AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೈಟ್ ಆಫ್ ಆದಾಗ ತಪ್ಪು ಮಾಡಿದ ಬಿಗ್ ಬಾಸ್ ಮನೆ ಮಂದಿ; ಚೈತ್ರಾ, ಮಾನಸಾಗೆ ಶಿಕ್ಷೆ

ಬಿಗ್ ಬಾಸ್​ ಮನೆಯಲ್ಲಿ ದಿನದಿನವೂ ಹೊಸ ಹೊಸ ಟ್ವಿಸ್ಟ್​ಗಳು ಇರುತ್ತವೆ. ಈ ವಾರ ದೊಡ್ಮನೆಯಲ್ಲಿ ಕೆಲವರು ಲೈಟ್ ಆಫ್ ಆದಾಗ ಮಾಡಿದ ತಪ್ಪಿನಿಂದಾಗಿ ಮಾನಸಾ ಮತ್ತು ಚೈತ್ರಾ ಕುಂದಾಪುರ ಅವರಿಗೆ ಶಿಕ್ಷೆ ನೀಡಲಾಗಿದೆ. ಕುಟುಂಬದವರಿಂದ ಬರಬೇಕಿದ್ದ ಸಂದೇಶವನ್ನು ತಡೆ ಹಿಡಿಯಲಾಗಿದೆ. ಇದರಿಂದಾಗಿ ಚೈತ್ರಾ ಅವರು ಬಿಕ್ಕಿ ಬಿಕ್ಕಿ ಅತ್ತಿದ್ದಾರೆ.

ಲೈಟ್ ಆಫ್ ಆದಾಗ ತಪ್ಪು ಮಾಡಿದ ಬಿಗ್ ಬಾಸ್ ಮನೆ ಮಂದಿ; ಚೈತ್ರಾ, ಮಾನಸಾಗೆ ಶಿಕ್ಷೆ
ಬಿಗ್ ಬಾಸ್​ ಕನ್ನಡ ಸೀಸನ್​ 11
ಮದನ್​ ಕುಮಾರ್​
|

Updated on: Nov 01, 2024 | 10:11 PM

Share

ಒಮ್ಮೆ ಬಿಗ್ ಬಾಸ್ ಮನೆಯೊಳಗೆ ಸ್ಪರ್ಧಿಗಳು ಕಾಲಿಟ್ಟ ಬಳಿಕ ಅವರಿಗೆ ಹೊರಜಗತ್ತಿನ ಸಂಪರ್ಕ ಕಡಿತ ಆಗುತ್ತದೆ. ಫ್ಯಾಮಿಲಿಯವರಿಂದ ಕೂಡ ಸಂಪರ್ಕ ಇರುವುದಿಲ್ಲ. ತೀರಾ ಅಪರೂಪಕ್ಕೆ ಮಾತ್ರ ಕುಟುಂಬದವರ ಜೊತೆ ಮಾತನಾಡುವ ಅಥವಾ ಪತ್ರ ಪಡೆಯುವ ಅವಕಾಶ ಇರುತ್ತದೆ. ಹಾಗಂತ ಆ ಅವಕಾಶ ಸುಲಭವಾಗಿ ಸಿಗುವುದಿಲ್ಲ. ಅದಕ್ಕಾಗಿ ಕಷ್ಟಪಡಬೇಕು. ಇತ್ತೀಚೆಗೆ ಬಿಗ್ ಬಾಸ್ ಒಂದು ಟಾಸ್ಕ್ ನೀಡಿದ್ದರು. ಆ ಟಾಸ್ಕ್ ಆಡುವಾಗ ಬೇರೆಯವರು ತಪ್ಪು ಮಾಡಿದ್ದರಿಂದ ಚೈತ್ರಾ ಕುಂದಾಪುರ ಮತ್ತು ಮಾಸನಾ ಅವರಿಗೆ ಕುಟುಂಬದವರ ಸಂದೇಶ ಮಿಸ್ ಆಗಿದೆ.

ಆಟದ ನಿಯಮ ಹೀಗಿತ್ತು. ಬಝರ್ ಆದಾಗ ಬಿಗ್ ಬಾಸ್ ಮನೆಗೆ ಹೊರಗಿನವರು ಬಂದು ಡಿಸ್ಟರ್ಬ್​ ಮಾಡುತ್ತಾರೆ. ಆದರೆ ಸ್ಪರ್ಧಿಗಳು ಯಾರೂ ಕೂಡ ಪ್ರತಿಕ್ರಿಯಿಸುವಂತಿಲ್ಲ. ಸ್ಪೀಕರ್​, ಟಿವಿಯಲ್ಲಿ ಏನೇ ಬಂದರೂ ಅದಕ್ಕೆ ರಿಯಾಕ್ಟ್ ಮಾಡಬಾರದು. ಆದರೆ ಅದರ ಜೊತೆಗೆ ಇನ್ನೊಂದು ಟ್ವಿಸ್ಟ್​ ಸಹ ನೀಡಲಾಯಿತು. ಏಕಾಏಕಿ ಲೈಟ್ ಆಫ್​ ಮಾಡಲಾಯಿತು. ಆಗ ಕೆಲವರು ತಪ್ಪು ಮಾಡಿದರು.

ಏನದು ತಪ್ಪು? ಲೈಟ್​ ಆಫ್​ ಆದಾಗ ಪ್ರತಿಕ್ರಿಯಿಸಿದ್ದು. ಹೌದು, ಸಾಮಾನ್ಯವಾಗಿ ಬಿಗ್ ಬಾಸ್ ಮನೆಯಲ್ಲಿ ಬೆಳಗ್ಗೆ, ಮಧ್ಯಾಹ್ನ ಅಥವಾ ಸಂಜೆ ಲೈಟ್​ ಆಫ್​ ಆಗುವುದಿಲ್ಲ. ರಾತ್ರಿ ಲೈಟ್ ಆಫ್ ಆದಾಗ ಮಲಗಬೇಕು. ಆದರೆ ಶುಕ್ರವಾರದ ಎಪಿಸೋಡ್​ನಲ್ಲಿ ತುಸು ಮುಂಚೆಯೇ ಲೈಟ್ ಆಫ್​ ಆದಾಗ ಬಹುತೇಕರಿಗೆ ಶಾಕ್ ಆಯಿತು. ‘ಈಗಲೇ ಮಲಗಬೇಕಾ’ ಎಂದು ಪ್ರತಿಕ್ರಿಯೆ ನೀಡಿದರು. ಈ ತಪ್ಪಿನಿಂದಾಗಿ ಮಾಸನಾ ಮತ್ತು ಚೈತ್ರಾ ಅವರಿಗೆ ಸಿಗಬೇಕಿದ್ದ ಮನೆಯವರ ಸಂದೇಶವನ್ನು ಬಿಗ್ ಬಾಸ್ ಕ್ಯಾನ್ಸಲ್ ಮಾಡಿದರು.

ಇದನ್ನೂ ಓದಿ: ನೀವು ಹೊರಗಡೆ ಚೆನ್ನಾಗಿ ಕಾಣಿಸಲ್ಲ: ಮಾನಸಾಗೆ ನೇರವಾಗಿ ಹೇಳಿದ ಐಶ್ವರ್ಯಾ

ಕೆಲವು ವಾರಗಳ ಹಿಂದೆ ಮಾಸನಾ ಅವರಿಗೆ ಪತಿ ತುಕಾಲಿ ಸಂತೋಷ್ ಅವರಿಂದ ಫೋನ್ ಕರೆ ಬಂದಿತ್ತು. ಆದರೆ ಚೈತ್ರಾ ಅವರಿಗೆ ಈ ರೀತಿಯ ಯಾವುದೇ ಅವಕಾಶ ಸಿಕ್ಕಿರಲಿಲ್ಲ. ಹಾಗಾಗಿ ಅವರಿಗೆ ಈ ಬಾರಿ ಕೂಡ ಸಂದೇಶ ಮಿಸ್ ಆಗಿದ್ದಕ್ಕೆ ಸಖತ್ ದುಃಖ ಆಗಿದೆ. ಒಬ್ಬರೇ ಕುಳಿತು ಅವರು ಕಣ್ಣೀರು ಸುರಿಸಿದ್ದಾರೆ. ಅದೇ ರೀತಿ ಧನರಾಜ್​ ಕೂಡ ಹಿಂದಿನ ಸುತ್ತಿನಲ್ಲಿ ಅವಕಾಶ ಕಳೆದುಕೊಂಡರು. ಅವರು ಸಹ ಮಗುವನ್ನು ನೆನಪಿಸಿಕೊಂಡು ಜೋರಾಗಿ ಅತ್ತರು. ಅವರನ್ನು ಸಮಾಧಾನ ಮಾಡಲು ಇನ್ನುಳಿದವರು ಪ್ರಯತ್ನಿಸಿದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ವಿಜಯೇಂದ್ರ ಮತ್ತು ಅಶೋಕ್​ಗೆ ಹುಷಾರ್​​ ಆಗಿರಿ ಎಂದಿದ್ದೇಕೆ ಯತ್ನಾಳ್​
ವಿಜಯೇಂದ್ರ ಮತ್ತು ಅಶೋಕ್​ಗೆ ಹುಷಾರ್​​ ಆಗಿರಿ ಎಂದಿದ್ದೇಕೆ ಯತ್ನಾಳ್​