AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶ್ರೀಕಾಂತ್ ಕಶ್ಯಪ್ ತಾಳಿ ಕಟ್ಟುವಾಗ ಕಣ್ಣೀರು ಹಾಕಿದ ಚೈತ್ರಾ ಕುಂದಾಪುರ; ಇಲ್ಲಿದೆ ವಿಡಿಯೋ

ಚೈತ್ರಾ ಕುಂದಾಪುರ ಅವರು ಶ್ರೀಕಾಂತ್ ಕಶ್ಯಪ್ ಎಂಬುವವರನ್ನು ವಿವಾಹವಾಗಿದ್ದಾರೆ. ಬಿಗ್ ಬಾಸ್ ಮತ್ತು ಬಾಯ್ಸ್ vs ಗರ್ಲ್ಸ್ ರಿಯಾಲಿಟಿ ಶೋಗಳ ಮೂಲಕ ಜನಪ್ರಿಯರಾದ ಚೈತ್ರಾ ಅವರ ಮದುವೆ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.ಹೊಸ ಬಾಳಿಗೆ ಕಾಲಿಟ್ಟ ಚೈತ್ರಾಗೆ ಎಲ್ಲರೂ ಶುಭ ಕೋರಿದ್ದಾರೆ.

ಶ್ರೀಕಾಂತ್ ಕಶ್ಯಪ್ ತಾಳಿ ಕಟ್ಟುವಾಗ ಕಣ್ಣೀರು ಹಾಕಿದ ಚೈತ್ರಾ ಕುಂದಾಪುರ; ಇಲ್ಲಿದೆ ವಿಡಿಯೋ
ಚೈತ್ರಾ-ಶ್ರೀಕಾಂತ್
ರಾಜೇಶ್ ದುಗ್ಗುಮನೆ
|

Updated on: May 09, 2025 | 11:54 AM

Share

ಚೈತ್ರಾ ಕುಂದಾಪುರ (Chaithra Kundapura) ಅವರು ಶ್ರೀಕಾಂತ್ ಕಶ್ಯಪ್ ಜೊತೆ ಹಸೆಮಣೆ ಏರಿದ್ದಾರೆ. ಅವರಿಗೆ ಸೋಶಿಯಲ್ ಮೀಡಿಯಾದಲ್ಲಿ ಅಭಿನಂದನೆಗಳು ಬರುತ್ತಾ ಇವೆ. ಅವರ ವಿವಾಹ ಈ ಮೊದಲೇ ನಿಗದಿ ಆಗಿತ್ತು. ಈಗ ಅದು ನೆರವೇರಿದೆ. ಶುಭ ಶುಕ್ರವಾರ ಕುಂದಾಪುರದಲ್ಲಿ ಚೈತ್ರಾ ಕುಂದಾಪುರ ಅವರು ಹೊಸ ಬಾಳಿಗೆ ಕಾಲಿಟ್ಟಿದ್ದಾರೆ. ಮದುವೆ ಆಗುತ್ತಿರುವ ವ್ಯಕ್ತಿಯ ಹೆಸರು ಹಾಗೂ ಅವರ ಹಿನ್ನೆಲೆ ಬಗ್ಗೆಯೂ ಮಾಹಿತಿ ಲಭ್ಯವಾಗಿದೆ. ಆ ಬಗ್ಗೆ ಇಲ್ಲಿದೆ ವಿವರ.

ಚೈತ್ರಾ ಕುಂದಾಪುರ ಅವರು ವಿವಾದದ ಮೂಲಕ ಸುದ್ದಿ ಆದವರು. ವಿಧಾನಸಭೆ ಟಿಕೆಟ್ ಕೊಡೋದಾಗಿ ನಂಬಿಸಿ ಕುಂದಾಪುರ ಉದ್ಯಮಿಗೆ 5 ಕೋಟಿ ರೂಪಾಯಿ ವಂಚನೆ ಮಾಡಿದ ಆರೋಪ ಇವರ ಮೇಲೆ ಇದೆ. ಈ ಪ್ರಕರಣ ಇನ್ನೂ ಕೋರ್ಟ್​ನಲ್ಲಿ ಇದೆ. ಈ ಕಾರಣಕ್ಕೆ ಅವರು ಟ್ರೋಲ್ ಆದರು. ಆದರೆ ಬಿಗ್ ಬಾಸ್ ಮನೆ ಅವರ ಬದುಕನ್ನು ಬದಲಿಸಿತು. ಅವರ ಮೇಲೆ ಪಾಸಿಟಿವ್ ಟಾಕ್​ಗೆ ಈ ಶೋ ಸಹಾಯ ಆಯಿತು. ಆ ಬಳಿಕ ‘ಬಾಯ್ಸ್ vs ಗರ್ಲ್ಸ್​’ ಶೋಗೆ ಬಂದರು. ಈಗ ಅವರು ಹಸೆಮಣೆ ಏರಿದ್ದಾರೆ.

ಇದನ್ನೂ ಓದಿ
Image
ಪೊಲೀಸರಿಗೆ ಆವಾಜ್ ಹಾಕಿದ ‘ಜೈಲರ್’ ಖ್ಯಾತಿಯ ವಿನಾಯಕನ್; ಮತ್ತೆ ನಟನ ಕಿರಿಕ್
Image
ಮದುವೆ ವಿಚಾರದಲ್ಲಿ ಕಿಚ್ಚ ಸುದೀಪ್ ಹೇಳಿದ ಮಾತಿನಂತೆ ನಡೆದುಕೊಂಡ ಚೈತ್ರಾ
Image
ಚೈತ್ರಾ ಕುಂದಾಪುರ ಮದುವೆ; ವಿಡಿಯೋ ಮೂಲಕ ಹುಡುಗನ ಪರಿಚಯ
Image
‘ನಿನ್ನ ದೇಹ ನೀನೇ ನಿರ್ಧರಿಸು’; ದೀಪಿಕಾಗೆ ನೇರವಾಗಿ ಹೇಳಿದ್ದ ರಣವೀರ್ ಸಿಂಗ್

ಶ್ರೀಕಾಂತ್ ಕಶ್ಯಪ್ ಅವರ ಜೊತೆ ಚೈತ್ರಾ ವಿವಾಹ ನಡೆದಿದೆ. ಚೈತ್ರಾ ಅವರು ಹಾರ ಬದಲಿಸಿಕೊಂಡಿದ್ದಾರೆ. ಶ್ರೀಕಾಂತ್ ಅವರು ಓದಿರೋದು ಅನಿಮೇಷನ್. ಆದರೆ, ಅವರಿಗೆ ನಕ್ಷತ್ರಗಳು, ಖಗೋಳಶಾಸ್ತ್ರ ಮತ್ತು ಬ್ರಹ್ಮಾಂಡದ ಬಗ್ಗೆ ತೀವ್ರ ಆಸಕ್ತಿ ಹೊಂದಿರೋ ವ್ಯಕ್ತಿ ಆಗಿದ್ದಾರೆ. ಇವರ ದಾಂಪತ್ಯಕ್ಕೆ ಎಲ್ಲರೂ ಶುಭ ಕೋರುತ್ತಿದ್ದಾರೆ.

ಚೈತ್ರಾ ಕುಂದಾಪುರ ಅವರು ಬಿಗ್ ಬಾಸ್ ಪೂರ್ಣಗೊಂಡ ಬಳಿಕವೇ ವಿವಾಹ ಆಗುವ ಆಲೋಚನೆಯಲ್ಲಿ ಇದ್ದರು. ಆದರೆ, ಆಗ ಅವರಿಗೆ ‘ಬಾಯ್ಸ್ vs ಗರ್ಲ್ಸ್’ ಶೋನ ಆಫರ್ ಬಂತು. ಇದನ್ನು ಒಪ್ಪಿದ್ದರಿಂದ ಪ್ರತಿ ವಾರ ಈ ಶೋನ ಶೂಟ್​ಗೆ ಅವರು ಹೋಗಬೇಕಿತ್ತು. ಈ ಕಾರಣಕ್ಕೆ ವಿವಾಹ ವಿಳಂಬ ಆಯಿತು. ಈಗ ಇವರು ಎಲ್ಲಾ ಜವಾಬ್ದಾರಿಗಳನ್ನು ಪೂರ್ಣಗೊಳಿಸಿಕೊಂಡಿದ್ದು, ವಿವಾಹ ಆಗಿದ್ದಾರೆ.

ಇದನ್ನೂ ಓದಿ: ಮದುವೆ ವಿಚಾರದಲ್ಲಿ ಕಿಚ್ಚ ಸುದೀಪ್ ಹೇಳಿದ ಮಾತಿನಂತೆ ನಡೆದುಕೊಂಡ ಚೈತ್ರಾ ಕುಂದಾಪುರ

ಚೈತ್ರಾ ಅವರು ವಿಡಿಯೋ ಹಂಚಿಕೊಂಡು ತಾವು ಮದುವೆ ಆಗುತ್ತಿರುವ ಹುಡುಗ ಯಾರು ಎಂಬುದನ್ನು ರಿವೀಲ್ ಮಾಡಿದರು. ಈಗ ವಿವಾಹ ಆಗಿ ಹೊಸ ಬಾಳನ್ನು ಈ ದಂಪತಿ ಆರಂಭಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ