ಬಿಗ್ ಬಾಸ್ ಮನೆಯಲ್ಲಿ ಪ್ರಜ್ಞೆ ತಪ್ಪಿ ಕುಸಿದು ಬಿದ್ದ ಚೈತ್ರಾ; ಪರಿಸ್ಥಿತಿ ಗಂಭೀರ

ಈ ವಾರದ ಬಿಗ್ ಬಾಸ್ ಆಟದಲ್ಲಿ ಕಳಪೆ ಯಾರು ಎಂಬುದನ್ನು ಆಯ್ಕೆ ಮಾಡುವುದಕ್ಕೂ ಕೆಲವೇ ಗಂಟೆಗಳ ಮುನ್ನ ಚೈತ್ರಾ ಕುಂದಾಪುರ ಅವರು ಕುಸಿದು ಬಿದ್ದಿದ್ದಾರೆ. ಎಷ್ಟೇ ಪ್ರಯತ್ನಿಸಿದರೂ ಅವರಿಗೆ ಪ್ರಜ್ಞೆ ಬರಲಿಲ್ಲ. ನಂತರ ಚಿಕಿತ್ಸೆಗಾಗಿ ಅವರನ್ನು ಕರೆದುಕೊಂಡು ಹೋಗಲಾಯಿತು. ಅವರಿಗೆ ನಿಜಕ್ಕೂ ಏನಾಗಿದೆ ಎಂಬುದು ಗೊತ್ತಾಗುವುದು ಬಾಕಿ ಇದೆ.

ಬಿಗ್ ಬಾಸ್ ಮನೆಯಲ್ಲಿ ಪ್ರಜ್ಞೆ ತಪ್ಪಿ ಕುಸಿದು ಬಿದ್ದ ಚೈತ್ರಾ; ಪರಿಸ್ಥಿತಿ ಗಂಭೀರ
ಚೈತ್ರಾ ಕುಂದಾಪುರ
Follow us
ಮದನ್​ ಕುಮಾರ್​
|

Updated on: Nov 15, 2024 | 10:56 PM

ಜೋಡಿ ಟಾಸ್ಕ್ ಮುಗಿದ ಬಳಿಕ ಚೈತ್ರಾ ಕುಂದಾಪುರ ಅವರು ಕುಸಿದು ಬಿದ್ದಿದ್ದಾರೆ. ಬಾತ್​ರೂಮ್​ ಏರಿಯಾಲ್ಲಿ ಒಬ್ಬರೇ ಇದ್ದಾಗ ಅವರು ಪ್ರಜ್ಞೆ ತಪ್ಪಿದ್ದಾರೆ. ಇದನ್ನು ಗಮನಿಸಿದ ಬಿಗ್ ಬಾಸ್ ಕೂಡಲೇ ಅವರ ನೆರವಿಗಾಗಿ ಮೋಕ್ಷಿತಾ ಪೈ ಮತ್ತು ಗೌತಮಿ ಜಾದವ್ ಅವರನ್ನು ಕಳಿಸಿದ್ದಾರೆ. ಅವರಿಬ್ಬರು ಓಡಿ ಬಂದು ನೋಡಿದಾಗ ಚೈತ್ರಾ ಕುಂದಾಪುರ ಅವರು ನೆಲದ ಮೇಲೆ ಪ್ರಜ್ಞೆ ತಪ್ಪಿದ ಸ್ಥಿತಿಯಲ್ಲಿ ಬಿದ್ದಿದ್ದರು. ಬಳಿಕ ಬಿಗ್ ಬಾಸ್ ಮನೆಯ ಇನ್ನುಳಿದ ಸದಸ್ಯರು ಕೂಡ ಓಡೋಡಿ ಬಂದರು. ಎಷ್ಟು ಪ್ರಯತ್ನಿಸಿದರೂ ಕೂಡ ಚೈತ್ರಾ ಅವರಿಗೆ ಪ್ರಜ್ಞೆ ಬಂದಿಲ್ಲ.

ಪ್ರಜ್ಞೆ ತಪ್ಪಿ ಬಿದ್ದಿದ್ದ ಚೈತ್ರಾ ಕುಂದಾಪುರ ಅವರ ಮುಖದ ಮೇಲೆ ನೀರು ಚಿಮುಕಿಸಲಾಯಿತು. ಆದರೂ ಸಹ ಅವರ ಎಚ್ಚರಗೊಳ್ಳಲಿಲ್ಲ. ಕೂಡಲೇ ಅವರನ್ನು ಕನ್ಫೆಷನ್​ ರೂಮಿಗೆ ಕರೆದುಕೊಂಡು ಬರುವಂತೆ ಬಿಗ್ ಬಾಸ್ ಆದೇಶಿಸಿದರು. ತ್ರಿವಿಕ್ರಮ್ ಅವರು ಚೈತ್ರಾ ಅವರನ್ನು ಎತ್ತಿಕೊಂಡು ಬಂದು ಕನ್ಫೆಷನ್​ ರೂಮ್​ನಲ್ಲಿ ಮಲಗಿಸಿದರು. ಎತ್ತಿಕೊಂಡ ಬರುವಾಗ ಚೈತ್ರಾ ಪರಿಸ್ಥಿತಿ ಗಂಭೀರವಾಗಿದ್ದಂತೆ ಕಾಣಿಸಿದೆ.

ಬಿಗ್ ಬಾಸ್ ಮನೆಯಲ್ಲಿ ಪ್ರತಿ ದಿನವೂ ಒಂದಲ್ಲ ಒಂದು ಟಾಸ್ಕ್ ಇರುತ್ತದೆ. ಹಾಗಾಗಿ ಎನರ್ಜಿ ಲೆವೆಲ್ ಕಾಪಾಡಿಕೊಳ್ಳುವುದು ಮುಖ್ಯ. ಚೈತ್ರಾ ಅವರು ಹೀಗೆ ಏಕಾಏಕಿ ಪ್ರಜ್ಞೆ ತಪ್ಪಿ ಬೀಳಲು ಕಾರಣ ಆಗಿದ್ದು ಏನು ಎಂಬುದು ಇನ್ನಷ್ಟೇ ಗೊತ್ತಾಗಬೇಕಿದೆ. ಕಳಪೆ ಮತ್ತು ಉತ್ತಮ ಯಾರು ಎಂಬುದನ್ನು ಆಯ್ಕೆ ಮಾಡುವ ಪ್ರಕ್ರಿಯೆಯಲ್ಲಿ ಚೈತ್ರಾ ಅವರು ಕಾಣಿಸಿಕೊಳ್ಳಲಿಲ್ಲ. ಅವರನ್ನು ಈ ಪ್ರತಿಕ್ರಿಯೆಯಿಂದಲೇ ಹೊರಗೆ ಇಡಲಾಗಿದೆ.

ಇದನ್ನೂ ಓದಿ: ಮಾಡೋದೆಲ್ಲ ಮಾಡಿ ಮಳ್ಳಿಯಂತೆ ಕುಳಿತ ಚೈತ್ರಾ; ತಮಗಾದ ಮೋಸಕ್ಕೆ ತಿರುಗಿ ಬಿದ್ದ ಶಿಶಿರ್

ಈ ಮೊದಲಿನ ಸಂಚಿಕೆಯಲ್ಲಿ ಚೈತ್ರಾ ಕುಂದಾಪುರ ಮತ್ತು ಶಿಶಿರ್ ನಡುವೆ ದೊಡ್ಡ ಜಗಳ ಆಗಿತ್ತು. ಆಗ ಚೈತ್ರಾ ಮೇಲೆ ಶಿಶಿರ್ ಅವರು ಸಿಕ್ಕಾಪಟ್ಟೆ ಕೂಗಾಡಿದ್ದರು. ಅನೇಕರ ಜೊತೆ ಚೈತ್ರಾ ಕಿರಿಕ್ ಮಾಡಿಕೊಂಡಿದ್ದಾರೆ. ಅನಗತ್ಯವಾಗಿ ಜೋರು ಧ್ವನಿಯಲ್ಲಿ ಮಾತನಾಡುವ ಮೂಲಕ ಅವರು ಕಿರಿಕ್​ಗಳನ್ನು ಮೈಮೇಲೆ ಎಳೆದುಕೊಂಡಿದ್ದಾರೆ. ಹಾಗಾಗಿ ನಾಮಿನೇಷನ್​ ವೇಳೆ ಅವರು ಅನೇಕರ ಟಾರ್ಗೆಟ್ ಆಗುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ