AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾತಿನ ಭರಾಟೆಯಲ್ಲಿ ಕೇಳಿಸಿಕೊಳ್ಳಲು ಸೋಲುತ್ತಿರುವ ಚೈತ್ರಾ ಕುಂದಾಪುರ

ಚೈತ್ರಾ ಕುಂದಾಪುರ ಅವರಿಗೆ ಮೂರನೇ ವಾರದ ಕ್ಯಾಪ್ಟೆನ್​ ಆಗಲು ಸಾಧ್ಯವಾಗಿಲ್ಲ. ಮಾತಿನ ಕಾರಣದಿಂದ ಅವರು ಇನ್ನುಳಿದ ಸ್ಪರ್ಧಿಗಳ ಟೀಕೆಗೆ ಗುರಿ ಆಗುತ್ತಿದ್ದಾರೆ. ಅವರು ಕ್ಯಾಪ್ಟೆನ್ಸಿ ಟಾಸ್ಕ್​ ಆಡಬಾರದು ಎಂದು ಬಹುತೇಕರು ಹೇಳಿದರು. ಅದಕ್ಕೆ ಕಾರಣ ನೀಡಿದ್ದು ಕೂಡ ಮಾತಿನ ಸಮಸ್ಯೆ. ಚೈತ್ರಾಗೆ ಇತರರ ಮಾತು ಕೇಳಿಸಿಕೊಳ್ಳುವ ತಾಳ್ಮೆ ಇಲ್ಲ ಎಂಬುದೇ ಮೈನಸ್​ ಪಾಯಿಂಟ್​.

ಮಾತಿನ ಭರಾಟೆಯಲ್ಲಿ ಕೇಳಿಸಿಕೊಳ್ಳಲು ಸೋಲುತ್ತಿರುವ ಚೈತ್ರಾ ಕುಂದಾಪುರ
ಚೈತ್ರಾ ಕುಂದಾಪುರ
ಮದನ್​ ಕುಮಾರ್​
|

Updated on: Oct 11, 2024 | 11:02 PM

Share

ಹೊರ ಜಗತ್ತಿನಲ್ಲಿ ಮಾತುಗಾರ್ತಿ ಎಂದು ಗುರುತಿಸಿಕೊಂಡ ಚೈತ್ರಾ ಕುಂದಾಪುರ ಅವರ ‘ಬಿಗ್​ ಬಾಸ್​ ಕನ್ನಡ ಸೀಸನ್​ 11’ ರಿಯಾಲಿಟಿ ಶೋನಲ್ಲಿ ತಮ್ಮದೇ ರೀತಿ ಹೈಲೈಟ್ ಆಗುತ್ತಿದ್ದಾರೆ. ಕ್ಯಾಪ್ಟನ್​ ಆಗಬೇಕು ಎಂಬ ಆಸೆ ಅವರಿಗೆ ಇದೆ. ಅವರು ಕ್ಯಾಪ್ಟನ್​ ಆಗಬೇಕೋ ಬೇಡವೋ ಎಂಬ ಬಗ್ಗೆ ಚರ್ಚೆ ನಡೆಯಿತು. ಆಗ ಅವರು ತಮ್ಮ ಮಾತುಗಾರಿಕೆಯಿಂದ ಕ್ಯಾಪ್ಟೆನ್ಸಿ ಟಾಸ್ಕ್​ಗೆ ಅರ್ಹತೆ ಪಡೆಯಲು ಪ್ರಯತ್ನಿಸಿದರು. ಗೌತಮಿ ಜಾದವ್, ಉಗ್ರಂ ಮಂಜು, ಶಿಶಿರ್​ ಮುಂತಾದವರು ಚೈತ್ರಾ ಅವರ ಅರ್ಹತೆಯನ್ನು ಟೀಕಿಸಿದರು.

ಮಾತಿನಲ್ಲಿ ತಾವು ಮುಂದಿದ್ದೇವೆ ಎಂಬುದನ್ನೇ ಮುಖ್ಯವಾಗಿಟ್ಟುಕೊಂಡು ಚೈತ್ರಾ ಕುಂದಾಪುರ ಅವರು ಎಲ್ಲರ ಮೇಲೆ ಹಿಡಿಯ ಸಾಧಿಲು ನೋಡುತ್ತಿದ್ದಾರೆ. ಆದ್ರೆ ಆ ಮಾತೇ ಅವರಿಗೆ ಮುಳುವಾಗುವ ಸಾಧ್ಯತೆ ಕೂಡ ಇದೆ. ಎಲ್ಲ ವಿಷಯದಲ್ಲೂ ಮಾತನಾಡುವ ಅವರಿಂದಾಗಿ ಇನ್ನುಳಿದ ಸ್ಪರ್ಧಿಗಳಿಗೆ ಕಿರಿಕಿರಿ ಆಗಿದೆ. ಅದನ್ನು ಅನೇಕರು ನೇರವಾಗಿಯೇ ಹೇಳಿದ್ದಾರೆ. ಶುಕ್ರವಾರದ ಸಂಚಿಕೆಯಲ್ಲೂ ಅದು ರಿಪೀಟ್​ ಆಯ್ತು.

ಚೈತ್ರಾ ಕುಂದಾಪುರ ಅವರಿಗೆ ಕೇಳಿಸಿಕೊಳ್ಳುವ ತಾಳ್ಮೆ ಇಲ್ಲ ಎಂದು ಶಿಶಿರ್​ ಹೇಳಿದ್ದಾರೆ. ಒಂದು ವೇಳೆ ಚೈತ್ರಾ ಕ್ಯಾಪ್ಟನ್​ ಆದರೆ ಅನಗತ್ಯವಾಗಿ ಮಾತಿನ ಮಳೆ ಸುರಿಸುತ್ತಾರೆ ಎಂಬ ಅಭಿಪ್ರಾಯ ಹಲವರಿಗೆ ಇದೆ. ‘ಚೈತ್ರಾಗೆ ತಾಳ್ಮೆ ಕಡಿಮೆ’ ಎಂದು ರಂಜಿತ್​ ಮತ್ತು ಧರ್ಮ ಕೀರ್ತಿರಾಜ್​ ಅವರು ಹೇಳಿದ್ದಾರೆ. ‘ಚೈತ್ರಾ ಕುಂದಾಪುರ ಅವರು ಮಾತನಾಡುವಾಗ ಬೇರೆಯವರ ಧ್ವನಿ ಕೇಳಿಸಲ್ಲ. ಬೇರೆಯವರ ಮಾತನ್ನು ಅವರು ಕೇಳಿಸಿಕೊಳ್ಳಲ್ಲ’ ಎಂದು ಹಂಸಾ ಹೇಳಿದ್ದಾರೆ.

ಇದನ್ನೂ ಓದಿ: ಜಗದೀಶ್ ಎದುರು ಮಾತಾಡಲು ಸಾಧ್ಯವಾಗದೇ ಸೋತ ಚೈತ್ರಾ ಕುಂದಾಪುರ; ಆಗಿದ್ದೇನು?

ಕಡೆಗೂ ಹೆಚ್ಚು ಓಟ್​ ಬಂದಿದ್ದರಿಂದ ಕ್ಯಾಪ್ಟೆನ್ಸಿ ಟಾಸ್ಕ್​​ನಲ್ಲಿ ಗೌತಮಿ ಜಾದವ್​, ಶಿಶಿರ್​ ಜೊತೆ ಸ್ಪರ್ಧಿಸುವ ಅವಕಾಶ ಚೈತ್ರಾ ಕುಂದಾಪುರ ಅವರಿಗೆ ಸಿಕ್ಕಿತು. ಆದ್ರೆ ಇದು ಫಿಸಿಕಲ್ ಟಾಸ್ಕ್​ ಆದ್ದರಿಂದ ಚೈತ್ರಾ ಅವರು ಗೆಲ್ಲಲು ಸಾಧ್ಯವಾಗಲಿಲ್ಲ. ಹಾಗಾಗಿ ಅವರಿಗೆ ಕ್ಯಾಪ್ಟನ್​ ಆಗಲು ಸಾಧ್ಯವಾಗಲಿಲ್ಲ. ಮನೆಯ ಒಳಗೆ ಇರುವ ಹಲವರಿಂದ ಚೈತ್ರಾಗೆ ವಿರೋಧ ವ್ಯಕ್ತವಾಗುತ್ತಿದೆ. ಮುಂದಿನ ದಿನಗಳಲ್ಲಿ ಅವರು ತಮ್ಮ ಮಾತಿನ ಶೈಲಿ ಬದಲಾಯಿಸಿಕೊಂಡರೆ ಮಾತ್ರ ಜನರ ಮನಸ್ಸು ಗೆಲ್ಲಲು ಸಾಧ್ಯ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ