AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಯಿ ಬಿಟ್ಟರೆ ಬರೀ ಸುಳ್ಳು, ಮೋಸದ ಆಟ: ಚೈತ್ರಾ ಮೇಲೆ ಆರೋಪ; ದೇವರ ಮುಂದೆ ಕಣ್ಣೀರು

‘ಬಿಗ್ ಬಾಸ್ ಕನ್ನಡ ಸೀಸನ್ 12’ ಆಟದಲ್ಲಿ ಚೈತ್ರಾ ಕುಂದಾಪುರ ಮೇಲೆ ಆರೋಪಗಳ ಮಳೆ ಸುರಿಸಲಾಗಿದೆ. ಸಿಕ್ಕಾಪಟ್ಟೆ ಸುಳ್ಳು ಹೇಳುತ್ತಾರೆ, ಆಟದಲ್ಲಿ ಮೋಸ ಮಾಡುತ್ತಾರೆ ಎಂದು ಆರೋಪ ಮಾಡಲಾಗಿದೆ. ರಜತ್ ಮತ್ತು ಗಿಲ್ಲಿಯ ಮಾತಿನ ಕಾಟ ತಾಳಲಾರದೇ ಚೈತ್ರಾ ಅವರು ದೇವರ ಮುಂದೆ ಕಣ್ಣೀರು ಸುರಿಸಿದ್ದಾರೆ.

ಬಾಯಿ ಬಿಟ್ಟರೆ ಬರೀ ಸುಳ್ಳು, ಮೋಸದ ಆಟ: ಚೈತ್ರಾ ಮೇಲೆ ಆರೋಪ; ದೇವರ ಮುಂದೆ ಕಣ್ಣೀರು
Chaithra Kundapura
ಮದನ್​ ಕುಮಾರ್​
|

Updated on: Dec 17, 2025 | 10:45 PM

Share

ಈ ಮೊದಲು ಚೈತ್ರಾ ಕುಂದಾಪುರ (Chaithra Kundapura) ಅವರು ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ಟ್ರೋಲ್ ಆಗಿದ್ದರು. ‘ಬಿಗ್ ಬಾಸ್ ಕನ್ನಡ ಸೀಸನ್ 11’ ಶೋನಲ್ಲಿ ಅವರು ನಾಟಕ ಮಾಡಿ, ಸುಳ್ಳು ಹೇಳಿ ಟೀಕೆಗೆ ಗುರಿ ಆಗಿದ್ದರು. ‘ಬಿಗ್ ಬಾಸ್ ಕನ್ನಡ ಸೀಸನ್ 12’ (Bigg Boss Kannada Season 12) ಶೋನಲ್ಲಿ ಅವರು ವೈಲ್ಡ್ ಕಾರ್ಡ್ ಸ್ಪರ್ಧಿ ಆಗಿದ್ದಾರೆ. ಅವರು ಆಟ ಆಡುತ್ತಿರುವ ರೀತಿ ಅನೇಕರಿಗೆ ಇಷ್ಟ ಆಗುತ್ತಿಲ್ಲ. ಈ ಬಾರಿ ಕೂಡ ಅವರ ಮೇಲೆ ಸುಳ್ಳಿ ಎಂಬ ಆರೋಪ ಬಂದಿದೆ. ಮೋಸದಿಂದ ಆಟ ಆಡುತ್ತಾರೆ ಎಂದು ಕೂಡ ಆರೋಪಿಸಲಾಗಿದೆ. ಇದನ್ನೆಲ್ಲ ಸಹಿಸಿಕೊಳ್ಳಲಾಗದೇ ಚೈತ್ರಾ ಕುಂದಾಪುರ ಅವರು ದೇವರ ಮುಂದೆ ಹೋಗಿ ಕಣ್ಣೀರು ಹಾಕಿದ್ದಾರೆ.

ಡಿಸೆಂಬರ್ 17ರ ಸಂಚಿಕೆಯಲ್ಲಿ ಟಾಸ್ಕ್ ಆಡುವಾಗ ಚೈತ್ರಾ ಕುಂದಾಪುರ ಅವರು ಕೆಲವು ನಿಯಮ ಮುರಿದರು. ಅದನ್ನು ಉಸ್ತುವಾರಿ ರಾಶಿಕಾ ಶೆಟ್ಟಿ ಅವರು ಪ್ರಶ್ನಿಸಿದಾಗ ‘ನನಗೆ ಆ ನಿಯಮ ಗೊತ್ತಿರಲಿಲ್ಲ’ ಎಂದು ಹೇಳಿದರು. ಹಾಗಾಗಿ ಚೈತ್ರಾ ಕುಂದಾಪುರ ಅವರು ಸುಳ್ಳು ಹೇಳಿದ್ದಾರೆ ಎಂದು ಆರೋಪಿಸಲಾಯಿತು. ಅಲ್ಲದೇ ರಜತ್ ಅವರು ಇಂಥ ಸುಳ್ಳುಗಳನ್ನೇ ಟಾರ್ಗೆಟ್ ಮಾಡಿದ್ದಾರೆ.

ರಜತ್ ಮತ್ತು ಗಿಲ್ಲಿ ಅವರು ಒಟ್ಟಿಗೆ ಸೇರಿ ಚೈತ್ರಾ ಕುಂದಾಪುರ ಅವರನ್ನು ರೇಗಿಸಿದ್ದಾರೆ. ಈ ಸೀಸನ್ ವಿಚಾರ ಮಾತ್ರವಲ್ಲದೇ ಕಳೆದ ಸೀಸನ್​​ನ ವಿವಾದಗಳನ್ನು ಕೂಡ ಇಟ್ಟುಕೊಂಡು ಟ್ರೋಲ್ ಮಾಡಲಾಗಿದೆ. ಗಿಲ್ಲಿ ಆಡಿದ ಮಾತುಗಳನ್ನು ಕೇಳಿ ಚೈತ್ರಾ ಕುಂದಾಪುರ ಸಿಕ್ಕಾಪಟ್ಟೆ ಕೋಪ ಮಾಡಿಕೊಂಡಿದ್ದಾರೆ. ‘ಇನ್ನೊಮ್ಮೆ ನನ್ನ ವಿಷಯಕ್ಕೆ ಬರಬೇಡ’ ಎಂದು ಗಿಲ್ಲಿಗೆ ಚೈತ್ರಾ ಎಚ್ಚರಿಕೆ ನೀಡಿದ್ದಾರೆ.

ಟಾಸ್ಕ್ ಕಾರಣಕ್ಕೆ ಉಂಟಾದ ಜಗಳದಲ್ಲಿ ಚೈತ್ರಾ ಕುಂದಾಪುರ ಅವರು ಸಿಕ್ಕಾಪಟ್ಟೆ ಕಿರುಚಾಡಿದ್ದಾರೆ. ಅವರ ಎದುರು ನಿಂತು ರಜತ್ ಅವರು ಟಕ್ಕರ್ ನೀಡಿದ್ದಾರೆ. ಈ ಎಲ್ಲ ಘಟನೆಗಳಿಂದ ಚೈತ್ರಾ ಕುಂದಾಪುರ ಕುಗ್ಗಿ ಹೋಗಿದ್ದಾರೆ. ದೇವರ ಮುಂದೆ ನಿಂತು ಏನೇನೋ ಪ್ರಾರ್ಥನೆ ಮಾಡಿಕೊಂಡು ಕಣ್ಣೀರು ಸುರಿಸಿದ್ದಾರೆ. ಇದು ಕೂಡ ಡ್ರಾಮಾ ಎಂದು ರಾಶಿಕಾ ಮುಂತಾದವರು ಹೇಳಿದ್ದಾರೆ.

ಇದನ್ನೂ ಓದಿ: ರಜತ್ ಫ್ಯಾಮಿಲಿ ಬಗ್ಗೆ ಮಾತನಾಡಿದ ಚೈತ್ರಾ ಕುಂದಾಪುರ: ದೊಡ್ಮನೆಯಲ್ಲಿ ಬಿಗ್ ಫೈಟ್

ಬಿಗ್ ಬಾಸ್ ಮನೆಯಲ್ಲಿ ಈಗ 80 ದಿನಗಳು ಕಳೆದಿವೆ. ಧ್ರುವಂತ್ ಮತ್ತು ರಕ್ಷಿತಾ ಶೆಟ್ಟಿ ಅವರು ಸೀಕ್ರೆಟ್ ರೂಮ್​​ನಲ್ಲಿ ಇದ್ದಾರೆ. ಅವರಿಬ್ಬರು ಎಲಿಮಿನೇಟ್ ಆಗಿದ್ದಾರೆ ಎಂದು ಬಿಗ್ ಬಾಸ್ ಮನೆಯ ಸದಸ್ಯರು ಭಾವಿಸಿದ್ದಾರೆ. ಯಾವ ಸಂದರ್ಭದಲ್ಲಿ ಅವರಿಬ್ಬರು ಬಿಗ್ ಬಾಸ್ ಮನೆಗೆ ಮತ್ತೆ ಕಾಲಿಡುತ್ತಾರೆ ಎಂಬುದನ್ನು ತಿಳಿಯಲು ವೀಕ್ಷಕರು ಕಾದಿದ್ದಾರೆ. ಈ ವಾರ ಯಾರು ಎಲಿಮಿನೇಟ್ ಆಗುತ್ತಾರೆ ಎಂಬುದನ್ನು ಕೂಡ ಕಾದು ನೋಡಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ನನಗೆ ಅಶ್ವಿನಿ ಗೌಡ ಇಷ್ಟ, ಅವರೇ ಬಿಗ್ ಬಾಸ್ ಗೆಲ್ಲಬೇಕು: ಮಾಜಿ ಸ್ಪರ್ಧಿ
ನನಗೆ ಅಶ್ವಿನಿ ಗೌಡ ಇಷ್ಟ, ಅವರೇ ಬಿಗ್ ಬಾಸ್ ಗೆಲ್ಲಬೇಕು: ಮಾಜಿ ಸ್ಪರ್ಧಿ
ಮೈಲಾರಿಗೆ 14 ನ್ಯಾಯಾಂಗ ಬಂಧನ: ಜೈಲಿಗೆ ಹೋಗುವ ಮುನ್ನ ಸಿಂಗರ್ ಹೇಳಿದ್ದೇನು?
ಮೈಲಾರಿಗೆ 14 ನ್ಯಾಯಾಂಗ ಬಂಧನ: ಜೈಲಿಗೆ ಹೋಗುವ ಮುನ್ನ ಸಿಂಗರ್ ಹೇಳಿದ್ದೇನು?
ಬೆಂಗಳೂರಿನಲ್ಲಿ ಐಪಿಎಲ್ ಉದ್ಘಾಟನಾ ಪಂದ್ಯ ನಡೆಸಲು ಬಿಸಿಸಿಐ ಗ್ರೀನ್ ಸಿಗ್ನಲ್
ಬೆಂಗಳೂರಿನಲ್ಲಿ ಐಪಿಎಲ್ ಉದ್ಘಾಟನಾ ಪಂದ್ಯ ನಡೆಸಲು ಬಿಸಿಸಿಐ ಗ್ರೀನ್ ಸಿಗ್ನಲ್
ತನ್ನ ಪತ್ನಿ ಜತೆ ಸಹೋದರ ಲವ್ವಿಡವ್ವಿ: ತಮ್ಮನನ್ನು ಕೊಂದ ಅಣ್ಣ,
ತನ್ನ ಪತ್ನಿ ಜತೆ ಸಹೋದರ ಲವ್ವಿಡವ್ವಿ: ತಮ್ಮನನ್ನು ಕೊಂದ ಅಣ್ಣ,
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ತಮ್ಮದೇ ಕಾರಿನಲ್ಲಿ ಮೋದಿಯನ್ನು ಬೀಳ್ಕೊಟ್ಟ ಇಥಿಯೋಪಿಯನ್ ಪ್ರಧಾನಿ
ತಮ್ಮದೇ ಕಾರಿನಲ್ಲಿ ಮೋದಿಯನ್ನು ಬೀಳ್ಕೊಟ್ಟ ಇಥಿಯೋಪಿಯನ್ ಪ್ರಧಾನಿ
ತನ್ನ ಪ್ರಾಣವನ್ನೂ ಲೆಕ್ಕಿಸದೆ ಸೈಕಲ್​ನಿಂದ ಬಿದ್ದ ತಮ್ಮನನ್ನು ಕಾಪಾಡಿದ ಅಣ್ಣ
ತನ್ನ ಪ್ರಾಣವನ್ನೂ ಲೆಕ್ಕಿಸದೆ ಸೈಕಲ್​ನಿಂದ ಬಿದ್ದ ತಮ್ಮನನ್ನು ಕಾಪಾಡಿದ ಅಣ್ಣ
ಚೈತ್ರಾಗೆ ಕೀ ಕೊಟ್ಟ ಗಿಲ್ಲಿ: ನಕ್ಕು ಸುಸ್ತಾದ ರಜತ್-ರಘು
ಚೈತ್ರಾಗೆ ಕೀ ಕೊಟ್ಟ ಗಿಲ್ಲಿ: ನಕ್ಕು ಸುಸ್ತಾದ ರಜತ್-ರಘು
ಗೃಹಲಕ್ಷ್ಮಿ ಬಗ್ಗೆ ತಪ್ಪು ಮಾಹಿತಿ: ವಿಷಾದ ವ್ಯಕ್ತಪಡಿಸಿದ ಹೆಬ್ಬಾಳ್ಕರ್
ಗೃಹಲಕ್ಷ್ಮಿ ಬಗ್ಗೆ ತಪ್ಪು ಮಾಹಿತಿ: ವಿಷಾದ ವ್ಯಕ್ತಪಡಿಸಿದ ಹೆಬ್ಬಾಳ್ಕರ್
ಜೈಲಲ್ಲಿ ಖಾಕಿ ಕಾರ್ಯಾಚರಣೆಗೆ ಪತರುಗುಟ್ಟಿದ ಕೈದಿಗಳು
ಜೈಲಲ್ಲಿ ಖಾಕಿ ಕಾರ್ಯಾಚರಣೆಗೆ ಪತರುಗುಟ್ಟಿದ ಕೈದಿಗಳು