AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್ ಬಾಸ್ ಮನೆಯಲ್ಲಿ ಪ್ರಜ್ಞೆ ತಪ್ಪಿ ಕುಸಿದು ಬಿದ್ದ ಚೈತ್ರಾ; ಪರಿಸ್ಥಿತಿ ಗಂಭೀರ

ಈ ವಾರದ ಬಿಗ್ ಬಾಸ್ ಆಟದಲ್ಲಿ ಕಳಪೆ ಯಾರು ಎಂಬುದನ್ನು ಆಯ್ಕೆ ಮಾಡುವುದಕ್ಕೂ ಕೆಲವೇ ಗಂಟೆಗಳ ಮುನ್ನ ಚೈತ್ರಾ ಕುಂದಾಪುರ ಅವರು ಕುಸಿದು ಬಿದ್ದಿದ್ದಾರೆ. ಎಷ್ಟೇ ಪ್ರಯತ್ನಿಸಿದರೂ ಅವರಿಗೆ ಪ್ರಜ್ಞೆ ಬರಲಿಲ್ಲ. ನಂತರ ಚಿಕಿತ್ಸೆಗಾಗಿ ಅವರನ್ನು ಕರೆದುಕೊಂಡು ಹೋಗಲಾಯಿತು. ಅವರಿಗೆ ನಿಜಕ್ಕೂ ಏನಾಗಿದೆ ಎಂಬುದು ಗೊತ್ತಾಗುವುದು ಬಾಕಿ ಇದೆ.

ಬಿಗ್ ಬಾಸ್ ಮನೆಯಲ್ಲಿ ಪ್ರಜ್ಞೆ ತಪ್ಪಿ ಕುಸಿದು ಬಿದ್ದ ಚೈತ್ರಾ; ಪರಿಸ್ಥಿತಿ ಗಂಭೀರ
ಚೈತ್ರಾ ಕುಂದಾಪುರ
ಮದನ್​ ಕುಮಾರ್​
|

Updated on: Nov 15, 2024 | 10:56 PM

Share

ಜೋಡಿ ಟಾಸ್ಕ್ ಮುಗಿದ ಬಳಿಕ ಚೈತ್ರಾ ಕುಂದಾಪುರ ಅವರು ಕುಸಿದು ಬಿದ್ದಿದ್ದಾರೆ. ಬಾತ್​ರೂಮ್​ ಏರಿಯಾಲ್ಲಿ ಒಬ್ಬರೇ ಇದ್ದಾಗ ಅವರು ಪ್ರಜ್ಞೆ ತಪ್ಪಿದ್ದಾರೆ. ಇದನ್ನು ಗಮನಿಸಿದ ಬಿಗ್ ಬಾಸ್ ಕೂಡಲೇ ಅವರ ನೆರವಿಗಾಗಿ ಮೋಕ್ಷಿತಾ ಪೈ ಮತ್ತು ಗೌತಮಿ ಜಾದವ್ ಅವರನ್ನು ಕಳಿಸಿದ್ದಾರೆ. ಅವರಿಬ್ಬರು ಓಡಿ ಬಂದು ನೋಡಿದಾಗ ಚೈತ್ರಾ ಕುಂದಾಪುರ ಅವರು ನೆಲದ ಮೇಲೆ ಪ್ರಜ್ಞೆ ತಪ್ಪಿದ ಸ್ಥಿತಿಯಲ್ಲಿ ಬಿದ್ದಿದ್ದರು. ಬಳಿಕ ಬಿಗ್ ಬಾಸ್ ಮನೆಯ ಇನ್ನುಳಿದ ಸದಸ್ಯರು ಕೂಡ ಓಡೋಡಿ ಬಂದರು. ಎಷ್ಟು ಪ್ರಯತ್ನಿಸಿದರೂ ಕೂಡ ಚೈತ್ರಾ ಅವರಿಗೆ ಪ್ರಜ್ಞೆ ಬಂದಿಲ್ಲ.

ಪ್ರಜ್ಞೆ ತಪ್ಪಿ ಬಿದ್ದಿದ್ದ ಚೈತ್ರಾ ಕುಂದಾಪುರ ಅವರ ಮುಖದ ಮೇಲೆ ನೀರು ಚಿಮುಕಿಸಲಾಯಿತು. ಆದರೂ ಸಹ ಅವರ ಎಚ್ಚರಗೊಳ್ಳಲಿಲ್ಲ. ಕೂಡಲೇ ಅವರನ್ನು ಕನ್ಫೆಷನ್​ ರೂಮಿಗೆ ಕರೆದುಕೊಂಡು ಬರುವಂತೆ ಬಿಗ್ ಬಾಸ್ ಆದೇಶಿಸಿದರು. ತ್ರಿವಿಕ್ರಮ್ ಅವರು ಚೈತ್ರಾ ಅವರನ್ನು ಎತ್ತಿಕೊಂಡು ಬಂದು ಕನ್ಫೆಷನ್​ ರೂಮ್​ನಲ್ಲಿ ಮಲಗಿಸಿದರು. ಎತ್ತಿಕೊಂಡ ಬರುವಾಗ ಚೈತ್ರಾ ಪರಿಸ್ಥಿತಿ ಗಂಭೀರವಾಗಿದ್ದಂತೆ ಕಾಣಿಸಿದೆ.

ಬಿಗ್ ಬಾಸ್ ಮನೆಯಲ್ಲಿ ಪ್ರತಿ ದಿನವೂ ಒಂದಲ್ಲ ಒಂದು ಟಾಸ್ಕ್ ಇರುತ್ತದೆ. ಹಾಗಾಗಿ ಎನರ್ಜಿ ಲೆವೆಲ್ ಕಾಪಾಡಿಕೊಳ್ಳುವುದು ಮುಖ್ಯ. ಚೈತ್ರಾ ಅವರು ಹೀಗೆ ಏಕಾಏಕಿ ಪ್ರಜ್ಞೆ ತಪ್ಪಿ ಬೀಳಲು ಕಾರಣ ಆಗಿದ್ದು ಏನು ಎಂಬುದು ಇನ್ನಷ್ಟೇ ಗೊತ್ತಾಗಬೇಕಿದೆ. ಕಳಪೆ ಮತ್ತು ಉತ್ತಮ ಯಾರು ಎಂಬುದನ್ನು ಆಯ್ಕೆ ಮಾಡುವ ಪ್ರಕ್ರಿಯೆಯಲ್ಲಿ ಚೈತ್ರಾ ಅವರು ಕಾಣಿಸಿಕೊಳ್ಳಲಿಲ್ಲ. ಅವರನ್ನು ಈ ಪ್ರತಿಕ್ರಿಯೆಯಿಂದಲೇ ಹೊರಗೆ ಇಡಲಾಗಿದೆ.

ಇದನ್ನೂ ಓದಿ: ಮಾಡೋದೆಲ್ಲ ಮಾಡಿ ಮಳ್ಳಿಯಂತೆ ಕುಳಿತ ಚೈತ್ರಾ; ತಮಗಾದ ಮೋಸಕ್ಕೆ ತಿರುಗಿ ಬಿದ್ದ ಶಿಶಿರ್

ಈ ಮೊದಲಿನ ಸಂಚಿಕೆಯಲ್ಲಿ ಚೈತ್ರಾ ಕುಂದಾಪುರ ಮತ್ತು ಶಿಶಿರ್ ನಡುವೆ ದೊಡ್ಡ ಜಗಳ ಆಗಿತ್ತು. ಆಗ ಚೈತ್ರಾ ಮೇಲೆ ಶಿಶಿರ್ ಅವರು ಸಿಕ್ಕಾಪಟ್ಟೆ ಕೂಗಾಡಿದ್ದರು. ಅನೇಕರ ಜೊತೆ ಚೈತ್ರಾ ಕಿರಿಕ್ ಮಾಡಿಕೊಂಡಿದ್ದಾರೆ. ಅನಗತ್ಯವಾಗಿ ಜೋರು ಧ್ವನಿಯಲ್ಲಿ ಮಾತನಾಡುವ ಮೂಲಕ ಅವರು ಕಿರಿಕ್​ಗಳನ್ನು ಮೈಮೇಲೆ ಎಳೆದುಕೊಂಡಿದ್ದಾರೆ. ಹಾಗಾಗಿ ನಾಮಿನೇಷನ್​ ವೇಳೆ ಅವರು ಅನೇಕರ ಟಾರ್ಗೆಟ್ ಆಗುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಗಣಪತಿ ಮೆರವಣಿಗೆಗೆ ಇರುವ ಕಂಡೀಷನ್​​, ಈದ್​ ಮಿಲಾದ್​ಗೆ ಯಾಕಿಲ್ಲ?: ಅಶೋಕ್​
ಗಣಪತಿ ಮೆರವಣಿಗೆಗೆ ಇರುವ ಕಂಡೀಷನ್​​, ಈದ್​ ಮಿಲಾದ್​ಗೆ ಯಾಕಿಲ್ಲ?: ಅಶೋಕ್​
ವಿಜಯಪುರದಲ್ಲಿ ಅಗ್ನಿವೀರ್​ ನೇಮಕಾತಿ: 11 ಜಿಲ್ಲೆಗಳಿಂದ ಅಭ್ಯರ್ಥಿಗಳು ಭಾಗಿ
ವಿಜಯಪುರದಲ್ಲಿ ಅಗ್ನಿವೀರ್​ ನೇಮಕಾತಿ: 11 ಜಿಲ್ಲೆಗಳಿಂದ ಅಭ್ಯರ್ಥಿಗಳು ಭಾಗಿ
ಚಾಮರಾಜನಗರದಲ್ಲಿ ಕಾಡಾನೆ ದಾಳಿಗೆ ರೈತ ಬಲಿ
ಚಾಮರಾಜನಗರದಲ್ಲಿ ಕಾಡಾನೆ ದಾಳಿಗೆ ರೈತ ಬಲಿ
ಹುಬ್ಬಳ್ಳಿಯಲ್ಲಿ ಈದ್ಗಾ ಮೈದಾನದಲ್ಲಿ ಎಲ್ಲರ ಗಮನ ಸೆಳೆದ ಕೇಸರಿ ಗಣೇಶ
ಹುಬ್ಬಳ್ಳಿಯಲ್ಲಿ ಈದ್ಗಾ ಮೈದಾನದಲ್ಲಿ ಎಲ್ಲರ ಗಮನ ಸೆಳೆದ ಕೇಸರಿ ಗಣೇಶ
ಮೈಸೂರಿನಲ್ಲಿ ಹಿಂದೂ-ಮುಸ್ಲಿಂ ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶೋತ್ಸವ
ಮೈಸೂರಿನಲ್ಲಿ ಹಿಂದೂ-ಮುಸ್ಲಿಂ ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶೋತ್ಸವ
ಬಿಜೆಪಿ ಹೇಳಿದಂಗೆ ಇನ್ಸ್​ಪೆಕ್ಟರ್​ ಧನಂಜಯ್​ನ ಸಸ್ಪೆಂಡ್ ಮಾಡೋಕ್ಕಾಗಲ್ಲ
ಬಿಜೆಪಿ ಹೇಳಿದಂಗೆ ಇನ್ಸ್​ಪೆಕ್ಟರ್​ ಧನಂಜಯ್​ನ ಸಸ್ಪೆಂಡ್ ಮಾಡೋಕ್ಕಾಗಲ್ಲ
ಡಿಕೆಶಿ ನೇತೃತ್ವದ ಸರ್ಕಾರಕ್ಕೆ ಶತದಿನದ ಸಂಭ್ರಮ: ವಿಧಾನಸೌಧಕ್ಕೆ ದೀಪಾಲಂಕಾರ
ಡಿಕೆಶಿ ನೇತೃತ್ವದ ಸರ್ಕಾರಕ್ಕೆ ಶತದಿನದ ಸಂಭ್ರಮ: ವಿಧಾನಸೌಧಕ್ಕೆ ದೀಪಾಲಂಕಾರ
ತಿರುಪತಿ ಎಕ್ಸ್‌ಪ್ರೆಸ್ ಹೋರಿ ಜನ್ಮದಿನ: ಕೇಕ್ ಕತ್ತರಿಸಿ ಸಂಭ್ರಮಾಚರಣೆ
ತಿರುಪತಿ ಎಕ್ಸ್‌ಪ್ರೆಸ್ ಹೋರಿ ಜನ್ಮದಿನ: ಕೇಕ್ ಕತ್ತರಿಸಿ ಸಂಭ್ರಮಾಚರಣೆ
ಪಕ್ಕದ ರಾಜ್ಯದಿಂದ ವಿದ್ಯತ್ ಖರೀದಿ ಅನಿವಾರ್ಯತೆ ಸೃಷ್ಟಿ: ಸಿಎಂ ಡಿಕೆಶಿ
ಪಕ್ಕದ ರಾಜ್ಯದಿಂದ ವಿದ್ಯತ್ ಖರೀದಿ ಅನಿವಾರ್ಯತೆ ಸೃಷ್ಟಿ: ಸಿಎಂ ಡಿಕೆಶಿ
ಭಿಕ್ಷುಕನ ವೇಷ ತೊಟ್ಟ ಬಿಜೆಪಿ ಶಾಸಕ
ಭಿಕ್ಷುಕನ ವೇಷ ತೊಟ್ಟ ಬಿಜೆಪಿ ಶಾಸಕ