AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಣ್ಣನ ಸ್ಥಾನದಲ್ಲಿ ನಿಂತು ಚೈತ್ರಾ ಕಣ್ಣೊರಿಸಿದ ಕಿಚ್ಚ; ಸುದೀಪ್ ನಡೆಗೆ ಶ್ಲಾಘನೆ

‘ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ಚೈತ್ರಾ ಕುಂದಾಪುರ ಅವರ ನಿರ್ಗಮನವು ಭಾವನಾತ್ಮಕವಾಗಿತ್ತು. ಅವರ ಪ್ರಯಾಣದ ವಿಡಿಯೋ ವೀಕ್ಷಿಸಿದ ನಂತರ ಅವರು ಕಣ್ಣೀರು ಹಾಕಿದರು. ಸುದೀಪ್ ಅವರು ಅವರನ್ನು ಸಮಾಧಾನಪಡಿಸಿದ್ದು ಮತ್ತು ಅವರ ಆಟವನ್ನು ಶ್ಲಾಘಿಸಿದ್ದ ವಿಡಿಯೋ ವೈರಲ್ ಆಗಿದೆ. ಚೈತ್ರಾ ಅವರು ಹಲವು ಬಾರಿ ಕಳಪೆ ಪಡೆದಿದ್ದರೂ, ಅವರ ಅಭಿಮಾನಿಗಳು ಅವರನ್ನು ಬೆಂಬಲಿಸಿದ್ದಾರೆ.

ಅಣ್ಣನ ಸ್ಥಾನದಲ್ಲಿ ನಿಂತು ಚೈತ್ರಾ ಕಣ್ಣೊರಿಸಿದ ಕಿಚ್ಚ; ಸುದೀಪ್ ನಡೆಗೆ ಶ್ಲಾಘನೆ
ಚೈತ್ರಾ-ಸುದೀಪ್
ರಾಜೇಶ್ ದುಗ್ಗುಮನೆ
|

Updated on: Jan 13, 2025 | 11:57 AM

Share

ಚೈತ್ರಾ ಕುಂದಾಪುರ ಅವರು ಜೀವನದಲ್ಲಿ ಸಾಕಷ್ಟು ಏರಿಳಿತ ಕಂಡಿದ್ದಾರೆ. ಅವರು ಹಲವು ತಪ್ಪುಗಳನ್ನು ಮಾಡಿದ ಆರೋಪ ಹೊಂದಿದ್ದಾರೆ. ಅವರೇನೇ ತಪ್ಪು ಮಾಡಿದರೂ ಅದನ್ನು ಮನ್ನಿಸಿ ಒಳಕ್ಕೆ ಕರೆದುಕೊಂಡಿದ್ದು ಬಿಗ್ ಬಾಸ್. ಈ ರಿಯಾಲಿಟಿ ಶೋಗೆ ಬಂದ ಬಳಿಕ ಅವರನ್ನು ನೋಡುವ ರೀತಿ ಬದಲಾಗಿದೆ. ಅವರಿಗೂ ದೊಡ್ಡ ಅಭಿಮಾನಿ ಬಳಗ ಸೃಷ್ಟಿ ಆಗಿದೆ. ಅವರನ್ನು ಸಮಾಧಾನ ಮಾಡುವ ಕೆಲಸ ಆಗಿದೆ.

‘ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ಚೈತ್ರಾ ಅವರು 100 ದಿನಗಳಿಗೂ ಅಧಿಕ ಕಾಲ ಇದ್ದು ಎಲಿಮಿನೇಟ್ ಆದರು. ಅವರು ಹೊರ ಹೋಗುತ್ತಾರೆ ಎನ್ನುವುದು ಬಹುತೇಕ ಖಚಿತ ಆಗಿತ್ತು. ಅಂತಿಮವಾಗಿ ಧನರಾಜ್ ಹಾಗೂ ಚೈತ್ರಾ ಇದ್ದರು. ಈ ವೇಳೆ ಚೈತ್ರಾ ಕುಂದಾಪುರ ಅವರು ಕಡಿಮೆ ವೋಟ್ ಪಡೆದು ಎಲಿಮಿನೇಟ್ ಆದರು.

ಬಿಗ್ ಬಾಸ್​ನಿಂದ ಎಲಿಮಿನೇಟ್ ಆಗಿ ಬಂದ ಚೈತ್ರಾಗೆ ತಮ್ಮ ಜರ್ನಿಯ ವಿಡಿಯೋ ತೋರಿಸಲಾಯಿತು. ಆಗ ಚೈತ್ರಾ ಕಣ್ಣೀರು ಹಾಕಿದರು. ‘ಯಾಕೆ ಅಳೋದು’ ಎಂದು ಸುದೀಪ್ ಚೈತ್ರಾ ಅವರ ಕಣ್ಣೀರು ಒರಿಸಿದರು. ‘ಉತ್ತಮವಾಗಿ ಆಟ ಆಡಿದ್ದೀರಿ. ಎಷ್ಟು ಬಾರಿ ಕಳಪೆ ತೆಗೆದುಕೊಂಡ್ರಿ ಅನ್ನೋದು ಮುಖ್ಯವಲ್ಲ. ವಿಡಿಯೋ ಕೊನೆಗೊಂಡಿದ್ದು ಉತ್ತಮದೊಟ್ಟಿಗೆ’ ಎಂದಿದ್ದಾರೆ ಸುದೀಪ್.

ಚೈತ್ರಾ ಕುಂದಾಪುರ ಅವರು ಇಷ್ಟು ವಾರಗಳ ಕಾಲ ಕಳಪೆ ಪಟ್ಟ ಪಡೆದಿದ್ದೇ ಹೆಚ್ಚು. ಈ ಸೀಸನ್​ನಲ್ಲಿ ಅವರು ಅತಿ ಹೆಚ್ಚು ಬಾರಿ ಕಳಪೆ ಪಡೆದಿದ್ದಾರೆ. ಆದರೆ, ಕಳೆದ ವಾರ ಅವರಿಗೆ ಉತ್ತಮ ಬಂದಿತ್ತು. ಅದೇ ವಾರವೇ ಚೈತ್ರಾ ಅವರು ಎಲಿಮಿನೇಟ್ ಆಗಿದ್ದಾರೆ. ಈ ಬಗ್ಗೆ ಅವರಿಗೆ ಖುಷಿಯೂ ಇದೆ.

ಇದನ್ನೂ ಓದಿ: ಹೀಗೆ ಆಟ ಮುಂದುವರಿದರೆ ಹನುಮಂತನೇ ವಿನ್ನರ್? ಸೂಚನೆ ಕೊಟ್ಟ ಸುದೀಪ್

ಇನ್ನು ಸುದೀಪ್ ಅವರು ಚೈತ್ರಾ ಅವರ ಕಣ್ಣೀರು ಒರೆಸಿರುವ ವಿಡಿಯೋ ವೈರಲ್ ಆಗಿದೆ. ಈ ವಿಡಿಯೋಗೆ ಫ್ಯಾನ್ಸ್ ನಾನಾ ರೀತಿಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ. ಸುದೀಪ್ ಅವರನ್ನು ಶ್ಲಾಘಿಸಿದ್ದಾರೆ. ‘ಸುದೀಪ್ ಅವರು ಸ್ಪರ್ಧಿಗಳಿಗೆ ಅಣ್ಣನ ಸ್ಥಾನ ನೀಡಿದ್ದಾರೆ’ ಎಂದು ಅನೇಕರು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
5 ಜನ ಜಲಸಮಾಧಿ:ಕಾವೇರಿ ನದಿ ದಡದಲ್ಲಿ ಬ್ಯಾರಿಕೇಡ್ ಅಳವಡಿಕೆಗೆ ಸೂಚನೆ
5 ಜನ ಜಲಸಮಾಧಿ:ಕಾವೇರಿ ನದಿ ದಡದಲ್ಲಿ ಬ್ಯಾರಿಕೇಡ್ ಅಳವಡಿಕೆಗೆ ಸೂಚನೆ
ವಿಜಯೇಂದ್ರರನ್ನು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲು ಅಡ್ಡಮತದಾನ ಮಾಡಿದ್ರಾ?
ವಿಜಯೇಂದ್ರರನ್ನು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲು ಅಡ್ಡಮತದಾನ ಮಾಡಿದ್ರಾ?
ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಹರಿದುಬಂದ ಪ್ರವಾಸಿಗರ ದಂಡು, ಭಕ್ತ ಸಾಗರ
ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಹರಿದುಬಂದ ಪ್ರವಾಸಿಗರ ದಂಡು, ಭಕ್ತ ಸಾಗರ
ಮಳೆಯಿಲ್ಲದೇ ಬರಿದಾಯ್ತು ಭೀಮಾ ನದಿ: ಜಾನುವಾರುಗಳಿಗೂ ಕುಡಿಯಲು ನೀರಿಲ್ಲ
ಮಳೆಯಿಲ್ಲದೇ ಬರಿದಾಯ್ತು ಭೀಮಾ ನದಿ: ಜಾನುವಾರುಗಳಿಗೂ ಕುಡಿಯಲು ನೀರಿಲ್ಲ
ಚಲಿಸುತ್ತಿದ್ದ ಬೈಕ್​​ ಮೇಲೆ ಮರದ ಕೊಂಬೆ ಬಿದ್ದು ಸವಾರ ಗಂಭೀರ
ಚಲಿಸುತ್ತಿದ್ದ ಬೈಕ್​​ ಮೇಲೆ ಮರದ ಕೊಂಬೆ ಬಿದ್ದು ಸವಾರ ಗಂಭೀರ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​​ನ್ಯೂಸ್​​ ಕೊಟ್ಟ ರಾಜ್ಯ ಸರ್ಕಾರ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​​ನ್ಯೂಸ್​​ ಕೊಟ್ಟ ರಾಜ್ಯ ಸರ್ಕಾರ
ಧಾರವಾಡದ ರಾಮನಾಳದಲ್ಲಿ ಸರ್ವಧರ್ಮ ಸಮನ್ವಯತೆಗೆ ಸಾಕ್ಷಿಯಾದ ಮೊಹರಂ ಆಚರಣೆ
ಧಾರವಾಡದ ರಾಮನಾಳದಲ್ಲಿ ಸರ್ವಧರ್ಮ ಸಮನ್ವಯತೆಗೆ ಸಾಕ್ಷಿಯಾದ ಮೊಹರಂ ಆಚರಣೆ
ಬರೋಬ್ಬರಿ 6 ಕಿ.ಮೀ. ಓಡಿದ ದಳಪತಿ ವಿಜಯ್
ಬರೋಬ್ಬರಿ 6 ಕಿ.ಮೀ. ಓಡಿದ ದಳಪತಿ ವಿಜಯ್
ಮಂತ್ರಾಲಯಕ್ಕೆ ಭಕ್ತ ಸಾಗರ: 21 ದಿನಗಳಲ್ಲೇ ಬಂತು ಕೋಟಿ ಕೋಟಿ ಕಾಣಿಕೆ!
ಮಂತ್ರಾಲಯಕ್ಕೆ ಭಕ್ತ ಸಾಗರ: 21 ದಿನಗಳಲ್ಲೇ ಬಂತು ಕೋಟಿ ಕೋಟಿ ಕಾಣಿಕೆ!
ಚಲಿಸುತ್ತಿದ್ದ ಓಮಿನಿ ಕಾರಿನಿಂದ ಕೆಳಗೆ ಬಿದ್ದ ಐವರು ಮಕ್ಕಳು!
ಚಲಿಸುತ್ತಿದ್ದ ಓಮಿನಿ ಕಾರಿನಿಂದ ಕೆಳಗೆ ಬಿದ್ದ ಐವರು ಮಕ್ಕಳು!