಬಳ್ಳಾರಿ: ಪಾಲಿಕೆ ಸದಸ್ಯೆ ಪತಿಯಿಂದ ಬಡವರಿಗೆ ಮಹಾವಂಚನೆ!
ಬಳ್ಳಾರಿ: ಪಾಲಿಕೆ ಸದಸ್ಯೆ ಪತಿಯಿಂದ ಬಡವರಿಗೆ ಮಹಾವಂಚನೆ!
ಕಾನ್​ ಸಿನಿಮೋತ್ಸವದಲ್ಲಿ ಫ್ಲೈಯಿಂಗ್ ಕಿಸ್ ಕೊಟ್ಟ ಐಶ್ವರ್ಯಾ ರೈ
ಕಾನ್​ ಸಿನಿಮೋತ್ಸವದಲ್ಲಿ ಫ್ಲೈಯಿಂಗ್ ಕಿಸ್ ಕೊಟ್ಟ ಐಶ್ವರ್ಯಾ ರೈ
ಗುರು ಸಂಚಾರ ಸಿಂಹ ರಾಶಿಯ ಮೇಲೆ ಯಾವ ರೀತಿ ಪರಿಣಾಮ ಬೀರಲಿದೆ?
ಗುರು ಸಂಚಾರ ಸಿಂಹ ರಾಶಿಯ ಮೇಲೆ ಯಾವ ರೀತಿ ಪರಿಣಾಮ ಬೀರಲಿದೆ?
ಚೀನಾದ ಕಲ್ಲಿದ್ದಲು ಗಣಿಯಲ್ಲಿ ಸ್ಫೋಟ, 80ಕ್ಕೂ ಅಧಿಕ ಮಂದಿ ಸಾವು
ಚೀನಾದ ಕಲ್ಲಿದ್ದಲು ಗಣಿಯಲ್ಲಿ ಸ್ಫೋಟ, 80ಕ್ಕೂ ಅಧಿಕ ಮಂದಿ ಸಾವು
ನಿಯಂತ್ರಣ ತಪ್ಪಿ ನೀರಿನ ಟ್ಯಾಂಕರ್ ಪಲ್ಟಿ;ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ನಿಯಂತ್ರಣ ತಪ್ಪಿ ನೀರಿನ ಟ್ಯಾಂಕರ್ ಪಲ್ಟಿ;ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ